ಬೆಳಗಾವಿ | ನಾನೇ ನಿಜವಾದ ವಿಪಕ್ಷನಾಯಕ, ನಾನು ಅಡ್ಜಸ್ಟ್​ಮೆಂಟ್ ರಾಜಕಾರಣಿ ಅಲ್ಲ: ಯತ್ನಾಳ್ ಹೇಳಿಕೆ

ಇದೇ ವೇಳೆ, ಮಧ್ಯಪ್ರವೇಶಿಸಿದ ಬಸನಗೌಡ ಯತ್ನಾಳ್ ಉ.ಕ. ಚರ್ಚೆ ಬಗ್ಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ, ನಿಯಮದಂತೆ ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಿ ಬಳಿಕ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸೋಣ ಎಂದು ಮನವಿ ಮಾಡಿದರು. ಕುರ್ಚಿ ಬದಲಾಯಿಸಿದ್ದಕ್ಕೆ ಅಸಮಾಧಾನ : ಇದೇ ವೇಳೆ ಶಾಸಕ ಯತ್ನಾಳ್, ಸದನದಲ್ಲಿ ತಮ್ಮ ಕುರ್ಚಿ ಬದಲಾಯಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ನಾವೆಲ್ಲರೂ ಹಿರಿಯ ಶಾಸಕರು, ಆದರೆ ನಮ್ಮನ್ನು ಹಿಂದಕ್ಕೆ ಹಾಕಿದ್ದೀರಾ, ಇದು ಯಾವ ನ್ಯಾಯ? ಎಂದು ಪ್ರಶ್ನಿಸಿದರು. ಈ ವೇಳೆ […]

Continue Reading

ಬೆಳಗಾವಿ | ಸಾಲುಮರದ ತಿಮ್ಮಕ್ಕನವರ ಹೆಸರಿನಲ್ಲಿ ಪರಿಸರವಾದಿಗಳಿಗೆ ಪ್ರಶಸ್ತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಅವರು ಬೆಳೆಸಿದ ಮರಗಳು ದಶಕಗಳಷ್ಟು ಹಳೆಯದಾಗಿದ್ದು, ಅವುಗಳು ಪರಿಸರಕ್ಕೆ ಮತ್ತು ಜೀವವೈವಿಧ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ತಿಮ್ಮಕ್ಕ ಅವರು ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ತಮ್ಮ ಕೊನೆಯ ಆಸೆಯನ್ನು ಪತ್ರ ಮುಖೇನ ತಿಳಿಸಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ಗಿಡಗಳನ್ನು ಮಕ್ಕಳಂತೆ ಕಂಡು ಪೋಷಿಸಿ ಬೆಳೆಸಿದ್ದ ತಿಮ್ಮಕ್ಕ ಅವರ ಸಾಧನೆಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ ಸಂದಿದೆ. 1997ರಲ್ಲಿ ಇಂದಿರಾ […]

Continue Reading

ಶಿವಮೊಗ್ಗ | ಇ-ಕನ್ನಡ ಸುದ್ದಿ ಫಲಶೃತಿ ಕೆಎಸ್ಆರ್ ಟಿಸಿ ಬಸ್ ವಶಕ್ಕೆ ಪಡೆದ ಟ್ರಾಫಿಕ್ ಪೊಲೀಸರು

ಹಲವು ಬಾರಿ ನಗರದೊಳಗೆ ಸಂಚಾರ ಮಾಡಬೇಡಿ, ಜಿಲ್ಲಾಧಿಕಾರಿ ಆದೇಶ ಪಾಲಿಸಿ ಎಂದು ತಿಳಿ ಹೇಳಿದ ಮೇಲೂ ಆದೇಶ ಪಾಲಿಸದೆ ಉದ್ದಟತನ ತೋರಿಸುತ್ತಿದ್ದ, ಕೆಎಸ್ಆರ್ ಟಿಸಿ ಮೇಲೆ ಕ್ರಮ ಜರುಗಿಸುವ ಭರವಸೆ ಸಂಚಾರಿ ಪೊಲೀಸರಿಂದ ಮೂಡಿದೆ. ಖಡಕ್ ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್ ಅವರ ಪ್ರಾಮಾಣಿಕ ಕರ್ತವ್ಯಕ್ಕೆ ವಾಹನ ಸವಾರರು ಹಾಗೂ ನಾಗರೀಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಆದರೂ ಎಚ್ಚೆತ್ತುಕೊಳ್ಳುತ್ತಾರ ಕೆಎಸ್ಆರ್ ಟಿಸಿ ಅಧಿಕಾರಿಗಳು? ಎಂಬುದನ್ನು ಕಾದು ನೋಡಬೇಕಿದೆ.

Continue Reading

ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲವೆಂಬ ಸರ್ಕಾರಿ ಆದೇಶ, ರಾಜ್ಯ ಸರ್ಕಾರ ತುರ್ತಾಗಿ ಹೊರಡಿಸಲಿ : ಎ ಐ ಎಸ್ ಇ ಸಿ ಸೋಮಶೇಖರ್ ಗೌಡ ಆಗ್ರಹ

ಆದರೆ, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ 15, ಅಕ್ಟೋಬರ್ 2025 ರಂದು ಹೊರಡಿಸಿರುವ ಸರ್ಕಾರಿ ಆದೇಶದ ಬಗ್ಗೆ ಸಚಿವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ? ಈ ಸರ್ಕಾರಿ ಆದೇಶದಲ್ಲಿ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ’ ಗಳೊಂದಿಗೆ ಸುತ್ತಲಿನ ಕಡಿಮೆ ದಾಖಲಾತಿಯ ಶಾಲೆಗಳನ್ನು ವಿಲೀನಗೊಳಿಸಬೇಕು ಎಂದು ಆದೇಶಿಸಲಾಗಿದೆ. ಇದರೊಟ್ಟಿಗೆ, ಒಂದು ನಿರ್ದಿಷ್ಟ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ’ ಯಾವ ಯಾವ ಸರ್ಕಾರಿ ಶಾಲೆಗಳು ವಿಲೀನಾಗಬೇಕು (ಅಂದರೆ ಮುಚ್ಚಬೇಕು) ಎಂಬುದರ ಬಗ್ಗೆ ಒಂದಾದ ಮೇಲೆ ಒಂದು ಆದೇಶಗಳನ್ನು […]

Continue Reading

ಶಿವಮೊಗ್ಗ | ಕೆ ಎಸ್ ಆರ್ ಟಿ ಸಿ ಯಿಂದ, ಪದೇ ಪದೇ ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ : ಕ್ರಮಕ್ಕೆ ಮುಂದಾಗುತ್ತಾರ ಎಸ್ಪಿ ಮಿಥುನ್ ಕುಮಾರ್

ನಗರದಲ್ಲಿ ಜನಸಾಮಾನ್ಯರು ವ್ಯಾಪಾರ ವಹಿವಾಟು ನಡೆಸುವರಿಗೂ ವಾಹನ ಸವಾರರಿಗೂ ಎಲ್ಲರಿಗೂ ಅನುಕೂಲ ಮಾಡುವಲ್ಲಿ ಪ್ರತಿನಿತ್ಯ ಶ್ರಮ ವಹಿಸುತ್ತಿದ್ದಾರೆ. ಹಾಗೆಯೇ ಪಶ್ಚಿಮ ಸಂಚಾರಿ ಠಾಣೆಯ ಪಿ ಎಸ್ ಐ ಸ್ವಪ್ನ ಅವರು ಸಹ ನಗರದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಜಿಲ್ಲಾಧಿಕಾರಿ ಆದೇಶವಿದ್ದರೂ ನಗರದಲ್ಲಿ ಸಂಚಾರ ಮಾಡುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಗಳನ್ನು ತಡೆದು ಜಿಲ್ಲಾಧಿಕಾರಿ ಆದೇಶ ಪಾಲನೆ ಮಾಡಿ ನಗರದೊಳಗೆ ವಾಹನ ಸವಾರರಿಗೆ ತೊಂದರೆ ಉಂಟು ಮಾಡಬೇಡಿ ಇಲ್ಲವಾದರೆ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ […]

Continue Reading

ಬೆಜ್ಜವಳ್ಳಿ ಸಂತೋಷ್ ಗುರೂಜಿ ಅವರೇ, ನಿಮ್ಮದು ಎನ್ನಲಾಗುತ್ತಿರುವ ವಾಣಿಜ್ಯ ಕಟ್ಟಡಕ್ಕೆ ಪ್ರತ್ಯೇಕ ಕಾನೂನು ಇದೆಯೇ?

ಇದಲ್ಲದೆ ಈ ಕಟ್ಟಡ ಕಾಮಗಾರಿ ಮಾಡುತ್ತಿರುವ ಮೇಸ್ತ್ರಿಯು ರಸ್ತೆಯನ್ನ, ಚರಂಡಿಯನ್ನ ಮುಚ್ಚುವಂತೆ ರಸ್ತೆ ಅಕ್ಕ ಪಕ್ಕ ಜಾಗದಲ್ಲೆಲ್ಲಾ ಮರಳು ಜೆಲ್ಲಿ ಇತ್ಯಾದಿ ಸುರಿದಿದ್ದಾರೆ, ಹಾಗೂ ಸಿಮೆಂಟ್ ಬ್ರಿಕ್ಸ್ ಗಳನ್ನು ಮುಖ್ಯ ರಸ್ತೆಯಲ್ಲಿ ಇಟ್ಟಿದ್ದಾರೆ, ಸಾರ್ವಜನಿಕರು, ವಾಹನ ಸವಾರರು ಹಾಗೂ ಸ್ಥಳೀಯರಿಗೆ ಇದರಿಂದ ಓಡಾಡಲು, ತೀವ್ರ ತೊಂದರೆ ಉಂಟಾಗುತ್ತಿದೆ. ಈ ಸಮಸ್ಯೆ ಕುರಿತಾಗಿ ಹಲವಾರು ಬಾರಿ ಮೇಸ್ತ್ರಿ ಹಾಗೂ ಬೆಜ್ಜವಳ್ಳಿಯ ಸಂತೋಷ್ ಗುರೂಜಿ ಕಾಮಗಾರಿ ವೀಕ್ಷಿಸಲು ಬಂದಾಗ ಸ್ಥಳೀಯರು ತಿಳಿಸಿದರು ಸಹ ಯಾವದನ್ನು ಸರಿಪಡಿಸಿಕೊಡುತ್ತಿಲ್ಲ ಎಂಬ ದೂರು ಕೇಳಿಬರುತ್ತಿದೆ. […]

Continue Reading

ಕಲರ್ಸ್ ಕನ್ನಡದ ಗಿಚ್ಚಿ ಗಿಲಿಗಿಲಿ ಜೂನಿಯರ್ಸ್ಆಡಿಷನ್ ಶಿವಮೊಗ್ಗದಲ್ಲಿ

ಶಿವಮೊಗ್ಗದ ಆಡಿಷ ನ್‌ನಲ್ಲಿ ಆಯ್ಕೆಯಾದ ಮಕ್ಕಳಿಗೆ ಮುಂದಿನ ಹಂತ ಗಳ ಆಡಿಷನ್ಸ್ ಮತ್ತು ಅಂತಿಮ ಆಯ್ಕೆ ಬೆಂಗಳೂರಿನಲ್ಲಿ ನಡೆಯಲಿದೆ. ಹೆಚ್ಚಿನ ವಿವರಗಳನ್ನು ಆಡಿಷನ್ ಸ್ಥಳದಲ್ಲಿ ನೀಡಲಾಗುವುದು. ಆಸಕ್ತ ಮಕ್ಕಳು ನಿಗದಿತ ದಿನಾಂಕದಂದು ಪೋಷಕರೊಂದಿಗೆ ಭಾವಚಿತ್ರ ಮತ್ತು (ಮಕ್ಕಳ ಮತ್ತು ಪೋಷಕರ) ಆಧಾರ್ ಕಾರ್ಡ್‌ ಜೆರಾಕ್ಸ್ ಪ್ರತಿ ಸಹಿತ ಆಡಿಷನ್‌ಗೆ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading