ಶಿವಮೊಗ್ಗ | ಕುವೆಂಪು ವಿವಿಯಿಂದ ಐಪಿಎಸ್ ಅಧಿಕಾರಿ ಡಾ!!. ಹರ್ಷ ಅವರಿಗೆ ಪಿಎಚ್.ಡಿ ಪದವಿ ಪ್ರದಾನ
ಅರಣ್ಯ ಅಂಚಿನ ಗ್ರಾಮಗಳಲ್ಲಿ ಎದುರಾಗುತ್ತಿರುವ ಮಾನವ ಮತ್ತು ಹುಲಿಗಳ ನಡುವಿನ ಸಂಘರ್ಷಕ್ಕೆ ಕಾರಣಗಳು ಹಾಗೂ ಅದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅವರು ಪ್ರಬಂಧದಲ್ಲಿ ಮಹತ್ವದ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಕುವೆಂಪು ವಿಶ್ವವಿದ್ಯಾನಿಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ಡಾ. ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಡಾ. ಹರ್ಷ ಪಿ.ಎಸ್ ಅವರು ಐದು ವರ್ಷಗಳ ಕಾಲ ಕ್ಷೇತ್ರ ಆಧಾರಿತ ಅಧ್ಯಯನವನ್ನು ನಡೆಸಿದ್ದಾರೆ. ಪ್ರಸ್ತುತ ಡಾ.ಪಿ.ಎಸ್.ಹರ್ಷರವರು ಬಳ್ಳಾರಿ ವಲಯದ ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Continue Reading