ತಮಿಳುನಾಡನ್ನೇ ಬೆಚ್ಚಿಬೀಳಿಸಿದ್ದ ಲಾಕಪ್ ಡೆತ್ ಪ್ರಕರಣದ ಪ್ರಮುಖ ಸಾಕ್ಷಿ ‘ರೇವತಿ’ ಎಂಬ ಧೀಶಕ್ತಿ

ಹೀಗೆ ತನ್ನ ಕ್ರೂರಿ ಸಹೋದ್ಯೋಗಿಗಳ ವಿರುದ್ಧ ಧೈರ್ಯವಾಗಿ ನಿಂತು ಸಾಕ್ಷಿ ಹೇಳಿದವರೇ ಮಹಿಳಾ ಕಾನ್ಸ್‌ಟೇಬಲ್ ರೇವತಿ. ಈ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವಲ್ಲಿ ರೇವತಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಈ ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿಯಾಗಿದ್ದಲ್ಲದೇ ಪ್ರಮುಖ ಸಾಕ್ಷಿಯಾಗಿದ್ದರು. ಅವರೇ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್‌ಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಪೊಲೀಸ್‌ ಠಾಣೆಯಲ್ಲಿದ್ದ ರಕ್ತದ ಕಲೆಗಳು, ರಕ್ತದ ಕಲೆಗಳನ್ನು ಹೊಂದಿದ್ದ ಪೊಲೀಸ್ ಲಾಠಿಗಳು, ಹಾಗೂ ಟೇಬಲ್‌ಗಳನ್ನು ಸಾಕ್ಷ್ಯ ನಾಶವಾಗುವ ಮೊದಲೇ ಜಪ್ತಿ ಮಾಡಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. 9 […]

Continue Reading

ಅಪ್ಪ- ಮಗ ಲಾಕಪ್ ಡೆತ್ : 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಕಸ್ಟಡಿ ಸಾವಿನ ಪ್ರಕರಣದಲ್ಲಿ ಮಧುರೈ ಜಿಲ್ಲಾ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಆರೋಪಿಗಳಾದ ಒಂಬತ್ತು ಪೊಲೀಸರಿಗೂ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಇದೊಂದು ‘ಅಪರೂಪದಲ್ಲಿ ಅಪರೂಪದ ಪ್ರಕರಣ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ‘ಭವಿಷ್ಯದಲ್ಲಿ ಇಂತಹ ಕಸ್ಟಡಿ ಸಾವುಗಳು ಮರುಕಳಿಸಬಾರದು, ಅದಕ್ಕೆ ಈ ಶಿಕ್ಷೆ ಒಂದು ಎಚ್ಚರಿಕೆಯಾಗಬೇಕು ಎಂದು ಕೋರ್ಟ್ ಹೇಳಿದೆ. ಜೀವಾವಧಿ ಶಿಕ್ಷೆ ಸಾಕಾಗಾವುದಿಲ್ಲಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಸಾಕಾಗುವುದಿಲ್ಲ, ಎಲ್ಲರೂ ಸಮಾನ ಅಪರಾಧಿಗಳು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. […]

Continue Reading

ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶೋಭಾ ಅವರ ಮನೆ, ಶಿಕಾರಿಪುರ ಹಾಗೂ ಸಾಗರದಲ್ಲಿರುವ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ. ಅವರ ಮ್ಯಾನೇಜರ್ ರಾಘವೇಂದ್ರ ಅವರ ಶಿಕಾರಿಪುರ ಮನೆ ಮೇಲೂ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

ಶಿವಮೊಗ್ಗ | ಹೆಚ್ಚಿನ ದರಕ್ಕೆ ಆಟೋ ಎಲ್‌ಪಿಜಿ/ಸಿಎನ್‌ಜಿ ಮಾರಾಟ ಮಾಡಿದರೆ ಕಠಿಣ ಕ್ರಮ : ಡಿಸಿ ಎಚ್ಚರಿಕೆ

ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಯಾವುದೇ ಕಾರಣಕ್ಕೂ ನಿಗದಿತ ದರಕ್ಕಿಂತ ಹೆಚ್ಚಿನ ಹಣವನ್ನು ಗ್ರಾಹಕರಿಂದ ಪಡೆಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಕಾನೂನು ಕ್ರಮದ ಎಚ್ಚರಿಕೆ: ಒಂದು ವೇಳೆ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದು ಕಂಡುಬಂದಲ್ಲಿ, ಅಂತಹ ಬಂಕ್ ಮಾಲೀಕರ ವಿರುದ್ಧ ‘ಅಗತ್ಯ ವಸ್ತುಗಳ ಕಾಯ್ದೆ-1955’ ಮತ್ತು ‘ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯುಲೇಷನ್ ಆಫ್ ಯೂಸ್ ಇನ್ ಮೋಟರ್ ವೆಹಿಕಲ್ಸ್) ಆರ್ಡರ್-2001’ ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಗಟ್ಟಿತನವನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು: ಹೊನ್ನಾಳಿ ಚಂದ್ರಶೇಖರ್..!!

ಮುಖ್ಯ ಅತಿಥಿಯಾಗಿ ಮಾತನಾಡಿದ ಮತ್ತೊಂದು ಖಾಸಗಿ ವಾಹಿನಿ ಸಂಸ್ಥಾಪಕ ಸಂಪಾದಕರಾದ ಸುಬ್ರಹ್ಮಣ್ಯ ಎಸ್. ಹಂಡಿಗೆ, ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮದಲ್ಲಿ ನೈತಿಕತೆ ಕುಸಿಯುತ್ತಿದ್ದು, ಧರ್ಮ ಮತ್ತು ಜಾತಿ ಆಧಾರಿತ ವಿಭಜನೆಗಳನ್ನು ಉಂಟುಮಾಡುವ ಪ್ರವೃತ್ತಿ ಹೆಚ್ಚುತ್ತಿದೆ, ರಾಜಕೀಯ ನಾಯಕರನ್ನು ಪ್ರಶ್ನಿಸುವ ಧೈರ್ಯ ಕಡಿಮೆಯಾಗುತ್ತಿದೆ ಎಂದರು. ಒಳ ಮೀಸಲಾತಿಯ ಉದ್ದೇಶ ಸಾಮಾಜಿಕ ಸಮಾನತೆ ಸಾಧಿಸುವುದೇ ಹೊರತು ಶ್ರೀಮಂತಿಕೆ ಹೆಚ್ಚಿಸುವುದಲ್ಲ. ಈ ವಿಷಯವನ್ನು ಸರಿಯಾದ ಅರಿವಿಲ್ಲದೆ ತಪ್ಪಾಗಿ ಪತ್ರಕರ್ತರು ವಾಗ್ಮಿಗಳು ಬಿಂಬಿಸುತ್ತಿರುವುದು ವಿಷಾದನೀಯ ಸಂಗತಿ ಇದು ಬೇಸರ ವ್ಯಕ್ತಪಡಿಸಿದ್ದರು. ಪತ್ರಿಕೋದ್ಯಮದಲ್ಲಿ ಅನೇಕ ಅವಕಾಶಗಳಿದ್ದು, […]

Continue Reading

ಸಂಸದ ಬಿ ವೈ ರಾಘವೇಂದ್ರ ಬಿಜೆಪಿ ಮೇಲೆ ಮುನಿಸಿಕೊಂಡರಾ..?

ಇದೆ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗದಲ್ಲಿರುವ ಕೇರಳಂ ಸಮಾಜದ ಮಲೆಯಾಳಿ ಬಾಂಧವರು ಬಿ. ವೈ. ರಾಘವೇಂದ್ರ ಅವರಿಗೆ ಬೆಂಬಲಿಸಿ ಪ್ರಚಾರ ನಡೆಸಿದ್ದರು. ಆದರೆ ಪ್ರಸ್ತುತ ಸಂಸದರು ಕೇರಳಂ ಚುನಾವಣೆ ಪ್ರಚಾರಕ್ಕೆ ತೆರಳದೆ ದೂರವೇ ಉಳಿದಿದ್ದಾರೆ. ಸ್ವತಹ ಪ್ರಧಾನಿ ನರೇಂದ್ರ ಮೋದಿಯವರು ಕೇರಳಂ ರಾಜಧಾನಿ ತ್ರಿವೇಂಡ್ರಂ ನಲ್ಲಿ ರೋಡ್ ಶೋ ನಡೆಸಿ ಈ ಬಾರಿ ಎಲ್ ಡಿ ಎಫ್ ಮತ್ತು ಯುಡಿಎಫ್ ಹೊರತುಪಡಿಸಿ ಎನ್ಡಿಎ ಗೆ ಕೇರಳಂ ಜನತೆ ಅಧಿಕಾರ ಕೊಡಿ ಎಂದು ವಿಶ್ವಾಸದ ಭಾಷಣ ಮಾಡಿದ್ದಾರೆ. […]

Continue Reading

ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತಗಳ ಮರು ಪರಿಶೀಲಿಸಿ ; ಹೈಕೋರ್ಟ್ ಆದೇಶ

ಆದೇಶ ಪ್ರಕಟವಾಗುತ್ತಿದ್ದಂತೆ ರಾಜೇಗೌಡ ಪರ ವಕೀಲರು, ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಚುನಾವಣೆ ಫಲಿತಾಂಶವನ್ನು ರದ್ದುಗೊಳಿಸಿಲ್ಲ ಎಂದು ತಿಳಿಸಿತು. ಅಲ್ಲದೆ, ಈ ಆದೇಶಕ್ಕೆ ಎರಡು ವಾರಗಳ ಕಾಲ ತಡೆ ನೀಡಿ ಆದೇಶಿಸಿತು. ಅರ್ಜಿದಾರರ ಪರ ವಕೀಲರಾದ ಪಿ. ಎಲ್. ವಂದನಾ ವಕಾಲತ್ತು ವಹಿಸಿದ್ದರು. ಪ್ರಕರಣದ ಹಿನ್ನೆಲೆ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಡಿ. ಟಿ. ರಾಜೇಗೌಡ 201 ಮತಗಳಿಂದ ಜಯಶಾಲಿಯಾಗಿದ್ದರು. ಆದರೆ, ಪೋಸ್ಟಲ್ ಬ್ಯಾಲೆಟ್​ನಲ್ಲಿ 1811 ಮತದಾನ ನಡೆದಿದ್ದು, […]

Continue Reading

ಶಿವಮೊಗ್ಗದಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಭಾರಿಗಳಾದ ಆರ್.ಕೆ. ಸಿದ್ದರಾಮಣ್ಣ ಅವರು ಮಾತನಾಡಿ, ಬಿಜೆಪಿ ಪಕ್ಷದ ಇತಿಹಾಸ, ಹೋರಾಟ ಮತ್ತು ಸಾಧನೆಗಳ ಬಗ್ಗೆ ವಿಸ್ತಾರವಾಗಿ ವಿವರಿಸಿದರು. ಭಾರತೀಯ ಜನತಾ ಪಕ್ಷವು ಸಾಮಾನ್ಯ ರಾಜಕೀಯ ಪಕ್ಷವಲ್ಲ, ಅದು ದೇಶಭಕ್ತಿ, ತ್ಯಾಗ ಮತ್ತು ಸಿದ್ಧಾಂತಗಳ ಆಧಾರದಲ್ಲಿ ನಿರ್ಮಿತವಾದ ಮಹಾನ್ ಸಂಘಟನೆ ಎಂದು ಅವರು ಹೇಳಿದರು. ಬಿಜೆಪಿ ಮೂಲವು ಜನಸಂಘದ ತತ್ವಗಳಲ್ಲಿ ನೆಲೆಸಿದ್ದು, ಅನೇಕ ದಶಕಗಳ ನಿರಂತರ ಹೋರಾಟದ ಫಲವಾಗಿ ಇಂದು […]

Continue Reading

ಬೆಳಗಾವಿ | ಪತಿ ಪತ್ನಿ ದುರಂತ ಅಂತ್ಯ

ಇತ್ತ ಪತ್ನಿ ಆಸ್ಪತ್ರೆ ಸೇರಿದ ಸುದ್ದಿ ಕೇಳಿ ಬೆಳಗಾವಿಗೆ ತರಾತುರಿಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ಪತಿ ಕರೆಪ್ಪ ಅರವಳ್ಳಿ ಕ್ರಾಸ್ ಬಳಿ ಧಾರವಾಡದಿಂದ ವೇಗವಾಗಿ ಬರುತ್ತಿದ್ದ ಕೆಎಸ್ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕರೆಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಒಂದೇ ದಿನ ಪತಿ, ಪತ್ನಿ ಮೃತಪಟ್ಟಿರುವುದರಿಂದ ಅರವಳ್ಳಿ ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ. ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಧುರಾ ಮತ್ತು ಕರೆಪ್ಪ ದಂಪತಿ […]

Continue Reading