ಸಾಗರ | ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗದಂತೆ ಪೋಷಕರು ವಿಶೇಷ ಕಾಳಜಿ ವಹಿಸಬೇಕು : ಪಿಎಸ್‌ಐ ಪ್ರವೀಣ್ ಕರೆ

ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಸಮಯ ಕಳೆಯುವುದನ್ನು ತಪ್ಪಿಸಿ, ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ಪೋಷಕರು ಹಾಗೂ ಶಿಕ್ಷಕರ ಸಲಹೆ-ಸೂಚನೆಗಳನ್ನು ಗೌರವಿಸಿ, ಸಮಾಜಕ್ಕೆ ಮಾದರಿಯಾಗುವ ನಾಗರಿಕರಾಗಿ ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇತ್ತೀಚಿನ ದಿನಗಳಲ್ಲಿ ಕೆಲ ಮಕ್ಕಳು ಶಾಲೆಯಿಂದ ದೂರ ಉಳಿದು ದುಶ್ಚಟಗಳಿಗೆ ಬಲಿಯಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗುವ ಘಟನೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಮಕ್ಕಳು ಶಿಕ್ಷಣದಿಂದ ದೂರ ಉಳಿಯದಂತೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಪಿಎಸ್‌ಐ ಪ್ರವೀಣ್ ಸಲಹೆ […]

Continue Reading

ಸಾಗರ | ಬೈಕ್ ಡಿಕ್ಕಿ ; ಪಾದಚಾರಿ ಸಾವು

ಕೂಡಲೇ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶೇಖರಪ್ಪ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣವೇ ಬೈಕ್ ಸವಾರ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಆನಂದಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ಸವಾರನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Continue Reading

ಸಾಗರ | ಹಾವು ಕಚ್ಚಿ ರೈತ ಸಾವು

ವಿಷಯ ತಿಳಿಯುತ್ತಿದ್ದಂತೆಯೇ ಕುಟುಂಬದವರು ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 9:45ರ ಸುಮಾರಿಗೆ ಹುಚ್ಚಪ್ಪ ಅವರು ಕೊನೆಯುಸಿರೆಳೆದಿದ್ದಾರೆ.

Continue Reading

ಶಿವಮೊಗ್ಗ | ಸಾಲಬಾಧೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಸಾಲ ತೀರಿಸಲಾಗದ ಚಿಂತೆಯಲ್ಲಿದ್ದ ಅವರು, ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.ಗೋಪಾಲ್ ತುಂಬಾ ಸಮಯದವರೆಗೆ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆಯ ಹಿತ್ತಲಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಸಾಗರ | KSRTC ಬಸ್ ಬಂದ ಖುಷಿಯಲ್ಲಿ ಗ್ರಾಮಸ್ಥರು ; ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಅಭಿನಂದನೆ ಸಲಿಕೆ

ತಮ್ಮೂರಿಗೆ ಬಸ್ ಬಂದ ಖುಷಿಯಲ್ಲಿ ಕೋಟೆಕೊಪ್ಪ ಸೇರಿದಂತೆ ಆ ಭಾಗದ ಎಲ್ಲಾ ಗ್ರಾಮಸ್ಥರು ಸಾಗರ ಶಾಸಕರು ಮತ್ತು ಕರ್ನಾಟಕ ಅರಣ್ಯ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಹಾಗೂ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಕ್ಯಾಂಟರ್ ನಡುವೆ ಭೀಕರ ಅಪಘಾತ: ಸೊರಬದ ಇಬ್ಬರು ಸ್ಥಳದಲ್ಲೇ ಸಾವು

ಇಬ್ಬರೂ ಕಾರಿನಲ್ಲಿ ಸಾಗರದ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಸಾಗರದಿಂದ ಆನಂದಪುರದ ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ವಾಹನವು, ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು,ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ ಎಂದುಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Continue Reading

ಶಿವಮೊಗ್ಗ | ಅಕ್ರಮ ಮರಳು ಸಾಗಣೆ ದೂರು ನೀಡಿದ ಯುವ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ

ಇದಕ್ಕಿಂತಲೂ ಹೆಚ್ಚು ಆತಂಕಕಾರಿ ಬೆಳವಣಿಗೆಯಾಗಿ, ಆರೋಪಿಗಳು ಶರತ್ ಅವರನ್ನು ಬಲವಂತವಾಗಿ ತಮ್ಮ ಸ್ಕಾರ್ಪಿಯೋ ಕಾರಿಗೆ ಹತ್ತಿಸಿಕೊಂಡು ಅಪಹರಣ ಯತ್ನ ನಡೆಸಿದ್ದಾರೆ. ಈ ವೇಳೆ ಅವಾಚ್ಯ ಶಬ್ದಗಳಿಂದ ಬೈಯುತ್ತಾ, ಪೊಲೀಸ್ ಠಾಣೆಗೆ ದೂರು ನೀಡಿದರೆ ಎಸ್‌ಸಿ/ಎಸ್‌ಟಿ ಹುಡುಗರಿಂದ ಸುಳ್ಳು ಪ್ರಕರಣ ದಾಖಲಿಸಿ ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ದರ್ಶನ್, ಪ್ರವೀಣ್ , ಶಿವರಾಮ, ದಿವಾಕರ ಸೇರಿದಂತೆ ಇನ್ನಿತರ ನಾಲ್ವರು ಆರೋಪಿಗಳಾಗಿದ್ದಾರೆ.ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್.ಪಿ. ಅವರು […]

Continue Reading

ಶಿವಮೊಗ್ಗ | ಸಮಯ ಪ್ರಜ್ಞೆಯಿಂದ ಚಾಲಕನ ಪ್ರಾಣ ಕಾಪಾಡಿದ, ಮಧು.ಎಂ.ಆರ್ ವಿದ್ಯಾರ್ಥಿಗೆ ಶೌರ್ಯ ಪ್ರಶಸ್ತಿ

ಆ ಸಂದರ್ಭದಲ್ಲಿ ಮಧು ಎಮ್ ಆರ್ ತಕ್ಷಣ ಸ್ಥಳಕ್ಕೆ ಬಂದು ಟ್ಯಾಕ್ಟರ್ ಮಿಷನ್ ಆಫ್ ಮಾಡುವ ಮೂಲಕ ಯಂತ್ರದ ಒಳಗೆ ಸಿಲುಕಿದ ಕೈಯನ್ನ ಹೊರೆ ತೆಗೆಯುವುದರೊಂದಿಗೆ ಚಾಲಕನ ಪ್ರಾಣ ರಕ್ಷಣೆ ಮಾಡಿರುತ್ತಾನೆ. ಸಮಯ ಪ್ರಜ್ಞೆಯೊಂದಿಗೆ ಚಾಲಕನ ಪ್ರಾಣ ಕಾಪಾಡಿದ ಮಧುಗೆ 2025-26 ನೇ ಸಾಲಿನ ಶೌರ್ಯ ಪ್ರಶಸ್ತಿ ಲಭಿಸುತ್ತಿರುವುದಕ್ಕೆ ಇಡೀ ಗ್ರಾಮವೇ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ವಿದ್ಯಾರ್ಥಿಯು 8ನೇ ತರಗತಿಯನ್ನು ಸೊರಬ ತಾಲೂಕಿನ ನಿಸರಾಣಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

Continue Reading