ಶಿವಮೊಗ್ಗ | ನೀರಿನ ಪಂಪ್ ನ ಕೇಬಲ್ ಕದಿಯುತ್ತಿದ್ದವನು ಈಗ ಪೊಲೀಸರ ಅತಿಥಿ

ಬಂಧಿತ ಆರೋಪಿಯನ್ನು ಶಿವಮೊಗ್ಗದ ರಾಗಿಗುಡ್ಡದ 4ನೇ ಕ್ರಾಸ್ ನಿವಾಸಿ, ಕುಮಾರ ಎಸ್.ಕೆ (31 ವರ್ಷ) ಎಂದು ಗುರುತಿಸಲಾಗಿದೆ. ಬಂಧಿತನಿಂದ ಪೊಲೀಸರು, ಕಳವು ಮಾಡಲಾಗಿದ್ದ ಅಂದಾಜು 93,000 ರೂ. ಮೌಲ್ಯದ ಒಟ್ಟು 750 ಮೀಟರ್ ಉದ್ದದ ಕಾಪರ್ ಮೋಟಾರ್ ಕೇಬಲ್ ವೈರ್‌ಗಳನ್ನು ಜಪ್ತಿ ಮಾಡಿದ್ದಾರೆ. ಇದರೊಂದಿಗೆ ಕಳ್ಳತನದ ಕೃತ್ಯ ಎಸಗಲು ಆತ ಬಳಸುತ್ತಿದ್ದ ಅಂದಾಜು 30,000 ರೂ. ಮೌಲ್ಯದ ಬಜಾಜ್ ಪಲ್ಸರ್ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Continue Reading

ಶಿವಮೊಗ್ಗ | ಇನ್ಸ್ಟಾಗ್ರಾಮ್​​ ಜಾಹೀರಾತು ನಂಬಿ 2 ಕೋಟಿ ಕಳೆದುಕೊಂಡ ಯುವ ರೈತ

ನಂತರ ಟೆಲಿಗ್ರಾಂ ಮೂಲಕವೇ ವಿವಿಧ ಬ್ಯಾಂಕ್ ಖಾತೆಗಳ ಕ್ಯೂಆರ್ ಕೋಡ್ ಮತ್ತು ಯುಪಿಐ ಲಿಂಕ್‌ಗಳನ್ನು ಕಳುಹಿಸಿ, ಹಣ ಹೂಡಿಕೆ ಮಾಡುವಂತೆ ಒತ್ತಾಯಿಸಿದ್ದಾರೆ.ಇದನ್ನು ನಂಬಿದ ದೂರುದಾರ 2023ರ ಜನವರಿ ತಿಂಗಳಿನಿಂದ ಹಿಡಿದು 2026ರ ಏಪ್ರಿಲ್ ತಿಂಗಳಿನವರೆಗೆ ಅಂದರೆ ಸತತ ಮೂರು ವರ್ಷಗಳ ಕಾಲ ಹಂತ ಹಂತವಾಗಿ ಒಟ್ಟು 2,05,00,000 ರೂಪಾಯಿಗಳನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದಾರೆ. ಮಧ್ಯದಲ್ಲಿ ದೂರುದಾರ ತಮಗೆ ತುರ್ತು ಹಣದ ಅವಶ್ಯಕತೆ ಇದ್ದು, ಲಾಭಾಂಶವನ್ನು ವಿತ್‌ಡ್ರಾ ಮಾಡಿಕೊಡುವಂತೆ ಕೇಳಿದಾಗ, ಈಗಲೇ ವಿತ್‌ಡ್ರಾ ಮಾಡಿದರೆ ನಿಮಗೆ ಭಾರಿ ನಷ್ಟವಾಗುತ್ತದೆ, […]

Continue Reading

ಭದ್ರಾವತಿ | ಮನೆಯ ಕಾಂಪೌಂಡಿನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಟರು

ದುಷ್ಕರ್ಮಿಗಳ ಈ ಕೃತ್ಯದ ಸಂಪೂರ್ಣ ದೃಶ್ಯಾವಳಿಗಳು ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಭದ್ರಾವತಿ ನ್ಯೂಟೌನ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

ತನಿಖೆ ನೆಪದಲ್ಲಿ ದಲಿತ ಯುವಕನ ಮೇಲೆ ಹಲ್ಲೆ

ಕಾರ್ತಿಕ ನಾರ್ವೆಕರ ಹಾಗೂ ರೋಹಿತ ನಾಯ್ಕ್ ಮತ್ತು ಇನ್ನೋರ್ವನ ಮೇಲೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದಲಿತ ಯುವಕನ ಮೇಲೆ ನಡೆದಿರುವ ದೌರ್ಜನ್ಯ ತೀವ್ರ ವಿವಾದ ಹುಟ್ಟು ಹಾಕಿದ್ದು ಥಳಿಸಿದ ಇನ್ನೋರ್ವ ಆರೋಪಿ ಯಾರು ಎಂಬುದು ಪತ್ತೆ ಆಗಬೇಕಾಗಿದೆ.

Continue Reading

ಶಿವಮೊಗ್ಗ | ನರಸಿಂಹ ಹತ್ಯೆ ಪ್ರಕರಣ ; ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ನರಸಿಂಹ ಯಾನೆ ದಾಸ ಹತ್ಯೆ ಪ್ರಕರಣದ ಸಂಪೂರ್ಣ ಸಂಚು ರೂಪಿಸಿದ್ದ ವ್ಯಕ್ತಿ ಮಧುವಾಗಿದ್ದು, ಪ್ರಕರಣದ ಪ್ರಮುಖ ರೂವಾರಿ ಎಂದು ತಿಳಿಸಿದ್ದಾರೆ. ಮಹಜರ್ ವೇಳೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದರಿಂದ ಕಾನೂನುಬದ್ಧ ಕ್ರಮವಾಗಿ ಗುಂಡು ಹಾರಿಸಲಾಗಿದೆ ಎಂದರು. ಪ್ರಕರಣದಲ್ಲಿ ಅಂಬು ಯಾನೆ ಅನಿಲ್, ಮಧು ಯಾನೆ ಹನುಮಂತು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಸೇರಿದಂತೆ ಐವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಹೊಳೆಬೆನವಳ್ಳಿಯ ಸುಬ್ಬಯ್ಯ ಆಸ್ಪತ್ರೆ […]

Continue Reading

ಹೊಸನಗರ | ಟ್ರಾಕ್ಟರ್- ಕಾರು ಮುಖಾಮುಖಿ ಡಿಕ್ಕಿ ; ಮೂವರಿಗೆ ಗಾಯ

ಅಪಘಾತದಲ್ಲಿ ಕಾರಿನಲ್ಲಿದ್ದ ನಾಗರತ್ನ, ಆನಂದ್ ಹಾಗೂ ರುಕ್ಕಿಣಿ ಅವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಅರುಣ್ ಕುಮಾರ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ಸಂಬಂಧ ಟ್ರಾಕ್ಟರ್ ಚಾಲಕ ಆರೀಫ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading