ಶಿವಮೊಗ್ಗ | ಮೃಗಲಾಯದಲ್ಲಿ ನೀರಾನೆ ಹಠಾತ್ ದಾಳಿ ; ಪಶು ವೈದ್ಯೆ ಸಾವು : ತನಿಖೆಗೆ ಅದೇಶಿಸಿದ ಸಚಿವರು

ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಶಿವಮೊಗ್ಗದ ಮ್ಯಾಕ್ಸ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ 6:30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಶಿವಮೊಗ್ಗ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ದುರಂತದ ಕುರಿತು ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳ ತಂಡವು ಕೂಲಂಕಷವಾಗಿ ತನಿಖೆ ನಡೆಸಲಿದೆ. […]

Continue Reading

ನೇತ್ರಾವತಿ ನದಿ ತೀರದಲ್ಲಿ ಅಪಾರ ಪ್ರಮಾಣದ ಆಧಾರ್ ಕಾರ್ಡ್ ಗಳು ಪತ್ತೆ : ತನಿಖೆಗೆ ಸೂಚಿಸಿದ ಯು. ಟಿ. ಖಾದರ್

ಅಂಚೆ ವಿಭಾಗದವರು ಏನಂತಾರೆ? ಹೊಳೆ ಬದಿಯಲ್ಲಿ ಆಧಾರ್ ಕಾಡ್೯ಗಳ ರಾಶಿ ಪತ್ತೆಯಾಗಿರುವುದು ನಮ್ಮ ಗಮನಕ್ಕೆ ಬಂದಿದೆ. ನಾಳೆ(ಗುರುವಾರ) ಅಂಚೆ ಇಲಾಖೆಯ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡಲಿದ್ದಾರೆ. ಮುಂದಿನ ಕ್ರಮದ ಬಗ್ಗೆ ಬಳಿಕ ನಿರ್ಧರಿಸಲಾಗುವುದು ಎಂದು ಮಂಗಳೂರು ಅಂಚೆ ವಿಭಾಗದ ಉಪಾಧೀಕ್ಷಕ ದಿನೇಶ್ ತಿಳಿಸಿದ್ದಾರೆ. ಫರಂಗಿಪೇಟೆ ಹತ್ತನೇ ಮೈಲ್‌ಕಲ್ಲು ಸಮೀಪದ ನೇತ್ರಾವತಿ ನದಿ ತೀರದಲ್ಲಿ ಪುದು ಗ್ರಾಮದ ನಿವಾಸಿಗಳ ವಿಳಾಸ ಹೊಂದಿರುವ ಆಧಾರ್ ಕಾರ್ಡ್‌ಗಳು ರಾಶಿ ರಾಶಿಯಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. […]

Continue Reading

ನೇಪಾಳ | ತ್ರಿಶೂಲಿ ನದಿಗೆ ಬಿದ್ದ ಬಸ್ ; ಕನಿಷ್ಠ 18 ಸಾವು ಹಲವರು ಗಂಭೀರ

ಗಾಯಗೊಂಡ ಪ್ರಯಾಣಿಕರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನೇಪಾಳ ಸೇನೆ, ಸಶಸ್ತ್ರ ಪೊಲೀಸ್ ಪಡೆ ಮತ್ತು ನೇಪಾಳ ಪೊಲೀಸರ ಸಿಬ್ಬಂದಿಯನ್ನು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ನ್ಯೂಜಿಲೆಂಡ್‌ನ ಪುರುಷ ಪ್ರಯಾಣಿಕರೊಬ್ಬರು ಸೇರಿದ್ದಾರೆ. ಗಾಯಗೊಂಡವರಲ್ಲಿ ಜಪಾನಿನ ಮಹಿಳೆ ಮತ್ತು ಡಚ್ ಪ್ರಜೆಯೊಬ್ಬರು ಸೇರಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಅತಿ ವೇಗದ ಚಾಲನೆಯೇ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.ಬಸ್‌ನಲ್ಲಿ ಕೆಲವು ವಿದೇಶಿ ಪ್ರವಾಸಿಗರು ಸೇರಿದಂತೆ ಸುಮಾರು 40 ರಿಂದ 45 ಪ್ರಯಾಣಿಕರಿದ್ದರು. ಬಸ್ ಪೃಥ್ವಿ ಹೆದ್ದಾರಿಯಲ್ಲಿ ಚಲಿಸುತ್ತಿತ್ತು. […]

Continue Reading

ಶಿವಮೊಗ್ಗ | ಮನೆಯ ಬೀಗ ಮುರಿದು ಕಳ್ಳತನ

ಖಾಜಿ ಮೊಹಲ್ಲಾದಲ್ಲಿ ಫ್ಯಾನ್ಸಿ ಸ್ಟೋರ್ ನಡೆಸುತ್ತಿರುವ ಕುಟುಂಬವೊಂದು, ಅಂಗಡಿಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಮುಂಬೈಗೆ ತೆರಳಿತ್ತು. ಇದೇ ಸಮಯವನ್ನು ಬಳಸಿಕೊಂಡ ಕಳ್ಳರು, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಬಾಗಿಲು ಮುರಿದು ಒಳ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ 25 ಗ್ರಾಂ ತೂಕದ ಚಿನ್ನದ ನೆಕ್ಲೇಸ್,20 ಗ್ರಾಂ ತೂಕದ ಚಿನ್ನದ ಕೈ ಕಡಗ,5 ಗ್ರಾಂ ತೂಕದ ಚಿನ್ನದ ಬ್ರೇಸ್‌ಲೆಟ್, ಚಿನ್ನದ ಉಂಗುರ ಹಾಗೂ ಒಂದು ವಜ್ರದ ಉಂಗುರ,10,000 ರೂಪಾಯಿ ನಗದು ಹಣ ಸೇರಿದಂತೆ ಮನೆಯಲ್ಲಿದ್ದ ಸುಮಾರು 4,75,700 ರೂಪಾಯಿ […]

Continue Reading

ಶಿವಮೊಗ್ಗದ ಕಾರ್ಖಾನೆಗೆ ಲಕ್ಷಗಟ್ಟಲೆ ಸೈಬರ್ ವಂಚನೆ

ಇದನ್ನು ನಂಬಿದ ಶಿವಮೊಗ್ಗದ ಕಾರ್ಖಾನೆ ಮ್ಯಾನೇಜರ್, ಜನವರಿ 28 ರಂದು ಹೊಸ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು.ನಂತರ ಪರಿಶೀಲಿಸಿದಾಗ, ಅನಾಮಧೇಯ ವ್ಯಕ್ತಿಗಳು ಪೂರೈಕೆದಾರ ಕಂಪನಿಯ ಇಮೇಲ್ ಐಡಿಯನ್ನು ಹ್ಯಾಕ್ ಮಾಡಿ ಈ ಕೃತ್ಯ ಎಸಗಿರುವುದು ಪತ್ತೆಯಾಗಿದೆ. ವಂಚಕರು ನಕಲಿ ಬ್ಯಾಂಕ್ ವಿವರಗಳನ್ನು ನೀಡಿ ಕಾರ್ಖಾನೆಯ ಹಣ ಆರ್‌ಟಿಜಿಎಸ್ ಮೂಲಕ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ.ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading