SSLC ಫಲಿತಾಂಶ ಏಪ್ರಿಲ್‌ 23ರ, ಇಂದು ಮಧ್ಯಾಹ್ನ 12ಕ್ಕೆ ಪ್ರಕಟ

ಈ ವರ್ಷ ಮಂಡಳಿಯು ಪ್ರಥಮ ಬಾರಿಗೆ ವಿಶೇಷ ಹೆಜ್ಜೆಯೊಂದನ್ನು ಇಟ್ಟಿದ್ದು, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ನಲ್ಲಿ ಲಭ್ಯವಾಗುವಂತೆ ಮಾಡಿದೆ. ಮಧ್ಯಾಹ್ನ 12 ಕ್ಕೆ ಅಂಕಪಟ್ಟಿ ಲಭ್ಯ ವಿದ್ಯಾರ್ಥಿಗಳು ಮಧ್ಯಾಹ್ನ 12 ಗಂಟೆಯ ನಂತರ https://www.digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಡಿಜಿಲಾಕರ್‌ನಿಂದ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆ ಗೊತ್ತಿಲ್ಲದ ವಿದ್ಯಾರ್ಥಿಗಳಿಗಾಗಿ ಮಂಡಳಿಯು ವಿಡಿಯೋ ಲಿಂಕ್ ಒಂದನ್ನು ಹಂಚಿಕೊಂಡಿದೆ. ವಿದ್ಯಾರ್ಥಿಗಳು https://tinyurl.com/mw84wmh9 ಲಿಂಕ್ ಬಳಸಿ ಡೌನ್‌ಲೋಡ್ ಪ್ರಕ್ರಿಯೆಯನ್ನು ತಿಳಿದುಕೊಳ್ಳಬಹುದಾಗಿದೆ ಎಂದು […]

Continue Reading

ಶಿವಮೊಗ್ಗ | ಫೇಸ್ಬುಕ್ ಸ್ನೇಹಿತನ ನಂಬಿ ಲಕ್ಷಾಂತರ ರೂಪಾಯಿ ವಂಚನೆಗೊಳಗಾದ ಯುವತಿ

ಬಳಿಕ ಮಹಿಳೆಯೊಬ್ಬರು ಕರೆ ಮಾಡಿ ತಾನು ವಿಮಾನ ನಿಲ್ದಾಣದ ಸಿಬ್ಬಂದಿ, ಮೈಕಲ್‌ನನ್ನು ಬಿಡಿಸಿಕೊಳ್ಳಲು ದಂಡ ಪಾವತಿಸಬೇಕು ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ನಂಬಿದ ಯುವತಿ ಏಪ್ರಿಲ್ 6 ಮತ್ತು 7 ರಂದು ವಿವಿಧ ಬ್ಯಾಂಕ್ ಖಾತೆಗಳಿಗೆ ನೆಟ್ ಬ್ಯಾಂಕಿಂಗ್ ಮತ್ತು ಫೋನ್ ಪೇ ಮೂಲಕ ಹಣ ವರ್ಗಾಯಿಸಿದ್ದರು. ಒಟ್ಟು ₹2,15,000 ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಮತ್ತೆ ಹಣಕ್ಕಾಗಿ ಪೀಡಿಸಿದಾಗ ಅನುಮಾನಗೊಂಡ ಯುವತಿ, ಕೂಡಲೇ 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಘಟನೆ ಸಂಬಂಧ […]

Continue Reading

ಶಿರಸಿ | ವೈದ್ಯರ ಹತ್ಯೆ ಪ್ರಕರಣ ; ತೀರ್ಥಹಳ್ಳಿಯ ವ್ಯಕ್ತಿ ಬಂಧನ

ಡಿಎಸ್ಪಿ ಗೀತಾ ಪಾಟೀಲ ಹಾಗೂ ಸಿಪಿಐ ಶಶಿಕಾಂತ ವರ್ಮಾ ಮಾರ್ಗದರ್ಶನದಲ್ಲಿ ಪಿಎಸ್‌ಐ ಬಸವರಾಜ ಕನಶೆಟ್ಟಿ ಮತ್ತು ತಂಡವು ಕಾರ್ಯಾಚರಣೆ ನಡೆಸಿ ಶಿವಮೊಗ್ಗದಲ್ಲಿ ಆರೋಪಿಯನ್ನು ಬಂಧಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ನೆರವಿನೊಂದಿಗೆ ಕೇವಲ 6 ಗಂಟೆಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಚಿನ್ನಾಭರಣವನ್ನು ವಶಕ್ಕೆ ಪಡೆದ ತಂಡದ ಕಾರ್ಯವನ್ನು ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ. ಬಂಧಿತನನ್ನು ಕೋಟ್‌ರ್ಗೆ ಹಾಜರುಪಡಿಸಿ ಜೈಲಿಗೆ ಕಳಿಸಲಾಗಿದೆ.

Continue Reading

ಶಿವಮೊಗ್ಗ | ಕುಂಟುನೆಪ ಹೇಳುವುದನ್ನು ಬಿಟ್ಟು ಕೂಡಲೇ ಕಾಮಗಾರಿಗಳನ್ನು ಚುರುಕುಗೊಳಿಸಿ : ಶಾಸಕ ಚನ್ನಬಸಪ್ಪ ಎಚ್ಚರಿಕೆ..!

ಸಭೆಯಲ್ಲಿ ಮಹಾನಗರ ಪಾಲಿಕೆಯ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಯೋಜನೆಯ ಗುತ್ತಿಗೆದಾರರು ಉಪಸ್ಥಿತರಿದ್ದರು.

Continue Reading

ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಸ್ಥಾಪನೆ : ಬಸನಗೌಡ ಪಾಟೀಲ್ ಯತ್ನಾಳ್

ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಮೂರು ಉದ್ದೇಶಗಳೊಂದಿಗೆ ಸಭೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಜನರ ಅಭಿಪ್ರಾಯ ಪಡೆಯುತ್ತೇನೆ. ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಒಳ್ಳೆಯ ಮುಹೂರ್ತ ನೋಡಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು. ಮೊದಲು ಜಿಲ್ಲಾ ಕೇಂದ್ರ ನಂತರ ತಾಲೂಕು ಕೇಂದ್ರಗಳಿಗೆ ಹೋಗುತ್ತೇನೆ. ಹಿಂದೂಪರ ಚಿಂತನೆ ಉಳ್ಳ ನಿರುದ್ಯೋಗಿ ಯುವಕರನ್ನು, ಅಭಿವೃದ್ಧಿ ಚಿಂತನೆ ಪರ ಇರುವ ಜನರ ಸಭೆ ಮಾಡುತ್ತೇನೆ. ಜನರ ಅಭಿಪ್ರಾಯ ಪಡೆದು ಮುಂದೆ ಪ್ರಾದೇಶಿಕ […]

Continue Reading

ಕಾರವಾರ | ‘ಫೆಮಿನಾ ಮಿಸ್‌ ಇಂಡಿಯಾ’ ಕಿರೀಟ ಧರಿಸಿದ MLA ಸತೀಶ್‌ ಸೈಲ್‌ ಮಗಳು!

ಈ ಕಾರಣಕ್ಕೆ ಗೋವಾದಿಂದಲೇ ರಾಷ್ಟ್ರಮಟ್ಟದ ಸ್ಪರ್ಧೆಗೆ ಪ್ರತಿನಿಧಿಸುವ ಅವಕಾಶ ಸಿಕ್ಕಿತ್ತು ಎಂಬುದಾಗಿ ಶಾಸಕ ಸತೀಶ ಸೈಲ್ ಆಪ್ತರು ಹೇಳಿದ್ದಾರೆ. ‘ಪುತ್ರಿ ಸಾದ್ವಿ ಖ್ಯಾತ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರಿಂದ ಪ್ರೇರಣೆಗೊಂಡು ಅರ್ಥಶಾಸ್ತ್ರ ವಿಷಯ ಅಧ್ಯಯನ ಮಾಡಿದ್ದಾರೆ. ಆಕೆ ಕೆನಡಾದಲ್ಲಿ ಉನ್ನತ ವ್ಯಾಸಂಗದಲ್ಲಿ ತೊಡಗಿದ್ದ ವೇಳೆ ಕೋವಿಡ್ ಎದುರಾಗಿತ್ತು. ಸವಾಲುಗಳ ನಡುವೆಯೂ ವ್ಯಾಸಂಗ ಪೂರ್ಣಗೊಳಿಸಿದ್ದಾಳೆ. ತನ್ನ ಆಸಕ್ತಿಯ ಮಾಡೆಲಿಂಗ್ ಕ್ಷೇತ್ರಕ್ಕೆ ಹೋದಾಗ ನಾನು ಸಮ್ಮಿತಿಸಿರಲಿಲ್ಲ. ಆ ಕ್ಷೇತ್ರಕ್ಕೆ ಆಕೆ ಕಾಲಿಡುವುದು ಆರಂಭದಲ್ಲಿ ನನಗೆ ಇಷ್ಟವಿರಲಿಲ್ಲ. ಆದರೆ, ಆಕೆಯ ಆಸಕ್ತಿಗೆ […]

Continue Reading

ಶಿವಮೊಗ್ಗ | ಶಿಕಾರಿಗೆ ಬಳಸುತ್ತಿದ್ದ 45 ನಾಡ ಬಾಂಬ್ ವಶಕ್ಕೆ ; ಓರ್ವ ಸೆರೆ, ಇಬ್ಬರು ಪರಾರಿ

ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ, ಭಾಸ್ಕರ್ ಹಾಗೂ ನಾಗರಾಜ್ ಪರಾರಿಯಾಗಿದ್ದು, ಡಾಕಪ್ಪನನ್ನು ಬಂಧಿಸಲಾಗಿದೆ. ಈ ವೇಳೆ 45 ನಾಡ ಬಾಂಬ್​​​ಗಳ ಜೊತೆಗೆ ಒಂದು ಬೈಕ್​​ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಾಕಪ್ಪನನ್ನು ಹೊಸನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಪರಾರಿಯಾಗಿರುವ ಇಬ್ಬರು ಆರೋಪಿಗಳಾದ ಭಾಸ್ಕರ್ ಹಾಗೂ ನಾಗರಾಜ್ ಹುಡುಕಾಟಕ್ಕೆ ಅರಣ್ಯಾಧಿಕಾರಿಗಳು ಬಲೆ ಬೀಸಿದ್ದಾರೆ. ಕಾರ್ಯಾಚರಣೆಯಲ್ಲಿ ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್., ಉಪ ವಲಯ ಅರಣ್ಯಾಧಿಕಾರಿಗಳಾದ ಅನಿಲ್ ಬೆಳ್ಳೆನವರ್, ಭರತ್ ಕುಮಾರ್, ಗಸ್ತು ಅರಣ್ಯ ಪಾಲಕ ಮಂಜುನಾಥ […]

Continue Reading

ಶಿವಮೊಗ್ಗ | ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಎಂಬ ತಪ್ಪು ಕಲ್ಪನೆ ಬಿತ್ತಿ ಮಸೂದೆಗೆ ವಿರೋಧ : ಸಂಸದ ಬಿ. ವೈ. ಆರ್ ಆರೋಪ

ಈ ಹಿನ್ನೆಲೆಯಲ್ಲಿ ಏಪ್ರಿಲ್ 16 ಅನ್ನು ದೇಶದ ಪಾಲಿನ ಕರಾಳ ದಿನ ಎಂದ ಬಿವೈ ರಾಘವೇಂದ್ರ ಅವರು, ಕಾಂಗ್ರೆಸ್‌ನ ಈ ವಿರೋಧದ ವಿರುದ್ಧ ಪ್ರತಿ ಮನೆಮನೆಗೂ ಜಾಗೃತಿ ತಲುಪಿಸಲಾಗುವುದು ಎಂದರು. ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಕಾಂಗ್ರೆಸ್‌ಗೆ ಛೀಮಾರಿ ಹಾಕುವ ಅಭಿಯಾನ ನಡೆಸಲಾಗುವುದು. ಪ್ರಧಾನಿ ಮೋದಿಯವರು ಮಹಿಳಾ ಸಬಲೀಕರಣದ ವಿಷಯದಲ್ಲಿ ಎಂದೂ ಹಿಂದೇಟು ಹಾಕುವುದಿಲ್ಲ, ಈ ಪ್ರಯತ್ನ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Continue Reading