ಶಿವಮೊಗ್ಗ | ಎನ್.ಎಸ್.ಯು.ಐ ನಿಂದ ಬೃಹತ್ ಪ್ರತಿಭಟನೆ ; ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ

ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕುಲಪತಿಗಳು ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಗಂಭೀರವಾಗಿ ಆರೋಪಿಸಿದರು. ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆ ಗೆಡಿಸಿದೆ. ಈ ಅವ್ಯವಸ್ಥೆಯನ್ನು ಸರಿಪಡಿಸಲು […]

Continue Reading

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ : ಪಂಜಾಬ್‌ ಕಿಂಗ್ಸ್‌ಗೆ ಶಾಕ್‌ ನೀಡಿದ ರಾಜಸ್ಥಾನ್‌ ರಾಯಲ್ಸ್‌!

ವೈಭವ್ ಔಟಾದ ಬೆನ್ನಲ್ಲೇ ಉತ್ತಮ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್ ಅರ್ಧಶತಕ ಬಾರಿಸಿದರು. ಕೊನೆಯಲ್ಲಿ ಡೊನೆವನ್ ಫೆರೀರಾ ಹಾಗೂ ಶುಭಂ ದುಬೆ 32 ಎಸೆತಗಳಲ್ಲಿ 77 ರನ್‌ಗಳ ಜೊತೆಯಾಟವಾಡಿ ಗೆಲುವಿಗೆ ಸಹಕಾರಿಯಾದರು. ಯಶಸ್ವಿ ಜೈಸ್ವಾಲ್ 27 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸ್ ಬಾರಿಸಿ 51 ರನ್‌ಗಳಿಸಿದರು. ವೈಭವ್ ಸೂರ್ಯವಂಶಿ 16 ಎಸೆತಗಳಲ್ಲಿ 5 ಸಿಕ್ಸ್, 3 ಬೌಂಡರಿ ಹೊಡೆದು 43 ರನ್ ಬಾರಿಸಿದರು. ಧ್ರುವ್ ಜುರೆಲ್ 20 ಎಸೆತಗಳಲ್ಲಿ 16 ರನ್, ರಿಯಾನ್ ಪರಾಗ್ 16 […]

Continue Reading

ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಶ್ಲೀಲ ನೃತ್ಯಕ್ಕೆ ಬ್ರೇಕ್ : ಸರ್ಕಾರ ಆದೇಶ

ಶಾಲೆಯು ಮಕ್ಕಳಿಗೆ ಜ್ಞಾನ ದೇಗುಲವಿದ್ದಂತೆ. ಮಗುವಿನ ಭವಿಷ್ಯದ ನಿರ್ಮಾಣ, ಸಂಸ್ಕಾರ, ವಿನಯತೆ, ಒಳ್ಳೆಯ ನಡತೆ, ಮಾನಸಿಕ ಸ್ಥಿತಿ ಮತ್ತು ನೈತಿಕ ಮೌಲ್ಯಗಳ ಬೆಳವಣಿಗೆಯು ಶಾಲೆಯಿಂದಲೇ ಪ್ರಾರಂಭವಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವು ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಾಗ ಅಶ್ಲೀಲ ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ನೈತಿಕ ಮೌಲ್ಯಗಳ ಮೇಲೆ ತೀವ್ರ ಕೆಟ್ಟ ಪರಿಣಾಮ ಬೀರಲಿದ್ದು, ಶಿಕ್ಷಣದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಲಿದೆ. ಶಾಲಾ ಶಿಕ್ಷಣ […]

Continue Reading

ಸಾವಿನ ಪುರಾವೆ ಕೇಳಿದ ಬ್ಯಾಂಕ್‌; ಸಮಾಧಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ವ್ಯಕ್ತಿ!

ಬ್ಯಾಂಕ್ ನಿಯಮಗಳ ಪ್ರಕಾರ, ಮೃತ ವ್ಯಕ್ತಿಯ ಹಣವನ್ನು ಪಡೆಯಲು ವಾರಸುದಾರರ ಮರಣ ಪ್ರಮಾಣಪತ್ರ ಅಥವಾ ನಾಮಿನಿ ವಿವರ ಬೇಕಾಗುತ್ತದೆ. ಆದರೆ, ಇವುಗಳ ಅರಿವಿಲ್ಲದ ಜಿತು ಮುಂಡಾ ಅವರು, ಬ್ಯಾಂಕ್ ಅಧಿಕಾರಿಗಳು ಪದೇ ಪದೆ ದಾಖಲೆ ಕೇಳುತ್ತಿರುವುದಕ್ಕೆ ಬೇಸರಗೊಂಡಿದ್ದರು. ತನ್ನ ತಂಗಿ ಎರಡು ತಿಂಗಳ ಹಿಂದೆಯೇ ಮೃತಪಟ್ಟಿದ್ದಾಳೆ ಎಂದು ಬ್ಯಾಂಕ್​ ಸಿಬ್ಬಂದಿಗೆ ತಿಳಿಸಿದರೂ, ನಿಯಮಗಳ ಪ್ರಕಾರ ಹಣ ನೀಡಲು ದಾಖಲೆ ಸಲ್ಲಿಸಲು ಅವರು ಸೂಚಿಸಿದ್ದರು. ತಂಗಿ ಮೃತಪಟ್ಟಿದ್ದಾಳೆ ಎಂದು ಸಾಬೀತುಪಡಿಸಲು ಬೇರೆ ದಾರಿಯಿಲ್ಲದೆ, ಆತ ಸ್ಮಶಾನಕ್ಕೆ ತೆರಳಿ ಹೂತಿಟ್ಟ […]

Continue Reading

ಶಿವಮೊಗ್ಗ | ಇಬ್ಬರು ಸರಗಳ್ಳರು ಈಗ ಪೊಲೀಸರ ಅತಿಥಿ

ಕಾರ್ಯಾಚರಣೆ ನಡೆಸಿದ ತಂಡವು ಏಪ್ರಿಲ್​ 24 ರಂದು ಆರೋಪಿಗಳಾದ ಮನೋಜ್ ಶಿರಮಣ ಸಿ. ಮತ್ತು ವಿಜಯ್ ಕುಮಾರ್ ಎಂಬುವವರನ್ನು ಬಂಧಿಸಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ 40,000/- ರೂ. ಮೌಲ್ಯದ ಸ್ಪ್ಲೆಂಡರ್ ಬೈಕ್ ಹಾಗೂ ಸುಮಾರು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.

Continue Reading

ಅಂಗಡಿ ರಜಾ ಎಂದು ಬೋರ್ಡ್ ಹಾಕುವ ಮುನ್ನ ಇರಲಿ ಎಚ್ಚರ..!

ಇದನ್ನೇ ಗಮನಿಸಿದ ಕಳ್ಳರು ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಕೈಚಳಕ ತೋರಿದ್ದಾರೆ. ಲಕ್ಷಾಂತರ ಮೌಲ್ಯದ ದೋಚಿದ ಖದೀಮರು ಏಪ್ರಿಲ್ 26ರಂದು ಕುಟುಂಬವು ಪ್ರವಾಸ ಮುಗಿಸಿ ಹಿಂತಿರುಗಿದಾಗ ಮನೆಯ ಮುಂಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ. ಮನೆಯ ಒಳಗಿದ್ದ ಅಲ್ಮೇರಾವನ್ನು ಒಡೆದ ಕಳ್ಳರು, ಸುಮಾರು 22 ಗ್ರಾಂ ತೂಕದ ಚಿನ್ನದ ಸರ ಹಾಗೂ 90,000 ರೂಪಾಯಿ ನಗದನ್ನು ಅಪಹರಿಸಿದ್ದಾರೆ. ಒಟ್ಟು ನಷ್ಟದ ಮೌಲ್ಯ ಲಕ್ಷಾಂತರ ರೂಪಾಯಿಗಳೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಗಲ್ ಪಿಎಸ್‌ಐ ನಾಗರಾಜು, ಶ್ವಾನದಳ ಹಾಗೂ ಬೆರಳಚ್ಚು […]

Continue Reading

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ಕುಸಿತ ; ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ : ಸಚಿವ ಮಧು ಬಂಗಾರಪ್ಪ

ಹೊಸನಗರ ತಾಲೂಕಿನ ತೀರ್ಥಹಳ್ಳಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ ೫೨ರ ಸರಪಳಿ ೩೮.೦೦ ಕಿ.ಮೀ ನಿಂದ ೪೩.೫೮ ಕಿ.ಮೀ ವರೆಗಿನ ಸುಮಾರು ೫.೫೮ ಕಿ.ಮೀ ಉದ್ದದ ರಸ್ತೆ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಬರಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹೇರ್ ಪಿನ್ ತಿರುವುಗಳ ಸುಧಾರಣೆ: ರಸ್ತೆಯ ಸರಪಳಿ ೪೨.೦೫ ಕಿ.ಮೀ ನಿಂದ ೪೨.೨೫ ಕಿ.ಮೀ ವರೆಗಿನ ಭಾಗವು ಪ್ರಸ್ತುತ ಅತ್ಯಂತ ಕಿರಿದಾದ ಹೇರ್ ಪಿನ್ ತಿರುವುಗಳಿಂದ ಕೂಡಿದ್ದು, ಈ ಭಾಗದ ಸುಧಾರಣೆಗೂ ಆದ್ಯತೆ ನೀಡಲಾಗಿದೆ ಎಂದರು. ಇದೇ […]

Continue Reading

ಶಿವಮೊಗ್ಗ | ಏಪ್ರಿಲ್ 30 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ ; ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ. ಪರೀಕ್ಷಾ ಅವಧಿಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ನಿರಂತರ ವಿದ್ಯುತ್ ಪೂರೈಕೆ ಮಾಡಲು ಮೆಸ್ಕಾಂ ಇಲಾಖೆಗೆ ಸೂಚಿಸಿದರು.ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಲು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀ.ಫಾಸಲೆಯವರೆಗೆ ಪರೀಕ್ಷಾ ದಿನಗಳಂದು ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿದೆ ಎಂದರು. ಮಂಡಳಿಯ ಮಾರ್ಗಸೂಚಿಯಂತೆ ಎಲ್ಲಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ ಅವರು, ಶಾಂತಿಯುತವಾಗಿ ಪರೀಕ್ಷೆಗಳನ್ನು […]

Continue Reading