ಇಂದು ರಾಷ್ಟ್ರೀಯ ಶೋಕಾಚರಣೆ ದಿನವನ್ನು ಆಚರಿಸಿ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿದಿದ್ದು ಯಾಕೆ?

ಫೆಬ್ರವರಿ 2024 ರಲ್ಲಿ ಕತಾರ್‌ಗೆ ನನ್ನ ಕೊನೆಯ ಭೇಟಿಯ ಸಮಯದಲ್ಲಿ ಅವರನ್ನು ಭೇಟಿಯಾಗುವ ಸೌಭಾಗ್ಯ ನನಗೆ ಸಿಕ್ಕಿತು. ಅವರ ಆತ್ಮಕ್ಕೆ ಶಾಶ್ವತ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ. ಇದಲ್ಲದೆ, ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ಶೀಘ್ರದಲ್ಲೇ ಕತಾರ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ. ಬಹಳಷ್ಟು ಜನಕ್ಕೆ ಇದರ ಮಾಹಿತಿ ಕೊರತೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಅದರಲ್ಲಿ ಕೂಡ ಕೆಲವರು ಧ್ವಜ ಅರ್ಧಕ್ಕೆ ಹರಿಸಿದ ಅಧಿಕಾರಿಗಳು ವಿರುದ್ಧ […]

Continue Reading

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ; ಕೆ.ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

ಈ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಕೇಸ್ ರದ್ದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.ಶಿವಮೊಗ್ಗ ಮೂಲದ ವಕೀಲ ಬಿ.ವಿನೋದ್‌, ಈಶ್ವರಪ್ಪ, ಅವರ ಪತ್ರ ಕೆ.ಇ.ಕಾಂತೇಶ್‌ ಹಾಗೂ ಕಾಂತೇಶ್‌ ಪತ್ನಿ ಶಾಲಿನಿ ವಿರುದ್ಧ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿ ಲೋಕಾಯುಕ್ತ ಪೊಲೀಸರ ಮುಂದೆ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ‘ಬಿ’ ರಿಪೋರ್ಟ್‌ ಸಲ್ಲಿಸಿದ್ದರು. ಆನಂತರ ವಿನೋದ್‌ ಆದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು.ತದನಂತರ ನ್ಯಾಯಾಲಯವು […]

Continue Reading

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ; ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು. ಡಿ.ಕೆ. ಶಿವಕುಮಾರ್ ಅವರ ಪದಗ್ರಹಣಕ್ಕೆ ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಹಿನ್ನೆಲೆಯಲ್ಲಿ ಅತ್ಯಂತ ಅಪರೂಪದ ಹಾಗೂ ಶಕ್ತಿಶಾಲಿ ‘ಮಾಲವ್ಯ ಯೋಗ’ದ ಮುಹೂರ್ತವನ್ನು ನಿಗದಿಪಡಿಸಲಾಗಿತ್ತು. ತುಲಾ ಲಗ್ನದಲ್ಲಿ ಡಿಕೆಶಿ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಪ್ರಸ್ತುತ ಜಾತಕದಲ್ಲಿ ಗುರು ಗ್ರಹವು ಉಚ್ಚ ಸ್ಥಿತಿಯಲ್ಲಿದ್ದು, ದಶಮ ಭಾವ ಬಲವಾಗಿರುವುದರಿಂದ, ಮುಂಬರುವ ದಿನಗಳಲ್ಲಿ ಎಷ್ಟು ದೊಡ್ಡ ಸವಾಲುಗಳು ಎದುರಾದರೂ […]

Continue Reading

74 ಡಿವೈಎಸ್‌ಪಿ ಹಾಗೂ 293 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

ಇನ್ಸ್‌ಪೆಕ್ಟರ್‌ಗಳ ಜೊತೆಗೆ 74 ಡಿವೈಎಸ್‌ಪಿ (DySP) ದರ್ಜೆಯ ಅಧಿಕಾರಿಗಳಿಗೂ ಹೊಸ ಸ್ಥಳಗಳನ್ನು ನಿಯುಕ್ತಿಗೊಳಿಸಲಾಗಿದೆ. ಉಪವಿಭಾಗಗಳ ಎಸಿಪಿ (ACP) ಮತ್ತು ಡಿವೈಎಸ್‌ಪಿ ಹುದ್ದೆಗಳಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಬೆಂಗಳೂರು ನಗರದ ಸಂಚಾರ ವಿಭಾಗ, ವಿಶೇಷ ಜಾರಿ ಕೋಶ (EEC) ಮತ್ತು ಜಿಲ್ಲಾ ಪೊಲೀಸ್ ಉಪವಿಭಾಗಗಳಲ್ಲಿ ಹೊಸ ಅಧಿಕಾರಿಗಳು ಅಧಿಕಾರ ಸ್ವೀಕರಿಸಲಿದ್ದಾರೆ. ವರ್ಗಾವಣೆಗೊಂಡ ಎಲ್ಲಾ ಅಧಿಕಾರಿಗಳು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಹಳೆಯ ಹುದ್ದೆಗಳಿಂದ ಬಿಡುಗಡೆಗೊಂಡು, ನಿಯೋಜಿತ ಹೊಸ ಸ್ಥಳಗಳಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಅನೇಕ ಅಧಿಕಾರಿಗಳಿಗೆ […]

Continue Reading

ಎಸ್ಸೆಸೆಲ್ಸಿ ಪರೀಕ್ಷೆ ಫಲಿತಾಂಶ : ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬಾಲಕಿಯರದ್ದೇ ಮೇಲುಗೈ: ಈ ಬಾರಿಯೂ ಬಾಲಕಿಯರೇ ಮೇಲುಗೈ (ಶೇ.96) ಸಾಧಿಸಿದ್ಧಾರೆ. ದಕ್ಷಿಣ ಕನ್ನಡ ಟಾಪ್ (98.40), ಕಲಬುರಗಿ ಕೊನೆಯ (85.06) ಸ್ಥಾನ ಪಡೆದಿದೆ. ಏಳು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ಧಾರೆ ಎಂದು ಸಚಿವರು ಮಾಹಿತಿ ನೀಡಿದರು. ಜಿಲ್ಲಾವಾರು ಸಾಧನೆ: ದಕ್ಷಿಣ ಕನ್ನಡಕ್ಕೆ ಅಗ್ರಸ್ಥಾನ. ಜಿಲ್ಲಾವಾರು ಫಲಿತಾಂಶದ ಪಟ್ಟಿಯಲ್ಲಿ ಕರಾವಳಿ ಜಿಲ್ಲೆಗಳು ಅದ್ಭುತ ಸಾಧನೆ ಮಾಡಿದ್ದವು. ಶೇ. 91.12ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ಶೇ. 89.96ರೊಂದಿಗೆ […]

Continue Reading

ದ್ವಿತೀಯ ಪಿಯು ಫಲಿತಾಂಶ ಸರ್ಕಾರದ ಅಧಿಕೃತ ವೆಬ್‌ಸೈಟ್‌ ಎಡವಟ್ಟಿನಿಂದ ವಿದ್ಯಾರ್ಥಿಗಳಿಗೆ 600ಕ್ಕೆ 630, 680 ಅಂಕ

ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳ ಭವಿಷ್ಯವೇ ಹಾಳಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಫಲಿತಾಂಶ ಪ್ರಕಟಿಸುವಾಗ ಅಧಿಕಾರಿಗಳ ಗಮನ ಎಲ್ಲಿತ್ತು ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ. ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ದೋಷವನ್ನು ಒಪ್ಪಿಕೊಂಡು, ತಾಂತ್ರಿಕ ಸಮಸ್ಯೆಯಿಂದ ವ್ಯತ್ಯಯ ಉಂಟಾಗಿದೆ ಎಂದು ಸ್ಪಷ್ಟಪಡಿಸಿದ್ದು, ತಪ್ಪಾಗಿ ಮುದ್ರಿತವಾಗಿರುವ ಅಂಕಪಟ್ಟಿಗಳಿಗೆ ಪರಿಷ್ಕೃತ ಫಲಿತಾಂಶವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದೆ. ಏಪ್ರಿಲ್ 9ರಂದು ಪ್ರಕಟವಾದ 2026ರ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ […]

Continue Reading

UPSC ಪರೀಕ್ಷೆ ಫಲಿತಾಂಶ ಪ್ರಕಟ : ದೇಶಕ್ಕೇ ನಂ.1 ಅನುಜ್​ ಅಗ್ನಿಹೋತ್ರಿ ; ಕಿರಣ್​ಕಮಾತೆ ಕರ್ನಾಟಕಕ್ಕೆ ಫಸ್ಟ್​​

ಅನುಜ್ ಅಗ್ನಿಹೋತ್ರಿ ದೇಶಕ್ಕೇ ನಂ.1: ಆಲ್​ ಇಂಡಿಯಾ ರ‍್ಯಾಂಕಿಂಗ್​ ​​ನಲ್ಲಿ ರಾಜಸ್ಥಾನದ ಅನುಜ್ ಅಗ್ನಿಹೋತ್ರಿ ಅವರು ದೇಶಕ್ಕೇ ನಂ.1 ಸ್ಥಾನ ಪಡೆದಿದ್ದಾರೆ. ಎಂ.ರಾಜೇಶ್ವರಿ ಸುವೆ ಮತ್ತು ಆಕಾಶ್ ಧುಲ್ ಕ್ರಮವಾಗಿ ಎರಡು ಮತ್ತು ಮೂರನೇ ಶ್ರೇಯಾಂಕ ಪಡೆದಿದ್ದಾರೆ.ಇನ್ನೂ, 348 ಅಭ್ಯರ್ಥಿಗಳನ್ನು ತಾತ್ಕಾಲಿಕ ಪಟ್ಟಿಯಲ್ಲಿ ಇರಿಸಲಾಗಿದೆ. 1,087 ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರ ಸರ್ಕಾರ ಸೂಚಿಸಿತ್ತು. ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳು, ನೇಮಕಾತಿಗಳಿಗೆ ಸಂಬಂಧಿಸಿದ ಯಾವುದೇ ಮಾಹಿತಿ, ಸ್ಪಷ್ಟೀಕರಣ ಬೇಕಾದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಖುದ್ದಾಗಿ […]

Continue Reading

ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯನ್ನೂ ಇದೇ ಪರದೆಗಳ ಮೂಲಕ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುತ್ತದೆ. ಇದರ ಮೂಲಕ ಸಾರ್ವಜನಿಕರು ಬಸ್ ನಿಲ್ದಾಣಗಳಲ್ಲಿಯೇ ಈ ಮಹತ್ವದ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದೆ. ಸಾರ್ವಜನಿಕರು ಈ ನೇರ ಪ್ರಸಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ […]

Continue Reading

ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲವೆಂಬ ಸರ್ಕಾರಿ ಆದೇಶ, ರಾಜ್ಯ ಸರ್ಕಾರ ತುರ್ತಾಗಿ ಹೊರಡಿಸಲಿ : ಎ ಐ ಎಸ್ ಇ ಸಿ ಸೋಮಶೇಖರ್ ಗೌಡ ಆಗ್ರಹ

ಆದರೆ, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ 15, ಅಕ್ಟೋಬರ್ 2025 ರಂದು ಹೊರಡಿಸಿರುವ ಸರ್ಕಾರಿ ಆದೇಶದ ಬಗ್ಗೆ ಸಚಿವರು ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ್ದಾರೆ? ಈ ಸರ್ಕಾರಿ ಆದೇಶದಲ್ಲಿ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆ’ ಗಳೊಂದಿಗೆ ಸುತ್ತಲಿನ ಕಡಿಮೆ ದಾಖಲಾತಿಯ ಶಾಲೆಗಳನ್ನು ವಿಲೀನಗೊಳಿಸಬೇಕು ಎಂದು ಆದೇಶಿಸಲಾಗಿದೆ. ಇದರೊಟ್ಟಿಗೆ, ಒಂದು ನಿರ್ದಿಷ್ಟ ‘ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ’ ಯಾವ ಯಾವ ಸರ್ಕಾರಿ ಶಾಲೆಗಳು ವಿಲೀನಾಗಬೇಕು (ಅಂದರೆ ಮುಚ್ಚಬೇಕು) ಎಂಬುದರ ಬಗ್ಗೆ ಒಂದಾದ ಮೇಲೆ ಒಂದು ಆದೇಶಗಳನ್ನು […]

Continue Reading