ಸಂಚಾರಿ ನಿಯಮ ಉಲ್ಲಂಘನೆ ; ಸರ್ಕಲ್ ನಲ್ಲಿ ಸಂಚಾರ ಜಾಗೃತಿ ಬೋರ್ಡ್ ಹಿಡಿದು ನಿಲ್ಲುವಂತೆ ನ್ಯಾಯಾಲಯ ಆದೇಶ
ಈತ ಈ ಹಿಂದೆ ಪದೇ ಪದೇ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡಿದ್ದ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ರಂಜಿತ್ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದರಿಂದ, ನ್ಯಾಯಾಧೀಶರು ಆತನಿಗೆ ವಿಭಿನ್ನವಾದ ಶಿಕ್ಷೆಯನ್ನು ವಿಧಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ, ರಂಜಿತ್ ಮಾರ್ಚ್ 17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕಡೂರು ಪಟ್ಟಣದ ಪ್ರಮುಖ ವೃತ್ತವಾದ ಮರವಂಜಿ ಸರ್ಕಲ್ನಲ್ಲಿ ಸಂಚಾರ ಜಾಗೃತಿಯ ಬೋರ್ಡ್ ಹಿಡಿದು ನಿಲ್ಲಬೇಕಾಯಿತು. […]
Continue Reading




