Tag: ಅರಣ್ಯ ಇಲಾಖೆ
ರಾಜ್ಯದಲ್ಲಿ ಚಾರಣಿಗರ ಸುರಕ್ಷತೆಗಾಗಿ ಎಸ್ಒಪಿ ಬಿಡುಗಡೆ; ಚಾರಣಕ್ಕೆ ನೋ ಎಂಟ್ರಿ
ಎಲ್ಲ ಚಾರಣ ಪಥಗಳಲ್ಲಿ ಒಂದು ಸಾರಿಗೆ ಗರಿಷ್ಠ 150 ಜನರಿಗೆ ಮಾತ್ರ ಸೀಮಿತಗೊಳಿಸಲಾಗುವುದು ಎಂದರು.ಚಾರಣಕ್ಕೆ ಬರುವವರು ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಒಂದೊಮ್ಮೆ ಯಾವುದೇ ದಿನ ಒಬ್ಬರೇ ಚಾರಣಿಗರು ನೋಂದಾಯಿಸಿದ್ದರೂ ಗೈಡ್ ಸೌಲಭ್ಯ ಕಲ್ಪಿಸಲಾಗುವುದು. ಗೈಡ್ ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ. ಇತ್ತೀಚೆಗೆ ಕೊಡಗಿನ ತಡಿಯಾಂಡಮೋಳ್ ಬೆಟ್ಟದಲ್ಲಿ ಕೇರಳದಿಂದ ಚಾರಣಕ್ಕೆ ಬಂದಿದ್ದ ಮಹಿಳೆ ನಾಪತ್ತೆಯಾಗಿ ಕಾಡಿನಲ್ಲಿ 3 ದಿನ ಕಳೆಯುವಂತಾದ ಹಾಗೂ ಅರಣ್ಯ ವ್ಯಾಪ್ತಿಗೆ ಒಳಪಡದ ಚಿಕ್ಕಮಗಳೂರಿನ ಮಾಣಿಕ್ಯಧಾರಾ ಬಳಿ ನಾಪತ್ತೆಯಾಗಿ ಶವವಾಗಿ ಬಾಲಕಿ ಪತ್ತೆಯಾದ ಹಿನ್ನೆಲೆಯಲ್ಲಿ ಚಾರಣಿಗರ […]
Continue Readingಶಿವಮೊಗ್ಗ | ವಿಮಾನ ನಿಲ್ದಾಣದಲ್ಲಿ ಕರಡಿ ಪ್ರತ್ಯಕ್ಷ
ಇದೇ ವೇಳೆ ವಿಮಾನ ನಿಲ್ದಾಣದ ಕಾಂಪೌಂಡ್ ಒಳಗೆ ಹಾರಿದೆ. ವಿಮಾನ ನಿಲ್ದಾಣದ ಕಾಂಪೌಂಡ್ ಒಳಗೆ ಪೊದೆ ಬೆಳೆದಿದ್ದು ಕರಡಿ ಅವಿತಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ವಿಮಾನ ನಿಲ್ದಾಣದ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಲಾಗಿದ್ದು, ಉಂಬ್ಳೆಬೈಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸದ್ಯ ಕರಡಿಯನ್ನು ಸೆರೆ ಹಿಡಿಯಲಾಗಿದ್ದು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.
Continue Readingಶಿಕಾರಿಪುರದಲ್ಲಿ ಚಿರತೆ ದಾಳಿ!
ಎಲ್ಲೆಲ್ಲೆ ದಾಳಿ? : ತಡಸನಹಳ್ಳಿ ಗ್ರಾಮದ ಮುತ್ತಣ್ಣ ಎಂಬವರು ಎಂದಿನಂತೆ ಬೆಳಿಗ್ಗೆ ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿ ಅವರನ್ನು ಗಾಯಗೊಳಿಸಿದೆ. ಅವರನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ . ಅಡಗಂಟಿ ಗ್ರಾಮದ ಸುದೀಪ್ ಎಂಬವರು ಸಂಜೆ ವೇಳೆ, ಮುತ್ತಗಿ ಗ್ರಾಮ ಸಮೀಪದ ಮೆಕ್ಕೆಜೋಳದ ಜಮೀನಿನಲ್ಲಿ, ಜಾನುವಾರುಗಳಿಗೆ ಮೇವು ತರಲು ತೆರಳಿದ್ದರು. ಈ ವೇಳೆ ಇವರ ಮೇಲೆ ಚಿರತೆ ದಾಳಿ ನಡೆಸಿ, ಗಾಯಗೊಳಿಸಿದೆ. ಇವರನ್ನು ಕೂಡ ಮೆಗ್ಗಾನ್ […]
Continue Readingಶಿವಮೊಗ್ಗ | ಶರಾವತಿ ಸಂತ್ರಸ್ತರ ಪರಿಹಾರ ಅಂತಿಮಘಟ್ಟಕ್ಕೆ ಬಂದಿದೆ : ಸಚಿವ ಖಂಡ್ರೆ
ಅರಣ್ಯಶಾಸ್ತ್ರ ವಿದ್ಯಾರ್ಥಿಗಳ ಬೇಡಿಕೆ ಈಡೇರಿಕೆಗೆ ಕ್ರಮ ಅರಣ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳ ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ನಾವು ಅರಣ್ಯ ವಿದ್ಯಾರ್ಥಿಗಳ ಬೇಡಿಕೆಗಳನ್ನು ಪರಿಗಣನೆಗೆ ತೆಗೆದುಕೊಂಡಿದ್ದೇವೆ. ನೇಮಕಾತಿ ವಿಚಾರದಲ್ಲೂ ಅವರಿಗೆ ಅವಕಾಶ ಕಲ್ಪಿಸಬೇಕೆಂದು ತೀರ್ಮಾನ ಮಾಡಿದ್ದೇವೆ ಎಂದು ಅಭಯ ನೀಡಿದರು. ಸುಸ್ಥಿರ ಅಭಿವೃದ್ಧಿ, ಪ್ರಕೃತಿಗೆ ತೊಂದರೆ ಆಗದಂತೆ ಅಭಿವೃದ್ಧಿ ಮಾಡಲಾಗುತ್ತದೆ. ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಸರ್ಕಾರ ಎಲ್ಲಾ ಕ್ರಮ ತೆಗೆದುಕೊಳ್ಳುತ್ತಿದೆ. ಒಂದೇ ಒಂದು ಮಾನವ ಹಾಗೂ ವನ್ಯಜೀವಿಯ ಜೀವಕ್ಕೆ ಹಾನಿಯಾಗಬಾರದೆಂದು ನಾವು ದೇವರಲ್ಲಿ ಬೇಡಿಕೊಳ್ಳುತ್ತೇವೆ. ಆ ನಿಟ್ಟಿನಲ್ಲಿ […]
Continue Readingಅರಣ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿದ ವಿ.ಪ ಶಾಸಕ ಡಾ. ಧನಂಜಯ ಸರ್ಜಿ
ಸಿಬ್ಬಂದಿಗಳ ಕೊರತೆಯಿಂದಾಗಿ ಅರಣ್ಯ ರಕ್ಷಣೆಯ ಕಾರ್ಯಕ್ಕೆ ಹಿನ್ನಡೆಯಾಗುತ್ತಿದ್ದು, ಸರ್ಕಾರವು ತಕ್ಷಣವೇ ಎಚ್ಚೆತ್ತುಕೊಂಡು ಈ ಖಾಲಿ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಬೇಕು ಹಾಗೂ ಆಧುನಿಕ ತಂತ್ರಜ್ಞಾನದ ಉಪಕ್ರಮಗಳೊಂದಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಡಾ. ಧನಂಜಯ ಸರ್ಜಿ ಶೂನ್ಯವೇಳೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
Continue Readingಶಿವಮೊಗ್ಗ | ಕಾಡುಹಂದಿ ಮಾಂಸ ಮಾರಾಟ ಯತ್ನ, ಓರ್ವನ ಬಂಧನ
ಬಂಧಿತ ಆರೋಪಿಯಿಂದ ಅಕ್ರಮವಾಗಿ ಸಂಗ್ರಹಿಸಿದ್ದ 64 ಕೆಜಿ ಮಾಂಸವನ್ನು ಜಪ್ತಿ ಮಾಡಲಾಗಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Continue Readingಚಿಕ್ಕಮಗಳೂರು | ಬಾಲಕನ ಮೇಲೆ ಚಿರತೆ ದಾಳಿ
ಮನುಷ್ಯರ ಮೇಲೆ ಪದೇ ಪದೇ ದಾಳಿ ಮಾಡುತ್ತಿರುವ ಚಿರತೆಯನ್ನು ಕೂಡಲೇ ಸೆರೆ ಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ತೀವ್ರವಾಗಿ ಆಗ್ರಹಿಸಿದ್ದಾರೆ.
Continue Reading
