ರಿಪ್ಪನ್‌ಪೇಟೆ | ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಹಾಗೂ ಸಿಬ್ಬಂದಿ, ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 1.6 ಕೆ.ಜಿ ತೂಕವಿರುವ ಮಗು ಸದ್ಯ ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಪ್ರಾಥಮಿಕ ಆರೈಕೆ ನೀಡಿ, ಹೆಚ್ಚಿನ ಚಿಕಿತ್ಸೆ ಹಾಗೂ ಪಾಲನೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.​ ಮಗುವನ್ನು ಯಾರು ಮತ್ತು ಯಾವ ಕಾರಣಕ್ಕಾಗಿ ಇಲ್ಲಿ ಬಿಟ್ಟು ಹೋಗಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Continue Reading

ಹುಬ್ಬಳ್ಳಿ | ಜೀರೋ ಟ್ರಾಫಿಕ್ ನಲ್ಲಿ ತಂದಿದ್ದ ನವಜಾತ ಶಿಶು ದುರ್ಮರಣ

ಕೊಪ್ಪಳ ಜಿಲ್ಲೆಯ ಕುಕುನೂರ ತಾಲೂಕಿನ ಬೂದಗುಂಪ ಗ್ರಾಮದ ವಿಜಯಲಕ್ಷ್ಮಿ ಎಂಬುವರ ಶಿಶು ಕುಕನೂರ ತಾಲೂಕಾ ಆಸ್ಪತ್ರೆಯಲ್ಲಿ 27ರ ರಾತ್ರಿ ಹನ್ನೊಂದು ಮೂವತ್ತಕ್ಕೆ ಹೆರಿಗೆಯಾಗಿತ್ತು. ಮಗುವಿನ ಕರಳು ಮತ್ತು ಕಿಡ್ನಿ ಹೊರಬಂದ ಹಿನ್ನೆಲೆ ಕೊಪ್ಪಳ ಜಿಲ್ಲಾಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗೆ ಡಿ.28ರ ಬೆಳಗ್ಗೆ 10 ಗಂಟೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ವೇಳೆ ಜೀರೋ ಟ್ರಾಫಿಕ್ ನಲ್ಲಿ ನವಜಾತ ಶಿಶುವನ್ನು ಕರೆತಲಾಗಿತ್ತು ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಿದರು ಸ್ಪಂದಿಸಿದೆ ನವಜಾತ ಶಿಶು ದುರ್ಮರಣವಾಗಿದೆ.

Continue Reading