ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ ; DC ವಿರುದ್ಧ CSK ಗೆ ಜಯ

ಬೃಹತ್ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಪಾತುಮ್ ನಿಸ್ಸಂಕ 41 ರನ್, ಕೆಎಲ್ ರಾಹುಲ್ 18 ರನ್ ಗಳಿಸಿ ಭರವಸೆ ಮೂಡಿಸಿದರಾದರೂ ವೇಗವಾಗಿ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಮಧ್ಯಮ ಕ್ರಮಾಂಕ ಕುಸಿತ ಕಂಡಿದ್ದರ ಪರಿಣಾಮ ಡೆಲ್ಲಿ ತಂಡದ ರನ್ ಚೇಸಿಂಗ್ ನಿಧಾನವಾಯಿತು. ಬಳಿಕ ಟ್ರಿಸ್ಟಾನ್ ಸ್ಟಬ್ಸ್ 38 ಎಸೆತಗಳಲ್ಲಿ 60 ರನ್ ಗಳಿಸಿ ತಂಡಕ್ಕೆ ನೆರವಾದರಾದರೂ ಏಕಾಂಗಿ ಹೋರಾಟ ಫಲಿಸಲಿಲ್ಲ. ಉಳಿದ ಬ್ಯಾಟ್ಸ್ ಮನ್ ಗಳು ಒಂದು ಅಂಕಿ ಸ್ಕೋರ್ ಗಳಿಸಿ ಪೆವಿಲಿಯನ್ ಗೆ ನಡೆದರು.ಬ್ಯಾಟಿಂಗ್ […]

Continue Reading

ದಾವಣಗೆರೆ ಉಪಚುನಾವಣೆಯಲ್ಲಿ ಪ್ರಚಾರಕ್ಕೆ ನಕಾರ ; ಸಚಿವ ಜಮೀರ್ ಅಹ್ಮದ್ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿದ ಸುರ್ಜೆವಾಲ

ಆದರೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಸಚಿವ ಜಮೀರ್ ಅಹ್ಮದ್ ಅವರು ಒತ್ತಾಯ ಮಾಡಿದ್ದರು. ಇದರಿಂದ ಸಚಿವ ಮಲ್ಲಿಕಾರ್ಜುನ್ ಏಕವಚನದಲ್ಲಿ ನಿಂದನೆ ಮಾಡಿದ್ದು, ಇದು ಅಲ್ಪಸಂಖ್ಯಾತ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದರಿಂದ ಜಮೀರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಮತಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎನ್ನುವ ಅನುಮಾನ ಕೂಡ ವ್ಯಕ್ತವಾಗಿತ್ತು. ಆದರೆ ಜಮೀರ್ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ನಿವಾಸಕ್ಕೆ ಆಗಮಿಸಿ ಊಟ ಮಾಡಿ, ಈ ಬಾರಿ ಸಮರ್ಥ್ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತಾರೆ. ನಾನು ಕೇರಳ […]

Continue Reading

ಧಾರವಾಡ | ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ

ಧಾರವಾಡ ಜಿಲ್ಲಾಸ್ಪತ್ರೆ ಎದುರು ದೊಡ್ಡಮಟ್ಟದಲ್ಲಿ ಜನ ಜಮಾಯಿಸಿದ್ದು, ಸ್ಥಳಕ್ಕೆ ವಿದ್ಯಾಗಿರಿ, ಉಪನಗರ ಹಾಗೂ ಶಹರ ಠಾಣೆಯ ಪೊಲೀಸರೂ ಭೇಟಿ ನೀಡಿದ್ದಾರೆ.

Continue Reading

ಶಿವಮೊಗ್ಗ | ದ್ವಿತೀಯ ಪಿಯು ಫಲಿತಾಂಶ ; ಅತ್ಯುತ್ತಮ ಅಂಕ ಪಡೆದ ಸಾಯಿ PU ಕಾಲೇಜಿನ ಸೋನಿಯಾ. R. ಗೌಡರಿಗೆ ಶುಭ ಹಾರೈಕೆ

ಸೋನಿಯಾ ಅವರು ವಿದ್ಯಾಭ್ಯಾಸದ ಆರಂಭದ ದಿನದಿಂದಲೂ ಶ್ರದ್ದೆಯಿಂದ ಓದುತ್ತ ಬಂದಿದ್ದು ಹಾಗೂ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ತಾನು ಓದಿದ ಕಾಲೇಜು ಮತ್ತು ಹೆತ್ತವರಿಗೂ ಕೀರ್ತಿ ತಂದಿದ್ದಾರೆ. ಮುಂದಿನ ಇವರ ಶೈಕ್ಷಣಿಕ ಜೀವನಕ್ಕೆ, ಗುರು ಹಿರಿಯರು,ಕುಟುಂಬಸ್ಥರು, ಪ್ರೀತಿ ಪಾತ್ರರು ಆತ್ಮೀಯರು, ಶುಭಾಶಯಗಳನ್ನು ಕೊರಿದ್ದಾರೆ. ನಮ್ಮ ಇ-ಕನ್ನಡ ಮಾಧ್ಯಮ ವತಿಯಿಂದ ಸಹ ವಿದ್ಯಾರ್ಥಿನಿ ಸೋನಿಯಾ ಅವರಿಗೆ ಆಲ್ ದಿ ಬೆಸ್ಟ್!

Continue Reading

ಶಿವಮೊಗ್ಗ | ಬಿಜೆಪಿಗೆ ಭ್ರಷ್ಟಾಚಾರ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ : ನಾರ್ತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ್ ಪ್ರಶ್ನೆ?

ಬಿಜೆಪಿ ಎಂದರೆ ಭ್ರಷ್ಟಾಚಾರದ ಪಕ್ಷ ಅಂತ ಮತ್ತೊಮ್ಮೆ ಈ ಘಟನೆಯಿಂದ ಸಾಬೀತಾಗಿದೆ ಎಂದು ಕುಟುಕ್ಕಿದ್ದಾರೆ. ಬಿಜೆಪಿ, ಆರ್ ಎಸ್ ಎಸ್, ಭ್ರಷ್ಟಾಚಾರಕ್ಕೆ ಈಗ ಮತ್ತೊಂದು ಕೂಡಿ ಸೇರ್ಪಡೆಯಾಗಿದೆ ಎಂದು ವ್ಯಂಗ್ಯವಾಡಿದರು. ಬಿಜೆಪಿ ಅವರಿಗೆ ರಾಜ್ಯ ಕಾಂಗ್ರೆಸ್ ಸಾರ್ಕಾರದ ಮೇಲೆ ಯಾವ ನೈತಿಕತೆ ಇದೆ ಅಂತ ಭ್ರಷ್ಟಾಚಾರದ ಆರೋಪದ ಬಗ್ಗೆ ಮಾತಾಡುತ್ತಾರೆ. ಇಲ್ಲಿಯವರೆಗೆ ಬಿಜೆಪಿ ಆರೋಪಿಸಿರುವ ಯಾವದನ್ನ ಸಹ ನಿರೂಪಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ ಎಂದರು. ಮೊದಲು ನಿಮ್ಮ ಪಕ್ಷದ ಹುಳುಕು ಸರಿಪಡಿಸಿಕೊಳ್ಳಿ ಎಂದು ಬಿಜೆಪಿಗೆ ಕಿವಿ ಮಾತು ಹೇಳಿದ್ದಾರೆ.

Continue Reading

ಇಸ್ಲಾಮಾಬಾದ್ ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ

ಮೊಹಮ್ಮದ್ ಬಘೇರ್ ಖಲಿಬಾಫ್ ನಿಯೋಗದಲ್ಲಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ, ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್‌ನ ಕಾರ್ಯದರ್ಶಿ ಅಲಿ ಅಕ್ಬರ್ ಅಹ್ಮದಿಯಾನ್, ಇರಾನ್ ಕೇಂದ್ರೀಯ ಬ್ಯಾಂಕ್ ಗವರ್ನರ್ (ಆರ್ಥಿಕ ನಿರ್ಬಂಧಗಳ ಚರ್ಚೆಗಾಗಿ) ಅಬ್ದೋಲ್ನಾಸರ್ ಹೆಮ್ಮತಿ, ಹಿರಿಯ ರಾಜತಾಂತ್ರಿಕ ಮಜಿದ್ ತಖ್ತ್ ರಾವಂಚಿ ಮತ್ತು ಮಾಜಿ ಐಆರ್‌ಜಿಸಿ ಕಮಾಂಡರ್ ಮೊಹಮ್ಮದ್ ಬಘೇರ್ ಜೊಲ್ಘಾದರ್ ಇರಲಿದ್ದಾರೆ. ಮಧ್ಯಸ್ಥಿಕೆ ವಹಿಸುತ್ತಿರುವ ಪಾಕಿಸ್ತಾನದ ಪರವಾಗಿ ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಜೊತೆ ವಿದೇಶಾಂಗ ಸಚಿವ ಇಶಾಕ್ ದಾರ್, ಸೇನಾ ಮುಖ್ಯಸ್ಥ (ಭದ್ರತೆ […]

Continue Reading

ಸೋಲಾರ್ ಸಿಸಿಕ್ಯಾಮೆರಾ ಬಳಸಿ ಭಾರತ ಸೇನೆಯ ಚಲನವಲನದ ಮೇಲೆ ಪಾಕ್‌ ದುಷ್ಟ ಹುನ್ನಾರ ; ಆರೋಪಿಗಳು ವಶಕ್ಕೆ

ಆರೋಪಿಗಳು ಪಂಜಾಬ್, ರಾಜಸ್ಥಾನ, ಹರ್ಯಾಣ, ಕಾಶ್ಮೀರದ ಗಡಿಯಲ್ಲಿನ ಸೂಕ್ಷ ಮಿಲಿಟರಿ ನೆಲೆಗಳ ಸಮೀಪ ಸೋಲಾರ್ ಆಧಾರಿತ ಸಿಸಿಟಿವಿ ಕ್ಯಾಮೆರಾಗಳನ್ನು ರಹಸ್ಯವಾಗಿ ಅಳವಡಿಸುವ ಮೂಲಕ ಪಾಕಿಸ್ತಾನಕ್ಕೆ ರಿಯಲ್ ಟೈಮ್‌ನಲ್ಲಿ ಸೇನಾ ಪಡೆಗಳ ಓಡಾಟದ ಮಾಹಿತಿ ರವಾನಿಸುತ್ತಿದ್ದರು. ಈ ಬಂಧನದಿಂದ ಸಂಭಾವ್ಯ ಭಯೋತ್ಪಾದನಾ ದಾಳಿಯನ್ನು ತಪ್ಪಿಸಿದಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಶೇಷ ಪಡೆ ಮೊದಲು ಪಂಜಾಬ್ ಮತ್ತು ದೆಹಲಿಯಲ್ಲಿ ಆರು ಮಂದಿಯನ್ನು ಬಂಧಿಸಿದ್ದು, ಸಿಸಿಟೀವಿ ಕ್ಯಾಮೆರಾ, ನಾಲ್ಕು ಪಿಸ್ತೂಲ್‌ಗಳು ಮತ್ತಿತರ ವಸ್ತುಗಳನ್ನು ವಶಕ್ಕೆ […]

Continue Reading

ಮದುವೆಯಲ್ಲಿ ಗ್ಯಾಸ್ ಸಿಲಿಂಡರ್ ಗಿಫ್ಟ್ ; ನವದಂಪತಿಗೆ ಬಂತು ನೋಟೀಸ್

ಭಟ್ಕಳದ ವಿವೇಕ್ ಮಹಾಲೆ ಮತ್ತು ನಾಗಸಂಧ್ಯಾ ಶಾಂತಿ ಅವರ ವಿವಾಹ ಮಹೋತ್ಸವದಲ್ಲಿ ಸಂಬಂಧಿಕರೊಬ್ಬರು ಎಲ್‌ಪಿಜಿ ಸಿಲಿಂಡರ್ ಅನ್ನು ಉಡುಗೊರೆಯಾಗಿ ನೀಡಿದ್ದರು. ಈ ವಿಭಿನ್ನ ಉಡುಗೊರೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ತಾಲೂಕು ಆಡಳಿತ, ವರನಿಗೆ ವಿವರಣೆ ಕೋರಿ ನೋಟಿಸ್ ಜಾರಿ ಮಾಡಿದೆ. ಆಡಳಿತ ಆಕ್ಷೇಪ ಈ ಕುರಿತು ಪ್ರತಿಕ್ರಿಯಿಸಿರುವ ಭಟ್ಕಳ ತಹಶೀಲ್ದಾರ್ ನಾಗೇಂದ್ರ ಕೊಲಶೆಟ್ಟಿ ಅವರು, ಮದುವೆಯಲ್ಲಿ ಗ್ಯಾಸ್ ಸಿಲಿಂಡರ್ ಉಡುಗೊರೆ ನೀಡುವುದು ಅಚ್ಚರಿಯ ಸಂಗತಿ ಎಂದು ಹೇಳಿದ್ದಾರೆ. ನಿಯಮಗಳ ಪ್ರಕಾರ ಸಿಲಿಂಡರ್ ಅನ್ನು […]

Continue Reading

ಶಿವಮೊಗ್ಗ | ನಗರ ವಿಕಾಸ ಯೋಜನೆ ಕಾಮಗಾರಿ ಅನುಷ್ಟಾನದಲ್ಲಿ ಶಿಷ್ಟಾಚಾರ ಉಲ್ಲಂಘನೆ :ಎಚ್. ಸಿ. ಯೋಗೇಶ್ ಆರೋಪ

ಶಿಷ್ಟಾಚಾರದ ರೀತಿಯಲ್ಲಿ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ ಕೈಯಲ್ಲಿ ಉದ್ಘಾಟನೆ ನೆರವೇರಿಸಿ ಶಿವಮೊಗ್ಗ ನಗರ ಜನತೆಗೆ ಅನುಕೂಲವಾಗುವ ಈ ಯೋಜನೆಗಳಿಗೆ ಚಾಲನೆ ಕೊಡಿಸಬೇಕೆಂದು ಮನವಿ ಮಾಡಿದರು. ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಶಿವಕುಮಾರ್ ಹಾಗೂ ಮಾಜಿ ಮಹಾ ನಗರ ಪಾಲಿಕೆ ಸದಸ್ಯ ವಿಶ್ವನಾಥ್ ಕಾಶಿ, ಯಮುನಾ ರಂಗೇಗೌಡ, ನಾಗರಾಜ್ ಕಂಕಾರಿ, ಪಾಲಾಕ್ಷಿ, ಮುನ್ನಾ, ಯೂತ್ ಕಾಂಗ್ರೆಸ್ ಅಧ್ಯಕ್ಷ ಚರಣ್ ಶೆಟ್ಟಿ, ರಮೇಶ್, ರಾಜಣ್ಣ, ಗಂಗಾಧರ್, ನವೀನ್, ಮಧು, ಪವನ್, ಶರತ್ ಎಸ್.ಕೆ. ಉಪಸ್ಥಿತರಿದ್ದರು.

Continue Reading

ಝಾಂಬಿ ಡ್ರಗ್ಸ್ ; ಸುಳ್ಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು,ಆತಂಕ ಸೃಷ್ಟಿಸಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿ

ವೈದ್ಯಕೀಯ ವರದಿಯ ಪ್ರಕಾರ ಆ ವ್ಯಕ್ತಿ ಯಾವುದೇ ಮಾದಕವಸ್ತು ಸೇವಿಸಿರಲಿಲ್ಲ. ಅನಾರೋಗ್ಯವೇ ಕಾರಣ: ಆ ವ್ಯಕ್ತಿಗೆ ತೀವ್ರವಾದ ಸಂಧಿವಾತ (ಆರ್ಥೈಟಿಸ್) ಇರುವುದು ದೃಢಪಟ್ಟಿದೆ. ಮಿಶ್ರ ಪ್ರತಿಕ್ರಿಯೆ: ಸಂಧಿವಾತಕ್ಕೆ ವೈದ್ಯರು ನೀಡಿದ್ದ ನೋವು ನಿವಾರಕ ಮಾತ್ರೆಗಳ ಜೊತೆಗೆ ಆತ ಮದ್ಯ ಸೇವಿಸಿದ್ದರಿಂದ ಮೈಮೇಲೆ ಪ್ರಜ್ಞೆ ಇಲ್ಲದಂತೆ ವರ್ತಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಪೊಲೀಸ್ ಆಯುಕ್ತರ ಎಚ್ಚರಿಕೆ: ಪ್ರಕರಣದ ಕುರಿತು ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, “ಆಧಾರರಹಿತ ಮಾಹಿತಿ ಅಥವಾ ವಿಡಿಯೋಗಳನ್ನು ಸಾರ್ವಜನಿಕರು ಹಂಚಿಕೊಳ್ಳಬಾರದು. ಈ […]

Continue Reading