ಸಾಗರ | ಆಟವಾಡುತ್ತಿದ್ದ ಕಂದಮ್ಮನಿಗೆ ನಾಗರಹಾವು ಕಡಿತ ; ಚಿಕಿತ್ಸೆ ಫಲಿಸದೆ ಸಾವು
ತಕ್ಷಣವೇ ಎಚ್ಚೆತ್ತ ಪೋಷಕರು ಮಗುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆಗೆ ಮಗು ಕೊನೆಯುಸಿರೆಳೆದಿದೆ.
Continue Readingಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟ
100 ಕ್ಕೆ 100 ಅಂಕ ವಿಶೇಷವಾಗಿ ಕೆಲವು ವಿಷಯಗಳಲ್ಲಿ ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿದ್ದು, ಇಂಗ್ಲೀಷ್ ವಿಷಯದಲ್ಲಿ 3 ವಿದ್ಯಾರ್ಥಿಗಳು, ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ 3, ಸಮಾಜ ವಿಜ್ಞಾನ ವಿಷಯದಲ್ಲಿ ಓರ್ವ ವಿದ್ಯಾರ್ಥಿ ಹಾಗೂ ಕನ್ನಡದಲ್ಲಿ ಓರ್ವ ವಿದ್ಯಾರ್ಥಿನಿ 100 ಕ್ಕೆ 100 ಅಂಕ ಪಡೆದಿದ್ದಾರೆ. ವಿದ್ಯಾರ್ಥಿನಿ ಹಾಝಿರಾ ಮದಿಹಾ ಇಂದಾಡಿ ಇಂಗ್ಲೀಷ್ ವಿಷಯದಲ್ಲಿ 100 ಅಂಕ, ಅನುಷ್ಕಾ.ಕೆ ಇಂಗ್ಲೀಷ್ ಹಾಗೂ ಇನ್ಫಾರ್ಮೇಶನ್ ಟೆಕ್ನಾಲಜಿ ವಿಷಯದಲ್ಲಿ ತಲಾ 100 ಅಂಕ, ಸೈಯದ್ ರಾಹಿಲ್ ಇಂಗ್ಲೀಷ್ […]
Continue Readingತೀರ್ಥಹಳ್ಳಿ | ಪಿಕಪ್ ವಾಹನ ಡಿಕ್ಕಿ ; ಬೈಕ್ ಸವಾರನಿಗೆ ಗಂಭೀರ ಗಾಯ
ಧಾರ್ಮಿಕ ವಿಧಿವಿಧಾನಗಳನ್ನು ಮುಗಿಸಿ ಇಂದು ಬೆಳಿಗ್ಗೆ ಬೈಕ್ನಲ್ಲಿ ವಾಪಸ್ ತೆರಳುತ್ತಿದ್ದಾಗ, ಮೇಲಿನ ಕುರುವಳ್ಳಿಯ ಮಹಾಲಕ್ಷ್ಮಿ ಹೋಟೆಲ್ ಎದುರು ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ಬೈಕ್ನಲ್ಲಿದ್ದ ಉಳಿದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ತೀರ್ಥಹಳ್ಳಿ ಪಟ್ಟಣದ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Continue Readingಶಿವಮೊಗ್ಗ | ಏ. 18 ಕ್ಕೆ ‘ನಾನೇ ಭಾರತ’ ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮ
ಸ್ವಾತಂತ್ರ್ಯ ಸಂಗ್ರಾಮದ ವೀರಗಾಥೆ: ವಿಶೇಷ ಪ್ರದರ್ಶಿನಿ’ಅದಮ್ಯ ಭಾರತ’ ಬೆಳಗ್ಗಿನಿಂದ ಸಂಜೆಯವರೆಗೆ ನಡೆಯಲಿದೆ. ಸಂಜೆ 6:00ಕ್ಕೆ ನಾನೇ ಭಾರತ ಎಂಬ ವಿಷಯದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡುವರು. ಭಾರತ ಬರಿಯ ಮಣ್ಣಲ್ಲ, ಯಾರೋ ಗೀಚಿದ ಗಡಿ ರೇಖೆಯೂ ಅಲ್ಲ ಅವಳು ತಾಯಿ, ದೇವಿ, ದುರ್ಗೆ, ಅವಳು ಸಸ್ಯಶ್ಯಾಮಲೆ, ಕೋಟಿ ಕೋಟಿ ತರುಣರ ಏಕಮಾತ್ರ ಆಶಯದನಿ. ತಾಯಿ ಭಾರತೀಯ ಸ್ತುತಿಗೀತೆಗೆ 150 ಮತ್ತು ಬಂಕಿಮಚಂದ್ರರ ಸ್ಮರಿಸೋಣ ವಿಷಯವಾಗಿ ತಾಯಿ ಭಾರತಿಗೆ ನಮೋ ಎನ್ನೋಣ ಬಗ್ಗೆ ಅವರ ಉಪನ್ಯಾಸವಿರಲಿದೆ ಎಂದರು.
Continue Readingಇಂದಿನಿಂದ ಪ್ರತಿಮನೆಗೆ ತೆರಳಿ ಮನೆಗಣತಿ
ಜನಗಣತಿಯಲ್ಲಿ ಮೊದಲ ಬಾರಿಗೆ ಪರಿಚಯಿಸಲಾದ ಸ್ವಯಂ-ಗಣತಿ (SE) ಸೌಲಭ್ಯವು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ ಎಂದು ಭಾರತೀಯ ರಿಜಿಸ್ಟ್ರಾರ್ ಜನರಲ್ (RGI) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “2027 ರ ಜನಗಣತಿಗೆ ಅಳವಡಿಸಿಕೊಂಡ ಡಿಜಿಟಲ್ ವಿಧಾನದ ಭಾಗವಾಗಿ, ಇಲ್ಲಿಯವರೆಗೆ ಸುಮಾರು 12 ಲಕ್ಷ ಕುಟುಂಬಗಳು ಅಧಿಕೃತ ಪೋರ್ಟಲ್ ಮೂಲಕ ಸ್ವಯಂ-ಗಣತಿ ಸೌಲಭ್ಯವನ್ನು ಯಶಸ್ವಿಯಾಗಿ ಪಡೆದುಕೊಂಡಿವೆ” ಎಂದು ಅಧಿಕಾರಿ ಹೇಳಿದರು. ಕ್ಷೇತ್ರ ಗಣತಿ ಅವಧಿಗೆ ಮುಂಚಿತವಾಗಿ ಈ ಸೌಲಭ್ಯವನ್ನು ಲಭ್ಯವಾಗುವಂತೆ ಮಾಡಲಾಗಿದ್ದು, ನಿವಾಸಿಗಳು ಸುರಕ್ಷಿತ ಮತ್ತು ಬಳಕೆದಾರ ಸ್ನೇಹಿ ಡಿಜಿಟಲ್ ವೇದಿಕೆಯ […]
Continue Readingಮಂತ್ರಾಲಯಕ್ಕೆ ತೆರಳುತ್ತಿದ್ದ ಕರ್ನಾಟಕದ 8 ಜನ ಭಕ್ತರು ಭೀಕರ ಅಪಘಾತದಲ್ಲಿ ದುರ್ಮರಣ
ಘಟನೆಯಲ್ಲಿ ಕುಮಾರ್ (50), ದೀಪಿಕಾ (42), ಸುನಿಲ್ (40), ಯಶೋಧಮ್ಮ (60), ಪುಟ್ಟಮ್ಮ (55), ಬೆಳ್ಳಿ (3), ಲೋಲಾಕ್ಷಿ ಹಾಗೂ ಮೀನಾಕ್ಷಿ ಎಂಬವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಮೃತರಲ್ಲಿ ಐವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಮೂರು ವರ್ಷದ ಮಗು ಸೇರಿದೆ. 7 ಮಂದಿ ತೀವ್ರ ಗಾಯಗೊಂಡಿದ್ದು, ಅವರನ್ನು ಕರ್ನೂಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ನಾಲ್ವರು ಎಮ್ಮಿಗನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹಾಸನ ಹಾಗೂ ಚಿಕ್ಕಮಗಳೂರು ಮೂಲದ ಒಟ್ಟು 18 ಮಂದಿ ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ […]
Continue Readingಯೋಗೇಶ್ ಗೌಡ ಹತ್ಯೆ ಪ್ರಕರಣ ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ ನ್ಯಾಯಾಲಯ ಮಹತ್ವದ ತೀರ್ಪು
ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ. 21 ಆರೋಪಿಗಳ ಪೈಕಿ 17 ಮಂದಿ ದೋಷಿಗಳಾಗಿದ್ದಾರೆ. 20ನೇ ಆರೋಪಿ ವಾಸುದೇವ ನಿಲಕೇಣಿ, 21ನೇ ಆರೋಪಿ ಸೋಮಶೇಕರ್ ನ್ಯಾಮಗೌಡ ಅವರನ್ನು ಕೋರ್ಟ್ ಈ ಪ್ರಕರಣದಿಂದ ಖುಲಾಸೆಗೊಳಿಸಿದೆ. ಎಲ್ಲಾ ದೋಷಿಗಳನ್ನು ಕಸ್ಟಡಿಗೆ ಪಡೆಯುವಂತೆ ಕೋರ್ಟ್ ಸಿಬಿಐಗೆ ಸೂಚಿಸಿದೆ. ಎ-1 ಬಸವರಾಜ್ ಮುತ್ತಗಿ ಮತ್ತು ಎ17 – ಶಿವಾನಂದ ಬಿರಾದರ್ ಸರ್ಕಾರಿ ಸಾಕ್ಷಿಗಳಾಗಿರುವ ಕಾರಣ ಅವರನ್ನು ಕೋರ್ಟ್ ನಿರ್ದೋಷಿ ಎಂದು ಹೇಳಿದೆ. ಸಿಆರ್ಪಿಸಿ ಸೆಕ್ಷನ್ 302 (ಕೊಲೆ), 120B (ಕ್ರಿಮಿನಲ್ ಪಿತೂರಿ), ಸೆಕ್ಷನ್ […]
Continue Readingಕಾಲಭೈರವನ ದರ್ಶನ ಪಡೆದಿದ್ದು ನನ್ನ ಸೌಭಾಗ್ಯ– ಸಕ್ಕರೆ ನಾಡು ಮಧುರ ಮಂಡ್ಯ ಎಂದು ಕೊಂಡಾಡಿದ ‘ನಮೋ’
ಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ. ಮಠವು ನೈತಿಕ ಮೌಲ್ಯಗಳಿಂದ ದಾರಿದೀಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು. ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆ ಬಳಿಕ ಮಾತನಾಡಿದ ಮೋದಿ ಕನ್ನಡದಲ್ಲೇ ಮಾತನ್ನು ಆರಂಭಿಸಿದರು. ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತನಾಡಿದರು. ಕಾಲಭೈರನ ದರ್ಶನ ಪಡೆದುಕೊಂಡಿದ್ದೇನೆ. ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ್ದೇನೆ. ನಿಮ್ಮೆಲ್ಲರ ದರ್ಶನ ಪಡೆದುಕೊಂಡಿದ್ದೇನೆ. ಶಬ್ದದಲ್ಲಿ ಈ ಭಾವವನ್ನು ಹೇಳಲು ಸಾಧ್ಯವಿಲ್ಲ. ಪ್ರತಿ ಸಲ ಕರ್ನಾಟಕಕ್ಕೆ ಬಂದಾಗ ಪ್ರೇರಣೆ ಸಿಗುತ್ತದೆ ಎಂದು ಸಂತಸ […]
Continue Readingಸಾಗರ | ಹಿರಿಯ ಪತ್ರಕರ್ತ ಓಂಕಾರ ಎಸ್.ವಿ ತಾಳಗುಪ್ಪ ವಿಧಿವಶ
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಸದ್ಗತಿಯನ್ನು ನೀಡಲಿ ಕುಟುಂಬ ವರ್ಗದವರಿಗೆ ಸ್ನೇಹಿತರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ನಮ್ಮ ಇ-ಕನ್ನಡ ಮಾಧ್ಯಮದಿಂದ ಹಿರಿಯ ಪತ್ರಕರ್ತ ಓಂಕಾರ್. ಎಸ್. ತಾಳಗುಪ್ಪ ಅವರ ನಿಧನಕ್ಕೆ ಸಂತಾಪ ಸುಚಿಸುತ್ತಿದ್ದೇವೆ.
Continue Reading
