ಶಿವಮೊಗ್ಗ | ನೀರಿನ ಪಂಪ್ ನ ಕೇಬಲ್ ಕದಿಯುತ್ತಿದ್ದವನು ಈಗ ಪೊಲೀಸರ ಅತಿಥಿ

ಬಂಧಿತ ಆರೋಪಿಯನ್ನು ಶಿವಮೊಗ್ಗದ ರಾಗಿಗುಡ್ಡದ 4ನೇ ಕ್ರಾಸ್ ನಿವಾಸಿ, ಕುಮಾರ ಎಸ್.ಕೆ (31 ವರ್ಷ) ಎಂದು ಗುರುತಿಸಲಾಗಿದೆ. ಬಂಧಿತನಿಂದ ಪೊಲೀಸರು, ಕಳವು ಮಾಡಲಾಗಿದ್ದ ಅಂದಾಜು 93,000 ರೂ. ಮೌಲ್ಯದ ಒಟ್ಟು 750 ಮೀಟರ್ ಉದ್ದದ ಕಾಪರ್ ಮೋಟಾರ್ ಕೇಬಲ್ ವೈರ್‌ಗಳನ್ನು ಜಪ್ತಿ ಮಾಡಿದ್ದಾರೆ. ಇದರೊಂದಿಗೆ ಕಳ್ಳತನದ ಕೃತ್ಯ ಎಸಗಲು ಆತ ಬಳಸುತ್ತಿದ್ದ ಅಂದಾಜು 30,000 ರೂ. ಮೌಲ್ಯದ ಬಜಾಜ್ ಪಲ್ಸರ್ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Continue Reading

ಶಿವಮೊಗ್ಗ | ಮಹಿಷಿ ಉತ್ತರಾಧಿಮಠದ ಕೋಟ್ಯಾಂತರ ರೂ. ಮೌಲ್ಯದ ಬಂಗಾರದ ಹಲಗಾರತಿ ಕಳ್ಳತನ ಪ್ರಕರಣದ ಆರೋಪಿ ಬಂಧನ

ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಂಜಿ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಗಳಾದ ಇಮ್ರಾನ್ ಬೇಗ್, ರಾಜಶೇಖರ್, ಸಬ್ ಇನ್ಸ್’ಪೆಕ್ಟರ್ ಸುನೀಲ್ ಕುಮಾರ್, ಸಿಬ್ಬಂದಿಗಳಾದ ಲಿಂಗೇಗೌಡ, ಸುರಕ್ಷಿತ್, ಕುಮಾರ್, ರವಿ, ಸುರೇಶ್ ನಾಯ್ಕ್, ಸಂತೋಷ್, ವಿನಯ್ ಕುಮಾರ್ ರವರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ಧಾರೆ.

Continue Reading

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಪರ್ಯಾಯ ಸಂಚಾರ ಮಾರ್ಗಗಳಾದ ತೀರ್ಥಹಳ್ಳಿ –ಉಡುಪಿ ಕಡೆಗೆ ಹೋಗುವ ವಾಹನಗಳು ತೀರ್ಥಹಳ್ಳಿ-ನಗರ-ನಾಗೋಡಿ-ಕೊಲ್ಲೂರು-ಕುಂದಾಪುರ-ಉಡುಪಿ ಮತ್ತು ತೀರ್ಥಹಳ್ಳಿ-ಶೃಂಗೇರಿ-ಕೆರೆಕಟ್ಟೆ-ಬಜಗೋಳಿ-ಕಾರ್ಕಳ-ಉಡುಪಿ ಮಾರ್ಗವಾಗಿ ಸಂಚರಿಸುವುದು.ಉಡುಪಿ- ತೀರ್ಥಹಳ್ಳಿ ಕಡೆಗೆ ಹೋಗುವ ವಾಹನಗಳು ಉಡುಪಿ-ಕುಂದಾಪುರ-ಕೊಲ್ಲೂರು-ನಾಗೋಡಿ-ನಗರ-ತೀರ್ಥಹಳ್ಳಿ ಮತ್ತು ಕಾರ್ಕಳ-ಬಜಗೋಳಿ-ಕೆರೆಕಟ್ಟೆ-ಶೃಂಗೇರಿ- ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

Continue Reading

ತೀರ್ಥಹಳ್ಳಿ| ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

ಕಳುವಾದ ಒಡವೆಗಳ ಒಟ್ಟು ತೂಕ 182 ಗ್ರಾಂ ಆಗಿದ್ದು, ಇದರ ಬೆಲೆ 23,66,000 ರೂಪಾಯಿ. ಎಂದು ಅಂದಾಜಿಸಲಾಗಿದೆ. ಮನೆಯ ಬಾಗಿಲು ಅಥವಾ ಬೀಗ ಮುರಿದ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಹೀಗಾಗಿ ಮನೆಯಲ್ಲಿ ಗಾರೆಕೆಲಸ ಮಾಡುತ್ತಿದ್ದ ಮೇಲೆ ಸಂಶಯ ವ್ಯಕ್ತಪಡಿಸಿ ದೂರುದಾರ ತೀರ್ಥಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.

Continue Reading

ಶಿರಸಿ | ವೈದ್ಯರ ಹತ್ಯೆ ಪ್ರಕರಣ ; ತೀರ್ಥಹಳ್ಳಿಯ ವ್ಯಕ್ತಿ ಬಂಧನ

ಡಿಎಸ್ಪಿ ಗೀತಾ ಪಾಟೀಲ ಹಾಗೂ ಸಿಪಿಐ ಶಶಿಕಾಂತ ವರ್ಮಾ ಮಾರ್ಗದರ್ಶನದಲ್ಲಿ ಪಿಎಸ್‌ಐ ಬಸವರಾಜ ಕನಶೆಟ್ಟಿ ಮತ್ತು ತಂಡವು ಕಾರ್ಯಾಚರಣೆ ನಡೆಸಿ ಶಿವಮೊಗ್ಗದಲ್ಲಿ ಆರೋಪಿಯನ್ನು ಬಂಧಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ನೆರವಿನೊಂದಿಗೆ ಕೇವಲ 6 ಗಂಟೆಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಚಿನ್ನಾಭರಣವನ್ನು ವಶಕ್ಕೆ ಪಡೆದ ತಂಡದ ಕಾರ್ಯವನ್ನು ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ. ಬಂಧಿತನನ್ನು ಕೋಟ್‌ರ್ಗೆ ಹಾಜರುಪಡಿಸಿ ಜೈಲಿಗೆ ಕಳಿಸಲಾಗಿದೆ.

Continue Reading

ತೀರ್ಥಹಳ್ಳಿ | ಕುಡಿಯುವ ನೀರಿನ ಬಾವಿಗೆ ವಿಷ ; ದೂರು ದಾಖಲು

ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಘವೇಂದ್ರ ಅವರು ತಮ್ಮ ಜಮೀನಿಗೆ ತೆರಳಿದ ಸಂದರ್ಭದಲ್ಲಿ, ಬಾವಿಯ ಸಮೀಪ ಹೋದಾಗ ನೀರಿನಲ್ಲಿ ವಿಷದ ವಾಸನೆ ಬರುತ್ತಿರುವುದು ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Continue Reading

ತೀರ್ಥಹಳ್ಳಿ | ಪಿಕಪ್ ವಾಹನ ಡಿಕ್ಕಿ ; ಬೈಕ್ ಸವಾರನಿಗೆ ಗಂಭೀರ ಗಾಯ

ಧಾರ್ಮಿಕ ವಿಧಿವಿಧಾನಗಳನ್ನು ಮುಗಿಸಿ ಇಂದು ಬೆಳಿಗ್ಗೆ ಬೈಕ್‌ನಲ್ಲಿ ವಾಪಸ್ ತೆರಳುತ್ತಿದ್ದಾಗ, ಮೇಲಿನ ಕುರುವಳ್ಳಿಯ ಮಹಾಲಕ್ಷ್ಮಿ ಹೋಟೆಲ್ ಎದುರು ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ಬೈಕ್‌ನಲ್ಲಿದ್ದ ಉಳಿದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ತೀರ್ಥಹಳ್ಳಿ ಪಟ್ಟಣದ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Continue Reading