ಸಚಿವರಾದ ಡಾ. ಯತೀಂದ್ರರವರಿಗೆ ನಗರಾಭಿವೃದ್ಧಿ ಖಾತೆ ಹೊರತುಪಡಿಸಿ ಬದಲಿ ಖಾತೆ ನೀಡಿ ; ಮುಖ್ಯಮಂತ್ರಿಗಳಿಗೆ,ನೈಜ ಹೋರಾಟಗಾರರ ವೇದಿಕೆ ಆಗ್ರಹ..!

ಉಲ್ಲೇಖ 2ರಲ್ಲಿ ಶಾಸಕರು/ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಡಾಕ್ಟರ್ ಯತೀಂದ್ರರವರ ತಂದೆಯವರಾದ ಸನ್ಮಾನ್ಯ ಸಿದ್ದರಾಮಯ್ಯ V/s. ಸ್ನೇಹಮಯಿಕೃಷ್ಣ PCR 42/24 ಪ್ರಕರಣ ದಾಖಲಾಗಿದೆ. ಉಲ್ಲೇಖ 3ರಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ರಿಟ್ ಅರ್ಜಿಯ ಸಂಖ್ಯೆ : 22319/24 ಪ್ರಕರಣ ದಾಖಲಾಗಿದೆ. ಉಲ್ಲೇಖ 4ರಲ್ಲಿ ಜಾರಿ ನಿರ್ದೆಶನಾಲಯ ಇ.ಡಿ. ಸಂಖ್ಯೆ : ECIR/BGZO/49/24 ಪ್ರಕರಣಗಳು ಕೂಡಾ ದಾಖಲಾಗಿರುತ್ತದೆ. ಈ ಮೇಲ್ಕಂಡ ಎಲ್ಲಾ ಪ್ರಕರಣಗಳಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬದಲಿ ನಿವೇಶನ ಹಂಚಿಕೆಯ ಪ್ರಕರಣದಲ್ಲಿ […]

Continue Reading

ಬಿಜೆಪಿಗೆ ಗುನ್ನ ಇಟ್ಟರ ಈಶ್ವರಪ್ಪ..?!

ಬಿ.ಸಿ ಪಾಟೀಲ್ ವಾರ್ನಿಂಗ್ : ಇನ್ನು ಈ ಸಂಬಂಧ ಈಶ್ವರಪ್ಪಗೆ ವಾರ್ನಿಂಗ್ ಕೊಟ್ಟ ಮಾಜಿ ಸಚಿವ ಬಿ.ಸಿ ಪಾಟೀಲ್ ನಮ್ಮ ಶ್ರಮದಿಂದ ನೀವು ಮಂತ್ರಿಯಾಗಿ ಲಂಚವನ್ನು ಪಡೆದು ಬೆಳಗಾವಿನಲ್ಲಿ ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ಕಾರಣರಾದಿರಿ ಈಗ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಿ. ನಮ್ಮಿಂದ ಬಿಜೆಪಿ ಹಾಳಾಗಲಿಲ್ಲ ನಿಮ್ಮಂತವರಿಂದ ಬಿಜೆಪಿ ಹಾಳಾಗಿದೆ. ನಾವು ಬರದೆ ಹೋಗಿದ್ದರೆ ನೀವು ಮಂತ್ರಿಯಾಗುತ್ತಿರಲಿಲ್ಲ ಮಂತ್ರಿಯಾಗಿ ಎಲ್ಲ ಸೌಲಭ್ಯಗಳನ್ನು ಪಡೆದು ಈಗ ನಮ್ಮಗಳ ಮೇಲೆ ಗೂಬೆ ಕೂರಿಸುತ್ತಿದ್ದೀರಿ ಯಾವಾಗ ಎಷ್ಟು ಹಣ ಕೊಟ್ರು ಅದನ್ನ […]

Continue Reading

ಹಿರಿಯೂರು ಉಪಚುನಾವಣೆ | ರಾಜಕೀಯ ಅಖಾಡ ಪ್ರವೇಶಕ್ಕೆ ಸುಧಾಕರ್ ಪುತ್ರ ಸಜ್ಜು

ವಾಣಿಜ್ಯ ಪದವೀಧರರಾದ ಸುಹಾಸ್, “ಪಕ್ಷದ ಕಾರ್ಯಕರ್ತರು ಮತ್ತು ಜನರು ನಾನು ಅವರೊಂದಿಗೆ ಸಂಪರ್ಕದಲ್ಲಿರಬೇಕೆಂದು ಬಯಸುತ್ತಾರೆ. ಜನರನ್ನು ಭೇಟಿ ಮಾಡಲು ಮತ್ತು ಅವರ ಕುಂದುಕೊರತೆಗಳನ್ನು ಅರ್ಥಮಾಡಿಕೊಳ್ಳಲು ನಾನು ಕ್ಷೇತ್ರದ ವಿವಿಧ ಭಾಗಗಳಿಗೆ ಭೇಟಿನೀಡುತ್ತಿದ್ದೇನೆ. ಜನರ ಆಶಯಗಳನ್ನು ನಾನು ಪಾಲಿಸುತ್ತೇನೆ” ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ಕುಟುಂಬಕ್ಕೆ ಟಿಕೆಟ್ ಕುರಿತು ಯಾವುದೇ ಭರವಸೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Continue Reading

ಹೊಸನಗರ | ಸಚಿವ ಸ್ಥಾನಕ್ಕಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಪರ ಧರ್ಮಸ್ಥಳದಲ್ಲಿ ಮುಡಿ ಕೊಟ್ಟು ಪ್ರಾರ್ಥಿಸಿದ ಕಾಂಗ್ರೆಸ್ ಮುಖಂಡರು

ಅಲ್ಲದೆ ಕರಾವಳಿಯ ಆರಾಧ್ಯ ದೈವ ಸ್ವಾಮಿ ಕೊರಗಜ್ಜನಿಗೂ ವಿಶೇಷ ಪೂಜೆ ಸಲ್ಲಿಸಿ, ಬೇಳೂರು ಗೋಪಾಲಕೃಷ್ಣ ಅವರು ಈ ಬಾರಿ ಸಚಿವರಾಗುವಂತೆ ಪ್ರಾರ್ಥನೆ ಮಾಡಿದರು. ಸಾಗರ-ಹೊಸನಗರ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸೇವೆ ಅಪಾರವಾಗಿದೆ. ಹಿಂದುಳಿದ ಸಮುದಾಯಗಳ ಧ್ವನಿಯಾಗಿ ಅವರು ಕೆಲಸ ಮಾಡುತ್ತಿದ್ದಾರೆ. ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸಚಿವ ಸ್ಥಾನ ದೊರೆಯಬೇಕು ಎಂಬುದು ಕ್ಷೇತ್ರದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ದೇವರ ಆಶೀರ್ವಾದಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದ್ದೇವೆ. ಪಕ್ಷದ […]

Continue Reading

ಶಿವಮೊಗ್ಗ | ಗೃಹಲಕ್ಷ್ಮೀ ಯೋಜನೆ ; 9,247 ಫಲಾನುಭವಿಗಳು ನಿಧನ, 5,618 ಅನರ್ಹರು : ಸಿ.ಎಸ್.ಚಂದ್ರಭೂಪಾಲ್

ಜಿಲ್ಲೆಯ ವರದಿಯ ಪ್ರಕಾರ ಇಂತಹ 5,618 ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಹೀಗಾಗಿ ಇಂತಹ ಅನರ್ಹರನ್ನು ಫಲಾನುಭವಿಗಳ ಪಟ್ಟಿಯಿಂದ ತಕ್ಷಣವೇ ತೆಗೆದುಹಾಕಲು ಕಟ್ಟುನಿಟ್ಟಿನ ಕ್ರಮ ಅನಿವಾರ್ಯವಾಗಿದೆ ಎಂದು ಸಭೆ ತಿಳಿಸಿದೆ. ಉಚಿತ ವಿದ್ಯುತ್ ದುರ್ಬಳಕೆ – ವಾಣಿಜ್ಯ ಬಳಕೆಗೆ ಬ್ರೇಕ್: ‘ಗೃಹಜ್ಯೋತಿ’ ಯೋಜನೆಯಡಿ ಗೃಹಬಳಕೆಗಾಗಿ ನೀಡಲಾಗುವ 200 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು, ಕೆಲವರು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವುದು ಕಂಡುಬಂದಿದೆ. ಅಲ್ಲದೆ, ಒಬ್ಬರ ಹೆಸರಲ್ಲೇ ಒಂದಕ್ಕಿಂತ ಹೆಚ್ಚು ಮೀಟರ್‌ಗಳಿರುವುದು ಪತ್ತೆಯಾಗಿದೆ. […]

Continue Reading

ವಿಧಾನ ಪರಿಷತ್ ಸದಸ್ಯ,ಕಾಂಗ್ರೆಸ್ ಮುಖಂಡ ನಸೀರ್‌ ಅಹ್ಮದ್‌ ದಿವಾಳಿ

ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯಿಂದ ತೀರ್ಪುಸಾಲ ಮರು ಪಾವತಿಯಾಗದ ಕಾರಣ ಬ್ಯಾಂಕುಗಳು ದಿವಾಳಿತನ ಸಂಹಿತೆ – 2016ರಡಿ ಎನ್‌ಎಸ್‌ಎಲ್‌ಟಿ ಬೆಂಗಳೂರು ವಿಭಾಗದ ಮೊರೆ ಹೋಗಿದ್ದವು. ಆ ಅರ್ಜಿಗಳ ವಿಚಾರಣೆ ನಡೆಸಿದ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಬೆಂಗಳೂರು ಪೀಠ ಈ ತೀರ್ಪು ನೀಡಿದೆ. 2023 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಇವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನವನ್ನು ನೀಡಲಾಗಿತ್ತು. ದಾವಣಗೆರೆ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದಾರೆ ಎಂಬ ಆರೋಪ […]

Continue Reading

ಶಿವಮೊಗ್ಗ | ಸಂಸದರಿಂದ ಸುಳ್ಳು ಮಾಹಿತಿ, ಶಾಸಕರಿಂದ ಮತ್ತೆ ಗುದ್ದಲಿಪೂಜೆ : ಎಚ್. ಸಿ. ಯೋಗೇಶ್ ವಾಗ್ದಾಳಿ

ಸೇತುವೆ ಮಂಜೂರಾತಿ ಜಟಾಪಟಿ: ವಿದ್ಯಾನಗರದ ಶಿಥಿಲಗೊಂಡಿರುವ ತುಂಗಾ ಸೇತುವೆ ಕುರಿತು ೨೦೧೮ ರಿಂದಲೇ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಕಾಂಗ್ರೆಸ್ ವತಿಯಿಂದ ಮಾಡಲಾಗಿದೆ. ಅಂದಿನ ಹಾಗೂ ಹಾಲಿ ಲೋ ಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದು, ಅದರ ಪರಿಣಾಮವಾಗಿ ಸೇತುವೆ ಕಾಮಗಾರಿಗೆ ೪೦ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಸೇತುವೆ ಮಂಜೂರಾತಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ ಶ್ರಮವೂ ಇದೆ. ಆದರೆ ಅನುದಾನ ಬಿಡುಗಡೆಯಾದ ನಂತರವೂ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಶಾಸಕರು […]

Continue Reading

ಶಿವಮೊಗ್ಗ | ದೇಶದಲ್ಲೆಡೆ ಎಸ್‌ಐಆರ್ ಜಾಗೃತಿ ಮೂಡಿಸಲು ಕಾರ್ಯಾಗಾರ : ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ

ಆದರೆ ಎಸ್‌ಐಆರ್ ಎನ್ನುವುದು ಮತದಾರರ ಪಟ್ಟಿ ಪರಿಷ್ಕರಣೆ ಮಾತ್ರವಲ್ಲ. ಇದು ಇಡೀ ಮತದಾರರ ಪಟ್ಟಿಯ ನವೀಕರಣ. ಹೊಸಪಟ್ಟಿಯ ರಚನೆಯಾಗಿದೆ. ಇದು ಈವರೆಗೆ ದೇಶದಲ್ಲಿ ನಡೆದಿಲ್ಲ. ಇದೇ ಮೊದಲ ಬಾರಿ ಇಂತಹ ಪುನರ್ನವೀಕರಣ ನಡೆಯುತ್ತಿದೆ ಎಂದರು.

Continue Reading

ಶಿವಮೊಗ್ಗ | ಸಚಿವ ಸ್ಥಾನದ ಕುರಿತು ಮಾಜಿ ಸಚಿವರು ಹೇಳಿದ್ದಿಷ್ಟು..!

ಇದೇ ವೇಳೆ ತಾವು ಶಿಕ್ಷಣ ಸಚಿವರಾಗಿ ಮುಂದುವರೆಯುವ ವಿಚಾರವನ್ನೂ ಸಹ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿರುವುದಾಗಿ ಅವರು ಸ್ಪಷ್ಟಪಡಿಸಿದರು.ಪ್ರಸ್ತುತ ಮುಖ್ಯಮಂತ್ರಿಗಳ ಬಳಿಯೇ ಶಿಕ್ಷಣ ಖಾತೆ ಇದ್ದು, ಅವರು ಅಧಿಕಾರ ವಹಿಸಿಕೊಂಡ ತಕ್ಷಣವೇ ವಿದ್ಯಾರ್ಥಿಗಳ ಪರವಾಗಿ ಮಹತ್ವದ ಆದೇಶ ಹೊರಡಿಸಿದ್ದಾರೆ. ನೆರೆ ರಾಜ್ಯ ತೆಲಂಗಾಣದಲ್ಲೂ ಸಹ ಸಿಎಂ ರೇವಂತ್ ರೆಡ್ಡಿ ಅವರ ಬಳಿಯೇ ಶಿಕ್ಷಣ ಖಾತೆ ಇರುವುದರಿಂದ ಅಲ್ಲಿ ಇಲಾಖೆ ಅತ್ಯಂತ ಸುಸೂತ್ರವಾಗಿ ನಡೆಯುತ್ತಿದೆ. ಶಾಲೆ ಆರಂಭದ ಸಮಯದಲ್ಲಿ ಯಾರೂ ಪ್ರಮಾಣ ವಚನ ಸ್ವೀಕರಿಸದ ಕಾರಣ ಸಣ್ಣ ಬದಲಾವಣೆಯಾಗಿ ಕಾರ್ಯಕ್ರಮಗಳು […]

Continue Reading

ಸೂರಜ್ ಹೆಗ್ಡೆ ನಿಧನಕ್ಕೆ ಮಾಜಿ ಸಚಿವ ಮಧು ಬಂಗಾರಪ್ಪ ತೀವ್ರ ಸಂತಾಪ

ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದ ನೋವಿನಲ್ಲಿ ನಾನು ಸಹ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

Continue Reading