ಶಿವಮೊಗ್ಗ | ಫೇಸ್‌ಬುಕ್‌ ಜಾಹೀರಾತನ್ನು ನಂಬಿದ ಲಕ್ಷಾಂತರ ರೂಪಾಯಿ ಕಳೆದುಕೊಂಡ

ದೂರುದಾರರು ಕಳೆದ ಏಪ್ರಿಲ್ 14 ರಂದು ಫೇಸ್‌ಬುಕ್ ನೋಡ್ತಿದ್ದಾಗ ಪಿಎಂಇಜಿಪಿ ಸಾಲದ ಕುರಿತಾದ ವಿಡಿಯೋವೊಂದನ್ನು ಗಮನಿಸಿದ್ದರು. ಆ ವಿಡಿಯೋದಲ್ಲಿದ್ದ ಪೋನ್​ ನಂಬರ್​ ಒಂದಕ್ಕೆ ಕರೆ ಮಾಡಿ ಮಾಡಿ 50 ಲಕ್ಷ ರೂಪಾಯಿ ಸಾಲದ ಬೇಡಿಕೆ ಇಟ್ಟಿದ್ದರು. ಈ ವೇಳೆ ವಂಚಕರು ದೂರುದಾರರ ಆಧಾರ್ ಕಾರ್ಡ್, ಪಾನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಬುಕ್ ದಾಖಲೆಗಳನ್ನು ವಾಟ್ಸಾಪ್ ಮೂಲಕ ಪಡೆದುಕೊಂಡಿದ್ದರು. ದಾಖಲೆಗಳನ್ನು ಪಡೆದ ಮರುದಿನವೇ ದೂರುದಾರರಿಗೆ ಕರೆ ಮಾಡಿದ ವಂಚಕರು, ಸಾಲದ ಅರ್ಜಿ ಭರ್ತಿ ಮಾಡಿಸಿ ಸಹಿ ಹಾಕಿಸಿಕೊಂಡಿದ್ದರು. ತದನಂತರ […]

Continue Reading

ಭದ್ರಾವತಿ | ಒಂದೇ ಮನೆ ಇಬ್ಬರಿಗೆ ಬಾಡಿಗೆ ನೀಡಿದ ಮಾಲೀಕ? ; ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡದಂತೆ ಎಚ್ಚರಿಕೆ ನೀಡಿದ ERV ಸಿಬ್ಬಂದಿಗಳು

ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಇಆರ್‌ವಿ (ERV) ಸಿಬ್ಬಂದಿಗಳು, ಗಲಾಟೆ ಮಾಡುತ್ತಿದ್ದ ಗುಂಪನ್ನು ಚದುರಿಸಿ ಶಾಂತಿ ಕಾಪಾಡುವಂತೆ ಸೂಚನೆ ನೀಡಿದರು. ಸ್ಥಳದಲ್ಲೇ ಎರಡೂ ಕಡೆಯವರ ವಾದವನ್ನು ಆಲಿಸಿದ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಕಟ್ಟಡದ ಬಾಡಿಗೆ ವಿಚಾರವಾಗಿ ಉಂಟಾಗಿರುವ ಗೊಂದಲವನ್ನು ಕಾನೂನಾತ್ಮಕವಾಗಿ ಪರಿಹರಿಸಿಕೊಳ್ಳಲು ಸೂಚಿಸಿದ್ದಾರೆ.

Continue Reading

ಶಿವಮೊಗ್ಗ | ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗೆ ಬೆದರಿಕೆ

ಕೇಸನ್ನು ಬಿ ರಿಪೋರ್ಟ್ ಮಾಡಬೇಕೆಂದರೆ ಆನ್‌ಲೈನ್ ಮೂಲಕ ಹಣ ನೀಡಲು ಸಿದ್ಧರಿರಿ ಎಂದು ಬೇಡಿಕೆ ಇಟ್ಟಿದ್ದನು. ಇದರಿಂದ ಎಚ್ಚೆತ್ತುಕೊಂಡ ದೂರುದಾರರು, ತಮ್ಮ ಬಳಿ ಯಾವುದೇ ಆನ್‌ಲೈನ್ ಪಾವತಿ ಆಪ್‌ಗಳಿಲ್ಲ ಎಂದು ಹೇಳಿ, ಖುದ್ದಾಗಿ ಕಚೇರಿಯಲ್ಲೇ ಭೇಟಿಯಾಗೋಣ ಎಂದಿದ್ದಾರೆ. ತಕ್ಷಣವೇ ಗಾಬರಿಗೊಂಡ ವಂಚಕ ವಾಟ್ಸಾಪ್ ಕರೆ ಕಟ್ ಮಾಡಿದ್ದಾನೆ. ಅನುಮಾನಗೊಂಡ ಅಧಿಕಾರಿ ಕೂಡಲೇ ಶಿವಮೊಗ್ಗ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ, ಅಂತಹ ಯಾವುದೇ ಅಧಿಕಾರಿ ಅಲ್ಲಿಲ್ಲ ಮತ್ತು ಅವರ ಮೇಲೆ ಯಾವುದೇ ಕೇಸ್ ದಾಖಲಾಗಿಲ್ಲ ಎಂಬ ಸತ್ಯ […]

Continue Reading

ಶಿವಮೊಗ್ಗ | ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಉದ್ಘಾಟನೆ

ಅಧ್ಯಕ್ಷತೆ ವಹಿಸಿದ್ದ ಶ್ರೀ ಪಾರ್ಶ್ವನಾಥ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಎಸ್. ಪ್ರಶಾಂತ್ ಮಾತನಾಡಿ ಈ ಮಹಾವಿದ್ಯಾಲಯವು ಬೆಂಗಳೂರು ಮತ್ತು ಮಂಗಳೂರನ್ನು ಹೊರತುಪಡಿಸಿ ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಧಾರವಾಡ ಜಿಲ್ಲೆಗಳ ಏಕೈಕ ಮಹಿಳಾ ಬಿಇಡಿ ಕಾಲೇಜು ಇದಾಗಿದೆ. ವಿದ್ಯಾರ್ಥಿನಿಯರು ಇಲ್ಲಿನ ಶೈಕ್ಷಣಿಕ ವ್ಯವಸ್ಥೆಯ ಪ್ರಯೋಜನ ಪಡೆದು ಉನ್ನತಿ ಸಾಧಿಸಬೇಕೆಂದು ಆಶಿಸಿದರು. ವೇದಿಕೆಯಲ್ಲಿ ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಎಂ. ಮುಸವಿರ್ ಭಾಷಾ, ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಲ್. ಶ್ಯಾಮ ಸುಂದರ್, ಡಾ. ಮನಮೋಹನ್ ಸಿಂಗ್ […]

Continue Reading

ಜನಗಣತಿ ಕರ್ತವ್ಯಕ್ಕೆ ಅಡ್ಡಿ ; ಮಹಿಳಾ ಸಿಬ್ಬಂದಿಗೆ ಅವಮಾನ ದಾಖಲಾಯಿತು FIR

ವಾರ್ಡ್ ಸಂಖ್ಯೆ 43ರಲ್ಲಿ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಗಣತಿದಾರರಾದ ಶ್ರೀಮತಿ ವೀಣಾ ಅವರು ಏಪ್ರಿಲ್ 20ರಂದು ಆರ್.ಟಿ. ನಗರದ ಸುಲ್ತಾನಪಾಳ್ಯದ ಪೇರಿ ಮೊನಾರ್ಕ್ ಅಪಾರ್ಟ್‌ಮೆಂಟ್‌ಗೆ ಮಾಹಿತಿ ಸಂಗ್ರಹಿಸಲು ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ನಿವಾಸಿಯೊಬ್ಬರು ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಈ ಕುರಿತು ಏಪ್ರಿಲ್ 25ರಂದು ಮೇಲ್ವಿಚಾರಕರಾದ ಶ್ರೀಮತಿ ರಶ್ಮಿ ಆರ್ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕೇಳಿದಾಗ, ಆ ನಿವಾಸಿಯು ಗಣತಿ ಕಾರ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಮಹಿಳಾ ಸಿಬ್ಬಂದಿಯೊಂದಿಗೆ ಅತ್ಯಂತ ಅಸಭ್ಯವಾಗಿ ವರ್ತಿಸಿ ನಿಂದಿಸಿದ್ದಾರೆ. ಸಿಬ್ಬಂದಿ […]

Continue Reading

ಮೇ.2ಕ್ಕೆ ಅಂಚೆ ಮತಗಳ ಮರುಎಣಿಕೆ ; ಕುತೂಹಲ ಕೆರಳಿಸಿದ ಶೃಂಗೇರಿ ಕ್ಷೇತ್ರ

ಈ ಪ್ರಕ್ರಿಯೆ ವೇಳೆ ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡ, ಹಾಗೂ ಬಿಜೆಪಿ ಪರಾಜಿತ ಅಭ್ಯರ್ಥಿ ಡಿಎನ್ ಜೀವರಾಜ್ ಸೇರಿದಂತೆ ಮತ ಎಣಿಕೆ ಪ್ರತಿನಿಧಿಗಳು ಹಾಜರಾಗುವ ಸಾಧ್ಯತೆ ಇದೆ.ಮರು ಎಣಿಕೆಗೆ ತಡೆ ಕೋರುವ ಗಡುವು ಏಪ್ರಿಲ್ 20 ರಂದು ಮುಗಿದಿದ್ದರಿಂದ, ಮೇ 2 ರಂದು ಮರು ಎಣಿಕೆ ನಡೆಸಲು ಹೈಕೋರ್ಟ್ ಆದೇಶಿಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಡಿ ರಾಜೇಗೌಡ ಅವರು ಕೇವಲ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಒಟ್ಟು 2,811 ಪೋಸ್ಟಲ್ ಮತಗಳಲ್ಲಿ 279 ಮತಗಳು ಅಮಾನ್ಯಗೊಂಡಿದ್ದವು. […]

Continue Reading

ಭಿಕ್ಷಾಟನೆ ನಡುವೆಯೂ ಶೇ.86ರಷ್ಟು ಅಂಕ ಗಳಿಸಿದ ಅಲೆಮಾರಿ ವಿದ್ಯಾರ್ಥಿನಿ

ಭಿಕ್ಷಾಟನೆ ನಡುವೆಯೂ ಜ್ಞಾನದ ಹಸಿವು ಮೂಲತಃ ಅಲೆಮಾರಿ ಸಮುದಾಯವಾದ ಗೊಲ್ಲರ ಜನಾಂಗಕ್ಕೆ ಸೇರಿದ ಸುಜಾತಾ ಅವರದ್ದು ಅನಕ್ಷರಸ್ಥ ಕುಟುಂಬ. ಹೊಟ್ಟೆಪಾಡಿಗಾಗಿ ಪ್ರತಿದಿನ ಮನೆ ಮನೆಗೆ ತೆರಳಿ ಭಿಕ್ಷೆ ಬೇಡಿ ಹಸಿವು ನೀಗಿಸಿಕೊಳ್ಳಬೇಕಾದ ಅನಿವಾರ್ಯತೆ ಈಕೆಯದು. ಒಂದು ಕೈಯಲ್ಲಿ ಭಿಕ್ಷಾ ಪಾತ್ರೆ ಹಿಡಿದರೂ, ಮನಸ್ಸಿನಲ್ಲಿ ಮಾತ್ರ ಶಿಕ್ಷಣದ ಕನಸಿತ್ತು. ಅಲೆಮಾರಿ ಬದುಕಿನ ಕಷ್ಟಗಳ ನಡುವೆ, ಸರ್ಕಾರಿ ಶಾಲೆಯ ಮೆಟ್ಟಿಲೇರಿ ಅಕ್ಷರ ಕಲಿತ ಈ ಪ್ರತಿಭೆ, ಇಂದು ತಾನು ಪಡೆದ ಅಂಕಗಳ ಮೂಲಕ ಬಡತನಕ್ಕೆ ಉತ್ತರ. ಉಳ್ಳವರು ಶಿವಾಲಯ ಮಾಡುವರು, […]

Continue Reading

ಮದುವೆ ದಿನವೇ ಯುವತಿ ಪರಾರಿ!

ಮುಂಜಾನೆ 1:00 ಗಂಟೆಯ ಸುಮಾರಿಗೆ ಮನೆಯಲ್ಲಿ ಮಲಗಿದ್ದ ಯುವತಿ, 4:00 ಗಂಟೆಯ ಹೊತ್ತಿಗೆ ತನ್ನ ಕೋಣೆಯಲ್ಲಿ ಕಂಡುಬಂದಿಲ್ಲ. ಪರಿವಾರದವರು ಮತ್ತು ಸಂಬಂಧಿಕರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಯುವತಿಯ ಸುಳಿವು ಸಿಗದ ಕಾರಣ ಯುವತಿಯ ಚಿಕ್ಕಪ್ಪ ಜಹೀರಾ ಖಾನ್ ಅವರು ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು ದೂರು ದಾಖಲಿಸಿದ್ದರು. ನಾಪತ್ತೆಯಾದ ಯುವತಿಯ ಚಹರೆ ನಾಪತ್ತೆಯಾದ ಕುಮಾರಿ ಸಫಾ ಅಫ್ಜಲ್ ಖಾನ್ 25 ವರ್ಷ ಪ್ರಾಯದವಳಾಗಿದ್ದು, ಸುಮಾರು 5 ಅಡಿ 2 ಇಂಚು ಎತ್ತರವಿದ್ದಾಳೆ. […]

Continue Reading

ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ ; ಅಭಿಮಾನಿಗಳ ಕ್ಷಮೆಯಾಚಿಸಿದ ಚೇತನ್‌

21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಪೋಸ್ಟ್ ಮಾಡಿದ್ದರು.

Continue Reading