ಶಿವಮೊಗ್ಗ | ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಉದ್ಘಾಟನೆ

ಅಧ್ಯಕ್ಷತೆ ವಹಿಸಿದ್ದ ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಸ್. ಪ್ರಶಾಂತ್ ಮಾತನಾಡಿ ಈ ಮಹಾವಿದ್ಯಾಲಯವು ಬೆಂಗಳೂರು ಮತ್ತು ಮಂಗಳೂರನ್ನು ಹೊರತುಪಡಿಸಿ ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಧಾರವಾಡ ಜಿಲ್ಲೆಗಳ ಏಕೈಕ ಮಹಿಳಾ ಬಿಇಡಿ ಕಾಲೇಜು ಇದಾಗಿದೆ. ವಿದ್ಯಾರ್ಥಿನಿಯರು ಇಲ್ಲಿನ ಶೈಕ್ಷಣಿಕ ವ್ಯವಸ್ಥೆಯ ಪ್ರಯೋಜನ ಪಡೆದು ಉನ್ನತಿ ಸಾಧಿಸಬೇಕೆಂದು ಆಶಿಸಿದರು. ವೇದಿಕೆಯಲ್ಲಿ ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಎಂ. ಮುಸವಿರ್ ಭಾಷಾ, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಲ್. ಶ್ಯಾಮ ಸುಂದರ್, ಡಾ. ಮನಮೋಹನ್ ಸಿಂಗ್ […]

Continue Reading

ಜನಗಣತಿ ಕರ್ತವ್ಯಕ್ಕೆ ಅಡ್ಡಿ ; ಮಹಿಳಾ ಸಿಬ್ಬಂದಿಗೆ ಅವಮಾನ ದಾಖಲಾಯಿತು FIR

ವಾರ್ಡ್ ಸಂಖ್ಯೆ 43ರಲ್ಲಿ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಗಣತಿದಾರರಾದ ಶ್ರೀಮತಿ ವೀಣಾ ಅವರು ಏಪ್ರಿಲ್ 20ರಂದು ಆರ್.ಟಿ. ನಗರದ ಸುಲ್ತಾನಪಾಳ್ಯದ ಪೇರಿ ಮೊನಾರ್ಕ್ ಅಪಾರ್ಟ್‌ಮೆಂಟ್‌ಗೆ ಮಾಹಿತಿ ಸಂಗ್ರಹಿಸಲು ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ನಿವಾಸಿಯೊಬ್ಬರು ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಈ ಕುರಿತು ಏಪ್ರಿಲ್ 25ರಂದು ಮೇಲ್ವಿಚಾರಕರಾದ ಶ್ರೀಮತಿ ರಶ್ಮಿ ಆರ್ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕೇಳಿದಾಗ, ಆ ನಿವಾಸಿಯು ಗಣತಿ ಕಾರ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಮಹಿಳಾ ಸಿಬ್ಬಂದಿಯೊಂದಿಗೆ ಅತ್ಯಂತ ಅಸಭ್ಯವಾಗಿ ವರ್ತಿಸಿ ನಿಂದಿಸಿದ್ದಾರೆ. ಸಿಬ್ಬಂದಿ […]

Continue Reading

ಮೇ.2ಕ್ಕೆ ಅಂಚೆ ಮತಗಳ ಮರುಎಣಿಕೆ ; ಕುತೂಹಲ ಕೆರಳಿಸಿದ ಶೃಂಗೇರಿ ಕ್ಷೇತ್ರ

ಈ ಪ್ರಕ್ರಿಯೆ ವೇಳೆ ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡ, ಹಾಗೂ ಬಿಜೆಪಿ ಪರಾಜಿತ ಅಭ್ಯರ್ಥಿ ಡಿಎನ್ ಜೀವರಾಜ್ ಸೇರಿದಂತೆ ಮತ ಎಣಿಕೆ ಪ್ರತಿನಿಧಿಗಳು ಹಾಜರಾಗುವ ಸಾಧ್ಯತೆ ಇದೆ.ಮರು ಎಣಿಕೆಗೆ ತಡೆ ಕೋರುವ ಗಡುವು ಏಪ್ರಿಲ್ 20 ರಂದು ಮುಗಿದಿದ್ದರಿಂದ, ಮೇ 2 ರಂದು ಮರು ಎಣಿಕೆ ನಡೆಸಲು ಹೈಕೋರ್ಟ್ ಆದೇಶಿಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಡಿ ರಾಜೇಗೌಡ ಅವರು ಕೇವಲ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಒಟ್ಟು 2,811 ಪೋಸ್ಟಲ್ ಮತಗಳಲ್ಲಿ 279 ಮತಗಳು ಅಮಾನ್ಯಗೊಂಡಿದ್ದವು. […]

Continue Reading

ಭಿಕ್ಷಾಟನೆ ನಡುವೆಯೂ ಶೇ.86ರಷ್ಟು ಅಂಕ ಗಳಿಸಿದ ಅಲೆಮಾರಿ ವಿದ್ಯಾರ್ಥಿನಿ

ಭಿಕ್ಷಾಟನೆ ನಡುವೆಯೂ ಜ್ಞಾನದ ಹಸಿವು ಮೂಲತಃ ಅಲೆಮಾರಿ ಸಮುದಾಯವಾದ ಗೊಲ್ಲರ ಜನಾಂಗಕ್ಕೆ ಸೇರಿದ ಸುಜಾತಾ ಅವರದ್ದು ಅನಕ್ಷರಸ್ಥ ಕುಟುಂಬ. ಹೊಟ್ಟೆಪಾಡಿಗಾಗಿ ಪ್ರತಿದಿನ ಮನೆ ಮನೆಗೆ ತೆರಳಿ ಭಿಕ್ಷೆ ಬೇಡಿ ಹಸಿವು ನೀಗಿಸಿಕೊಳ್ಳಬೇಕಾದ ಅನಿವಾರ್ಯತೆ ಈಕೆಯದು. ಒಂದು ಕೈಯಲ್ಲಿ ಭಿಕ್ಷಾ ಪಾತ್ರೆ ಹಿಡಿದರೂ, ಮನಸ್ಸಿನಲ್ಲಿ ಮಾತ್ರ ಶಿಕ್ಷಣದ ಕನಸಿತ್ತು. ಅಲೆಮಾರಿ ಬದುಕಿನ ಕಷ್ಟಗಳ ನಡುವೆ, ಸರ್ಕಾರಿ ಶಾಲೆಯ ಮೆಟ್ಟಿಲೇರಿ ಅಕ್ಷರ ಕಲಿತ ಈ ಪ್ರತಿಭೆ, ಇಂದು ತಾನು ಪಡೆದ ಅಂಕಗಳ ಮೂಲಕ ಬಡತನಕ್ಕೆ ಉತ್ತರ. ಉಳ್ಳವರು ಶಿವಾಲಯ ಮಾಡುವರು, […]

Continue Reading

ಮದುವೆ ದಿನವೇ ಯುವತಿ ಪರಾರಿ!

ಮುಂಜಾನೆ 1:00 ಗಂಟೆಯ ಸುಮಾರಿಗೆ ಮನೆಯಲ್ಲಿ ಮಲಗಿದ್ದ ಯುವತಿ, 4:00 ಗಂಟೆಯ ಹೊತ್ತಿಗೆ ತನ್ನ ಕೋಣೆಯಲ್ಲಿ ಕಂಡುಬಂದಿಲ್ಲ. ಪರಿವಾರದವರು ಮತ್ತು ಸಂಬಂಧಿಕರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಯುವತಿಯ ಸುಳಿವು ಸಿಗದ ಕಾರಣ ಯುವತಿಯ ಚಿಕ್ಕಪ್ಪ ಜಹೀರಾ ಖಾನ್ ಅವರು ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು ದೂರು ದಾಖಲಿಸಿದ್ದರು. ನಾಪತ್ತೆಯಾದ ಯುವತಿಯ ಚಹರೆ ನಾಪತ್ತೆಯಾದ ಕುಮಾರಿ ಸಫಾ ಅಫ್ಜಲ್ ಖಾನ್ 25 ವರ್ಷ ಪ್ರಾಯದವಳಾಗಿದ್ದು, ಸುಮಾರು 5 ಅಡಿ 2 ಇಂಚು ಎತ್ತರವಿದ್ದಾಳೆ. […]

Continue Reading

ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ ; ಅಭಿಮಾನಿಗಳ ಕ್ಷಮೆಯಾಚಿಸಿದ ಚೇತನ್‌

21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಪೋಸ್ಟ್ ಮಾಡಿದ್ದರು.

Continue Reading

ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಪ್ರೀತಿ ಝಿಂಟಾ ಮಾಲೀಕತ್ವದ ಪಂಜಾಬ್ ಕಿಂಗ್ಸ್

ಡೆಲ್ಲಿ ಪರ ಮಿಂಚಿದ ಕೆ.ಎಲ್‌.ರಾಹುಲ್ ಯಾರೂ ಊಹಿಸದ ರೀತಿಯಲ್ಲಿ ಬ್ಯಾಟ್ ಬೀಸಿದ ಪಂಜಾಬ್ ಕಿಂಗ್ಸ್, ಡೆಲ್ಲಿ ನೀಡಿದ್ದ 265 ರನ್‌ಗಳ ಗುರಿಯನ್ನು ತಲುಪಿ ಅಸಾಧ್ಯವಾದುದನ್ನು ಸಾಧ್ಯವಾಗಿಸಿದೆ. ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 264 ರನ್‌ಗಳ ಬೃಹತ್ ಮೊತ್ತ ದಾಖಲಿಸಿತ್ತು. ಡೆಲ್ಲಿ ಪರ ಕೆ.ಎಲ್.ರಾಹುಲ್ ಕೇವಲ 67 ಎಸೆತಗಳಲ್ಲಿ 16 ಬೌಂಡರಿ, 9 ಸಿಕ್ಸರ್‌ಳ ಸಹಿತ ಅಜೇಯ 152 ರನ್ ಚಚ್ಚಿದರು. ಈ ರನ್ ಐಪಿಎಲ್ […]

Continue Reading

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು ; ಮೇಜಿನ‌ ಕೆಳಗೆ ಅಡಗಿ ಕುಳಿತ ಟ್ರಂಪ್

ಒಂದು ಮೂಲೆಯಿಂದ ಗಾಡ್ ಬ್ಲೆಸ್ ಅಮೆರಿಕಾ ಎಂಬ ಘೋಷಣೆ ಕೇಳಿಬಂದಿತು, ಈ ವೇಳೆ ಡೊನಾಲ್ಡ್ ಟ್ರಂಪ್ ಅವರನ್ನು ವೇದಿಕೆಯಿಂದ ಸುರಕ್ಷಿತವಾಗಿ ಕರೆದುಕೊಂಡು ಹೋಗಲಾಯಿತು. ಅವರು ಕ್ಷಣಿಕವಾಗಿ ಜಾರಿಬಿದ್ದು, ಬಳಿಕ ಸೀಕ್ರೆಟ್ ಸರ್ವಿಸ್ ಸಿಬ್ಬಂದಿಯ ಸಹಾಯದಿಂದ ಎದ್ದರು. ಒಬ್ಬ ಕಾನೂನು ಜಾರಿಗೆ ಸಂಬಂಧಿಸಿದ ಅಧಿಕಾರಿ ಗುಂಡು ಹಾರಿಸಿದ ವ್ಯಕ್ತಿಯಿದ್ದಾನೆ ಎಂದು ದೃಢಪಡಿಸಿದರೂ, ಹೆಚ್ಚಿನ ವಿವರಗಳು ತಕ್ಷಣ ಲಭ್ಯವಾಗಲಿಲ್ಲ. ಸೀಕ್ರೆಟ್ ಸರ್ವಿಸ್ ರಕ್ಷಣೆಯಲ್ಲಿದ್ದ ಎಲ್ಲಾ ಅಧಿಕಾರಿಗಳನ್ನು ಸ್ಥಳಾಂತರಿಸಲಾಯಿತು. ಕಾರ್ಯಕ್ರಮವನ್ನು ಮತ್ತೆ ಪ್ರಾರಂಭಿಸಲು ಆಯೋಜಕರು ಪ್ರಯತ್ನಿಸುತ್ತಿದ್ದರು.

Continue Reading

ಸಿಇಟಿ ಪರೀಕ್ಷೆಯಲ್ಲಿ ಅವಾಂತರ : ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

ಈ ಸಂದರ್ಭದಲ್ಲಿ ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಂಡಿದೆ. ಸುಪ್ರಿತ್ ಜನಿವಾರವನ್ನು ತೆಗೆದು ತನ್ನ ಬಳಿ ಇಟ್ಟುಕೊಳ್ಳಲು ಅನುಮತಿ ಕೇಳಿದಾಗ, ಅದನ್ನೂ ಅಧಿಕಾರಿಗಳು ನಿರಾಕರಿಸಿದರೆಂದು ಆರೋಪಿಸಲಾಗಿದೆ.ನಂತರ ಸ್ಥಳಕ್ಕೆ ಬಂದ ಮಹಿಳಾ ಸಿಬ್ಬಂದಿಯೊಬ್ಬರು ಕತ್ತರಿ ಬಳಸಿ ಜನಿವಾರವನ್ನು ಕತ್ತರಿಸಿ ಕಸದ ಬುಟ್ಟಿಗೆ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ನಡೆ ವಿದ್ಯಾರ್ಥಿಗೆ ತೀವ್ರ ಮಾನಸಿಕ ಆಘಾತ ಉಂಟುಮಾಡಿದೆ.ಈ ಅವಮಾನಕರ ಪರಿಸ್ಥಿತಿಯ ನಡುವೆಯೇ ಸುಪ್ರಿತ್ ಪರೀಕ್ಷೆಯನ್ನು ಬರೆದಿದ್ದಾನೆ. ಪರೀಕ್ಷೆ ಮುಗಿದ ನಂತರ, ಕಸದ ಬುಟ್ಟಿಯಲ್ಲಿ ಹಾಕಲಾಗಿದ್ದ ಜನಿವಾರವನ್ನು ಮರಳಿ ತೆಗೆದುಕೊಂಡು ಮನೆಗೆ ಹೋಗಿದ್ದಾನೆ.ಬಳಿಕ […]

Continue Reading