ಚಿಕ್ಕಮಗಳೂರು | ಭದ್ರಾ ಹಿನ್ನೀರಿನಲ್ಲಿ ಈಜಲು ಇಳಿದ ಶಿವಮೊಗ್ಗದ ಯುವಕ ನೀರುಪಾಲು

ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Continue Reading

ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆಯ ಜೊತೆಗೆ ಮಲೆನಾಡಿನ ಜನರ ಜೀವನೋಪಾಯ, ಮೂಲಭೂತ ಹಕ್ಕುಗಳು ಹಾಗೂ ಹಿತಾಸಕ್ತಿಗಳನ್ನು ಕಾಯುವುದು ನಮ್ಮ ಮೊದಲ ಆದ್ಯತೆ : ಸಂಸದ ಬಿ. ವೈ. ರಾಘವೇಂದ್ರ

ಈ ಸಭೆಯಲ್ಲಿ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಹಿರಿಯ ನಾಯಕರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ಶ್ರೀ ಆರಗ ಜ್ಞಾನೇಂದ್ರ, ಶ್ರೀ ಸಿ.ಟಿ., ಶ್ರೀ ಆರ್.ಕೆ. ಸಿದ್ಧರಾಮಣ್ಣ, ಶ್ರೀ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading

ಚಿಕ್ಕಮಗಳೂರು | “ಬೀರೂರಿನ ಪ್ರೀತಿ ಕ್ಯಾಂಟೀನ್ನಲ್ಲಿ ದೋಸೆ ಸವಿದ ಸಚಿವ ಮಧು ಬಂಗಾರಪ್ಪ”

ಬಳಿಕ ಕ್ಯಾಂಟೀನ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಮತ್ತು ಮಾಲೀಕರೊಂದಿಗೆ ಸಚಿವರು ಆತ್ಮೀಯವಾಗಿ ಮಾತುಕತೆ ನಡೆಸಿ, ಅವರ ಯೋಗಕ್ಷೇಮವನ್ನು ವಿಚಾರಿಸಿದರು. ಹಲವು ದಶಕಗಳಿಂದ ಉತ್ತಮ ಗುಣಮಟ್ಟದ ತಿಂಡಿ-ತಿನಿಸುಗಳನ್ನು ಗ್ರಾಹಕರಿಗೆ ನೀಡುತ್ತಾ ಬಂದಿರುವ ಕ್ಯಾಂಟೀನ್‌ನ ಸೇವೆಯನ್ನು ಈ ವೇಳೆ ಪ್ರಶಂಸಿಸಿದರು. ಈ ಭೇಟಿಯು ಸ್ಥಳೀಯ ಸಾರ್ವಜನಿಕರು ಮತ್ತು ಅಭಿಮಾನಿಗಳಲ್ಲಿ ಹರ್ಷ ತಂದಿದ್ದು, ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಎಸ್. ಬಂಗಾರಪ್ಪ ಅವರೊಂದಿಗಿನ ಹಳೆಯ ಒಡನಾಟವನ್ನು ಮತ್ತೊಮ್ಮೆ ಸ್ಮರಿಸಿಕೊಳ್ಳುವಂತೆ ಮಾಡಿದೆ ಎಂದು ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದರು.

Continue Reading

ಚಿಕ್ಕಮಗಳೂರು | ಕವಿತಾ ಎಂ.ಬಿ. ದೋರತ್ ಅವರ ಸಂಘಟನಾ ಸಾಮರ್ಥ್ಯ, ಪಕ್ಷದ ಮೇಲಿನ ಬದ್ಧತೆ, ಜನಪರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೆಚ್ಚುಗೆ

ಕವಿತಾ ಎಂ.ಬಿ. ದೋರತ್ ಅವರ ಸಂಘಟನಾ ಸಾಮರ್ಥ್ಯ, ಪಕ್ಷದ ಮೇಲಿನ ಬದ್ಧತೆ ಹಾಗೂ ಜನಪರ ಕಾರ್ಯವೈಖರಿಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರ ನೇತೃತ್ವದಲ್ಲಿ ಜಿಲ್ಲೆಯ ಸಂಘಟನಾ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಕಾರ್ಯಕ್ರಮಗಳಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಾನ್, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂದೀಪ್, ಕೆಪಿಸಿಸಿ ಸಹ ಸಂಯೋಜಕ ಆರ್. ಮೋಹನ್, ಕೆಪಿಸಿಸಿ ವೀಕ್ಷಕರಾದ ಗಫೂರ್ (ಉಡುಪಿ) ಸೇರಿದಂತೆ ಜಿಲ್ಲಾ […]

Continue Reading

ನನ್ನ ಮೇಲೆ ಕೇಸ್‌ ಕೊಟ್ಟವನಿಗೂ,ಜೀಪಿಗೆ ಬೆಂಕಿ ಹಚ್ಚಿದ ಮುಲ್ಲಾನಿಗೂ ಏನು ಸಂಬಂಧ? ಸಿ.ಟಿ ರವಿ ಆಕ್ರೋಶ..!

ಪಹಲ್ಗಾಂ ನಲ್ಲಿ ಕಲ್ಮಾ ಹೇಳದಿದ್ದಕ್ಕೆ ಸಾಯಿಸಿದ್ರಲ್ಲ ಅದಕ್ಕೆ ಏನು ಹೇಳ್ತೀರಾ? ನನ್ನ ಮೇಲೆ ಕೇಸ್‌ ಕೊಟ್ಟಿರೋನಿಗೂ, ಅವನಿಗೂ ಏನು ಸಂಬಂಧ? ಮೊದಲು ಪೊಲೀಸರು ಈ ಬಗ್ಗೆ ತನಿಖೆ ಮಾಡಲಿ. ಮುಸ್ಲಿಮರಲ್ಲೂ ಒಳ್ಳೆಯವರಿದ್ದಾರೆ, ಆದರೆ ಜಿಹಾದಿಗಳ ಒಳ್ಳೆಯವರು ಅಂತಾ ನಾನು ಹೇಳೋಲ್ಲ ಎಂದರು.

Continue Reading

ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಮಗಳೂರಿನ ರೈತ

ಸುದ್ದಿಗಾರರೊಂದಿಗೆ ಮಾತನಾಡಿದ ವಿಶು ಕುಮಾರ್, ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಪರಿಹಾರವನ್ನು ಇನ್ನೂ ನೀಡಿಲ್ಲ ಎಂದು ಹೇಳಿದರು. ‘ನಾಲ್ಕು ವಾರಗಳಲ್ಲಿ ವಿಷಯವನ್ನು ಅಂತಿಮಗೊಳಿಸಿ ಪರಿಹಾರವನ್ನು ಪಾವತಿಸುವಂತೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗೆ ನ್ಯಾಯಾಲಯ ನಿರ್ದೇಶಿಸಿತ್ತು. ಆದರೆ, ಮೂರು ತಿಂಗಳು ಕಳೆದರೂ ನಮಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಜಮೀನಿನಲ್ಲಿ ನಾನು ಶ್ರೀಗಂಧದ ಮರಗಳನ್ನು ಬೆಳೆಸಿದ್ದೇನೆ. ಅಗತ್ಯವಿರುವ ನೋಟಿಸ್ ನೀಡದೆಯೇ ಮರಗಳನ್ನು ಕಡಿಯಲು ಅಧಿಕಾರಿಗಳು ಯೋಜಿಸಿದ್ದಾರೆ. ಈ ಪ್ರಕ್ರಿಯೆಯ ಬಗ್ಗೆ ಯಾವುದೇ ಮಾಹಿತಿಯನ್ನು ತನಗೆ ಒದಗಿಸಿಲ್ಲ’ ಎಂದು ವಿಶು ಕುಮಾರ್ ಆರೋಪಿಸಿದ್ದಾರೆ.

Continue Reading

ಶೃಂಗೇರಿ ಶಾಸಕ ಜೀವರಾಜ್‌ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್‌ ತಡೆ

ಈ ದೂರಿನ ಅನ್ವಯ ಆರೋಪಿಗಳ ವಿರುದ್ಧ; ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 143 (ಅಕ್ರಮ ಕೂಟ), 465 (ಸುಳ್ಳು ದಾಖಲೆ ಸೃಷ್ಟಿ), 468 (ವಂಚಿಸಲು ಸುಳ್ಳು ದಾಖಲೆ ಸೃಷ್ಟಿ), 471 (ಸುಳ್ಳು ದಾಖಲೆಗಳನ್ನು ಅಸಲಿ ಎಂದು ಬಿಂಬಿಸುವುದು), 120ಬಿ (ಪಿತೂರಿ), ಮತ್ತು 149 (ಸಮಾನ ಉದ್ದೇಶ) ಜೊತೆಗೆ ಪ್ರಜಾಪ್ರತಿನಿಧಿ ಕಾಯ್ದೆ–1951ರ ಕಲಂ 136ರ (ಚುನಾವಣಾ ಅಕ್ರಮ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜೀವರಾಜ್‌ ಪರ ಹೈಕೋರ್ಟ್‌ ವಕೀಲೆ ಡಾ.ವಂದನಾ ರೆಡ್ಡಿ ವಕಾಲತ್ತು ವಹಿಸಿದ್ದಾರೆ.

Continue Reading

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್. ಜೀವರಾಜ್​ಗೆ ಜಯ

ಮರು ಎಣಿಕೆಯಲ್ಲಿ ಗೆಲುವಿನ ಜಯಭೇರಿ ಬಾರಿಸಿದ ಬೆನ್ನಲ್ಲೇ ದೇವಸ್ಥಾನದ ಸಮೀಪವೇ ಬಿಜೆಪಿ ಕಾರ್ಯಕರ್ತರು ಜೀವರಾಜ್ ಅವರಿಗೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಿದರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ಅಂಚೆ ಮತದಾನದ ಮರು ಎಣಿಕೆ ಕುರಿತಂತೆ ಮೊನ್ನೆ, ಮತ ಎಣಿಕೆ ಕಾರ್ಯವನ್ನು ನಗರದ ಐಡಿಎಸ್​​ಜಿ ಕಾಲೇಜಿನಲ್ಲಿ ಮಾಡಲಾಯಿತು. ಈ ವೇಳೆ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಸಲ್ಲಿಕೆ ಮಾಡಿದ್ದರು.ಈಗ ಉಚ್ಚ ನ್ಯಾಯಾಲಯದ ಆದೇಶದಂತೆ 123 – ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ […]

Continue Reading

ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿಯ ಶವ ಪತ್ತೆ

ಬಾಲಕಿ ನಾಪತ್ತೆಯಾದ ವಿಚಾರ ಗೊತ್ತಾಗುತ್ತಿದ್ದಂತೆ ರಕ್ಷಣಾ ತಂಡಗಳು ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಹುಡುಕಾಟ ನಡೆಸಿದ್ದರು. ಪೊಲೀಸ್‌ ಇಲಾಖೆ, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಹಲವು ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿತ್ತು. ಬಾಲಕಿ ಮಿಸ್ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡಿತ್ತು. ಆದರೆ ಬಾಲಕಿ ರಕ್ಷಣಾ ತಂಡಕ್ಕೆ ಜೀವಂತವಾಗಿ ಸಿಗದೇ ಇರುವುದು ಎಲ್ಲರಿಗೂ ಬೇಸರ ಮೂಡಿಸಿದೆ.

Continue Reading