ಚಿರತೆಯಿಂದ ಅತ್ತೆಯನ್ನು ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಮನೆಯ ಮಂಚದಡಿ ಚಿರತೆ ಅಡಗಿರುವುದು ತಿಳಿಯುತ್ತಿದ್ದಂತೆಯೇ, ಪ್ರಾಣದ ಹಂಗು ತೊರೆದು ಕೊಠಡಿಗೆ ನುಗ್ಗಿ, ವಯಸ್ಸಾದ ಅತ್ತೆಯನ್ನು ಅಪ್ಪಿಕೊಂಡು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರ ಸಾಹಸ ನಿಜಕ್ಕೂ ರೋಮಾಂಚನಕಾರಿ. ಸಾಕ್ಷಾತ್ ಮೃತ್ಯುವಿನ ದವಡೆಯಿಂದ ಅತ್ತೆಯನ್ನ ರಕ್ಷಿಸಿದ ಅವರ ಸಮಯಪ್ರಜ್ಞೆ ಇಡೀ ಮಹಿಳಾ ಕುಲಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ಸೂಚಿಸಿದ್ದಾರೆ. ಅತ್ತೆ-ಸೊಸೆಯ ಸಂಬಂಧದ ಬಗ್ಗೆ ಸಮಾಜದಲ್ಲಿರುವ ಹಳೆಯ ಕಲ್ಪನೆಗಳನ್ನ ಅಳಿಸಿ, ಸುಜಾತಾ ಅವರು ಇಂದು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ […]

Continue Reading

ಇಂದು ರಾತ್ರಿ 8:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಷಣ

ಲೋಕಸಭೆಯ ಸ್ಥಾನಗಳನ್ನು 543ರಿಂದ 850ಕ್ಕೆ ಏರಿಸುವ ಸಂವಿಧಾನ ತಿದ್ದುಪಡಿ ಮಸೂದೆ ಮತ್ತು ಮಹಿಳಾ ಮೀಸಲಾತಿ ಮಸೂದೆ ಪಾಸಾಗಲು ಮೂರನೇ ಎರಡರಷ್ಟು ಮತಗಳು ಬೇಕಿತ್ತು. ಎನ್ ಡಿಎ ಸರ್ಕಾರದ ಈ ಎರಡೂ ಮಹತ್ವಾಕಾಂಕ್ಷಿಯ ಮಸೂದೆಗಳನ್ನು ಇಂಡಿಯಾ ಮೈತ್ರಿಕೂಟ ಸೋಲಿಸಿದೆ.

Continue Reading

ತೀರ್ಥಹಳ್ಳಿ | ಕುಡಿಯುವ ನೀರಿನ ಬಾವಿಗೆ ವಿಷ ; ದೂರು ದಾಖಲು

ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಘವೇಂದ್ರ ಅವರು ತಮ್ಮ ಜಮೀನಿಗೆ ತೆರಳಿದ ಸಂದರ್ಭದಲ್ಲಿ, ಬಾವಿಯ ಸಮೀಪ ಹೋದಾಗ ನೀರಿನಲ್ಲಿ ವಿಷದ ವಾಸನೆ ಬರುತ್ತಿರುವುದು ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Continue Reading

ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ – ಸಕಲ ಸಿದ್ದತೆ : ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಬಾರಿ ಜಿಲ್ಲೆಯಾದ್ಯಂತ ಒಟ್ಟು 29 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಶಿವಮೊಗ್ಗ ನಗರದಲ್ಲಿ 21, ಭದ್ರಾವತಿಯಲ್ಲಿ 05 ಹಾಗೂ ಸಾಗರದಲ್ಲಿ 03 ಕೇಂದ್ರಗಳಿವೆ. ಒಟ್ಟು 9,864 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಶಿವಮೊಗ್ಗದಿಂದ 7,456, ಭದ್ರಾವತಿಯಿಂದ 1,120 ಮತ್ತು ಸಾಗರ ತಾಲೂಕಿನಿಂದ 1,288 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ನಿಷೇಧಿತ ಆಜ್ಞೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ರಡಿ ನಿಷೇಧಿತ ಆಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಈ ಭಾಗದಲ್ಲಿ ಜೆರಾಕ್ಸ್ […]

Continue Reading

ಶತಮಾನದ ಶಾಲೆ ಬಲವರ್ಧನೆಗೆ 31 ಶಿಫಾರಸು ; ಪಾರಂಪರಿಕ ಶಾಲೆಗಳೆಂದು ಘೋಷಿಸಲು ಆಗ್ರಹ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಹಾಗೂ ಕೆ.ಪಿ. ಸುರೇಶ್ ಉಪ್ಪಸ್ಥಿತರಿದ್ದರು. ‘ಶಾಲೆಗಳಿಗೆ ಐತಿಹಾಸಿಕ ಮಹತ್ವ’ಶತಮಾನ ಕಂಡ ಶಾಲೆಗಳಿಗೆ ಐತಿಹಾಸಿಕ ಮಹತ್ವವಿದೆ. ಅವು ಅವಕಾಶ ವಂಚಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣದ ಮೂಲಕ ಬಿಡುಗಡೆಯ ದಾರಿ ತೋರಿವೆ.ಸಾಮಾಜಿಕ ಬದಲಾವಣೆಯ ಹರಿಕಾರರು ನಡೆಸಿದ ಅಭಿಯಾನದ ಮೂರ್ತ ಸ್ವರೂಪವೇ ಈ ಶಾಲೆಗಳು, ನಾಲ್ಕು ತಲೆಮಾರುಗಳ ಬಳಿಕ ಆ ಶಾಲೆಗಳು ತನ್ನ ಅರ್ಥಪೂರ್ಣತೆಯನ್ನು ಕಳೆದುಕೊಂಡು, ಅಂಚಿಗೆ ಸರಿಯುವುದೆಂದರೆ ನಮ್ಮ ಪರಂಪರೆಯ ಆಶಯಕ್ಕೆ ಊನ ಬಂದಿದೆ ಎಂದರ್ಥ. ಜಾಗತೀಕರಣದ ವೇಗೋತ್ಕರ್ಷದಲ್ಲಿ ಅವು ಅಪ್ರಸ್ತುತವಾಗದಂತೆ […]

Continue Reading

ಹೊಸನಗರ | ಕಾರು ಡಿಕ್ಕಿ ; ಪಾದಾಚಾರಿ ಸಾವು

ತಕ್ಷಣ ಸ್ಥಳೀಯರು ಗಾಯಾಳುವನ್ನು ರಿಪ್ಪನ್ ಪೇಟೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅಷ್ಟರಲ್ಲಾಗಲೇ ಇಬ್ರಾಹಿಂ ಮೃತಪಟ್ಟಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆಯ ಶವಗಾರಕ್ಕೆ ಸಾಗಿಸಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಶಿವಮೊಗ್ಗ | ನಕಲಿ ಪಿಎಚ್ಡಿ ಪ್ರಮಾಣಪತ್ರ ನೀಡಿದ ಉಪನ್ಯಾಸಕ ವಜಾ

ಈ ವೇಳೆ ಮಾದೇಶ ಪ್ರಭು ಅವರು ಸದರಿ ವಿಶ್ವವಿದ್ಯಾಲಯದಿಂದ ಯಾವುದೇ ಪಿಎಚ್.ಡಿ ಪದವಿಯನ್ನು ಪಡೆದಿಲ್ಲ ಎಂಬ ಅಂಶ ದೃಢಪಟ್ಟಿದೆ.ಈ ಹಿನ್ನೆಲೆಯಲ್ಲಿ ಕಾಲೇಜಿನ ಪರಿಶೀಲನಾ ಸಮಿತಿಯು ಸಭೆ ಸೇರಿ ಚರ್ಚಿಸಿ, ನಕಲಿ ದಾಖಲೆ ಒದಗಿಸಿದ ಕಾರಣಕ್ಕಾಗಿ ಅವರನ್ನು ಶುಕ್ರವಾರ ಸೇವೆಯಿಂದ ವಜಾಗೊಳಿಸಿದೆ. ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕರಾಗಿದ್ದ ಮಾದೇಶ ಪ್ರಭು ಅವರು ಸಲ್ಲಿಸಿದ್ದ ಪಿಎಚ್.ಡಿ ಪದವಿ ಪ್ರಮಾಣಪತ್ರವು ನಕಲಿಯಾಗಿರುವ ಕಾರಣಕ್ಕೆ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಪ್ರಾಚಾರ್ಯ ಚನ್ನೇಶ್ ತಿಳಿಸಿದ್ದಾರೆ.

Continue Reading

ಹೊಸನಗರ | ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು

ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳೊಂದಿಗೆ ದುರ್ವರ್ತನೆ, ಅನಗತ್ಯ ನೋಟಿಸ್‌ಗಳ ಜಾರಿ, ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣಪತ್ರ (ಟಿ.ಸಿ.) ನೀಡುವ ಬೆದರಿಕೆ, ಸಹೋದ್ಯೋಗಿಗಳೊಂದಿಗೆ ಘರ್ಷಣೆ ಹಾಗೂ ಅಸಭ್ಯ ಭಾಷೆಯ ಬಳಕೆ ಸೇರಿದಂತೆ ವಿವಿಧ ದೂರುಗಳು ದಾಖಲಾಗಿದೆ. ಸಾರ್ವಜನಿಕರೊಂದಿಗೆ ಘರ್ಷಣೆ ನಡೆಸಿ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಗಳಲ್ಲಿ ಅನಗತ್ಯ ದೂರುಗಳನ್ನು ದಾಖಲಿಸಿರುವುದು, ಕಾಲೇಜಿನ ಆಡಳಿತಾತ್ಮಕ ಕಾರ್ಯಗಳಿಗೆ ಅಡ್ಡಿಯಾಗುವ ರೀತಿಯಲ್ಲಿ 80ಕ್ಕೂ ಹೆಚ್ಚು ಆರ್‌ಟಿಐ ಅರ್ಜಿಗಳು ಮತ್ತು 250ಕ್ಕೂ ಹೆಚ್ಚು ಪತ್ರಗಳನ್ನು ಸಲ್ಲಿಸಿರುವುದೂ ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ಈ ಕುರಿತು ಕಾಲೇಜಿನ ಅಭಿವೃದ್ಧಿ ಸಮಿತಿ […]

Continue Reading

ಕೃಷಿ ವಿಜ್ಞಾನ ಪದವಿಗಳನ್ನು ಆರಂಭಿಸಲು ಖಾಸಗಿ ಕಾಲೇಜುಗಳಿಂದ ಅರ್ಜಿ ಆಹ್ವಾನ

ಹೆಚ್ಚಿನ ವಿವರ ಹಾಗೂ ನಿಬಂಧನೆಗಳು ಮತ್ತು ಅರ್ಜಿಗಾಗಿ www.uahs.edu.in ಜಾಲತಾಣಕ್ಕೆ ಬೇಟಿ ನೀಡಬಹುದು ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading