“ಸನಾತನ ಧರ್ಮ ನಿರ್ಮೂಲನೆ ಮಾಡಬೇಕು” : ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಶಾಸಕ ಉದಯನಿಧಿ ಸ್ಟಾಲಿನ್..!

“ಅಲೆಕ್ಸಾಂಡರ್, ಘೋರಿ, ಗಜ್ನಿ, ಖಿಲ್ಜಿ, ಬ್ರಿಟಿಷರು, ಫ್ರೆಂಚರು ಮತ್ತು ಕಮ್ಯುನಿಸ್ಟರಿಗೂ ಸನಾತನ ಧರ್ಮವನ್ನು ಅಳಿಸಲು ಸಾಧ್ಯವಾಗಲಿಲ್ಲ… ಆದರೀಗ ತನ್ನ ಸ್ವಂತ ಕುಟುಂಬದವರನ್ನೇ ಈ ಬಗ್ಗೆ ಒಪ್ಪಿಸಲು ಸಾಧ್ಯವಾಗದ ವ್ಯಕ್ತಿಯೊಬ್ಬರು ಸನಾತನ ಧರ್ಮವನ್ನು ಅಳಿಸುವ ಮಾತನಾಡುತ್ತಿದ್ದಾರೆ!! ಭಾರತ ಮತ್ತು ಸನಾತನ ಧರ್ಮವು ಕಾಲದ ಪರೀಕ್ಷೆಗಳನ್ನು ಮತ್ತು ತಲೆಮಾರುಗಳನ್ನು ಮೀರಿ ಗಟ್ಟಿಯಾಗಿ ನಿಂತಿದೆ” ಎಂದು ಹೇಳಿದ್ದಾರೆ. ಬಿಎಲ್ ಸಂತೋಷ್ ಅವರು ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿರುವ ‘ಸ್ವಂತ ಕುಟುಂಬದವರನ್ನೇ ಒಪ್ಪಿಸಲು ಸಾಧ್ಯವಾಗದ ವ್ಯಕ್ತಿ’ ಎಂಬ ಸಾಲು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದು […]

Continue Reading

ಕಾಂಗ್ರೆಸ್ ಜೊತೆ ಮೈತ್ರಿಮಾಡಿಕೊಳ್ಳದೆ ಇರುವುದೇ ಮಮತಾಗೆ ಈಗಿನ ದುಸ್ಥಿತಿಗೆ ಕಾರಣ..! : ರಾಜ್ಯಸಭಾ ಸಂಸದ ಪ್ರಮೋದ್ ತಿವಾರಿ ಹೇಳಿಕೆ

ತಿವಾರಿ ಅವರೊಂದಿಗೆ ಉತ್ತರ ಪ್ರದೇಶ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕಿ ಆರಾಧನಾ ಮಿಶ್ರಾ ಇದ್ದರು.ಬಿಜೆಪಿ ಮತ್ತು ಚುನಾವಣಾ ಆಯೋಗದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಅವರು, ಇತ್ತೀಚೆಗೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಗಳನ್ನು ಉಲ್ಲೇಖಿಸಿದರು. ದೇಶದಲ್ಲಿ ಪ್ರಜಾಪ್ರಭುತ್ವದ ಕೊಲೆಯಾಗುತ್ತಿದೆ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಚುನಾವಣಾ ಪ್ರಕ್ರಿಯೆಗಳಲ್ಲಿ ಕೇಂದ್ರ ಸರ್ಕಾರ ಮತ್ತು ಸಾಂವಿಧಾನಿಕ ಸಂಸ್ಥೆಗಳು ಹಸ್ತಕ್ಷೇಪ ಮಾಡುತ್ತಿರುವ ರೀತಿ ಸಂವಿಧಾನಕ್ಕೆ ಹಾನಿಕಾರಕವಾಗಿದೆ ಎಂದು ಆರೋಪಿಸಿದರು.

Continue Reading

ಶಿವಮೊಗ್ಗ | ಜಪಾನ್ ಏಷ್ಯನ್ ಗೇಮ್ಸ್‌ಗೆ ಅವಳಿ ಪ್ರತಿಭೆಗಳಾದ ಪವನ್–ಪುನೀತ್ ಭಾರತ ತಂಡಕ್ಕೆ ಸೆಲೆಕ್ಷನ್

ರಾಷ್ಟ್ರೀಯ ಡಬಲ್ಸ್ ರ‍್ಯಾಂಕಿಂಗ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟವಾಡಿದ ಈ ಜೋಡಿ, ಅಂತಿಮ ಹಣಾಹಣಿಯಲ್ಲಿ ಅಸ್ಸಾಂನ ಅನಯನ್ ಬೋರ್ ಮತ್ತು ಕೇರಳದ ಬಿಜಾರ್ನ್ ಜೈಸನ್ ವಿರುದ್ಧ 21-19, 21-10 ಅಂತರದ ಭರ್ಜರಿ ಜಯ ಸಾಧಿಸಿ ಮಿಕ್ಸ್ಡ್ ಡಬಲ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದರು. ಜೊತೆಗೆ ಬಂಗಾರದ ಪದಕ, ಆಕರ್ಷಕ ಪಾರಿತೋಷಕ ಹಾಗೂ ₹82 ಸಾವಿರ ನಗದು ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ. ಈ ಸಾಧನೆಯೊಂದಿಗೆ ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್ ಡಬಲ್ಸ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನಕ್ಕೇರಿರುವುದು ಮತ್ತೊಂದು ವಿಶೇಷ. ಇದೇ […]

Continue Reading

ಶಿವಮೊಗ್ಗ | ಕೆರೆಗಳ ಒತ್ತುವರಿ ತೆರವು ಹಾಗೂ ಪ್ರಾಣಿ-ಪಕ್ಷಿಗಳ ರಕ್ಷಣೆಗೆ ಹ್ಯೂಮನ್ ರೈಟ್ಸ್ ಜಸ್ಟಿಸ್ ಕೌನ್ಸಿಲ್ ಆಗ್ರಹ

ಶಿವಮೊಗ್ಗ ನಗರದ ಊರುಗಡೂರು, ಮಂಡ್ಲಿ, ಹರಕೆರೆ, ಸೋಮಿನಕೊಪ್ಪ, ಪುರದಾಳು, ಅನಾಪಿನಕಟ್ಟೆ ಮತ್ತು ಅಲ್ಕೋಳ ಭಾಗದ ಕೆರೆಗಳು ವ್ಯಾಪಕವಾಗಿ ಒತ್ತುವರಿಯಾಗಿದ್ದು, ತಕ್ಷಣವೇ ಇವುಗಳನ್ನು ತೆರವುಗೊಳಿಸಿ ಹೂಳೆತ್ತಬೇಕು. ಜಲಮೂಲಗಳ ಭರ್ತಿ: ಜಿಲ್ಲೆಯ ಪ್ರಮುಖ ಕೆರೆಗಳಿಗೆ ಕಾಲುವೆ ಅಥವಾ ಟ್ಯಾಂಕರ್‌ಗಳ ಮೂಲಕ ನೀರು ತುಂಬಿಸಿ ವನ್ಯಜೀವಿಗಳನ್ನು ಸಂರಕ್ಷಿಸಬೇಕು. ‘ಜಲ ಕುಂಭ’ ಯೋಜನೆ: ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯತ್ ಸೇರಿದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ-ಪಕ್ಷಿಗಳಿಗಾಗಿ ನೀರಿನ ತೊಟ್ಟಿಗಳನ್ನು ಅಳವಡಿಸಬೇಕು. ತುರ್ತು ಆಹಾರ ಕೇಂದ್ರ: ಗಾಂಧಿ ಪಾರ್ಕ್, ಕೋಟಿ ಪರಿಸರ ಹಾಗೂ ಗಾಜನೂರು […]

Continue Reading

ಶಿವಮೊಗ್ಗ | ಮೇ 16 ರಂದು ಉದ್ಯೋಗ ನೇರ ಸಂದರ್ಶನ

ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದ್ದು ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ‌ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ9380663606, 9108235132 ನ್ನು‌ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಸಖಿ ಕೇಂದ್ರದ ಮುಂದೆ ಗದ್ದಲ ಸೃಷ್ಟಿಸಿದ ಮಹಿಳೆ ; ಅಕ್ಕ ಪಡೆಯಿಂದ ಮಾನವೀಯ ಕಾರ್ಯ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಕ್ಕ ಪಡೆಯ ಸಿಬ್ಬಂದಿ, ಪರಿಸ್ಥಿತಿಯನ್ನು ಅತ್ಯಂತ ಸಂಯಮದಿಂದ ನಿಭಾಯಿಸಿದರು. ಮಹಿಳೆಯ ಸ್ಥಿತಿಯನ್ನು ಕಂಡು ಆಕೆಗೆ ಸಾಂತ್ವನ ಹೇಳಿದ ಪೊಲೀಸರು, ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸು, ನಿನ್ನ ಜೀವನವನ್ನು ಸರಿಪಡಿಸಿಕೊ ಎಂದು ಹಿತವಚನ ನೀಡಿದರು. ಬಳಿಕ ಮಹಿಳೆಯ ವಿಳಾಸವನ್ನು ಪಡೆದು ಅವಳ ಮನೆಗೆ ತಲುಪಿಸಿದರು.

Continue Reading

ಅಸ್ಸಾಂ ಸಿಎಂ ಆಗಿ 2ನೇ ಬಾರಿಗೆ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ

ಪ್ರಧಾನಿ ಮೋದಿ ಮಾತ್ರವಲ್ಲದೇ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸರ್ಬಾನಂಜ ಸೋನಾವಾಲ್, ಪಬಿತ್ರಾ ಮಾರ್ಗೆರಿಟಾ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಮಾತ್ರವಲ್ಲದೇ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಿಬಿನ್ ಕೂಡ ಪ್ರಮಾಣವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಈ ಪ್ರಮಾಣವಚನ ಸಮಾರಂಭದೊಂದಿಗೆ ಅಸ್ಸಾಂನಲ್ಲಿ ಎನ್‌ಡಿಎ ಮೈತ್ರಿಕೂಟದ ಸತತ ಮೂರನೇ ಸರ್ಕಾರ ರಚನೆಯಾಗಿದೆ. ಪ್ರಮಾಣ ವಚನ ಸ್ವೀಕಾರ ಬಳಿಕ ಮುಖ್ಯಮಂತ್ರಿಯಾಗಿ ಎರಡನೇ ಅವಧಿ ಆರಂಭಿಸಿರುವ ಹಿಮಂತ […]

Continue Reading

ಇಂಧನ ಬಳಕೆ ಕಡಿಮೆಗೆ ಪ್ರಧಾನಿ ಸಲಹೆ : ಡಿಸಿಎಂ ಡಿಕೆಶಿ ತಿರುಗೇಟು

ಅವರ ಕೇಂದ್ರ ಸಚಿವರಿಗೆ ತಾಕೀತು ಮಾಡಲಿ. ನಾವು ಮೊದಲು ನಡೆದುಕೊಂಡು ನಂತರ ಸಾಮಾನ್ಯ ಜನಕ್ಕೆ ಸಂದೇಶ ನೀಡಬೇಕು ಎಂದು ತಿರುಗೇಟು ನೀಡಿದರು. ಬಿಜೆಪಿ ಶಾಸಕರು, ನಾಯಕರು, ಕಾರ್ಯಕರ್ತರಿಂದ ತ್ಯಾಗ ಪ್ರಾರಂಭವಾಗಲಿಜಗತ್ತಿನ ಪರಿಸ್ಥಿತಿ ಸರಿಯಿಲ್ಲ ಕೆಲವೊಮ್ಮೆ ತ್ಯಾಗಕ್ಕೂ ಸಿದ್ಧವಾಗಿರಬೇಕು ಎಂಬ ಕಾರಣಕ್ಕೆ ಸಂದೇಶ ನೀಡಿದ್ದಾರೆ ಎಂದಾಗ, “ಮೊದಲು ತ್ಯಾಗವನ್ನು ಮಂತ್ರಿಗಳು, ಕೇಂದ್ರ ಸರ್ಕಾರದ ಸಚಿವರು, ಅಧಿಕಾರಿಗಳು, ಬಿಜೆಪಿ ಆಡಳಿತ ರಾಜ್ಯಗಳಲ್ಲಿರುವ ಅಧಿಕಾರಿಗಳಿಂದ, ಅವರ ಪಕ್ಷದ ಶಾಸಕರು, ನಾಯಕರು ಹಾಗೂ ಕಾರ್ಯಕರ್ತರಿಂದ ತ್ಯಾಗ ಆರಂಭವಾಗಲಿ. ನಂತರ ಬೇರೆಯವರಿಗೆ ತ್ಯಾಗದ ಸಲಹೆ […]

Continue Reading

ಯಶಸ್ವಿಯಾಗಿ ಸಂಪನ್ನಗೊಂಡ ಅಭೂತಪೂರ್ವ, ಐತಿಹಾಸಿಕ ‘ಬಿಎಸ್ ವೈ ಅಭಿಮಾನೋತ್ಸವ’ ; ಎಲ್ಲರ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ ಸಂಸದ ಬಿ.ವೈ.ರಾಘವೇಂದ್ರ..!

ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪನವರ ಮೇಲಿರುವ ಅಚಲವಾದ ಪ್ರೀತಿ, ಅಭಿಮಾನ ಮತ್ತು ವಿಶ್ವಾಸದಿಂದ, ದೂರವನ್ನಾಗಲಿ, ಸುಡುವ ಬಿಸಿಲನ್ನಾಗಲಿ ಲೆಕ್ಕಿಸದೆ ನಾಡಿನ ಮೂಲೆ ಮೂಲೆಗಳಿಂದ ಚಿತ್ರದುರ್ಗಕ್ಕೆ ಬಂದ ಅಭಿಮಾನಿಗಳು, ಕಾರ್ಯಕರ್ತರು, ಸ್ವಯಂಸೇವಕರು, ತಾಯಂದಿರು, ಸೋದರಿಯರು, ಶ್ರೀಸಾಮಾನ್ಯರ ಜನಸಾಗರದ ಸಂಪೂರ್ಣ ಸಹಕಾರದಿಂದ ತಮ್ಮ ನಾಯಕನ ಅಭಿಮಾನೋತ್ಸವ, ನಾಡಿನ ಜನೋತ್ಸವವಾಗಿ ಮಾರ್ಪಟ್ಟಿತು. ಪೂಜ್ಯ ತಂದೆಯವರ ಮೇಲೆ ಜನರ ಅತಿಶಯವಾದ ಪ್ರೀತಿ, ವಿಶ್ವಾಸಗಳಿಗೆ ಪ್ರತಿಯಾಗಿ ನಾವು ಏನು ಹೇಳುವುದು ಸಾಧ್ಯ, ಆಗಮಿಸಿದ ಪ್ರತಿಯೊಬ್ಬ ಅಭಿಮಾನಿಗಳಿಗೂ, ಅತ್ಯಂತ ವಿನೀತ ಭಾವದಿಂದ ಹೃದಯತುಂಬಿ ಸಾಷ್ಟಾಂಗ ನಮನಗಳನ್ನು ಸಲ್ಲಿಸುತ್ತೇನೆ ಎಂದು […]

Continue Reading