ತನಿಖೆ ನೆಪದಲ್ಲಿ ದಲಿತ ಯುವಕನ ಮೇಲೆ ಹಲ್ಲೆ

ಕಾರ್ತಿಕ ನಾರ್ವೆಕರ ಹಾಗೂ ರೋಹಿತ ನಾಯ್ಕ್ ಮತ್ತು ಇನ್ನೋರ್ವನ ಮೇಲೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದಲಿತ ಯುವಕನ ಮೇಲೆ ನಡೆದಿರುವ ದೌರ್ಜನ್ಯ ತೀವ್ರ ವಿವಾದ ಹುಟ್ಟು ಹಾಕಿದ್ದು ಥಳಿಸಿದ ಇನ್ನೋರ್ವ ಆರೋಪಿ ಯಾರು ಎಂಬುದು ಪತ್ತೆ ಆಗಬೇಕಾಗಿದೆ.

Continue Reading

ಮಂಗಳೂರು | ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ WIM ಪ್ರತಿಭಟನೆ

ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷೆ ಆಯಿಷಾ ಬಜ್ಪೆ ಮಾತನಾಡಿ, ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳ ಪರಿಣಾಮವಾಗಿ ಮಹಿಳೆಯರು ಮತ್ತು ದುಡಿಯುವ ವರ್ಗದ ಜನರು ಜೀವನ ನಿರ್ವಹಣೆಯಲ್ಲಿ ತೊಂದರೆ ಅನುಭವಿಸುತ್ತಿದ್ದು, ಜನಪರ ನೀತಿಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು. WIM ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಮಾತನಾಡಿ, ಬೆಲೆ ಏರಿಕೆ, ನಿರುದ್ಯೋಗ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದು, ಮಹಿಳೆಯರ ಬದುಕಿನ ಮೇಲೆ ಇದರ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು. […]

Continue Reading

ಶಿವಮೊಗ್ಗ | ಯೋಗದಿಂದ ಜೀವನದ ಉನ್ನತಿ : ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ

ಮನುಷ್ಯನಿಗೆ ಬಿಪಿ, ಶುಗರ್ ಬಂದರೆ ಹಲವು ರೋಗಗಳಿಗೆ ಆಹ್ವಾನ ನೀಡಿದಂತೆ. ಹೀಗಾಗಿ ಪ್ರಸ್ತುತ ಸಂದರ್ಭದಲ್ಲಿ ಈ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುವುದು ಎಲ್ಲರಿಗೂ ಅನಿವಾರ್ಯ ಮತ್ತು ಅತ್ಯಗತ್ಯವಾಗಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ, ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷ ಎಸ್. ರುದ್ರೇಗೌಡ್ರು ಮಾತನಾಡಿ, ಪ್ರತಿಯೊಬ್ಬರು ಯೋಗ ಶಿಕ್ಷಣ ಪಡೆದು ರೋಗದಿಂದ ಮುಕ್ತರಾಗಬೇಕು. ಪ್ರತಿದಿನ ನಾವು ಸರಳ ಯೋಗಾಭ್ಯಾಸವನ್ನು ಕಾಲಮಿತಿ ಅನುಗುಣವಾಗಿ ಕನಿಷ್ಠ ಅರ್ಧ ಗಂಟೆಯಾದರೂ ತಪ್ಪದೇ ಮಾಡಿದರೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಯಾವುದೇ ಔಷಧಿ, […]

Continue Reading

ಮೋಹನ್ ಭಾಗವತ್‌ಗೆ RSS ನೋಂದಣಿ ಬಗ್ಗೆ ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ

ಇಷ್ಟೊಂದು ಬೃಹತ್ ಗಾತ್ರ, ಪ್ರಭಾವ ಮತ್ತು ವ್ಯಾಪ್ತಿಯನ್ನು ಹೊಂದಿರುವುದರಿಂದಲೇ, ಆರ್‌ಎಸ್‌ಎಸ್ (RSS) ಸಂಘಟನೆಯು ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಾಂವಿಧಾನಿಕ ಅನುಸರಣೆಯ ಉನ್ನತ ಮಾನದಂಡಗಳನ್ನು ಕಾಯ್ದುಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ನಾಗರಿಕರು, ಕಾರ್ಮಿಕರು, ಎನ್‌ಜಿಒಗಳು, ಟ್ರಸ್ಟ್‌ಗಳು, ದೇವಾಲಯಗಳು ಮತ್ತು ಕಂಪನಿಗಳು ನೋಂದಾಯಿಸಲು, ಪಾರದರ್ಶಕತೆ ಕಾಯ್ದುಕೊಳ್ಳಲು ಮತ್ತು ಕಾನೂನನ್ನು ಅನುಸರಿಸಲು ಬಯಸುತ್ತಿವೆ. ಆದರೆ, ಆರ್‌ಎಸ್‌ಎಸ್ ಗೆ ಏಕೆ ವಿನಾಯಿತಿ ನೀಡಬೇಕು? ಎಂದು ಪ್ರಶ್ನಿಸಿದ್ದಾರೆ. ಆರ್‌ಎಸ್‌ಎಸ್‌ನ ಸಾರ್ವಜನಿಕ ಒಗ್ಗೂಡುವಿಕೆ ಕೂಡ ಅಷ್ಟೇ ವಿಸ್ತಾರವಾಗಿದೆ. ನಿಮ್ಮ ವರದಿಯ ಪ್ರಕಾರ, […]

Continue Reading

ಶಿವಮೊಗ್ಗ | ಎಸ್ ಟಿ ಸಮುದಾಯದ ಅನುದಾನ ದುರ್ಬಳಕೆ ; ಜಿಲ್ಲಾ ಜೆಡಿಎಸ್ ಪ್ರತಿಭಟನೆ

ಜಿಲ್ಲಾ ಎಸ್‌ಟಿ ಘಟಕದ ಅಧ್ಯಕ್ಷ ಹೆಚ್.ಆರ್.ಹನುಮಂತಪ್ಪ ಮಾತನಾಡಿ, ಪರಿಶಿಷ್ಟ ಪಂಗಡದ ಪೌಷ್ಟಿಕ ಆಹಾರ ಯೋಜನೆಯ 120 ಕೋಟಿ ರೂ. ಟೆಂಡರ್‌ನಲ್ಲಿ ಬಹುಕೋಟಿ ದುರ್ಬಳಕೆಯಾಗಿದ್ದು, ಬಡವರ ಅನ್ನಕ್ಕೆ ಕೈಹಾಕಿದ ಈ ಹಗರಣದ ತನಿಖೆ ಆಗಬೇಕಿದೆ. ಕಳೆದ ೨ ವರ್ಷಗಳಿಂದ ಶೇ. 90 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ, 2024-25 ನೇ ಸಾಲಿನಲ್ಲಿ ಶೇ. 80 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಇನ್ನೂ ಸಿಕ್ಕಿಲ್ಲ. ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಯೋಜನೆಯನ್ನು ಸಂಪೂರ್ಣ ನಿಲ್ಲಿಸಲಾಗಿದೆ ಎಂದು ದೂರಿದರು. ಪರಿಶಿಷ್ಟ […]

Continue Reading

ಹೊಳೆಹೊನ್ನೂರು | ಹಳೆ ಸರ್ಕಾರಿ ಶಾಲಾ ಕಟ್ಟಡ ತೆರವು ಮಾಡದಂತೆ ಗ್ರಾಮಸ್ಥರ ಆಕ್ರೋಶ

ನ್ಯಾಯಲಯದ ಆದೇಶವಿದೆ ಎಂದು ನಕಲಿ ದಾಖಲೆಗಳನ್ನು ಮುಂದಿಟ್ಟುಕೊಂಡು ಸರ್ಕಾರಿ ಶಾಲೆಯನ್ನು ನೆಲ ಸಮ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದರು. ಸುಸ್ಥಿತಿಯಲ್ಲಿದ ಹಳೆ ಶಾಲಾ ಕಟ್ಟಡವನ್ನು ಜೆಸಿಬಿ ಯಂತ್ರ ಬಳಸಿ ಬೀಳಿಸಲಾಗಿದೆ. ಶಾಲೆಯ ಬಾಗಿಲು ಕಿಟಕಿ ಸೇರಿದಂತೆ ಮೇಲ್ಚಾವಣಿಯ ಕಬ್ಬಿಣವನ್ನು ಕಿತ್ತು ಮಾರಾಟ ಮಾಡಿದ್ದಾರೆ. ಶಾಲಾ ಕಟ್ಟಡಕ್ಕೆ ಅಳವಡಿಸಿದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿಣ ತೆಗೆದುಕೊಂಡು ಹೋಗಿರುವ ಆನವೇರಿಯ ಗುಜರಿಯವರ ಮೇಲೆ ಕ್ರಮ ಜರುಗಿಸಬೇಕು ಎಂದು ಆರೋಪಿಸಿದ್ದಾರೆ. ಶಾಲಾ ಕಟ್ಟಡ ತೆರವು ಮಾಡಿದ ಜೆಸಿಬಿ ಯಂತ್ರವನ್ನು ಕೂಡಲೆ […]

Continue Reading

ಕೊಲ್ಲೂರು ಮೂಕಾಂಬಿಕ ದರ್ಶನದ ನಂತರ ತಮಿಳುನಾಡು ಸಿಎಂ ವಿಜಯ್ ದಾಂಪತ್ಯದಲ್ಲಿ ಸಿಹಿಸುದ್ದಿ?

ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ಮಧ್ಯವರ್ತಿಯಾಗಿದ್ದು, ಅವರು ದಂಪತಿ ನಡುವಿನ ಭಿನ್ನಾಭಿಪ್ರಾಯಗಳನ್ನು ಖಾಸಗಿಯಾಗಿಯೇ ಪರಿಹರಿಸಿಕೊಳ್ಳಲು ಸಹಾಯ ಮಾಡುತ್ತಿದ್ದಾರೆ ಮತ್ತು ಇಬ್ಬರ ನಡುವೆ ಮಾತುಕತೆಗೆ ಪ್ರೋತ್ಸಾಹಿಸುತ್ತಿದ್ದಾರೆ ಎಂದು ವರದಿಯಾಗಿದ್ದು, ಊಹಾಪೋಹಗಳಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.

Continue Reading