ಶಿವಮೊಗ್ಗ | ಕೆ.ಎಸ್. ಈಶ್ವರಪ್ಪ ವಿರುದ್ಧ ಶಾಸಕ ಗೋಪಾಲ ಕೃಷ್ಣ ಬೇಳೂರು ತೀವ್ರ ವಾಗ್ದಾಳಿ

ಪಂಪ್ ಸ್ಟೋರೇಜ್ ಯೋಜನೆಗೆ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದ ಬೇಳೂರು, “ಪರಿಸರದ ಬಗ್ಗೆ ಕಾಳಜಿ ಇದ್ದರೆ ಲಕ್ಷಾಂತರ ಮರಗಳು ನಾಶವಾಗುತ್ತಿರುವ ಹೆದ್ದಾರಿ ಕಾಮಗಾರಿಯನ್ನು ಯಾಕೆ ವಿರೋಧಿಸಲಿಲ್ಲ?” ಎಂದು ಪ್ರಶ್ನಿಸಿದರು. ಹಿರಿಯ ನಾಯಕರಾಗಿರುವ ಕಾರಣ ಗೌರವವಿದೆ, ಆದರೆ ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಈಶ್ವರಪ್ಪ ಅವರಿಗೆ ಸಲಹೆ ನೀಡಿದರು.ಅಡಿಕೆ, ಏರ್‌ಪೋರ್ಟ್, ವಿದ್ಯುತ್ ಖಾಸಗೀಕರಣ ಸೇರಿ ಹಲವು ವಿಚಾರಗಳ ಪ್ರಸ್ತಾಪಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಉಂಟಾಗಿರುವ ತೊಂದರೆಯಿಂದ ರೈತರಿಗೆ ನಷ್ಟವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಅಡಿಕೆ […]

Continue Reading

ಶಿವಮೊಗ್ಗದಲ್ಲಿ ನಾಳೆ IFB Point ನೂತನ ಶೋರೂಮ್ ಉದ್ಘಾಟನೆ

ಈ ನೂತನ ಶೋರೂಮ್‌ನಲ್ಲಿ IFB ಕಂಪನಿಯ ವಾಷಿಂಗ್ ಮಷಿನ್, ರೆಫ್ರಿಜರೇಟರ್, ಏರ್ ಕಂಡೀಷನರ್, ಮೈಕ್ರೋವೇವ್ ಓವನ್, ಚಿಮ್ನಿ, ಹಾಬ್ ಸೇರಿದಂತೆ ವಿವಿಧ ಗೃಹೋಪಯೋಗಿ ಉತ್ಪನ್ನಗಳು ಒಂದೇ ಸೂರಿನಡಿ ಲಭ್ಯವಿರಲಿವೆ. ಈ ಸಮಾರಂಭಕ್ಕೆ ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶೋರೂಮ್ ಮಾಲೀಕರಾದ ಸೃಜನ್ ಅತ್ತಿಕೊಡಿಗೆ ಹಾಗೂ ಸುಚನ್ ಅತ್ತಿಕೊಡಿಗೆ ಮನವಿ ಮಾಡಿದ್ದಾರೆ.

Continue Reading

ಅರಬೈಲ್ ಘಾಟ್ ಬಳಿ ಭೀಕರ ರಸ್ತೆ ಅಪಘಾತ! ; 7 ಸ್ವಿಗ್ಗಿ ಡೆಲಿವರಿ ಬಾಯ್ಸ್ ದುರ್ಮರಣ

ಕ್ರೂಸರ್ ಚಾಲಕ ಸಂಜೀವ್ ವಾಹನವನ್ನು ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಚಲಾಯಿಸಿ, ರಸ್ತೆಯ ಬಲಭಾಗಕ್ಕೆ ತಿರುಗಿ ಅಂಕೋಲಾದಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪಘಾತದ ಪರಿಣಾಮವಾಗಿ ವಾಹನವು ನಜ್ಜುಗುಜ್ಜಾಗಿದೆ. ಮೃತರನ್ನ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆಗೆ KSRTC ಅವರ ಮೇಲೆ ಕ್ರಮ ಜರುಗಿಸಲು ಭಯವೇ? ಅಥವಾ ಒಪ್ಪಂದವೇ?

ಇನ್ನು 50% ರಿಯಾಯಿತಿ ದರದಲ್ಲಿ ದಂಡ ವಸೂಲಿ ಮಾಡಿದ ಟ್ರಾಫಿಕ್ ಪೊಲೀಸ್ ಇಲಾಖೆ KSRTC Bus ಗಳು ಕಾನೂನು ಉಲ್ಲಂಘನೆ ಮಾಡಿ ನಗರದಲ್ಲಿ ಜಿಲ್ಲಾಧಿಕಾರಿ ಆದೇಶಕ್ಕೆ ಬೆಲೆ ನೀಡದೆ ನಗರದಲ್ಲಿ ಸಂಚಾರ ಮಾಡಿ ಇಲ್ಲಿಯವರೆಗೆ ಏನೆಲ್ಲಾ ದಂಡ ಪಾವತಿ ಮಾಡಿದ್ದಾರೆ ಎಂಬ ಮಾಹಿತಿ ನಮಗಂತೂ ತಿಳಿಸಿಲ್ಲ. ಇನ್ನು ನಗರದಲ್ಲಿ ಮೊದಲನೇಯಾದಗಿ ಜಿಲ್ಲಾಧಿಕಾರಿ ಆದೇಶಕ್ಕೆ ವಿರುದ್ದವಾಗಿ ಬೇರೆ ಜಿಲ್ಲೆಗೆ ತೆರಳುವ ಬಸ್ ಗಳು ತೆರಳುತ್ತಿದೆ ಇದರ ಕುರಿತು ಟ್ರಾಫಿಕ್ ಪೊಲೀಸ್ ಇಲಾಖೆ ಹೇಡಿತನ ಪ್ರದರ್ಶನ ಮಾಡುತ್ತಿರುವುದು, ನಾಗರಿಕರ ಕೋಪ […]

Continue Reading

ಅಮೃತ್ಸರದ ನಕಲಿ ಗೋಲ್ಡ್ ಶಿವಮೊಗ್ಗದಲ್ಲಿ ; ಓರ್ವನ ಬಂಧನ,ದೊಡ್ಡಪೇಟೆ ಪೊಲೀಸರ ಮುಂದಿದೆ ಬಿಗ್ ಚಾಲೆಂಜ್..?

ಪ್ರಕರಣ ಗಂಭೀರ ಅರಿತು ಈ ಸಂಬಂಧ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು,ಚಿನ್ನ ಅಡವಿಟ್ಟಿದ್ದ ತೀರ್ಥಹಳ್ಳಿ ಲೋಕೇಶ್ ಬಂಧಿಸಿದ್ದಾರೆ. ನಂತರ ಗಾಜನೂರಿನ ರಾಜೇಶ್ ತಾನು ಮೋಸ ಹೋಗಿರುವುದು ತಿಳಿದು ಸ್ವಂತ ಹಣ ನೀಡಿ ಅಡವಿಟ್ಟ ಚಿನ್ನ ಬಿಡಿಸಿಕೊಂಡಿದ್ದಾರೆ ಹಾಗೂ ಪೊಲೀಸರ ಮುಂದೆ ತಾನು ಮೋಸ ಹೋಗಿರುವ ವಿಚಾರ ಒಪ್ಪಿಕೊಂಡಿದ್ದಾರೆ. ಇನ್ನು ಪ್ರಕರಣದ ಆರೋಪಿ ತೀರ್ಥಹಳ್ಳಿ ಲೋಕೇಶ್ ನ ಬಂಧನ ಮಾಡಿ ವಿಚಾರಣೆಗೆ ಒಳಪಡಿಸಿದಾಗ ಒಂದೊಂದೇ ಮಾಹಿತಿ ಆಚೆ ಬರಲು ಆರಂಭಿಸಿದೆ ಅದೇನಂದರೆ ಇದೆ ತೀರ್ಥಹಳ್ಳಿ ಲೋಕೇಶ್ ಹೆಸರಲ್ಲಿ ಇಂಡಿಯನ್ ಓವರ್ […]

Continue Reading

ಶಿವಮೊಗ್ಗ | ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ; ಆನ್‌ಲೈನ್ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ದಿನಾಂಕ: 13/07/2026 ಕಡೆಯ ದಿನಾಂಕವಾಗಿದೆ. ದಿನಾಂಕ 30/04/2026 ರವರೆಗೆ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿರುವ ಶಿಕ್ಷಕರು ಸಹ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿ ಹಾಗೂ ಮಾರ್ಗದರ್ಶನಕ್ಕಾಗಿ ಅಭ್ಯರ್ಥಿಗಳು ತಮ್ಮ ತಮ್ಮ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ.

Continue Reading

ಕೆನರಾ ಬ್ಯಾಂಕಿನ ಸರಳ ಸಜ್ಜನಿ ನಿವೃತ್ತ ಮ್ಯಾನೇಜರ್ ಉಮೇಶ್ ಮಲ್ಯ ಇನ್ನಿಲ್ಲ

ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಸದಾ ಜನಾನುರಾಗಿಯಾಗಿ ಬಡ ಬಗ್ಗರ ಕಷ್ಟಕ್ಕೆ ಸ್ಪಂದಿಸಿ ನಿರ್ಗತಿಕರಿಗೆ ಬ್ಯಾಂಕ್ ಸೌಲಭ್ಯ ಒದಗಿಸುವಲ್ಲಿ ಸಾಕಷ್ಟು ಜನಕ್ಕೆ ಸಹಾಯ ಮಾಡಿದ್ದರು.ಹಲವಾರು ರಾಜಕಾರಣಿಗಳು ಸಹ ಇವರಿಗೆ ಆತ್ಮೀರಾಗಿದ್ದರು ಆದರೂ ಸಹ ಯಾರ ಬಳಿ ಕೂಡ ಸಹಾಯ ಮತ್ತೊಂದು ಅಪೇಕ್ಷೆ ಮಾಡಿರಲಿಲ್ಲ. ಹಾಗೂ ಇವರು ನಿವೃತ್ತರಾದ ನಂತರದ ದಿನಗಳಲ್ಲಿ ಸಹ ಹಲವಾರು ಜನರಿಗೆ ಬ್ಯಾಂಕಿನ ಸೌಲಭ್ಯಗಳ ಕುರಿತು ಮಾಹಿತಿ ನೀಡುತ್ತಿದ್ದರು. ಹಾಗೆ ಇವರಿಗೆ ಜನಸಾಮಾನ್ಯರು ಸಹ ತುಂಬಾ ಗೌರವ ಪ್ರೀತಿ ಪಾತ್ರದಿಂದ ನೆನಪಿಸಿಕೊಳ್ಳುತ್ತಿದ್ದರು. ಮುಖ್ಯವಾಗಿ […]

Continue Reading

ಭಾರತದ ತೂಗುಸೇತುವೆಗಳ ಸರದಾರ ಬ್ರಿಡ್ಜ್ ಮ್ಯಾನ್ ಖ್ಯಾತಿಯ ಪದ್ಮಶ್ರೀ ಡಾ. ಗಿರೀಶ್ ಭಾರದ್ವಜ್ ಇನ್ನಿಲ್ಲ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಇಂಜಿನಿಯರಿಂಗ್ ಪದವೀಧರರಾಗಿದ್ದ ಅವರು, ಬಹುದೊಡ್ಡ ಕಂಪನಿಗಳ ಆಕರ್ಷಕ ಉದ್ಯೋಗದ ಆಫರ್‌ಗಳನ್ನು ಬದಿಗೊತ್ತಿ ಗೆ ಜನರ ಸಬಲೀಕರಣಕ್ಕೆ ಶ್ರಮಿಸಿದರು. ಸರ್ಕಾರಿ ವ್ಯವಸ್ಥೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಕೈಚೆಲ್ಲುವ ಜಾಗದಲ್ಲಿ, ಅತ್ಯಂತ ಕಡಿಮೆ ವೆಚ್ಚದಲ್ಲಿ ಸುಲಭವಾಗಿ ನಿರ್ಮಿಸಬಹುದಾದ ಪರಿಸರಸ್ನೇಹಿ ತೂಗುಸೇತುವೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ವಿನ್ಯಾಸಗೊಳಿಸಿ ದೇಶಾದ್ಯಂತ ಕ್ರಾಂತಿ ಸೃಷ್ಟಿಸಿದ್ದರು. ಬ್ರಿಡ್ಜ್ ಮ್ಯಾನ್ ಎಂದೇ ಖ್ಯಾತಿ: ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಮುಗಿಸಿದ ನಂತರ ಗಿರೀಶ್ ಅವರು ಸುಳ್ಯದಲ್ಲೇ ತಂದೆಯವರ ಜೊತೆಗೂಡಿ ಸಣ್ಣದೊಂದು ವರ್ಕ್‌ಶಾಪ್ ಆರಂಭಿಸಿದರು. […]

Continue Reading

ಶಿವಮೊಗ್ಗ | ನ್ಯೂ ಮಂಡ್ಲಿಯಲ್ಲಿ ಮನೆ ಕುಸಿದ ಸ್ಥಳಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ ; ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಆದೇಶ

​ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಜಗನ್ನಾಥ್, SC ಮೋರ್ಚಾ ನಗರ ಅಧ್ಯಕ್ಷರಾದ ವಿಜಯೇಂದ್ರ, ಕಾರ್ಯದರ್ಶಿಗಳಾದ ರಾಘವೇಂದ್ರ, ಮಹಾನಗರ ಪಾಲಿಕೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.​

Continue Reading

ಸಾಗರ | ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗದಂತೆ ಪೋಷಕರು ವಿಶೇಷ ಕಾಳಜಿ ವಹಿಸಬೇಕು : ಪಿಎಸ್‌ಐ ಪ್ರವೀಣ್ ಕರೆ

ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಸಮಯ ಕಳೆಯುವುದನ್ನು ತಪ್ಪಿಸಿ, ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ಪೋಷಕರು ಹಾಗೂ ಶಿಕ್ಷಕರ ಸಲಹೆ-ಸೂಚನೆಗಳನ್ನು ಗೌರವಿಸಿ, ಸಮಾಜಕ್ಕೆ ಮಾದರಿಯಾಗುವ ನಾಗರಿಕರಾಗಿ ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇತ್ತೀಚಿನ ದಿನಗಳಲ್ಲಿ ಕೆಲ ಮಕ್ಕಳು ಶಾಲೆಯಿಂದ ದೂರ ಉಳಿದು ದುಶ್ಚಟಗಳಿಗೆ ಬಲಿಯಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗುವ ಘಟನೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ದೂರ ಉಳಿಯದಂತೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಪಿಎಸ್‌ಐ ಪ್ರವೀಣ್ ಸಲಹೆ […]

Continue Reading