ಹೊಸನಗರ | ಕಾರು ಡಿಕ್ಕಿ ; ಪಾದಾಚಾರಿ ಸಾವು

ತಕ್ಷಣ ಸ್ಥಳೀಯರು ಗಾಯಾಳುವನ್ನು ರಿಪ್ಪನ್ ಪೇಟೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅಷ್ಟರಲ್ಲಾಗಲೇ ಇಬ್ರಾಹಿಂ ಮೃತಪಟ್ಟಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆಯ ಶವಗಾರಕ್ಕೆ ಸಾಗಿಸಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಶಿವಮೊಗ್ಗ | ನಕಲಿ ಪಿಎಚ್ಡಿ ಪ್ರಮಾಣಪತ್ರ ನೀಡಿದ ಉಪನ್ಯಾಸಕ ವಜಾ

ಈ ವೇಳೆ ಮಾದೇಶ ಪ್ರಭು ಅವರು ಸದರಿ ವಿಶ್ವವಿದ್ಯಾಲಯದಿಂದ ಯಾವುದೇ ಪಿಎಚ್.ಡಿ ಪದವಿಯನ್ನು ಪಡೆದಿಲ್ಲ ಎಂಬ ಅಂಶ ದೃಢಪಟ್ಟಿದೆ.ಈ ಹಿನ್ನೆಲೆಯಲ್ಲಿ ಕಾಲೇಜಿನ ಪರಿಶೀಲನಾ ಸಮಿತಿಯು ಸಭೆ ಸೇರಿ ಚರ್ಚಿಸಿ, ನಕಲಿ ದಾಖಲೆ ಒದಗಿಸಿದ ಕಾರಣಕ್ಕಾಗಿ ಅವರನ್ನು ಶುಕ್ರವಾರ ಸೇವೆಯಿಂದ ವಜಾಗೊಳಿಸಿದೆ. ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕರಾಗಿದ್ದ ಮಾದೇಶ ಪ್ರಭು ಅವರು ಸಲ್ಲಿಸಿದ್ದ ಪಿಎಚ್.ಡಿ ಪದವಿ ಪ್ರಮಾಣಪತ್ರವು ನಕಲಿಯಾಗಿರುವ ಕಾರಣಕ್ಕೆ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಪ್ರಾಚಾರ್ಯ ಚನ್ನೇಶ್ ತಿಳಿಸಿದ್ದಾರೆ.

Continue Reading

ಹೊಸನಗರ | ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು

ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳೊಂದಿಗೆ ದುರ್ವರ್ತನೆ, ಅನಗತ್ಯ ನೋಟಿಸ್‌ಗಳ ಜಾರಿ, ವಿದ್ಯಾರ್ಥಿಗಳಿಗೆ ವರ್ಗಾವಣೆ ಪ್ರಮಾಣಪತ್ರ (ಟಿ.ಸಿ.) ನೀಡುವ ಬೆದರಿಕೆ, ಸಹೋದ್ಯೋಗಿಗಳೊಂದಿಗೆ ಘರ್ಷಣೆ ಹಾಗೂ ಅಸಭ್ಯ ಭಾಷೆಯ ಬಳಕೆ ಸೇರಿದಂತೆ ವಿವಿಧ ದೂರುಗಳು ದಾಖಲಾಗಿದೆ. ಸಾರ್ವಜನಿಕರೊಂದಿಗೆ ಘರ್ಷಣೆ ನಡೆಸಿ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಗಳಲ್ಲಿ ಅನಗತ್ಯ ದೂರುಗಳನ್ನು ದಾಖಲಿಸಿರುವುದು, ಕಾಲೇಜಿನ ಆಡಳಿತಾತ್ಮಕ ಕಾರ್ಯಗಳಿಗೆ ಅಡ್ಡಿಯಾಗುವ ರೀತಿಯಲ್ಲಿ 80ಕ್ಕೂ ಹೆಚ್ಚು ಆರ್‌ಟಿಐ ಅರ್ಜಿಗಳು ಮತ್ತು 250ಕ್ಕೂ ಹೆಚ್ಚು ಪತ್ರಗಳನ್ನು ಸಲ್ಲಿಸಿರುವುದೂ ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ಈ ಕುರಿತು ಕಾಲೇಜಿನ ಅಭಿವೃದ್ಧಿ ಸಮಿತಿ […]

Continue Reading

ಕೃಷಿ ವಿಜ್ಞಾನ ಪದವಿಗಳನ್ನು ಆರಂಭಿಸಲು ಖಾಸಗಿ ಕಾಲೇಜುಗಳಿಂದ ಅರ್ಜಿ ಆಹ್ವಾನ

ಹೆಚ್ಚಿನ ವಿವರ ಹಾಗೂ ನಿಬಂಧನೆಗಳು ಮತ್ತು ಅರ್ಜಿಗಾಗಿ www.uahs.edu.in ಜಾಲತಾಣಕ್ಕೆ ಬೇಟಿ ನೀಡಬಹುದು ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಸಿಗದ ಬಹುಮತ..!

ಲೋಕಸಭೆಯಲ್ಲಿ ಸೀಮಾ ನಿರ್ಣಯ ಮತ್ತು ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಮಸೂದೆ ಸೇರಿದಂತೆ ಇತರ ಎರಡು ಮಸೂದೆಗಳನ್ನು ಮೊದಲನೆಯ ಮಸೂದೆ ಸೋತ ನಂತರ ಉಳಿದೆರಡು ಮಸೂದೆಗಳನ್ನು ಮತಕ್ಕೆ ಹಾಕಲಿಲ್ಲ. ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಮಸೂದೆಗೆ ಈ ಎರಡು ಮಸೂದೆಗಳು ಆಂತರಿಕವಾಗಿ ಸಂಬಂಧಿಸಿದೆ ಎಂದು ಹೇಳಿದೆ. ಹೀಗಾಗಿ, ಒಂದು ಮಸೂದೆಯನ್ನು ಮಾತ್ರ ಮತಕ್ಕೆ ಪ್ರಸ್ತಾಪಿಸಲಾಯಿತು.ಇದರಿಂದಾಗಿ ಮೂರೂ ಮಸೂದೆಗಳು ಬಹುಮತ ಪಡೆಯಲು ವಿಫಲವಾದಂತಾಗಿದೆ. ಮಹಿಳಾ ಮೀಸಲಾತಿಯಂತಹ ಸಾಂವಿಧಾನಿಕ ತಿದ್ದುಪಡಿ ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲು ಮೂರನೇ ಎರಡರಷ್ಟು ವಿಶೇಷ ಬಹುಮತದ […]

Continue Reading

ಶಿವಮೊಗ್ಗ | “ನಾನೇ ಭಾರತ” ನಾಳೆಯ ಕಾರ್ಯಕ್ರಮಕ್ಕೆ ಚಕ್ರವರ್ತಿ ಸೂಲಿಬೆಲೆಗೆ ನಿರ್ಭಂಧ ಹೇರುವಂತೆ SDPI ಮನವಿ

ಈ ಸಂದರ್ಭದಲ್ಲಿ SDPI ಪಕ್ಷದ ಜಿಲ್ಲಾಧ್ಯಕ್ಷ ಜೀಲಾನ್ ರಜಾ ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಇಮ್ರಾನ್, ಜಮೀರ್, ಸಮಿತಿ ಸದಸ್ಯರಾದ ಕಲೀಂ, ಇಸಾಖ್, ಮತ್ತು ಶಿವಮೊಗ್ಗ ನಗರ ಕಾರ್ಯದರ್ಶಿ ಸಜೀಲ್, ನಗರ ಸಮಿತಿಯ ಹಬೀಬ್ ರವರು ಉಪಸ್ಥಿತರಿದ್ದರು.

Continue Reading

ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತ ನಾಯಕರನ್ನು ಕಡೆಗಣಿಸಿದರೆ ಮತ್ತೊಂದು ಪ್ರಾದೇಶಿಕ ಪಕ್ಷ ಖಚಿತ : ಸುಬಾನ್ ಖಾನ್ ಎಚ್ಚರಿಕೆ..!

ಉಪಚುನಾವಣೆಯಲ್ಲಿ ಸಾದಿಕ್ ಪೈಲ್ವಾನ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರ ಹಿಂದೆ ತಮ್ಮ ಕೈವಾಡ ಇರುವುದನ್ನು ಸುಬಾನ್ ಖಾನ್ ಒಪ್ಪಿಕೊಂಡಿದ್ದಾರೆ. ‘ಸಾದಿಕ್ ಪೈಲ್ವಾನ್ ನನಗೆ 40 ವರ್ಷದ ಗೆಳೆಯ. ಆತನಿಗೆ ನಾಮಪತ್ರ ಸಲ್ಲಿಸಲು ಹೇಳಿದ್ದೇ ನಾನು, ಅಷ್ಟೇ ಅಲ್ಲ ನಾಮಿನೇಷನ್ ಫೀಸ್ ಕೂಡ ನಾನೇ ಕಟ್ಟಿದ್ದೆ. ಆದರೆ ಆತ ಕೊನೆ ಕ್ಷಣದಲ್ಲಿ ಯು-ಟರ್ನ್ ಹೊಡೆದು ಚುನಾವಣಾ ನಿವೃತ್ತಿ ಘೋಷಿಸಿದ. ಈ ವಿಷಯದಲ್ಲಿ ಜಮೀರ್ ಅಹ್ಮದ್ ಆಗಲಿ, ಅಬ್ದುಲ್ ಜಬ್ಬಾರ್ ಆಗಲಿ ಏನೂ ಹೇಳಿಲ್ಲ. ಜಮೀರ್ ಹೆಸರನ್ನು ಸುಮ್ಮನೆ ಹಾಳು […]

Continue Reading

ದ್ವಿಪೌರತ್ವ ಪ್ರಕರಣ : ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲು ಅದೇಶಿಸಿದ ಅಲಹಾಬಾದ್ ಹೈಕೋರ್ಟ್

ಜನವರಿ 28ರಂದು ಲಕ್ನೋದ ವಿಶೇಷ ಸಂಸದ ಮತ್ತು ಶಾಸಕ ನ್ಯಾಯಾಲಯವು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಿಚಾರಣೆ ನಡೆಸಿದ ವೇಳೆ ರಾಹುಲ್ ಗಾಂಧಿಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕೆಳ ನ್ಯಾಯಾಲಯ ನಿರಾಕರಿಸಿತ್ತು. ಪೌರತ್ವಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ಧರಿಸುವ ಅಧಿಕಾರ ತನಗೆ ಇಲ್ಲ ಎಂದಿದ್ದ ವಿಶೇಷ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿರುವ ಅಲಹಾಬಾದ್ ಹೈಕೋರ್ಟ್, ಈ ವಿಷಯದಲ್ಲಿ […]

Continue Reading