ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಮಲೆನಾಡಿನ ಪರಿಸರ ನಾಶ : ಡಿ.ಎಸ್. ಅರುಣ್ ಆಕ್ರೋಶ

ಸರ್ಕಾರ ಕೇವಲ ಪ್ರಚಾರಕ್ಕೆ ಸೀಮಿತವಾಗದೆ, ವೈಜ್ಞಾನಿಕ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಜಾರಿಗೆ ತಂದು, ನದಿಗಳಿಗೆ ಕಸ ಸುರಿಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಸಿಸಿಟಿವಿ ಕಣ್ಗಾವಲು ಹೆಚ್ಚಿಸಬೇಕು ಹಾಗೂ ಗ್ರಾಮೀಣ ತ್ಯಾಜ್ಯ ನಿರ್ವಹಣೆಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಮಲೆನಾಡು ರಾಜ್ಯದ ಜೀವಾಳವಾಗಿದ್ದು, ಅದರ ಪರಿಸರ ನಾಶವಾದರೆ ಇಡೀ ರಾಜ್ಯಕ್ಕೆ ದುಷ್ಪರಿಣಾಮ ಬೀರುತ್ತದೆ. ಇದು ಪಕ್ಷಾತೀತ ವಿಷಯವಾಗಿದ್ದು, ಮುಂದಿನ ಪೀಳಿಗೆಯ ಬದುಕಿನ ಪ್ರಶ್ನೆ ಎಂದು ಅವರು ಸರ್ಕಾರಕ್ಕೆ ಗಂಭೀರ ಸಂದೇಶ ನೀಡಿದರು.

Continue Reading