ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಮಗಳೂರಿನ ರೈತ

ಸುದ್ದಿಗಾರರೊಂದಿಗೆ ಮಾತನಾಡಿದ ವಿಶು ಕುಮಾರ್, ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಪರಿಹಾರವನ್ನು ಇನ್ನೂ ನೀಡಿಲ್ಲ ಎಂದು ಹೇಳಿದರು. ‘ನಾಲ್ಕು ವಾರಗಳಲ್ಲಿ ವಿಷಯವನ್ನು ಅಂತಿಮಗೊಳಿಸಿ ಪರಿಹಾರವನ್ನು ಪಾವತಿಸುವಂತೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗೆ ನ್ಯಾಯಾಲಯ ನಿರ್ದೇಶಿಸಿತ್ತು. ಆದರೆ, ಮೂರು ತಿಂಗಳು ಕಳೆದರೂ ನಮಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಜಮೀನಿನಲ್ಲಿ ನಾನು ಶ್ರೀಗಂಧದ ಮರಗಳನ್ನು ಬೆಳೆಸಿದ್ದೇನೆ. ಅಗತ್ಯವಿರುವ ನೋಟಿಸ್ ನೀಡದೆಯೇ ಮರಗಳನ್ನು ಕಡಿಯಲು ಅಧಿಕಾರಿಗಳು ಯೋಜಿಸಿದ್ದಾರೆ. ಈ ಪ್ರಕ್ರಿಯೆಯ ಬಗ್ಗೆ ಯಾವುದೇ ಮಾಹಿತಿಯನ್ನು ತನಗೆ ಒದಗಿಸಿಲ್ಲ’ ಎಂದು ವಿಶು ಕುಮಾರ್ ಆರೋಪಿಸಿದ್ದಾರೆ.

Continue Reading

ಶೃಂಗೇರಿ ಶಾಸಕ ಜೀವರಾಜ್‌ ವಿರುದ್ಧದ ಎಫ್ಐಆರ್‌ಗೆ ಹೈಕೋರ್ಟ್‌ ತಡೆ

ಈ ದೂರಿನ ಅನ್ವಯ ಆರೋಪಿಗಳ ವಿರುದ್ಧ; ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 143 (ಅಕ್ರಮ ಕೂಟ), 465 (ಸುಳ್ಳು ದಾಖಲೆ ಸೃಷ್ಟಿ), 468 (ವಂಚಿಸಲು ಸುಳ್ಳು ದಾಖಲೆ ಸೃಷ್ಟಿ), 471 (ಸುಳ್ಳು ದಾಖಲೆಗಳನ್ನು ಅಸಲಿ ಎಂದು ಬಿಂಬಿಸುವುದು), 120ಬಿ (ಪಿತೂರಿ), ಮತ್ತು 149 (ಸಮಾನ ಉದ್ದೇಶ) ಜೊತೆಗೆ ಪ್ರಜಾಪ್ರತಿನಿಧಿ ಕಾಯ್ದೆ–1951ರ ಕಲಂ 136ರ (ಚುನಾವಣಾ ಅಕ್ರಮ) ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜೀವರಾಜ್‌ ಪರ ಹೈಕೋರ್ಟ್‌ ವಕೀಲೆ ಡಾ.ವಂದನಾ ರೆಡ್ಡಿ ವಕಾಲತ್ತು ವಹಿಸಿದ್ದಾರೆ.

Continue Reading

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್. ಜೀವರಾಜ್​ಗೆ ಜಯ

ಮರು ಎಣಿಕೆಯಲ್ಲಿ ಗೆಲುವಿನ ಜಯಭೇರಿ ಬಾರಿಸಿದ ಬೆನ್ನಲ್ಲೇ ದೇವಸ್ಥಾನದ ಸಮೀಪವೇ ಬಿಜೆಪಿ ಕಾರ್ಯಕರ್ತರು ಜೀವರಾಜ್ ಅವರಿಗೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಿದರು. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರ ಅಂಚೆ ಮತದಾನದ ಮರು ಎಣಿಕೆ ಕುರಿತಂತೆ ಮೊನ್ನೆ, ಮತ ಎಣಿಕೆ ಕಾರ್ಯವನ್ನು ನಗರದ ಐಡಿಎಸ್​​ಜಿ ಕಾಲೇಜಿನಲ್ಲಿ ಮಾಡಲಾಯಿತು. ಈ ವೇಳೆ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಸಲ್ಲಿಕೆ ಮಾಡಿದ್ದರು.ಈಗ ಉಚ್ಚ ನ್ಯಾಯಾಲಯದ ಆದೇಶದಂತೆ 123 – ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ […]

Continue Reading

ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿಯ ಶವ ಪತ್ತೆ

ಬಾಲಕಿ ನಾಪತ್ತೆಯಾದ ವಿಚಾರ ಗೊತ್ತಾಗುತ್ತಿದ್ದಂತೆ ರಕ್ಷಣಾ ತಂಡಗಳು ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಹುಡುಕಾಟ ನಡೆಸಿದ್ದರು. ಪೊಲೀಸ್‌ ಇಲಾಖೆ, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಹಲವು ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿತ್ತು. ಬಾಲಕಿ ಮಿಸ್ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡಿತ್ತು. ಆದರೆ ಬಾಲಕಿ ರಕ್ಷಣಾ ತಂಡಕ್ಕೆ ಜೀವಂತವಾಗಿ ಸಿಗದೇ ಇರುವುದು ಎಲ್ಲರಿಗೂ ಬೇಸರ ಮೂಡಿಸಿದೆ.

Continue Reading

ಚಿಕ್ಕಮಗಳೂರು | ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್ ಚಕ್ರ

ಸ್ಥಳಕ್ಕೆ ಬಾಳೆಹೊನ್ನೂರುಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ಕ್ರಮ ಕೈಗೊಂಡಿದ್ದಾರೆ.

Continue Reading

ಚಿಕ್ಕಮಗಳೂರು | ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿ 15 ಜನರಿಗೆ ಗಡಿಪಾರು ನೋಟೀಸ್

ಪೊಲೀಸ್ ಇಲಾಖೆಯ ಶಿಫಾರಸ್ಸಿನ ಪ್ರಕಾರ, ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಪರಿಗಣಿಸಿ ಗಡಿಪಾರು ಕ್ರಮಕ್ಕೆ ಮನವಿ ಮಾಡಲಾಗಿದೆ.ಒಟ್ಟಾರೆ 15 ಮಂದಿಯಲ್ಲಿ 10 ಮಂದಿ ಮುಸ್ಲಿಂ ಸಮುದಾಯದವರು ಹಾಗೂ 5 ಮಂದಿ ಹಿಂದೂ ಸಮುದಾಯದವರಾಗಿದ್ದು, ಅಹಮದ್, ಫಾರೂಕ್, ಇಬ್ರಾಹಿಂ ಅಲಿಯಾಸ್ ಇಬ್ಬು ಇಮ್ರಾನ್, ಚಾಂದ್ ಪಾಷಾ, ಜೋಹಾರ್ ಅಂಜುಮ್, ಮೊಹಮ್ಮದ್ ಇದ್ರಿಶ್, ಫಾಜಿಲ್ ಅಹಮದ್‌, ಜಾವೀದ್ […]

Continue Reading

ಸಂಚಾರಿ ನಿಯಮ ಉಲ್ಲಂಘನೆ ; ಸರ್ಕಲ್ ನಲ್ಲಿ ಸಂಚಾರ ಜಾಗೃತಿ ಬೋರ್ಡ್ ಹಿಡಿದು ನಿಲ್ಲುವಂತೆ ನ್ಯಾಯಾಲಯ ಆದೇಶ

ಈತ ಈ ಹಿಂದೆ ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡಿದ್ದ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ರಂಜಿತ್ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದರಿಂದ, ನ್ಯಾಯಾಧೀಶರು ಆತನಿಗೆ ವಿಭಿನ್ನವಾದ ಶಿಕ್ಷೆಯನ್ನು ವಿಧಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ, ರಂಜಿತ್ ಮಾರ್ಚ್ 17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಡೂರು ಪಟ್ಟಣದ ಪ್ರಮುಖ ವೃತ್ತವಾದ ಮರವಂಜಿ ಸರ್ಕಲ್‌ನಲ್ಲಿ ಸಂಚಾರ ಜಾಗೃತಿಯ ಬೋರ್ಡ್ ಹಿಡಿದು ನಿಲ್ಲಬೇಕಾಯಿತು. […]

Continue Reading

ಚಿಕ್ಕಮಗಳೂರು | ಹೆಣ್ಣುಮಕ್ಕಳಿಂದ ತಂದೆಯ ಅಂತ್ಯಸಂಸ್ಕಾರ

ತಂಗಿ ಹಾಗೂ ಭಾವನ ಜೊತೆ ಸೇರಿ ತಂದೆಯ ಅಂತಿಮ ಧಾರ್ಮಿಕ ವಿಧಿ, ವಿಧಾನಗಳನ್ನು ಪೂರೈಸಿದ್ದಾರೆ.ಮೃತದೇಹದ ಸುತ್ತ ಹೆಗಲ ಮೇಲೆ ಕುಡಿಕೆ ಹೊತ್ತು ಸಂಪ್ರದಾಯದಂತೆ ವಿಧಿ ವಿಧಾನಗಳನ್ನು ನೆರವೇರಿಸಿದ ಹೆಣ್ಣುಮಗಳು ಎಲ್ಲರ ಗಮನ ಸೆಳೆದರು. ಬೀರೂರಿನ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಕುಟುಂಬದ ಹಿರಿಯರು ಹೆಣ್ಣುಮಕ್ಕಳ ನಿರ್ಧಾರಕ್ಕೆ ಬೆಂಬಲ ನೀಡಿದ್ದು, ಸಮಾಜದವರು ಮತ್ತು ಸ್ನೇಹಿತರು ಯುವತಿಯರ ಧೈರ್ಯಶಾಲಿ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Continue Reading

ಚಿಕ್ಕಮಗಳೂರು | ಪೊಲೀಸರ ಎದುರೇ ಕತ್ತು ಕುಯ್ದುಕೊಂಡ ಯುವಕ ; ಆಸ್ಪತ್ರೆಯಲ್ಲಿ ಹೊಲಿಗೆ ಹಾಕುತ್ತಿದ್ದಂತೆ ಪರಾರಿ

ಇದೆ ವಿಚಾರ ಸಂಬಂಧ ಅತ್ತೆ ಬಳಿ ಹಣ ಕೇಳಿದ್ದಾನೆ ಎನ್ನಲಾಗಿದೆ. ಈ ವೇಳೆ ಅತ್ತೆ ಹಣ ನೀಡಲು ನಿರಾಕರಿಸಿದರು ಎಂಬ ಕಾರಣಕ್ಕೆ ಪೊಲೀಸರ ಬಳಿ ನ್ಯಾಯ ಕೇಳಲು ಬಂದ ಯುವಕ ಬ್ಲೆಡ್ ನಿಂದ ಕತ್ತು ಕುಯ್ದುಕೊಂಡಿದ್ದಾನೆ. ಈ ವೇಳೆ ತಕ್ಷಣವೇ ಯುವಕನನ್ನು ಆಸ್ಪತ್ರೆಗೆ ದಾಖಲೀಸಲಾಗಿದೆ.ಹಾಗೂ ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ನರ್ಸ್ ಗಳು ಹೊಲಿಗೆ ಹಾಕುತ್ತಿದ್ದಂತೆ ಯುವಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಬಳಿ ಈ ಒಂದು ಘಟನೆ ನಡೆದಿದೆ

Continue Reading

15 ವರ್ಷಗಳಿಂದ ಪರಿಹಾರ ನೀಡದೆ ವಿಳಂಬ ; KSRTC Bus ಜಪ್ತಿ ಮಾಡಿದ ನ್ಯಾಯಾಲಯ

ಈ ಬಗ್ಗೆ ಇಲಾಖೆಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಪರಿಹಾರ ನೀಡದೇ ಕಾಲಹರಣ ಮಾಡುತ್ತಿದ್ದುದರಿಂದ ಬಸ್ ಜಪ್ತಿ ಮಾಡುವಂತೆ ಚನ್ನರಾಯಪಟ್ಟಣ ನ್ಯಾಯಾಲಯ ಆದೇಶ ಹೊರಡಿಸಿತ್ತು. ಅದರಂತೆ ಬೇಲಿಫ್‌ಗಳ ಸಹಾಯದಿಂದ ಚಿಕ್ಕಮಗಳೂರು ಡಿಪೊಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಅನ್ನು ಜಪ್ತಿ ಮಾಡಲಾಗಿದೆ.

Continue Reading