ನವದೆಹಲಿ | POCSO ಪ್ರಕರಣ ; ಮಾಜಿ ಸಿಎಂ ಬಿ.ಎಸ್.ವೈ ವಿಚಾರಣೆಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್‌

ಕರ್ನಾಟಕ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ್ದನ್ನು ಯಡಿಯೂರಪ್ಪ ಪ್ರಶ್ನಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012 ಬಿಎಸ್ ಯಡಿಯೂರಪ್ಪ ವಿರುದ್ಧ ಕರ್ನಾಟಕ ರಾಜ್ಯ ಅಡಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನಂತರ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ […]

Continue Reading

ಸಿದ್ದರಾಮಯ್ಯ, ಡಿಕೆಶಿ ಜಂಟಿ ಸುದ್ದಿಗೋಷ್ಠಿ ; ಹೈಕಮಾಂಡ್ ಹೇಳಿದ್ದನ್ನೇ ಇಬ್ಬರು ಪಾಲಿಸುತ್ತೇವೆ

ಡಿಸೆಂಬರ್ 8 ರಿಂದ ನಡೆಯಲಿರುವ ವಿಧಾನಮಂಡಳದ ಅಧಿವೇಶನದಲ್ಲಿ ವಿರೋಧ ಪಕ್ಷದವರನ್ನು ಸಮರ್ಥವಾಗಿ ಎದುರಿಸುತ್ತೇವೆ. ಬಿಜೆಪಿಯವರ ಸುಳ್ಳು ಅಪಪ್ರಚಾರಗಳನ್ನು ಸಮರ್ಥವಾಗಿ ಎದುರಿಸುತ್ತೇವೆ. ನಾವಿಬ್ಬರೂ ಅಧಿವೇಶನದಲ್ಲಿ ಸಮರ್ಥವಾಗಿ ಎದುರಿಸುತ್ತೇವೆ. ಅದಕ್ಕೆ ಬೇಕಾದ ತಂತ್ರ ಹೆಣೆದಿದ್ದೇವೆ ಎಂದು ಹೇಳಿದರು. ನಾವು 140 ಜನರಿದ್ದೇವೆ. ಅವರು ಇಬ್ಬರೂ ಸೇರಿದರೂ 80 ಆಗಬಹುದು. ಅದಕ್ಕಿಂತ ಜಾಸ್ತಿಯಾಗಲು ಸಾಧ್ಯವಿಲ್ಲ. ಅವರು ಏನೇ ಮಾಡಿದರೂ, ಏನೇ ಸುಳ್ಳು ಆರೋಪ ಮಾಡಿದರೂ ಸಮರ್ಥವಾಗಿ ಎದುರಿಸುತ್ತೇವೆ. ಹೈಕಮಾಂಡ್ ಏನು ಹೇಳುತ್ತಾರೋ ಅದನ್ನು ಇಬ್ಬರೂ ಕೇಳುತ್ತೇವೆ. ಗೊಂದಲಗಳನ್ನು ತಿಲಿ ಮಾಡುವ ಕೆಲಸ […]

Continue Reading

ಉಡುಪಿ | ಕೃಷ್ಣ ಮಠ ಭೇಟಿಗೂ ಮೊದಲೇ,ನಡೆಯಲಿದೆ ಪ್ರಧಾನಿ ಮೋದಿ ರೋಡ್ ಶೋ

ನವೆಂಬರ್ 28ರಂದು ಬೆಳಿಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ತಕ್ಷಣವೇ 11.10ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದಾರೆ. ಪ್ರಧಾನಿ ಮೋದಿ ಅವರು ಕೃಷ್ಣ ಮಠದ ಸುವರ್ಣ ಮುಖಮಂಟಪ ಮತ್ತು ಕನಕನ ಕಿಂಡಿಯ ಸ್ವರ್ಣ ಕವಚವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆಯಲಿರುವ ಪ್ರಧಾನಿ ಮೋದಿ ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಭಗವದ್ಗೀತೆಯ 10 ಶ್ಲೋಕಗಳನ್ನು ಕೂಡ ಅವರು ಪಠಿಸಲಿದ್ದಾರೆ. ಈ ಧಾರ್ಮಿಕ […]

Continue Reading

ಪೋಕ್ಸೋ ಕೇಸ್ ನಲ್ಲಿ ಮುರುಘಾ ಶರಣರು ನಿರ್ದೋಷಿ ; ಚಿತ್ರದುರ್ಗದ ನ್ಯಾಯಾಲಯ ತೀರ್ಪು

ಇವರು ಸಾಮಾಜಿಕ ಮತ್ತು ವೈಚಾರಿಕ ಸುಧಾರಣೆಗಳಿಗೆ ಹೆಸರುವಾಸಿಯಾಗಿದ್ದಾರೆ, ಆದರೆ ಇವರನ್ನು ಕುರಿತು ವಿವಾದಗಳೂ ಇವೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯವು ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ ಎಂದು ತೀರ್ಪು ನೀಡಿದೆ. ನ್ಯಾಯಾಧೀಶ ಗಂಗಾಧರ್ ಚನ್ನಬಸಪ್ಪ ಹಡಪದ ಅವರು ಪ್ರಕರಣದ ವಾದ-ಪ್ರತಿವಾದವನ್ನು ಆಲಿಸಿದ ನಂತರ ಈ ತೀರ್ಪು ಪ್ರಕಟಿಸಿದರು. ಈ ಪ್ರಕರಣವು ಇತ್ತೀಚೆಗೆ ಹೆಚ್ಚು ಗಮನ ಸೆಳೆದಿತ್ತು. ಮುಂಚೆ ಶಿವಮೂರ್ತಿ ಮುರುಘಾ ಶರಣರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಶರಣರು ಅಸ್ಪೃಶ್ಯತೆ ಮತ್ತು ಇತರ ಸಾಮಾಜಿಕ […]

Continue Reading