ಸಚಿವ ಸಹೋದ್ಯೋಗಿ ಡಿ. ಸುಧಾಕರ್ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ತೀವ್ರ ಸಂತಾಪ

ಜನಸೇವೆಯಲ್ಲಿ ಅಪಾರ ಕಾಳಜಿ ಹೊಂದಿದ್ದ ಸುಧಾಕರ್ ಅವರು ಇಂದು ದೈವಾಧೀನರಾಗಿರುವುದು ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಜನಪರ ಕೆಲಸಗಳು ಸದಾ ಜೀವಂತ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗ, ಅಭಿಮಾನಿಗಳು ಹಾಗೂ ಅಪಾರ ಬಂಧುಗಳಿಗೆ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಸ್. ಮಧು ಬಂಗಾರಪ್ಪ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಸಂತಾಪಗಳನ್ನ ಸೂಚಿಸಿದ್ದಾರೆ.

Continue Reading

ಶಿವಮೊಗ್ಗ | ಪೊಕ್ಸೊ ಪ್ರಕರಣ : ಯುವಕನಿಗೆ 20 ವರ್ಷ ಜೈಲು, ₹2.50 ಲಕ್ಷ ದಂಡ

ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ. ₹2,50,000 ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ₹2,25,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ಚಿತ್ರದುರ್ಗದಲ್ಲಿ ನಡೆದ ‘ಅಭಿಮಾನೋತ್ಸವ’ ಕಾರ್ಯಕ್ರಮ ಹೃದಯಸ್ಪರ್ಶಿ : ಪ್ರಧಾನಿ ಮೋದಿ ಸಂದೇಶ

ಶ್ರೀ ಬಿ.ಎಸ್. ಯಡಿಯೂರಪ್ಪ ಜಿ ಅವರೊಂದಿಗೆ ಹಲವು ವರ್ಷಗಳಿಂದ ನಿಕಟವಾಗಿ ಕೆಲಸ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಅವರು ಯಾವಾಗಲೂ ಆತ್ಮೀಯರು, ಪ್ರೀತಿಯವರು, ಕಠಿಣ ಪರಿಶ್ರಮಿಗಳು ಮತ್ತು ವಿನಮ್ರರು. ಹೋರಾಟದ ಕ್ಷಣಗಳಲ್ಲಿ ಮತ್ತು ಯಶಸ್ಸಿನ ಕ್ಷಣಗಳಲ್ಲಿ ನಾನು ಅವರನ್ನು ನೋಡಿದ್ದೇನೆ. ಪ್ರತಿ ಹಂತದ ಮೂಲಕ, ಒಂದು ವಿಷಯ ಸ್ಥಿರವಾಗಿ ಉಳಿದಿದೆ, ಕರ್ನಾಟಕದ ಜನರಿಗೆ ಮತ್ತು ನಮ್ಮ ಪಕ್ಷದ ಆದರ್ಶಗಳಿಗೆ ಅವರ ಸಂಪೂರ್ಣ ಬದ್ಧತೆ.ಅವರ ರಾಜಕೀಯ ಜೀವನವು ನಮ್ಮ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಸಾಧಾರಣ ಆರಂಭದಿಂದ ಬೆಳೆದ ಅವರು, […]

Continue Reading

ತಮಿಳುನಾಡಿಗೆ ದಳಪತಿಯೇ ‘ಅಧಿಪತಿ’, ; ಮುಖ್ಯಮಂತ್ರಿಯಾಗಿ ವಿಜಯ್​​ ಪ್ರಮಾಣವಚನ

ಇನ್ನು ಇಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುವರು.

Continue Reading

ಸಚಿವ ಡಿ ಸುಧಾಕರ್ ಇನ್ನಿಲ್ಲ ; ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನ

ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು. ಮೊಣಕಾಲು ಶಸ್ತ್ರಚಿಕಿತ್ಸೆ ಸಂಬಂಧ ಸಚಿವ ಸುಧಾಕರ್​​ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ

Continue Reading

ಸಾಗರ | ಡಿವೈಡರ್ ಮೇಲೆ ಹತ್ತಿದ ಬಸ್ ; ಪ್ರಯಾಣಿಕರು ಪಾರು

ಈ ಘಟನೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಒಟ್ಟಿನಲ್ಲಿ ದೊಡ್ಡ ದುರಂತ ತಪ್ಪಿದ್ದು, ಪ್ರಯಾಣಿಕರು ಸುರಕ್ಷಿತವಾಗಿ ಪಾರಾದರು.

Continue Reading

ಪಶ್ಚಿಮ ಬಂಗಾಳ | ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ : ಪ್ರಧಾನಿ ಸೇರಿ ಗಣ್ಯರು ಭಾಗಿ

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್​ ನಬಿನ್​, ಕೇಂದ್ರ ಸಚಿವರಾದ ನರಾಮ್​ ಮೋಹನ್​ ನಾಯ್ಡು, ಧರ್ಮೇಂದ್ರ ಪ್ರಧಾನ್​, ಬಿಜೆಪಿ ಆಡಳಿತ ರಾಜ್ಯಗಳ ಸಿಎಂಗಳಾದ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ದೆಹಲಿ ಸಿಎಂ ರೇಖಾ ಗುಪ್ತಾ ಭಾಗಿಯಾಗಿದ್ದಾರೆ. ಶುಕ್ರವಾರದಂದು ನಡೆದ ಬಿಜೆಪಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು […]

Continue Reading

ಹೃದಯ ಸ್ಥಂಭನ: ಚಲಿಸುವಾಗಲೇ ಬಸ್ ಚಾಲಕ ಸಾವು

ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್ ಡಿಕ್ಕಿಯಾಗಿ ಚಿರತೆ ಸಾವು ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಬಳಿ ಇಂದು ಮಧ್ಯಾಹ್ನ ಬೈಕ್ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಶಿವಮೊಗ್ಗ ಮಾರ್ಗದಿಂದ ತೀರ್ಥಹಳ್ಳಿ ಕಡೆಗೆ ಬೈಕ್ ಸವಾರ ಚಲಿಸುತ್ತಿದ್ದಾಗ, ಮಂಡಗದ್ದೆ ಸಮೀಪದ ಅರಣ್ಯ ಭಾಗದಿಂದ ಚಿರತೆಯು ಹಠಾತ್ತನೆ ರಸ್ತೆ ದಾಟಲು ಅಡ್ಡ ಬಂದಿದೆ. ಈ ವೇಳೆ ಸವಾರನಿಗೆ ಬೈಕ್ ನಿಯಂತ್ರಿಸಲು ಸಾಧ್ಯವಾಗದೆ ಚಿರತೆಗೆ ಡಿಕ್ಕಿ ಹೊಡೆದಿದ್ದಾನೆ.‘ಡಿಕ್ಕಿಯ ರಭಸಕ್ಕೆ ಚಿರತೆಯು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಇದರ ಪರಿಣಾಮ ಬೈಕ್ […]

Continue Reading

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ

ಕೋಲ್ಕತ್ತಾದಲ್ಲಿ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಸುವೇಂದು ಅಧಿಕಾರಿಯನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಮಿತ್ ಶಾ ಅವರು ಅಧಿಕಾರಿ ಅವರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ‘ಸುವೇಂದು ಅವರು ಸಂಘರ್ಷದ ಹಾದಿಯಲ್ಲಿ ಬಂದವರು. ಅವರಿಗೆ ಆಡಳಿತದ ಅನುಭವವಿದೆ.ಬಂಗಾಳದ ಜನತೆಯ ಆಸೆಗಳನ್ನು ಪೂರ್ಣಗೊಳಿಸಲು ಅವರು ಸಮರ್ಥರಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಿಯೋಜಿತ ಸಿಎಂ ಸುವೇಂದು ಅಧಿಕಾರಿ ಅವರು ಈಗಾಗಲೇ ರಾಜ್ಯಪಾಲ ಆರ್.ಎನ್. […]

Continue Reading