ಶಿವಮೊಗ್ಗ | ಸೌರಮಾನ ಯುಗಾದಿ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ ನಿರಾಶ್ರಿತರ ಕೇಂದ್ರದಲ್ಲಿ ಸಾಂತ್ವನ ಹಾಗೂ ಮನೋರಂಜನಾ ಕಾರ್ಯಕ್ರಮ

ಕಾರ್ಯಕ್ರಮದ ಅಂಗವಾಗಿ ಸಮಿತಿಯ ಅಧ್ಯಕ್ಷರು ಗಾಯನ ಮಾಡುವ ಮೂಲಕ ನಿರಾಶ್ರಿತರಿಗೆ ಮನೋರಂಜನೆ ನೀಡಿದರು. ಈ ಕಾರ್ಯಕ್ರಮದ ಯಶಸ್ಸಿಗೆ ಗೌರವಧ್ಯಕ್ಷರು ಭದ್ರಾವತಿ ವಾಸುದೇವನ್, ಉಪಾಧ್ಯಕ್ಷರು ಶಿವಾನಂದ,ಪ್ರಧಾನ ಕಾರ್ಯದರ್ಶಿ ಕೆ. ಶಿವಕುಮಾರ್,ಖಜಾಂಚಿ ಪ್ರಕಾಶ ಎ,ಸಂಘಟನಾ ಕಾರ್ಯದರ್ಶಿ ಕನಕರಾಜು, ಸಹ ಕಾರ್ಯದರ್ಶಿ ಕುಮಾರ್, ಸುಬ್ರಮಣ್ಯ,ನಿರ್ದೇಶಕರುಗಳಾದ ತಂಗಪ್ಪನ್,ಅನಿಲ್, ಮುರುಳಿಧರನ್,ಕೆ. ರಾಘವೇಂದ್ರ ಪರಿಸರ ರಮೇಶ್ ಸೇರಿದಂತೆ ಎಲ್ಲಾ ಸದಸ್ಯರ ಸಹಕಾರ ಪ್ರಮುಖವಾಗಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

Continue Reading

ಶಿವಮೊಗ್ಗ | ಬಸವ ಜಯಂತಿ ಅಂಗವಾಗಿ ಬಸವ ಕೇಂದ್ರದಲ್ಲಿ ರಕ್ತದಾನ ಶಿಬಿರ : ಶ್ರೀಗಳಿಂದ ರಕ್ತದಾನಕ್ಕೆ ಚಾಲನೆ

ಇದೇ ಸಂದರ್ಭದಲ್ಲಿ ಶಿವಮೊಗ್ಗ ಬಸವೇಶ್ವರ ವೀರಶೈವ ಲಿಂಗಾಯಿತ ಸೇವಾ ಸಂಘದ ಅಧ್ಯಕ್ಷರಾದ ಎಸ್ ಎಸ್ ಜ್ಯೋತಿಪ್ರಕಾಶ್. ಬಳ್ಳಕೆರೆ ಸಂತೋಷ್. ಎಸ್ ಪಿ ದಿನೇಶ್. ಎಚ್ ಸಿ ಯೋಗೇಶ್. ರಾಜ್ಯಾಧ್ಯಕ್ಷರಾದ ಷಡಕ್ಷರಿ, ಡಾಕ್ಟರ್ ಧನಂಜಯ ಸರ್ಜಿ. ಜಿ ವಿಜಯಕುಮಾರ್.ಮಹಾಸಭಾ ಅಧ್ಯಕ್ಷರು ರುದ್ರಮುನಿ ಸಜ್ಜನ್. ರಾಜಶೇಖರ್. ಮಲ್ಲಿಕಾರ್ಜುನ್ ಕಾನೂರ್. ಕೆ ಆರ್ ಸೋಮನಾಥ್ ಬಸವ ಕೇಂದ್ರದ ಅಧ್ಯಕ್ಷರಾದ ಜಿ ಬೆನಕಪ್ಪ. ಚಂದ್ರಶೇಖರ್ ಹಾಲಸ್ವಾಮಿ. ಎಸ್ ಪಿ ದಿನೇಶ್ ಧರಣೇಂದ್ರ ದಿನಕರ್ ಹಾಗೂ ಶಂಕರ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಗೂ […]

Continue Reading

ಕುವೆಂಪು ವಿ.ವಿ ಹಗರಣ ; ತನಿಖೆಗೆ ಸಮಿತಿ

ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್‌ಕ್ಲಾಸ್ ಸೌಲಭ್ಯ ಒದಗಿಸಲು 2022ನೇ ಜನವರಿಯಲ್ಲಿ ರಾಜ್ಯ ಸರ್ಕಾರ 75 ಕೋಟಿ ಅನುದಾನ ಒದಗಿಸಿತ್ತು. ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ‘ಸ್ಮಾರ್ಟ್‌ಕ್ಲಾಸ್‌’ಗಳನ್ನು ಸಿದ್ಧಪಡಿಸಲಾಗಿತ್ತು. ಆದರೆ, ಮಾರುಕಟ್ಟೆ ಬೆಲೆಗಿಂತ ಅಧಿಕ ದರದಲ್ಲಿ ಸಾಮಗ್ರಿಗಳನ್ನು ಖರೀದಿಸಿ ವಂಚಿಸಲಾಗಿದೆ. ಭೌತಿಕ ಪರಿಶೀಲನೆ ನಡೆಸದೆ, ನಗದು ರಸೀದಿ ಪಡೆಯದೆ ಗುತ್ತಿಗೆ ಕಂಪನಿಯೊಂದಕ್ಕೆ 12.99 ಕೋಟಿ ಪಾವತಿಸಲಾಗಿದೆ ಎಂದು ಕೆಲವರು ಉನ್ನತ ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು. ಈ ಕುರಿತು ಈಗಾಗಲೇ ಶಿವಮೊಗ್ಗ ಜಿಲ್ಲಾ ನ್ಯಾಯಾಧೀಶ ಎಚ್.ಬಿ.ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸ ಲಾಗಿತ್ತು. […]

Continue Reading

ಶಿವಮೊಗ್ಗ | ಪುರಾತನ ಸ್ಮಾರಕಗಳನ್ನು ಗುರುತಿಸಿ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು : ಡಾ. ರಂಗನಾಥ್ ರಾವ್ ಹೆಚ್ ಕರಾಡ್ ಮನವಿ

ಸಾರ್ವಜನಿಕರು ಸ್ಮಾರಕಗಳ ಸಂರಕ್ಷಣೆಗಾಗಿ ಪುರಾತತ್ವ ಇಲಾಖೆಯೊಡನೆ ಕೈಜೋಡಿಸುವಂತೆ ಹೇಳಿದರು.ಎನ್.ಎಸ್.ಎಸ್. ಅಧಿಕಾರಿ ಉಮಾಶಂಕರ್ ಹಾಗೂ ಡಾ. ವರದರಾಜ ಮಾತನಾಡಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಜಿಲ್ಲೆಯಲ್ಲಿ ಹಲವಾರು ಸ್ಮಾರಕಗಳನ್ನು ಸ್ವಚ್ಚಗೊಳಿಸಲಾಗಿದೆ. ಇನ್ನು ಹೆಚ್ಚಿನ ಸ್ಮಾರಕಗಳನ್ನು ಗುರುತಿಸಿ ಸ್ವಚ್ಚಗೊಳಿಸುವ ಮೂಲಕ ಸಂರಕ್ಷಿಸಿ ಹಾಳಾಗದಂತೆ ವಿದ್ಯಾರ್ಥಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು. ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರವಾಸಿ ಮಿತ್ರರು, ಇಲಾಖೆ ಸಿಬ್ಬಂದಿಯವರು ಶಿಬಿರದಲ್ಲಿ ಭಾಗವಹಿಸಿದ್ದರು.

Continue Reading

ಚಿರತೆಯಿಂದ ಅತ್ತೆಯನ್ನು ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಮನೆಯ ಮಂಚದಡಿ ಚಿರತೆ ಅಡಗಿರುವುದು ತಿಳಿಯುತ್ತಿದ್ದಂತೆಯೇ, ಪ್ರಾಣದ ಹಂಗು ತೊರೆದು ಕೊಠಡಿಗೆ ನುಗ್ಗಿ, ವಯಸ್ಸಾದ ಅತ್ತೆಯನ್ನು ಅಪ್ಪಿಕೊಂಡು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರ ಸಾಹಸ ನಿಜಕ್ಕೂ ರೋಮಾಂಚನಕಾರಿ. ಸಾಕ್ಷಾತ್ ಮೃತ್ಯುವಿನ ದವಡೆಯಿಂದ ಅತ್ತೆಯನ್ನ ರಕ್ಷಿಸಿದ ಅವರ ಸಮಯಪ್ರಜ್ಞೆ ಇಡೀ ಮಹಿಳಾ ಕುಲಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ಸೂಚಿಸಿದ್ದಾರೆ. ಅತ್ತೆ-ಸೊಸೆಯ ಸಂಬಂಧದ ಬಗ್ಗೆ ಸಮಾಜದಲ್ಲಿರುವ ಹಳೆಯ ಕಲ್ಪನೆಗಳನ್ನ ಅಳಿಸಿ, ಸುಜಾತಾ ಅವರು ಇಂದು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ […]

Continue Reading

ಇಂದು ರಾತ್ರಿ 8:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಷಣ

ಲೋಕಸಭೆಯ ಸ್ಥಾನಗಳನ್ನು 543ರಿಂದ 850ಕ್ಕೆ ಏರಿಸುವ ಸಂವಿಧಾನ ತಿದ್ದುಪಡಿ ಮಸೂದೆ ಮತ್ತು ಮಹಿಳಾ ಮೀಸಲಾತಿ ಮಸೂದೆ ಪಾಸಾಗಲು ಮೂರನೇ ಎರಡರಷ್ಟು ಮತಗಳು ಬೇಕಿತ್ತು. ಎನ್ ಡಿಎ ಸರ್ಕಾರದ ಈ ಎರಡೂ ಮಹತ್ವಾಕಾಂಕ್ಷಿಯ ಮಸೂದೆಗಳನ್ನು ಇಂಡಿಯಾ ಮೈತ್ರಿಕೂಟ ಸೋಲಿಸಿದೆ.

Continue Reading

ತೀರ್ಥಹಳ್ಳಿ | ಕುಡಿಯುವ ನೀರಿನ ಬಾವಿಗೆ ವಿಷ ; ದೂರು ದಾಖಲು

ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಘವೇಂದ್ರ ಅವರು ತಮ್ಮ ಜಮೀನಿಗೆ ತೆರಳಿದ ಸಂದರ್ಭದಲ್ಲಿ, ಬಾವಿಯ ಸಮೀಪ ಹೋದಾಗ ನೀರಿನಲ್ಲಿ ವಿಷದ ವಾಸನೆ ಬರುತ್ತಿರುವುದು ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Continue Reading

ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ – ಸಕಲ ಸಿದ್ದತೆ : ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಬಾರಿ ಜಿಲ್ಲೆಯಾದ್ಯಂತ ಒಟ್ಟು 29 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಶಿವಮೊಗ್ಗ ನಗರದಲ್ಲಿ 21, ಭದ್ರಾವತಿಯಲ್ಲಿ 05 ಹಾಗೂ ಸಾಗರದಲ್ಲಿ 03 ಕೇಂದ್ರಗಳಿವೆ. ಒಟ್ಟು 9,864 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಶಿವಮೊಗ್ಗದಿಂದ 7,456, ಭದ್ರಾವತಿಯಿಂದ 1,120 ಮತ್ತು ಸಾಗರ ತಾಲೂಕಿನಿಂದ 1,288 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ನಿಷೇಧಿತ ಆಜ್ಞೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ರಡಿ ನಿಷೇಧಿತ ಆಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಈ ಭಾಗದಲ್ಲಿ ಜೆರಾಕ್ಸ್ […]

Continue Reading

ಶತಮಾನದ ಶಾಲೆ ಬಲವರ್ಧನೆಗೆ 31 ಶಿಫಾರಸು ; ಪಾರಂಪರಿಕ ಶಾಲೆಗಳೆಂದು ಘೋಷಿಸಲು ಆಗ್ರಹ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಹಾಗೂ ಕೆ.ಪಿ. ಸುರೇಶ್ ಉಪ್ಪಸ್ಥಿತರಿದ್ದರು. ‘ಶಾಲೆಗಳಿಗೆ ಐತಿಹಾಸಿಕ ಮಹತ್ವ’ಶತಮಾನ ಕಂಡ ಶಾಲೆಗಳಿಗೆ ಐತಿಹಾಸಿಕ ಮಹತ್ವವಿದೆ. ಅವು ಅವಕಾಶ ವಂಚಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣದ ಮೂಲಕ ಬಿಡುಗಡೆಯ ದಾರಿ ತೋರಿವೆ.ಸಾಮಾಜಿಕ ಬದಲಾವಣೆಯ ಹರಿಕಾರರು ನಡೆಸಿದ ಅಭಿಯಾನದ ಮೂರ್ತ ಸ್ವರೂಪವೇ ಈ ಶಾಲೆಗಳು, ನಾಲ್ಕು ತಲೆಮಾರುಗಳ ಬಳಿಕ ಆ ಶಾಲೆಗಳು ತನ್ನ ಅರ್ಥಪೂರ್ಣತೆಯನ್ನು ಕಳೆದುಕೊಂಡು, ಅಂಚಿಗೆ ಸರಿಯುವುದೆಂದರೆ ನಮ್ಮ ಪರಂಪರೆಯ ಆಶಯಕ್ಕೆ ಊನ ಬಂದಿದೆ ಎಂದರ್ಥ. ಜಾಗತೀಕರಣದ ವೇಗೋತ್ಕರ್ಷದಲ್ಲಿ ಅವು ಅಪ್ರಸ್ತುತವಾಗದಂತೆ […]

Continue Reading