ಶಿವಮೊಗ್ಗ | ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಆರಂಭ

ಬೆಳೆ ಸಾಲ ಪಡೆದ ರೈತರು: ಬ್ಯಾಂಕ್‌ಗಳ ಮೂಲಕ ಸಾಲ ಪಡೆಯುವ ರೈತರನ್ನು ಕಡ್ಡಾಯವಾಗಿ ಬೆಳೆ ವಿಮೆಗೆ ಒಳಪಡಿಸಲಾಗುತ್ತದೆ. ಒಂದು ವೇಳೆ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದರೆ, ವಿಮೆ ನೋಂದಣಿಯ ಅಂತಿಮ ದಿನಾಂಕಕ್ಕೆ 7 ದಿನ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ಪತ್ರವನ್ನು ನೀಡುವ ಮೂಲಕ ಯೋಜನೆಯಿಂದ ಹೊರಗುಳಿಯಬಹುದು. ಬೆಳೆ ಸಾಲ ಪಡೆಯದ ರೈತರು: ಸಾಲ ಪಡೆಯದ ರೈತರು ತಮ್ಮ ಪಹಣಿ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್, ಆರ್ಥಿಕ ಸಂಸ್ಥೆಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ […]

Continue Reading

ಶಿವಮೊಗ್ಗ | ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ: ಅರ್ಜಿ ಆಹ್ವಾನ

ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್‌ಸೈಟ್ www.klwbapps.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.ಅರ್ಜಿ ಸಲ್ಲಿಸಲು ದಿನಾಂಕ: 31-12-2026 ಕಡೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು “ಕಾರ್ಮಿಕ ಅಧಿಕಾರಿಗಳವರ ಕಚೇರಿ ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಕಚೇರಿಗೆ ಅಥವಾ ದೂ.ಸಂಖ್ಯೆ 080-234751888277291175 / 82771205059141585402 ನ್ನು ಸಂಪರ್ಕಿಸಬಹುದು ಎಂದು ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ ಪಿ ತಿಳಿಸಿದ್ದಾರೆ.

Continue Reading

ಬಿಜೆಪಿಗೆ ಗುನ್ನ ಇಟ್ಟರ ಈಶ್ವರಪ್ಪ..?!

ಬಿ.ಸಿ ಪಾಟೀಲ್ ವಾರ್ನಿಂಗ್ : ಇನ್ನು ಈ ಸಂಬಂಧ ಈಶ್ವರಪ್ಪಗೆ ವಾರ್ನಿಂಗ್ ಕೊಟ್ಟ ಮಾಜಿ ಸಚಿವ ಬಿ.ಸಿ ಪಾಟೀಲ್ ನಮ್ಮ ಶ್ರಮದಿಂದ ನೀವು ಮಂತ್ರಿಯಾಗಿ ಲಂಚವನ್ನು ಪಡೆದು ಬೆಳಗಾವಿನಲ್ಲಿ ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ಕಾರಣರಾದಿರಿ ಈಗ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಿ. ನಮ್ಮಿಂದ ಬಿಜೆಪಿ ಹಾಳಾಗಲಿಲ್ಲ ನಿಮ್ಮಂತವರಿಂದ ಬಿಜೆಪಿ ಹಾಳಾಗಿದೆ. ನಾವು ಬರದೆ ಹೋಗಿದ್ದರೆ ನೀವು ಮಂತ್ರಿಯಾಗುತ್ತಿರಲಿಲ್ಲ ಮಂತ್ರಿಯಾಗಿ ಎಲ್ಲ ಸೌಲಭ್ಯಗಳನ್ನು ಪಡೆದು ಈಗ ನಮ್ಮಗಳ ಮೇಲೆ ಗೂಬೆ ಕೂರಿಸುತ್ತಿದ್ದೀರಿ ಯಾವಾಗ ಎಷ್ಟು ಹಣ ಕೊಟ್ರು ಅದನ್ನ […]

Continue Reading

ಶಿವಮೊಗ್ಗ | ತಹಶೀಲ್ದಾರ್ ಕಾರ್ಯಾಲಯದ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ,ಪರಿಶೀಲನೆ

ಸರ್ಕಾರಿ ಜಮೀನಿನಲ್ಲಿ ಸದ್ಯ 33 ತಾತ್ಕಾಲಿಕ ಶೆಡ್ ಹಾಗೂ ಗುಡಿಸಲುಗಳನ್ನು ನಿರ್ಮಿಸಲಾಗಿದ್ದು, ಇವುಗಳಿಗೆ ಕಡತಗಳಲ್ಲಿ ಕೇವಲ ಮೇಲ್ಛಾವಣಿ ಖಾತೆ ಎಂದು ತಿದ್ದುಪಡಿ ಮಾಡಿ, ಆನಂತರ ಅಮಾಯಕ ಜನರಿಗೆ ಸೈಟ್ ಹಂಚಿಕೆ ಮಾಡಿ ಖಾತೆ ಮಾಡಿಸಿಕೊಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಲು ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಈ ದಂಧೆಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಕಚೇರಿಯಿಂದಲೇ ಒಳಗೊಳಗೇ ದಾಖಲೆಗಳನ್ನು ಸಿದ್ಧಪಡಿಸಿಕೊಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ನಿಟ್ಟಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಂದಾಯ ಇಲಾಖೆಯ ಪ್ರತಿಯೊಂದು […]

Continue Reading

ಶಿವಮೊಗ್ಗ ಎಸ್ ಪಿ ಹೆಸರಲ್ಲಿ‌ ನಕಲಿ ಫೇಸಬುಕ್ ಅಕೌಂಟ್ ; ಪ್ರತಿಕ್ರಿಯಿಸದಿರಲು ಮನವಿ

ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ. ಅವರು ಸ್ಪಷ್ಟನೆ ನೀಡಿದ್ದು, ತಮ್ಮ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಫೇಸ್‌ಬುಕ್ ಖಾತೆ ನಕಲಿಯಾಗಿದ್ದು, ಸಾರ್ವಜನಿಕರು ಆ ಖಾತೆಯನ್ನು ಫಾಲೋ ಮಾಡಬಾರದು ಹಾಗೂ ಅಲ್ಲಿಂದ ಬರುವ ಯಾವುದೇ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ ಅನುಮಾನಾಸ್ಪದ ಖಾತೆಗಳ ಕುರಿತು ಸಂಬಂಧಿತ ಸಾಮಾಜಿಕ ಜಾಲತಾಣದಲ್ಲಿ ದೂರು ದಾಖಲಿಸುವುದು ಹಾಗೂ ಅಗತ್ಯವಿದ್ದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ‌ ಮಾಡಿದ್ದಾರೆ.

Continue Reading

ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಹೈಕಮಾಂಡ್ ಫುಲ್ ಗರಂ ; ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಬಿಜೆಪಿ

ಧರ್ಮಸ್ಥಳದಲ್ಲಿ ಆಣೆ-ಪ್ರಮಾಣಕ್ಕೆ ಬಿಜೆಪಿ ನಿರ್ಧಾರ; ಶೀಘ್ರ ಶಾಸಕಾಂಗ ಪಕ್ಷ ಸಭೆ; ಧರ್ಮಸ್ಥಳವನ್ನು ರಾಜಕೀಯ ಅಪಚಾರಕ್ಕೆ ಬಳಸುವುದು ಬೇಡ ಎಂದು ನಮ್ಮ ಪಕ್ಷದ ಹಿರಿಯರಿಂದಲೇ ಸಲಹೆ ಬಂದ ಹಿನ್ನೆಲೆಯಲ್ಲಿ ನಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದೇವೆ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಲಾಗುವುದು ಎಂದು ತಿಳಿಸಿದರು. ಹೈಕಮಾಂಡ್ ನಿಂದ ಬುಲಾವ್ ಬಂದ ಹಿನ್ನೆಲೆಯಲ್ಲಿ ದೆಹಲಿಗೆ ಬಂದಿದ್ದ ಆರ್ ಅಶೋಕ್ ಮತ್ತು ಬಿ ವೈ ವಿಜಯೇಂದ್ರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.*ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ*ಅಡ್ಡ ಮತದಾನದ ಮೂಲಕ ಪಕ್ಷಕ್ಕೆ ಮೋಸ […]

Continue Reading