ಶಿವಮೊಗ್ಗ | ಬಂಗಾರದ ಸರ ಸುಲಿಗೆ ; 48 ಗಂಟೆ ಒಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಪ್ರಕರಣದ ಗಂಭೀರತೆಯನ್ನು ಮನಗಂಡು ಶ್ರೀ ನಿಖಿಲ್ ಬಿ., ಐಪಿಎಸ್ – ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ ಎ.ಜಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕರು–1, ಶ್ರೀ ರಮೇಶ್ ಕುಮಾರ್ ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರು–2 ರವರ ಮಾರ್ಗದರ್ಶನದಲ್ಲಿ, ಶ್ರೀ ಪ್ರಕಾಶ್ ರಾಠೋಡ್, DySP ಭದ್ರಾವತಿ ಉಪವಿಭಾಗ ರವರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಲಾಯಿತು. ಪೊಲೀಸ್ ಇನ್ಸ್‌ಪೆಕ್ಟರ್ ಚಿದಾನಂದ ಅವರ ನೇತೃತ್ವದಲ್ಲಿ, ಎ.ಎಸ್.ಐ ದಿವಾಕರ್ ರಾವ್, ಸಿಪಿಸಿ ಯದುನಂದನ ಹಾಗೂ ಸಂತೋಷಕುಮಾರ ರವರನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ,ಆರೋಪಿತರಾದ […]

Continue Reading

KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು ; ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ವಶಕ್ಕೆ ಪಡೆದ ಪೊಲೀಸರು

ಇದೇ ತಿಂಗಳ 8ನೇ ತಾರೀಕು ಬೆಂಗಳೂರಿನಿಂದ ಹೈದರಾಬಾದ್​​ಗೆ ಹೊರಟಿದ್ದ KSRTC ಎಸಿ ಸ್ಲೀಪರ್​​ ಐಷಾರಾಮಿ ಬಸ್​​ನಲ್ಲಿ ವೆಂಕಟೇಶ್ವರ್​ ರಾವ್​ ಎಂಬವರು ಪ್ರಯಾಣಿಸುತ್ತಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ಇರುವ ಹೋಟಲ್​​ವೊಂದರಲ್ಲಿ ಪ್ರಯಾಣಿಕರಿಗೆ ಊಟ ಮಾಡಲು ಚಾಲಕ ಬಸ್​​ ನಿಲ್ಲಿಸಿದ್ದ. ಈ ವೇಳೆ ವೆಂಕಟೇಶ್ವರ್​ ರಾವ್ ತಮ್ಮ ಬಳಿ ಇದ್ದ ಹಣದ ಬ್ಯಾಗ್​​ನ ಬಸ್​​ನಲ್ಲೇ ಬಿಟ್ಟು ಊಟಕ್ಕೆ ತೆರಳಿದ್ದರು. ಆದರೆ ಹಿಂದಿರುಗಿ ಬಂದು ನೋಡುವಾಗ ಸೀಟ್​​ನಲ್ಲಿದ್ದ ಬ್ಯಾಗ್​​ ನಾಪತ್ತೆಯಾಗಿತ್ತು. ಕಾರಲ್ಲಿ ಬಂದ ವ್ಯಕ್ತಿ ಸೀದಾ ಬಸ್​​ಗೆ ನುಗ್ಗಿ […]

Continue Reading

ಶಿವಮೊಗ್ಗ | ಎ ಎಸ್ ಐ ಹಾಲಪ್ಪ ಬಂಧನ ಯಾವಾಗ?

ದೂರಿನ ಆಧಾರದ ಮೇರೆಗೆ ಎಎಸ್ಐ ಹಾಲಪ್ಪರವರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನ.26 ರಂದು ದೈಹಿಕ ಮತ್ತು ಮಾನಸಿಕ ಹಿಂಸೆ, ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಮುಂದುವರೆದ ಭಾಗವಾಗಿ ಎಎಸ್ಐ ಹಾಲಪ್ಪ ನವರ ಅಮಾನತು ಕೂಡ ಆಗಿದೆ. ಪ್ರಸ್ತುತ ಪ್ರಕರಣ ದಾಖಲಾಗಿ ತಿಂಗಳು ಆಗುತ್ತಾ ಬರುತ್ತಿದೆ ಆದರೆ ಇಲ್ಲಿವರೆಗೂ ಪೊಲೀಸಪ್ಪನ ಬಂಧನವಾಗಿಲ್ಲ. ಈ ಕುರಿತು ಶಿವಮೊಗ್ಗ ಆಡಿಷನಲ್ ಎಸ್ ಪಿ ಕಾರಿಯಪ್ಪ ಅವರು ನಮ್ಮ ಇ ಕನ್ನಡ ಮಾಧ್ಯಮದೊಂದಿಗೆ ಮಾತನಾಡಿ […]

Continue Reading