ಶಿವಮೊಗ್ಗ | ಪೊಕ್ಸೊ ಪ್ರಕರಣ : ಯುವಕನಿಗೆ 20 ವರ್ಷ ಜೈಲು, ₹2.50 ಲಕ್ಷ ದಂಡ

ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ. ₹2,50,000 ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ₹2,25,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading

ಶಿವಮೊಗ್ಗ | ಹೆಲ್ಮೆಟ್ ಹಾಕಲ್ಲ ಏನು ಮಾಡುತ್ತೀರಾ? ಪೊಲೀಸರಿಗೆ ಅವಾಜ್ ಮತ್ತು ಬೆದರಿಕೆ ಹಾಕಿದ ಪುಂಡರು ಅಂದರ್

ನಿಯಮ ಪಾಲಿಸುವಂತೆ ಹೇಳಿದ ಅಧಿಕಾರಿಗಳ ಜೊತೆ ಸಯ್ಯದ್ ಮುಜಾಮಿಲ್ ರಸ್ತೆಯ ಮಧ್ಯೆಯೇ ವಾಗ್ವಾದಕ್ಕಿಳಿದಿದ್ದಾನೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಜಬಿವುಲ್ಲಾ ಎಂಬಾತನು ಸೇರಿಕೊಂಡು, ನಾವು ಹೆಲ್ಮೆಟ್ ಹಾಕುವುದಿಲ್ಲ, ನೀವು ಏನು ಮಾಡುತ್ತೀರಾ? ಎಂದು ಅವಾಚ್ಯವಾಗಿ ಮಾತನಾಡಿದ್ದಾರೆ. ಅಷ್ಟಕ್ಕೇ ನಿಲ್ಲದೆ, ಸಮವಸ್ತ್ರದಲ್ಲಿದ್ದ ಅಧಿಕಾರಿಗಳನ್ನು ದೂಡಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಳಿಕ ಬೈಕ್ ಕೀ ಕಿತ್ತುಕೊಂಡು ಪೊಲೀಸರಿಗೆ ಬೆದರಿಕೆ ಹಾಕಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಯ್ಯದ್ ಮುಜಾಮಿಲ್ ಮತ್ತು […]

Continue Reading

ಯೋಗೇಶ್ ಗೌಡ ಹತ್ಯೆ ಪ್ರಕರಣ ; ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ ನ್ಯಾಯಾಲಯ ಮಹತ್ವದ ತೀರ್ಪು

ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ. 21 ಆರೋಪಿಗಳ ಪೈಕಿ 17 ಮಂದಿ ದೋಷಿಗಳಾಗಿದ್ದಾರೆ. 20ನೇ ಆರೋಪಿ ವಾಸುದೇವ ನಿಲಕೇಣಿ, 21ನೇ ಆರೋಪಿ ಸೋಮಶೇಕರ್ ನ್ಯಾಮಗೌಡ ಅವರನ್ನು ಕೋರ್ಟ್‌ ಈ ಪ್ರಕರಣದಿಂದ ಖುಲಾಸೆಗೊಳಿಸಿದೆ. ಎಲ್ಲಾ ದೋಷಿಗಳನ್ನು ಕಸ್ಟಡಿಗೆ ಪಡೆಯುವಂತೆ ಕೋರ್ಟ್‌ ಸಿಬಿಐಗೆ ಸೂಚಿಸಿದೆ. ಎ-1 ಬಸವರಾಜ್ ಮುತ್ತಗಿ ಮತ್ತು ಎ17 – ಶಿವಾನಂದ ಬಿರಾದರ್ ಸರ್ಕಾರಿ ಸಾಕ್ಷಿಗಳಾಗಿರುವ ಕಾರಣ ಅವರನ್ನು ಕೋರ್ಟ್‌ ನಿರ್ದೋಷಿ ಎಂದು ಹೇಳಿದೆ. ಸಿಆರ್‌ಪಿಸಿ ಸೆಕ್ಷನ್ 302 (ಕೊಲೆ), 120B (ಕ್ರಿಮಿನಲ್ ಪಿತೂರಿ), ಸೆಕ್ಷನ್ […]

Continue Reading

ಜ್ಯೋತಿಷಿ ಕಮಲಾಕರ್‌ ಭಟ್‌ ಶಿವಮೊಗ್ಗ ಪೊಲೀಸರ ವಶಕ್ಕೆ

ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ​ನ್ಯಾಯಾಲಯದ ಆದೇಶದ ಬೆನ್ನಲ್ಲೇ ತುಂಗಾನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Continue Reading

ತಮಿಳುನಾಡನ್ನೇ ಬೆಚ್ಚಿಬೀಳಿಸಿದ್ದ ಲಾಕಪ್ ಡೆತ್ ಪ್ರಕರಣದ ಪ್ರಮುಖ ಸಾಕ್ಷಿ ‘ರೇವತಿ’ ಎಂಬ ಧೀಶಕ್ತಿ

ಹೀಗೆ ತನ್ನ ಕ್ರೂರಿ ಸಹೋದ್ಯೋಗಿಗಳ ವಿರುದ್ಧ ಧೈರ್ಯವಾಗಿ ನಿಂತು ಸಾಕ್ಷಿ ಹೇಳಿದವರೇ ಮಹಿಳಾ ಕಾನ್ಸ್‌ಟೇಬಲ್ ರೇವತಿ. ಈ ಪ್ರಕರಣದಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವಲ್ಲಿ ರೇವತಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಈ ಪ್ರಕರಣದಲ್ಲಿ ಪ್ರತ್ಯಕ್ಷದರ್ಶಿಯಾಗಿದ್ದಲ್ಲದೇ ಪ್ರಮುಖ ಸಾಕ್ಷಿಯಾಗಿದ್ದರು. ಅವರೇ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್‌ಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ಪೊಲೀಸ್‌ ಠಾಣೆಯಲ್ಲಿದ್ದ ರಕ್ತದ ಕಲೆಗಳು, ರಕ್ತದ ಕಲೆಗಳನ್ನು ಹೊಂದಿದ್ದ ಪೊಲೀಸ್ ಲಾಠಿಗಳು, ಹಾಗೂ ಟೇಬಲ್‌ಗಳನ್ನು ಸಾಕ್ಷ್ಯ ನಾಶವಾಗುವ ಮೊದಲೇ ಜಪ್ತಿ ಮಾಡಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. 9 […]

Continue Reading

ಅಪ್ಪ- ಮಗ ಲಾಕಪ್ ಡೆತ್ : 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಕಸ್ಟಡಿ ಸಾವಿನ ಪ್ರಕರಣದಲ್ಲಿ ಮಧುರೈ ಜಿಲ್ಲಾ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಪ್ರಕರಣದ ಆರೋಪಿಗಳಾದ ಒಂಬತ್ತು ಪೊಲೀಸರಿಗೂ ಗಲ್ಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಇದೊಂದು ‘ಅಪರೂಪದಲ್ಲಿ ಅಪರೂಪದ ಪ್ರಕರಣ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ‘ಭವಿಷ್ಯದಲ್ಲಿ ಇಂತಹ ಕಸ್ಟಡಿ ಸಾವುಗಳು ಮರುಕಳಿಸಬಾರದು, ಅದಕ್ಕೆ ಈ ಶಿಕ್ಷೆ ಒಂದು ಎಚ್ಚರಿಕೆಯಾಗಬೇಕು ಎಂದು ಕೋರ್ಟ್ ಹೇಳಿದೆ. ಜೀವಾವಧಿ ಶಿಕ್ಷೆ ಸಾಕಾಗಾವುದಿಲ್ಲಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಸಾಕಾಗುವುದಿಲ್ಲ, ಎಲ್ಲರೂ ಸಮಾನ ಅಪರಾಧಿಗಳು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. […]

Continue Reading

ರಸ್ತೆಯಲ್ಲಿ ಪಾನ್ ಉಗುಳಿದ ಭಾರತೀಯ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ ವಿಧಿಸಿದ ಲಂಡನ್ ನ್ಯಾಯಾಲಯ

ಇದೇ ರೀತಿಯ ಪ್ರತ್ಯೇಕ ಪ್ರಕರಣದಲ್ಲಿ, ರುಯಿಸ್ಲಿಪ್‌ನಲ್ಲಿ ವಾಸಿ ಹಿತೇಶ್ ಪಟೇಲ್ (32) ಅವರಿಗೂ ನ್ಯಾಯಾಲಯವು 1,391 ಯುರೋ (1.7 ಲಕ್ಷ ರೂ.) ದಂಡ ವಿಧಿಸಿದೆ. ಜೂನ್ 12, 2025 ರಂದು ವೆಂಬ್ಲಿ ಹಿಲ್‌ನ ರಸ್ತೆಯೊಂದರಲ್ಲಿ ಪಾನ್ ಉಗುಳಿದ್ದರು. ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಅನುಪಸ್ಥಿತಿಯಲ್ಲೇ ವಿಚಾರಣೆ ನಡೆಸಿದ ನ್ಯಾಯಾಲಯ ದಂಡ ವಿಧಿಸಿದೆ. ಪಾನ್ ಉಗುಳುವುದರಿಂದ ಉಂಟಾಗುವ ಕಲೆಗಳನ್ನು ಸ್ವಚ್ಛಗೊಳಿಸಲು ಪ್ರತಿ ವರ್ಷ 30,000 ಯೂರೋಗಳಿಗಿಂತ (32,08,920 ರೂ.) ಹೆಚ್ಚು ಖರ್ಚು ಮಾಡಲಾಗುತ್ತದೆ. ಯಂತ್ರಗಳು ಸಹ ಆ ಕಲೆಯನ್ನು ಸಂಪೂರ್ಣವಾಗಿ […]

Continue Reading

ಸಂಚಾರಿ ನಿಯಮ ಉಲ್ಲಂಘನೆ ; ಸರ್ಕಲ್ ನಲ್ಲಿ ಸಂಚಾರ ಜಾಗೃತಿ ಬೋರ್ಡ್ ಹಿಡಿದು ನಿಲ್ಲುವಂತೆ ನ್ಯಾಯಾಲಯ ಆದೇಶ

ಈತ ಈ ಹಿಂದೆ ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡಿದ್ದ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ರಂಜಿತ್ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದರಿಂದ, ನ್ಯಾಯಾಧೀಶರು ಆತನಿಗೆ ವಿಭಿನ್ನವಾದ ಶಿಕ್ಷೆಯನ್ನು ವಿಧಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ, ರಂಜಿತ್ ಮಾರ್ಚ್ 17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಡೂರು ಪಟ್ಟಣದ ಪ್ರಮುಖ ವೃತ್ತವಾದ ಮರವಂಜಿ ಸರ್ಕಲ್‌ನಲ್ಲಿ ಸಂಚಾರ ಜಾಗೃತಿಯ ಬೋರ್ಡ್ ಹಿಡಿದು ನಿಲ್ಲಬೇಕಾಯಿತು. […]

Continue Reading

ಸಂಚಾರ ನಿಯಮ ಉಲ್ಲಂಘನೆ ; ಯುವಕನಿಗೆ ಸರ್ಕಲ್​​​ನಲ್ಲಿ ನಿಂತು ಟ್ರಾಫಿಕ್ ಜಾಗೃತಿ ಮೂಡಿಸುವ ಶಿಕ್ಷೆ ವಿಧಿಸಿದ ನ್ಯಾಯಾಲಯ

ಅಲ್ಲದೇ, ನ್ಯಾಯಾಲಯವು ಆರೋಪಿಗೆ ಮೂರೂ ಪ್ರಕರಣಗಳಲ್ಲಿಯೂ ತಲಾ ಐದು ದಿನಗಳಂತೆ ಒಟ್ಟು 15 ದಿನಗಳ ಕಾಲ ಸಮುದಾಯ ಸೇವೆ ಸಲ್ಲಿಸುವಂತೆ ಆದೇಶಿಸಿದೆ. ಅದರಂತೆ, ಯುವಕ ಮಾರ್ಚ್​​ 15ರಿಂದ 29ರವರೆಗೆ ಸುಳ್ಯ ಪೇಟೆಯ ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ನೀಡುವ ಫಲಕಗಳನ್ನು ಹಿಡಿದು ನಿಂತು ಸಾರ್ವಜನಿಕರಲ್ಲಿ ಸಂಚಾರ ನಿಯಮ ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ. ಜೊತೆಗೆ, ಆರೋಪಿಯ ಚಾಲನಾ ಪರವಾನಗಿಯನ್ನು ಮೂರು ತಿಂಗಳ ಕಾಲ ಅಮಾನತಿನಲ್ಲಿಡಲು ನ್ಯಾಯಾಲಯ ಆದೇಶ ಹೊರಡಿಸಿದೆ. ಸಂಚಾರ ನಿಯಮಗಳನ್ನು […]

Continue Reading

15 ವರ್ಷಗಳಿಂದ ಪರಿಹಾರ ನೀಡದೆ ವಿಳಂಬ ; KSRTC Bus ಜಪ್ತಿ ಮಾಡಿದ ನ್ಯಾಯಾಲಯ

ಈ ಬಗ್ಗೆ ಇಲಾಖೆಗೆ ಹಲವು ಬಾರಿ ನೋಟಿಸ್ ನೀಡಿದ್ದರೂ ಪರಿಹಾರ ನೀಡದೇ ಕಾಲಹರಣ ಮಾಡುತ್ತಿದ್ದುದರಿಂದ ಬಸ್ ಜಪ್ತಿ ಮಾಡುವಂತೆ ಚನ್ನರಾಯಪಟ್ಟಣ ನ್ಯಾಯಾಲಯ ಆದೇಶ ಹೊರಡಿಸಿತ್ತು. ಅದರಂತೆ ಬೇಲಿಫ್‌ಗಳ ಸಹಾಯದಿಂದ ಚಿಕ್ಕಮಗಳೂರು ಡಿಪೊಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಅನ್ನು ಜಪ್ತಿ ಮಾಡಲಾಗಿದೆ.

Continue Reading