ಮಹಾರಾಜ ಟ್ರೋಫಿ KSCA ಟಿ20 ಚಾಂಪಿಯನ್ ಶಿವಮೊಗ್ಗ ಯೋಧಾಸ್ ಗೆ ಅಭಿನಂದನೆ : ಡಿ.ಎಸ್. ಅರುಣ್

ತಂಡದ ಎಲ್ಲಾ ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ, ಫ್ರಾಂಚೈಸಿ ಆಡಳಿತ ಮಂಡಳಿ ಹಾಗೂ ಶಿವಮೊಗ್ಗ KSCA ತಂಡದ ಎಲ್ಲ ಪದಾಧಿಕಾರಿಗಳ ಶ್ರಮವನ್ನು ಶ್ಲಾಘಿಸಿದ ಅವರು, ಈ ಗೆಲುವಿಗೆ ಕಾರಣರಾದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅಧ್ಯಕ್ಷರಾದ ಶ್ರೀ ವೆಂಕಟೇಶ್ ಪ್ರಸಾದ್, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಕ್ರಿಕೆಟ್ ಅಭಿಮಾನಿಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಹತ್ತು ವರ್ಷಗಳ ಬಳಿಕವೂ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ ವರದಿ ಜಾರಿಗೆ ಬರದೆ ಮೂಲೆಗುಂಪಾಗಿರುವುದು ಸರ್ಕಾರದ ನಿರ್ಲಕ್ಷ್ಯ : ರಘು ಕೌಟಿಲ್ಯ…!

2014ರಲ್ಲಿ ಕಾಂತರಾಜ ಆಯೋಗಕ್ಕೆ ಜಾತಿ ಜನಗಣತಿಯ ಜವಾಬ್ದಾರಿ ನೀಡಲಾಯಿತು. ನಂತರ ಈ ಜವಾಬ್ದಾರಿಯನ್ನು ಜಯಪ್ರಕಾಶ್ ಹೆಗ್ಡೆ ನೇತೃತ್ವದ ಆಯೋಗಕ್ಕೆ ವಹಿಸಲಾಯಿತು. ಆದರೆ ಸುಮಾರು ಹತ್ತು ವರ್ಷಗಳ ಬಳಿಕವೂ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ ವರದಿ ಜಾರಿಗೆ ಬರದೆ ಮೂಲೆಗುಂಪಾಗಿರುವುದು ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಹೇಳಿದರು. ಬಿಹಾರ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಒಂದು ವರ್ಷದೊಳಗೆ ಜಾತಿ ಸಮೀಕ್ಷೆ ಪೂರ್ಣಗೊಂಡಿದ್ದರೆ, ಕರ್ನಾಟಕದಲ್ಲಿ ದಶಕ ಕಳೆದರೂ ಪ್ರಕ್ರಿಯೆ ಪೂರ್ಣಗೊಳ್ಳದಿರುವುದು ಸರ್ಕಾರದ ಇಚ್ಛಾಶಕ್ತಿಯ ಕೊರತೆಯಾಗಿದೆ ಎಂದು ಆರೋಪಿಸಿದರು. 2025ರ ಜೂನ್ 15ರಂದು […]

Continue Reading

“ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಟೂರ್ನಿ ಗೆದ್ದ ‘ಶಿವಮೊಗ್ಗ ಯೋಧಾಸ್’ ತಂಡಕ್ಕೆ ಹಾರ್ದಿಕ ಅಭಿನಂದನೆಗಳು” : ಸಂಸದ ಬಿ.ವೈ.ರಾಘವೇಂದ್ರ

ನಮ್ಮ ಜಿಲ್ಲೆಯ ಪ್ರತಿಭಾವಂತ ಯುವಕರು ಜಾಗತಿಕ ಮಟ್ಟದಲ್ಲಿ ಮಿನುಗಬಲ್ಲರು ಎನ್ನುವುದಕ್ಕೆ ಶಿವಮೊಗ್ಗ ಯೋಧಾಸ್ ತಂಡದ ಈ ಐತಿಹಾಸಿಕ ವಿಜಯವೇ ಸಾಕ್ಷಿ! ಮಲೆನಾಡಿನ ಕ್ರೀಡಾ ಇತಿಹಾಸದಲ್ಲಿ ಇದು ಸುವರ್ಣಾಕ್ಷರಗಳ ಮುನ್ನುಡಿಯಾಗಿದ್ದು, ನಮ್ಮ ಜಿಲ್ಲೆಯ ಪ್ರತಿಭಾವಂತರ ಕ್ರೀಡಾ ಯಾನ ಹೀಗೆಯೇ ಎಲ್ಲಾ ಕ್ರೀಡೆಗಳಲ್ಲಿ ಯಶಸ್ವಿಯಾಗಿ ಮುಂದುವರಿಯಲಿ ಎಂದು ಹಾರೈಸುತ್ತೇನೆ” ಎಂದು ಸಂಸದ ರಾಘವೇಂದ್ರ ಅವರು, ಟೂರ್ನಿ ಗೆದ್ದ ಶಿವಮೊಗ್ಗ ತಂಡಕ್ಕೆ ಶುಭ ಹಾರೈಸಿದ್ದಾರೆ.

Continue Reading

ಶಿವಮೊಗ್ಗ | ಇನ್ನುಮುಂದೆ ನಗರದ ಸಿಟಿ ಬಸ್ ಗಳಲ್ಲಿ ಸಿಸಿಟಿವಿ ಕಡ್ಡಾಯ, ಪ್ರಯಾಣಿಕರ ಅನುಕೂಲಕ್ಕೆ ಪೊಲೀಸ್ ಸಹಾಯವಾಣಿ ನಂಬರ್

ಎಲ್ಲಾ ಸಿಟಿ ಬಸ್‌ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ರಸ್ತೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು.ಪ್ರಯಾಣಿಕರು ಕೈತೋರಿಸಿದ ಸ್ಥಳಗಳಲ್ಲಿ ಬಸ್ ನಿಲ್ಲಿಸದೆ, ನಿಗದಿಪಡಿಸಿರುವ ಬಸ್ ನಿಲ್ದಾಣಗಳಲ್ಲಿ ಮಾತ್ರ ಪ್ರಯಾಣಿಕರನ್ನು ಹತ್ತಿಸುವ ಮತ್ತು ಇಳಿಸುವಂತೆ ಸೂಚಿಸಲಾಯಿತು. ಅಲ್ಲದೆ, ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ, ಬಸ್ ಚಾಲಕರು ಅಥವಾ ನಿರ್ವಾಹಕರು ಅನುಚಿತವಾಗಿ ವರ್ತಿಸಿದರೆ, ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಸಿದರೆ, ಜೋರಾಗಿ ಅಸಭ್ಯ ಹಾಡುಗಳನ್ನು ಪ್ರಸಾರ ಮಾಡಿದರೆ ಅಥವಾ ಇತರೆ ಯಾವುದೇ […]

Continue Reading

“ನಮ್ಮಭಿಮಾನದ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ” ; ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದ ಸಿಎಂ

ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು, ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಗಳಾದ NPS ರದ್ದುಪಡಿಸಿ OPS ಜಾರಿಗೆ ತರುವ ಬಗ್ಗೆ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ ಯಾವುದೇ ಆತಂಕ ಬೇಡವೆಂದು ಸ್ಪಷ್ಟ ಭರವಸೆಯನ್ನು ನೀಡಿದರು. ಮಾನ್ಯ ಉಪಮುಖ್ಯಮಂತ್ರಿಗಳು ಸಹ ನಿಮ್ಮ ಜೊತೆ ನಾವಿದ್ದೇವೆ ನಮ್ಮ ಪ್ರಣಾಳಿಕೆಯಲ್ಲಿ ಓಪಿಎಸ್ ಜಾರಿ ಮಾಡುತ್ತೇವೆ ಎಂದು ಹೇಳಿದ್ದೇವೆ ಆ ಕಾರ್ಯವನ್ನು ನಾವು ಮಾಡುತ್ತೇವೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ […]

Continue Reading

ವರ್ಷದ ಬಳಿಕ ಬೆಳಕಿಗೆ ಬಂದ ಸಂಗೀತಾ ಸಾವಿನ ಪ್ರಕರಣ ಅತ್ಯಂತ ದುಃಖಕರ ಹಾಗೂ ಖಂಡನೀಯ : ಎಸ್‌ಐಟಿ (SIT) ತನಿಖೆಗೆ ಸಂಸದ ಬಿ. ವೈ. ರಾಘವೇಂದ್ರ ಆಗ್ರಹ!

ಪ್ರಕರಣದ ಆರೋಪಿಗಳು ಈಗಾಗಲೇ ಬಂಧನಕ್ಕೊಳಗಾಗಿದ್ದು, ಯಾವುದೇ ಕಾರಣಕ್ಕೂ ರಾಜಕೀಯ ಪ್ರಭಾವಕ್ಕೆ ಮಣಿಯದೆ ತಪ್ಪಿತಸ್ಥರಿಗೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣಾತಿಕಠಿಣ ಶಿಕ್ಷೆಯಾಗಬೇಕು. ಈ ಶೋಷಿತ ಕುಟುಂಬಕ್ಕೆ ಶೀಘ್ರವಾಗಿ ಸೂಕ್ತ ನ್ಯಾಯ ಮತ್ತು ಭದ್ರತೆ ದೊರೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಕೆ.ಎಸ್. ಗುರುಮೂರ್ತಿ ಅವರು, ತಾಲೂಕಿನ ಬಿಜೆಪಿ ಅಧ್ಯಕ್ಷರಾದ ಹನುಮಂತಪ್ಪ ಸಂಕ್ಲಾಪುರ ಹಾಗೂ ಬಣಜಾರ್ ಸಮಾಜದ ಮುಖಂಡರಾದ ರಾಮ ನಾಯ್ಕ್, ಬಂಗಾರಿ ನಾಯ್ಕ್, ರಮೇಶ್ ನಾಯ್ಕ್, ಸುರೇಶ್ ನಾಯ್ಕ್, ಶ್ರೀಮತಿ ವಿಜಯಲಕ್ಷ್ಮಿ ಸೇರಿದಂತೆ ಬಣಜಾರ್ […]

Continue Reading

ವಾದಿರಾಜರ ಅವತಾರ ಭೂಮಿಯಲ್ಲಿ ಭತ್ತನಾಟಿ ಮಾಡಿದ ಜಗದ್ಗುರು ಸೋದೆ ಶ್ರೀಪಾದರು

ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಭಾರತದಲ್ಲೇ ಮೊದಲೆನಿಸಿದ ನಿತ್ಯ ಒಂದೊಂದು ತಳಿ ಶುದ್ಧ ನೈವೇದ್ಯ ಅನ್ನಬ್ರಹ್ಮನಿಗೆ ಸಮರ್ಪಿಸುವ ಯೋಜನೆಯ ರೂವಾರಿ ಹಾದಿಗಲ್ಲು ಅಭಯಲಕ್ಷ್ಮೀನೃಸಿಂಹ ದೇಗುಲದ ಧರ್ಮದರ್ಶಿ, ಸಂಸ್ಕೃತಿ ಚಿಂತಕ ಹಾದಿಗಲ್ಲು ಲಕ್ಷ್ಮೀನಾರಾಯಣ ಅವರು ರೈತರ ಕೈ ಬಲಪಡಿಸಲು ಬೆಳೆವ ಭೂಮಿ ಇಲ್ಲದವರೂ ಸಹ ಆರ್ಥಿಕ ನೆರವಿನ ಪ್ರಾಯೋಜನೆಯ ಮೂಲಕ ಪರೋಕ್ಷ ರೈತರಾಗಿ ಈ ಅಭಿಯಾನದಲ್ಲಿ ಪಾಲ್ಗೊಳ್ಳಬಹುದೆಂದರು. ಕೃಷಿ ಋಷಿ ಪುರುಷೋತ್ತಮರಾಯರು ಸಾವಯವ ಕೃಷಿ ಪಸರಿಸಿದ ಬಗೆ ಮತ್ತು ಪಾರಂಪರಿಕ ಬೀಜತಳಿ ಸಂರಕ್ಷಣೆಗಾಗಿ ಕೃಷಿ ಪ್ರಯೋಗ ಪರಿವಾರ ಹಮ್ಮಿಕೊಂಡ […]

Continue Reading