ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ ; ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

ವಿಶೇಷವಾಗಿ ರಾಜ್ಯದ ಹೈನುಗಾರರ ಹಿತಾಸಕ್ತಿಗಳ ಬಲವರ್ಧನೆ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ನಿರಂತರವಾಗಿ ಸಂಸತ್ತಿನಲ್ಲಿ ಧ್ವನಿಯೆತ್ತುತ್ತಿದ್ದು, ಶಿವಮೊಗ್ಗ ಹಾಲು ಒಕ್ಕೂಟದ (ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ) ಹೈನುಗಾರಿಕಾ ಜಾಲಕ್ಕೆ ಕೇಂದ್ರದಿಂದ ಭಾರಿ ಆರ್ಥಿಕ ನೆರವು ದೊರಕಿದೆ. • ಶಿಮುಲ್ ನ 37,750 ರೈತರಿಗೆ ಲಾಭ: ಶಿಮುಲ್ ಒಕ್ಕೂಟದ ವ್ಯಾಪ್ತಿಯಲ್ಲಿ, ಶಿವಮೊಗ್ಗ ಜಿಲ್ಲೆಯ 11,760 ರೈತ ಕುಟುಂಬಗಳು ಸೇರಿದಂತೆ, ಒಟ್ಟು 37,750 ರೈತರು ಈ ಯೋಜನೆಯಿಂದ ನೇರ ಪ್ರಯೋಜನ ಪಡೆದಿದ್ದಾರೆ. • ಸಂಘಗಳ ಸಬಲೀಕರಣ: ಶಿವಮೊಗ್ಗದ 174 ಸಂಘಗಳು […]

Continue Reading

ವಿದ್ಯಾರ್ಥಿಗಳಿಗೆ ಮಹತ್ವದ ಸಂದೇಶ ನೀಡುವ ಮೂಲಕ ರಾಜೀನಾಮೆ ನೀಡಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ಈ ಸಮಯದಲ್ಲಿ, 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಪರೀಕ್ಷೆಯನ್ನು ಸುಗಮವಾಗಿ ನಡೆಸುವುದು ನಮ್ಮ ಮುಖ್ಯ ಆದ್ಯತೆಯಾಗಿತ್ತು. ಇದಕ್ಕಾಗಿ ‘ಸಂಪೂರ್ಣ ಸರ್ಕಾರಿ ವಿಧಾನ’ (whole of government approach) ಅಡಿಯಲ್ಲಿ ಕೆಲಸ ಮಾಡಲಾಯಿತು. ಇದರಲ್ಲಿ ಭಾರತ ಸರ್ಕಾರದೊಂದಿಗೆ ರಾಜ್ಯ ಸರ್ಕಾರಗಳು, ವಿಶೇಷವಾಗಿ ಜಿಲ್ಲಾಡಳಿತಗಳು ಪ್ರಮುಖ ಪಾತ್ರ ವಹಿಸಿದವು. ಜೊತೆಗೆ, ವಿದ್ಯಾರ್ಥಿಗಳು, ಪೋಷಕರು ಮತ್ತು ಹೆತ್ತವರ ಸಹಕಾರದಿಂದ ಜೂನ್ 21, 2026 ರಂದು ಈ ಪರೀಕ್ಷೆಯು ಪೂರ್ಣಗೊಂಡಿತು. ಮೊದಲ ದಿನದಿಂದಲೇ ನಾನು ಇದರ ಹೊಣೆಗಾರಿಕೆಯನ್ನು ವಹಿಸಿಕೊಂಡೆ ಮತ್ತು ಈ ಪರಿಸ್ಥಿತಿಯಿಂದ […]

Continue Reading

ಬೆಂಗಳೂರು-ಶಿವಮೊಗ್ಗ ವಿಮಾನ ಸೇವೆ ಪುನಾರಂಭಿಸಿ ಎಂದು ಕೇಂದ್ರಕ್ಕೆ ರಾಜ್ಯ ಪತ್ರ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಒದಗಿಸುವ ಕಾಮಗಾರಿ ಭರದಿಂದ ಸಾಗಿದೆ. ಇದಲ್ಲದೆ, ಉಳಿದ ಎಲ್ಲಾ ಸೌಲಭ್ಯಗಳೂ ಇಲ್ಲಿ ಈಗಾಗಲೇ ಇವೆ. ಆದ್ದರಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಪಾಟೀಲ ಕೋರಿದ್ದಾರೆ.

Continue Reading

ಕೇಂದ್ರ ಸರ್ಕಾರದಿಂದ ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ ನಿಯೋಜನೆ ಅವಧಿ ಒಂದು ವರ್ಷಕ್ಕೆ ವಿಸ್ತರಣೆ

ಲೋಕಾಯುಕ್ತದಲ್ಲಿದ್ದ ಭ್ರಷ್ಟಾಚಾರ ಜಾಲ ಹಾಗೂ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಗಳನ್ನು ಬಯಲಿಗೆಳೆದ ಕೀರ್ತಿ ಇವರದು. 2016 ರಿಂದ ಕೇಂದ್ರ ಸೇವೆಗೆ ನಿಯೋಜನೆಗೊಂಡ ಇವರು, ರಾಷ್ಟ್ರೀಯ ತನಿಖಾ ದಳ (NIA) ಮತ್ತು ಜಾರಿ ನಿರ್ದೇಶನಾಲಯ (ED) ದಂತಹ ದೇಶದ ಪ್ರತಿಷ್ಠಿತ ತನಿಖಾ ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಇದೀಗ ಸಿಐಎಸ್‌ಎಫ್‌ನಲ್ಲಿ ಅವರ ಸೇವಾವಧಿಯನ್ನು ವಿಸ್ತರಿಸಲಾಗಿದ್ದು, ಒಟ್ಟಾರೆಯಾಗಿ ಕಳೆದ 13 ವರ್ಷಗಳಿಂದ ಅವರು ಯಶಸ್ವಿಯಾಗಿ ಕೇಂದ್ರ ನಿಯೋಜನೆಯಲ್ಲಿಯೇ ಮುಂದುವರಿದಂತಾಗಿದೆ.

Continue Reading

ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಮೋದಿ ಸರ್ಕಾರ ಬದ್ಧ : ಸಂಸದ ರಾಘವೇಂದ್ರ ದೃಢ ಭರವಸೆ

ಈ ಕುರಿತು ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭೇಟಿ ಮಾಡಿ ಮನವಿ ಸಲ್ಲಿಸಿರುವ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ದೇಶದ ಒಟ್ಟು ಅಡಿಕೆ ಉತ್ಪಾದನೆಯ ಸರಿಸುಮಾರು ಶೇ.65ರಷ್ಟನ್ನು ಒದಗಿಸುವ ಮಲೆನಾಡಿನ ಅಡಿಕೆ ಬೆಳೆಗಾರರು ತೀವ್ರ ಆತಂಕ ಮತ್ತು ಸಂಕಷ್ಟದಲ್ಲಿದ್ದು, ಅವರ ಪರವಾಗಿ ಸಂಸದ ರಾಘವೇಂದ್ರ ಮತ್ತೊಮ್ಮೆ ಧ್ವನಿ ಎತ್ತಿದ್ದಾರೆ. ಸುಮಾರು 1 ಲಕ್ಷ ಕೋಟಿ ರೂ. ಆರ್ಥಿಕತೆ […]

Continue Reading

ಕೇಂದ್ರ ಸರ್ಕಾರದಿಂದ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ

ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿಗಳು) ಹೆಚ್ಚುತ್ತಿರುವ ನಷ್ಟವನ್ನು ಸರಿದೂಗಿಸಲು ಈ ಕಡಿತವನ್ನು ಹೀರಿಕೊಳ್ಳುವ ನಿರೀಕ್ಷೆಯಿದೆ. ಜಾಗತಿಕ ಕಚ್ಚಾ ತೈಲ ಬೆಲೆಗಳು ಹೆಚ್ಚಿರುವುದರಿಂದ ಒಎಂಸಿಗಳು ಪ್ರಸ್ತುತ ಇಂಧನ ಮಾರಾಟದ ಮೇಲೆ ಲೀಟರ್‌ಗೆ ಸುಮಾರು 48.8 ರೂ.ಗಳಷ್ಟು ನಷ್ಟವನ್ನು ಅನುಭವಿಸುತ್ತಿವೆ ಎಂದು ಅಂದಾಜಿಸಲಾಗಿದೆ. ಜಾಗತಿಕ ತೈಲ ಬೆಲೆಗಳು ಕುಸಿದವು, ಬ್ರೆಂಟ್ ಕಚ್ಚಾ ತೈಲದ ಫ್ಯೂಚರ್‌ಗಳು ಪ್ರತಿ ಬ್ಯಾರೆಲ್‌ಗೆ ಶೇ. 2.29 ರಷ್ಟು ಕುಸಿದು $105.53 ಕ್ಕೆ ತಲುಪಿದೆ. ಯುಎಸ್ ಡಬ್ಲ್ಯೂಟಿಐ ಫ್ಯೂಚರ್‌ಗಳು ಸಹ ಬೆಳಿಗ್ಗೆ 8:50 ರ ಹೊತ್ತಿಗೆ ಶೇ. […]

Continue Reading

LPG ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ

ಪಿಎಂಯುವೈ (ಉಜ್ವಲ್ ಗ್ಯಾಸ್) 45 ದಿನ, ನಗರ ಪ್ರದೇಶಕ್ಕೆ 25 ದಿನ ಹಾಗೂ ಗ್ರಾಮೀಣ ಭಾಗಕ್ಕೆ 45 ದಿನ ಇದರಲ್ಲಿ ಯಾವುದೇ ಬದಲಾವಣೆಯಿಲ್ಲ. ದಯವಿಟ್ಟು ಅಧಿಕೃತವಾಗಿ ಕಂಪನಿಗಳಿಂದ ಬರುವ ಮಾಹಿತಿಗಳ ಮೇಲೆ ಗಮನಹರಿಸಿ. ಗಾಬರಿಯಲ್ಲಿ ಗ್ಯಾಸ್ ಬುಕ್ ಮಾಡಬೇಡಿ ಎಂದು ಬರೆದುಕೊಂಡಿದೆ.

Continue Reading

ಲೋಕಸಭಾ ಕ್ಷೇತ್ರ ಪುನರ್‌ ವಿಂಗಡಣೆ,ಮಹಿಳಾ ಮೀಸಲು ನಿಗದಿಪಡಿಸಲು ಮುಂದಾದ ಕೇಂದ್ರ ಸರ್ಕಾರ

ನಾರಿ ಶಕ್ತಿ ಅಭಿನಂದನ್‌ ಅಧಿನಿಯಮ ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲು ಕಲ್ಪಿಸುವ ಸಂಬಂಧ 2023ರ ಮಹಿಳಾ ಮೀಸಲು ವಿಧೇಯಕಕ್ಕೆ ಮಹತ್ವದ ತಿದ್ದುಪಡಿ (ನಾರಿ ಶಕ್ತಿ ಅಭಿನಂದನ್‌ ಅಧಿನಿಯಮ-2023) ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂದಿನ 2029ರ ಲೋಕಸಭಾ ಚುನಾವಣೆ ವೇಳೆ ಮಹಿಳೆಯರಿಗೆ ಮೀಸಲು ಸ್ಥಾನ ನಿಗದಿಪಡಿಸುವ ಸಂಬಂಧ ಪ್ರಸ್ತುತ ನಡೆಯುತ್ತಿರುವ ಬಜೆಟ್‌ ಅಧಿವೇಶನದಲ್ಲಿತಿದ್ದುಪಡಿ ವಿಧೇಯಕ ಮಂಡಿಸಲು ನಿರ್ಧರಿಸಿದೆ. ಈ ಸಂಬಂಧ ರಾಜಕೀಯ ಪಕ್ಷಗಳ ಜತೆ ಸರಕಾರ ಸಮಾಲೋಚನೆ ನಡೆಸಿದೆ. ಪ್ರಸ್ತಾವಿತ ತಿದ್ದುಪಡಿ ವಿಧೇಯಕ ಕುರಿತು […]

Continue Reading

ಅಡುಗೆ ಎಣ್ಣೆ ದರ ಇಳಿಸಲು ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಈಗ ಈ ಸುಂಕವನ್ನು ಶೇ.10ಕ್ಕೆ ಇಳಿಸಲಾಗಿದೆ. ಇದರ ಪರಿಣಾಮವಾಗಿ ಈ ಮೂರು ಎಣ್ಣೆಗಳ ಮೇಲಿನ ಒಟ್ಟು ತೆರಿಗೆ ಹೊರೆ 27.5% ರಿಂದ 16.5% ಕ್ಕೆ ಇಳಿಕೆ ಆಗಲಿದೆ. ಸೆಪ್ಟೆಂಬರ್ 2024ರಲ್ಲಿ ಅಡುಗೆ ಎಣ್ಣೆಗಳ ಮೇಲಿನ ತೆರಿಗೆ ಹೆಚ್ಚಳದಿಂದ ಬೆಲೆಗಳು ಗಗನಕ್ಕೇರಿದ್ದವು. ಈಗಿನ ಸುಂಕ ಕಡಿತದಿಂದ ಮಾರುಕಟ್ಟೆಯಲ್ಲಿ ಸ್ಥಿರತೆ ಮೂಡಿಸಿ, ಹಣದುಬ್ಬರವನ್ನು ನಿಯಂತ್ರಿಸುವುದು ಸರ್ಕಾರದ ಉದ್ದೇಶವಾಗಿದೆ. ಕೆಲವು ಕಂಪನಿಗಳು ಈಗಾಗಲೇ ಪ್ಯಾಕೆಟ್ ಸೂರ್ಯಕಾಂತಿ ಮತ್ತು ಸೋಯಾಬೀನ್ ಎಣ್ಣೆಗಳ ಬೆಲೆ ಇಳಿಕೆ ಘೋಷಿಸಿವೆ. ಮುಂದಿನ ದಿನಗಳಲ್ಲಿ ಕಡಿಮೆ ಸುಂಕದ ಹೊಸ […]

Continue Reading

ಶಿವಮೊಗ್ಗ | ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ ; ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು

ಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ–169ಎ ರಸ್ತೆಯನ್ನು (ಕಿ.ಮೀ. 30.75 ರಿಂದ 51.60ರವರೆಗೆ) ಎರಡು ಲೇನ್‌ ರಸ್ತೆ, ಎರಡೂ ಬದಿ ಪಾದಚಾರಿ ಮಾರ್ಗ ಸಹಿತ ವಿಸ್ತರಿಸುವ ಉದ್ದೇಶದಿಂದ ಕಾರ್ಯಸಾಧ್ಯತಾ ಅಧ್ಯಯನ, ವಿವರವಾದ ಯೋಜನಾ ವರದಿ (ಡಿಪಿಆರ್), ಸಮೀಕ್ಷೆ ಹಾಗೂ ಭೂ ಯೋಜನೆ ತಯಾರಿಕೆಗಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೆಂಡರ್ ಆಹ್ವಾನಿಸಿರುವುದನ್ನು ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಸ್ವಾಗತಿಸಿದ್ದಾರೆ. ಗಮನಾರ್ಹವೆಂದರೆ, ಡಿಪಿಆರ್ ವ್ಯಾಪ್ತಿಯು ನಿರ್ದಿಷ್ಟವಾಗಿ ಸುರಂಗ ವಿನ್ಯಾಸ ತಜ್ಞರು ಮತ್ತು ಹಿರಿಯ ಭೂ-ಭೌತಶಾಸ್ತ್ರಜ್ಞರ […]

Continue Reading