ಶಿವಮೊಗ್ಗ | ನಾಳೆ ನೀಟ್ ಪರೀಕ್ಷೆ ; ಜಿಲ್ಲಾಡಳಿತದಿಂದ ಬಿಗಿ ಕ್ರಮ : ಹೇಮಂತ್. ಎನ್

ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ರ ಕಲಂ 163 ರನ್ವಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಬಿಗಿ ಭದ್ರತೆ: ಪ್ರತಿ ಕೇಂದ್ರಕ್ಕೂ ಒಬ್ಬರು ಮ್ಯಾಜಿಸ್ಟ್ರೇಟ್ ದರ್ಜೆಯ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದ್ದು, ಸೂಕ್ತ ಭದ್ರತೆ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ತರಬೇತಿ ನೀಡಿದ್ದಾರೆ. ವೀಕ್ಷಕರು ಬೆಳಗ್ಗೆ 11 ಗಂಟೆಗೆ ಕೇಂದ್ರದಲ್ಲಿ ಹಾಜರಿರಲಿದ್ದಾರೆ. ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಡಚಣೆಯಿಲ್ಲದೆ […]

Continue Reading

ಗ್ರಾಹಕರಿಗೆ ಅಡುಗೆ ಅನಿಲ ಬೆಲೆ ಏರಿಕೆಯ ಶಾಕ್..!

14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಬೆಂಗಳೂರಿನಲ್ಲಿ ಇದರ ಬೆಲೆ 915 ರೂಪಾಯಿಯಲ್ಲೇ ಮುಂದುವರಿದಿದೆ. ಕೊನೆಯದಾಗಿ ಮಾರ್ಚ್ 7 ರಂದು ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ 60 ರೂಪಾಯಿ ಏರಿಕೆ ಮಾಡಲಾಗಿತ್ತು. ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ದರ ಮತ್ತು ಕರೆನ್ಸಿ ವಿನಿಮಯ ದರಗಳನ್ನು ಆಧರಿಸಿ ಪ್ರತಿ ತಿಂಗಳ ಮೊದಲ ದಿನದಂದು ಎಲ್‌ಪಿಜಿ ಬೆಲೆಗಳನ್ನು ಪರಿಷ್ಕರಿಸುತ್ತವೆ. ಪಶ್ಚಿಮ ಏಷ್ಯಾದಲ್ಲಿ ತೀವ್ರಗೊಂಡಿರುವ ಯುದ್ಧ […]

Continue Reading

ಶಿವಮೊಗ್ಗ | ಪ್ರಸಿದ್ಧ ಡಯಾನ ಬುಕ್ ಗ್ಯಾಲರಿಯ ಮಾಲೀಕರಾದ ಈಶ್ವರ್ ಮತ್ತು ಸುಮಂಗಲ ದಂಪತಿಗಳ ದ್ವಿತೀಯ ಪುತ್ರಿ ಅಮಿತಾ ಈಶ್ವರ್ ವಿವಾಹಕ್ಕೆ ಗಣ್ಯಾತಿ ಗಣ್ಯರಿಂದ ಶುಭಾಶಯ

ಪತ್ರಕರ್ತರಾದ ವೈದ್ಯರು, ಟೆಲಿಕ್ಸ್ ರವಿಕುಮಾರ್, ಕಾಂಗ್ರೆಸ್ ಮುಖಂಡರಾದ ವೈ. ಎಚ್. ನಾಗರಾಜ್ ಹಾಗೂ ಹಲವಾರು ಗಣ್ಯರು ನವ ಜೋಡಿಗಳಿಗೆ ಶುಭ ಕೋರಿದರು.

Continue Reading

ಮನೆಯವರೆಲ್ಲರೂ ಪ್ರಯಾಣಕ್ಕೆ ಹೊರಟಿದ್ದೀರಾ? ಮನೆಯ ಸುರಕ್ಷತೆಯ ಚಿಂತೆ ಬಿಡಿ! : ಎಸ್ಪಿ ನಿಖಿಲ್

ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕು. ಮತ್ತು ಪೊಲೀಸರ ಎಲ್‍ಹೆಚ್‍ಬಿಎಸ್‍ಗೆ ಸಹಕಾರ ನೀಡಬೇಕು ಎಂದು ಎಸ್ಪಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಾದಕದ್ರವ್ಯ ಗಾಂಜಾ ವಿರುದ್ಧ 1-1-2026ರಿಂದ ಮಾದಕ ದ್ರವ್ಯ ಸೇವೆನೆ 266 ಪ್ರಕರಣ ದಾಖಲಿಸಲಾಗಿದೆ. 290 ಆರೋಪಿತರನ್ನು ಬಂಧಿಸಲಾಗಿದೆ. 18 ಪ್ರಕರಣಗಳಲ್ಲಿ 40 ಆರೋಪಿತರನ್ನು ಬಂಧಿಸಿ, ಅವರಿಂದ ಮಾದಕದ್ರವ್ಯ ಅಮಾನತುಪಡಿಸಲಾಗಿದೆ. ಒಟ್ಟು 280 ಪ್ರಕರಣಗಳಲ್ಲಿ 330 ಜನ ಆರೋಪಿತರನ್ನು ಬಂಧಿಸಿ, 30 ಕೆ.ಜಿ. ಗಾಂಜಾ ಅಮಾನತುಪಡಿಸಿ 125 ಗ್ರಾಂ ಎಂಡಿಎಂ ಸೇರಿದಂತೆ 27,37,000 ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ. ಮಾದಕ […]

Continue Reading

ಹೊಸನಗರ | ದುಶ್ಚಟಗಳಿಗೆ ಬಲಿಯಾಗಿ, ಬಂಗಾರದಂತಹ ಬದುಕನ್ನು ಹಾಳು ಮಾಡಿಕೊಳ್ಳಬೇಡಿ : ನಾಗೇಶ್ ಬಿದರಗೋಡು ವಿಷಾದ

ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಮಾತನಾಡಿ , “ಅತಿವೇಗದ ಬದುಕಿಗೆ ಕಡಿವಾಣ ಬೇಕು, ನೆಮ್ಮದಿಯುತವಾದ ಬದುಕು ನಮ್ಮದಾಗಬೇಕೇ ಹೊರತೂ ಹಣದ ಹಿಂದೆ ಓಡುವ ಬದುಕು ನಮ್ಮದಾಗರಬಾರದು” ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಕಳೆದ ಸಾಲಿನಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರ ಅಶ್ವಿನಿ ಕುಮಾರ್ ಮಾತನಾಡಿ , ಕಾಲೇಜಿನಲ್ಲಿ ಓದು ಬರೆಹ ಅಂಕದ ಜೊತೆಗೆ ಕೌಶಲವನ್ನು ಬೆಳೆಸಿಕೊಳ್ಳಬೇಕು, ಅಂಕಗಳಿಗೆ ಎಷ್ಟು ಮುಖ್ಯವೋ ಕೌಶಲವೂ ಅಷ್ಟೇ ಮುಖ್ಯ, […]

Continue Reading

ಫುಟ್‌ಪಾತ್‌ ಮೇಲೆ ಯಾವದೇ ಕಾರಣಕ್ಕೂ ವ್ಯಾಪಾರ ನಡೆಸುವಂತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್​ ಖಡಕ್​ ಸೂಚನೆ

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇಂತಹ ಅಪಾಯಕಾರಿ ಕಾಂಪೌಂಡ್ ಗೋಡೆಗಳನ್ನು ಗುರುತಿಸಲು ಸೂಚಿಸಲಾಗಿದ್ದು, ಫುಟ್‌ಪಾತ್‌ನಲ್ಲಿ ಇನ್ಮುಂದೆ ಯಾವುದೇ ವ್ಯಾಪಾರವನ್ನು ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ. ರಸ್ತೆ ಮೇಲೆ ಬಿದ್ದಿರುವ ಮರದ ಕೊಂಬೆ ತೆರವು ಮಾಡಲು ಪೊಲೀಸರಿಗೆ ಈಗಾಗಲೇ ನಿರ್ದೇಶನವನ್ನೂ ನೀಡಿದ್ದೇನೆ. ಈಗಾಗಲೇ ನಗರದಾದ್ಯಂತ ಇರುವ ಸಮಸ್ಯೆ ಪಟ್ಟಿ ಮಾಡಲಾಗಿದೆ. ಎಲ್ಲಾ ಮಾಹಿತಿಯನ್ನ ಈಗ ಕಂಟ್ರೋಲ್ ರೂಂನಲ್ಲಿ ಕಲೆ ಹಾಕಿದ್ದಾರೆ. ಗೋಡೆ ಕುಸಿತ ಕೇಸ್​ನಲ್ಲಿ ಅಧಿಕಾರಿ ನಿರ್ಲಕ್ಷವೂ ಇದೆ ಎನ್ನಲ್ಲ. ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ ಎಂದರು. […]

Continue Reading

ಗಂಗಾವತಿ ಬಿಜೆಪಿ ಮುಖಂಡನ ಕೊಲೆ ಪ್ರಕರಣ : ಆರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು

ವೆಂಕಟೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣ ಸಂಬಂಧ ಆರು ಜನ ಅರೋಪಿಗಳನ್ನು ದೋಷಿ ಎಂದು ಈ ಹಿಂದೆ ಕೋರ್ಟ್ ತೀರ್ಪು ನೀಡಿ, ಇಂದಿಗೆ ಶಿಕ್ಷೆ ಪ್ರಮಾಣ ಕಾಯ್ದಿರಿಸಿತ್ತು. ಅಂತೆಯೇ ಇಂದು ನ್ಯಾಯಾಧೀಶರು, ಆರು ಜನರಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿದ್ದಾರೆ. ಅಪರಾಧಿಗಳು ಅಗತ್ಯವಿದ್ದರೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ನ್ಯಾಯಾಧೀಶರು ಸಲಹೆಯಲ್ಲಿ ತಿಳಿಸಿದ್ದಾರೆ ಎಂದು ಸರ್ಕಾರಿ ಅಭಿಯೋಜಕಿ ಎಸ್. ನಾಗಲಕ್ಷ್ಮಿ ಮಾಹಿತಿ ನೀಡಿದರು.

Continue Reading

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ : ಮಲ್ಲಿಕಾರ್ಜುನ ಖರ್ಗೆ

ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಕೆ: ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿಗಳಿದ್ದಾರೆ, ಚೆನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಉದ್ಭವಿಸುವುದಿಲ್ಲ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅದಕ್ಕೆ ಸಮಯ ಹಿಡಿಯುತ್ತದೆ, ಆ ಸಮಯ ಬಂದಾಗ ನೋಡೋಣ ಎಂದರು.ಕರ್ನಾಟಕದಲ್ಲಿ ಸಿಎಂ ಬದಲಾವಣೆ ಮಾಡಬೇಕೆಂದು ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರು ನಿರ್ಣಯ ತೆಗೆದುಕೊಂಡರೆ ಸಮಯ ಹಿಡಿಯುತ್ತದೆ. ನಾನು ಸಿಎಂ ಆದರೆ ಉತ್ತಮ ಎಂದು ಅವರು ಹೇಳುತ್ತಾರೆ, […]

Continue Reading