Tag: ಉಪಚುನಾವಣೆ
ರಂಗೇರಿದ ಉಪಚುನಾವಣೆ ; ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಈ ಸಮಾವೇಶದಲ್ಲಿ CM ಸಿದ್ದರಾಮಯ್ಯ, DCM ಡಿ. ಕೆ. ಶಿವಕುಮಾರ್, ಮತ್ತು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸಿದರು. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
Continue Readingದಾವಣಗೆರೆ ಉಪಚುನಾವಣೆ ; ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಕಣಕ್ಕೆ
ತಾತನ ಕಾರನ್ನು ಸ್ವಚ್ಛಗೊಳಿಸಿ ಪೂಜೆ ಮಾಡಿ, ಅದೇ ಕಾರಿನಲ್ಲಿ ಶುಭಗಳಿಗೆಯಲ್ಲಿ ತಾಯಿ ಪ್ರಭಾ ಮಲ್ಲಿಕಾರ್ಜುನ ಅವರ ಜೊತೆಗೆ ಅಜ್ಜಿ ಮನೆಗೆ ತೆರಳಿ ಅಜ್ಜಿಯ ಆಶೀರ್ವಾದ ಪಡೆದರು. ಬಳಿಕ ಅಲ್ಲಿಂದ ನೇರವಾಗಿ ಮಹಾನಗರ ಪಾಲಿಕೆ ಆವರಣದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ, ಎಸಿ ಹಾಗೂ ಚುನಾವಣಾಧಿಕಾರಿ ಸಂತೋಷ್ ಅವರಿಗೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಕಟ್ಟಿರುವುದೇ ಅಪ್ಪಾಜಿ, ಕಾಂಗ್ರೆಸ್ನಿಂದಲೇ ನಾಮಪತ್ರ ಸಲ್ಲಿಕೆ: ತಾಯಿ ಪ್ರಭಾ ಮಲ್ಲಿಕಾರ್ಜುನ್ ಜೊತೆ ಸಮರ್ಥ್ ಶಾಮನೂರು ಅವರು ಅಪ್ಪಟ ದೇಸಿ ಸಾಂಪ್ರದಾಯಿಕ ಉಡುಗೆಯಲ್ಲಿ ನಾಮಪತ್ರ ಸಲ್ಲಿಸಲು ಹೊರಡುವ […]
Continue Readingದಾವಣಗೆರೆ ದಕ್ಷಿಣ ಶ್ರೀನಿವಾಸ ದಾಸ ಕರಿಯಪ್ಪ, ಬಾಗಲಕೋಟೆ ವೀರಣ್ಣ ಚರಂತಿಮಠ ; ಉಪಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ
ಅಚ್ಚರಿ ತೀರ್ಮಾನ ಎಂಬಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎಸ್ಟಿ ಸಮುದಾಯದ ಶ್ರೀನಿವಾಸ ದಾಸ ಕರಿಯಪ್ಪ ಟಿಕೆಟ್ ನೀಡುವ ಮೂಲಕ ಬಿಜೆಪಿ ಹೈ ಕಮಾಂಡ್ ಅಚ್ಚರಿ ನಿರ್ಧಾರ ಕೈಗೊಂಡಿದೆ. ಕುರುಬ ಸಮುದಾಯದ ಜಿ.ಬಿ.ವಿನಯ್ ಕುಮಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಲವಾದ ಮಾತುಗಳು ಕೇಳಿ ಬರುತ್ತಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿಸಿ ವಿಫಲರಾದ ವಿನಯ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,907 ಮತಗಳನ್ನು ಗಳಿಸಿದ್ದರು. ಆದರೆ, ಅಚ್ಚರಿ ಎಂಬಂತೆ ಬಿಜೆಪಿ ಹೈ ಕಮಾಂಡ್ ಸ್ಥಳೀಯ […]
Continue Readingದಾವಣಗೆರೆ | ಮಾರ್ಚ್–ಏಪ್ರಿಲ್ನಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ; ಶಾಮನೂರುರ ಇಬ್ಬರು ಮೊಮ್ಮಕಳಲ್ಲಿ ಯಾರು ಕಣಕ್ಕೆ?
ಕ್ಷೇತ್ರದಲ್ಲಿ ಗಣನೀಯ ಅಲ್ಪಸಂಖ್ಯಾತ ಜನಸಂಖ್ಯೆಯ ಹೊರತಾಗಿಯೂ, ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯಲ್ಲಿ ಶಾಮನೂರು ಕುಟುಂಬವು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ಸ್ಥಳೀಯ ಅಭಿಪ್ರಾಯವು ಗಣೇಶ್ ಅಥವಾ ಸಮರ್ಥ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯಿಂದ, ಪರಾಜಿತ ಅಭ್ಯರ್ಥಿ ಬಿ ಜೆ ಅಜಯ್ ಕುಮಾರ್ ಮತ್ತು ವಾಲ್ಮೀಕಿ ಸಮುದಾಯದ ನಾಯಕ ಶ್ರೀನಿವಾಸ್ ದಾಸ ಕರಿಯಪ್ಪ ಟಿಕೆಟ್ಗಾಗಿ ಮುಂಚೂಣಿಯಲ್ಲಿದ್ದಾರೆ. ಆದಾಗ್ಯೂ, ಅಭ್ಯರ್ಥಿಗಳ ಅಂತಿಮ ನಿರ್ಧಾರವು ಎರಡೂ ಪಕ್ಷಗಳ ರಾಜ್ಯ ಮತ್ತು ರಾಷ್ಟ್ರೀಯ ನಾಯಕತ್ವದ ಮೇಲೆ ಅವಲಂಬಿತವಾಗಿರುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, […]
Continue Reading




