ರಂಜಿತಾ ಬನಸೋಡೆ ಕೊಲೆ ; ಆರೋಪಿ ರಫೀಕ್ ವಿರುದ್ಧ ಹಿಂದೂಪರ ಸಂಘಟನೆಗಳ ಪ್ರತಿಭಟನೆ ; ಯಲ್ಲಾಪುರ ಬಂದ್ ಕರೆ

ಘಟನೆಯ ಸಂಪೂರ್ಣ ಮಾಹಿತಿಯನ್ನು ಪಡೆದಿರುವ ಅವರು, ತನಿಖೆಯನ್ನು ಚುರುಕುಗೊಳಿಸುವಂತೆ ಮತ್ತು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಂಜಿತಾ ಕೊಲೆ ಆಕ್ರೋಶಕ್ಕೆ ಕಾರಣವಾಗಿದ್ದು, ಹಿಂದೂ ಮಹಿಳೆಯ ಹತ್ಯೆ ಖಂಡಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಭಾನುವಾರ ಯಲ್ಲಾಪುರ ಬಂದ್​​ಗೆ ಕರೆ ನೀಡಿದ್ದಾರೆ. ಜೊತೆಗೆ ಆರೋಪಿ ರಫೀಕ್​ನನ್ನ ಆದಷ್ಟು ಬೇಗ ಬಂಧಿಸಿ ಆತನಿಗೆ ತಕ್ಕ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಪೊಲೀಸ್ ಠಾಣೆಗೆ ಮುತ್ತಿಗೆ ಹಿಂದೂ ಪರ ಸಂಘಟನೆಗಳು ಖಂಡಿಸಿ ಯಲ್ಲಾಪುರ […]

Continue Reading

ಬೆಂಗಳೂರು | ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ; ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್

2025ರ ಡಿಸೆಂಬರ್‌ನಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮಿ ಅವರ ಕುರಿತು ಕೆಲವು ಅಶ್ಲೀಲ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದರ ವಿರುದ್ಧ ಸಿಡಿದ ಅವರು 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಾಮೆಂಟ್ ವಿರುದ್ಧ ಫೋಟೋ ಸಮೇತ ದೂರು ನೀಡಿದ್ದರು. ತನಿಖೆ ಕೈಗೊಂಡಿದ್ದ ಸೈಬರ್ ಪೊಲೀಸರು ಸದ್ಯ 15 ಐಡಿಗಳ ಪೈಕಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಇತ್ತೀಚಿಗಷ್ಟೇ ವಿಜಯಲಕ್ಷ್ಮಿ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಅವರನ್ನು ಭೇಟಿಯಾಗಿದ್ದರು. […]

Continue Reading

ಚಿಕ್ಕಮಗಳೂರು | ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ಮೆಸೇಜ್ ಟಾರ್ಚರ್ ; ಯುವಕನ ಭೀಕರ ಕೊಲೆ

ಆದರೂ ಮಂಜುನಾಥ್ ಮೆಸೇಜ್ ಮಾಡುತ್ತಲೇ ಇದ್ದ. ಇದನ್ನು ಯುವತಿ ತನ್ನನ್ನು ಮದುವೆಯಾಗಲಿರುವ ಯುವಕ ವೇಣುಗೆ ತಿಳಿಸಿದ್ದಾಳೆ. ಈ ಹಿನ್ನೆಲೆ ಮಾತನಾಡಬೇಕು ಎಂದು ಮಂಜುನಾಥ್‌ನನ್ನು ಕರೆಸಿಕೊಂಡ ವೇಣು ಆತನ ಮೇಲೆ ಸ್ನೇಹಿತರಾದ ಕಿರಣ್, ಅಪ್ಪು ಮತ್ತು ಮಂಜು ಜೊತೆ ಜಗಳವಾಡಿದ್ದಾನೆ. ಗಲಾಟೆ ವೇಳೆ ಮಂಜುನಾಥ್‌ಗೆ ಚಾಕುವಿನಿಂದ ಇರಿದು ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಮಂಜುನಾಥ್‌ನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಘಟನೆ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, […]

Continue Reading

ಶಿವಮೊಗ್ಗ | ದಲಿತ ಹಾಗೂ ಹಿಂದುಳಿದ ವರ್ಗಗಳ ನೌಕರರ ವಿರೋಧಿ ಸಂಸ್ಥೆಯಾದ ರಾಷ್ಟ್ರಿಯ ಶಿಕ್ಷಣ ಸಮಿತಿ, CRPF ಶಿವಮೊಗ್ಗ ಶಾಖೆ ಆರೋಪ

ಭದ್ರಾವತಿ ಬಿ.ಆರ್ ಪ್ರಾಜೆಕ್ಟ್ ನ ಶಾಂತಿನಗರದಲ್ಲಿರುವ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸಂತ್ರಸ್ಥೆಯು ಕೆಲಸಮಾಡಿಕೊಂಡಿದ್ದು ಅದೇ ಕಾಲೇಜಿನಲ್ಲಿ ಇಂಗ್ಲೀಷ್ ಉಪನ್ಯಾಸಕರಾದ ಶ್ರೀಪಾದ್ ಹಗ್ಡೆ ರವರು ಪರಿಶಿಷ್ಟಜಾತಿಗೆ ಸೇರಿದ ಸಂತ್ರಸ್ಥೆಯ ಮೇಲೆ ಕಾರಿನಲ್ಲಿ ಕರೆದುಕೊಂಡು ಹೋಗುವಾಗ ಲೈಂಗಿಕ ದೌರ್ಜನ್ಯ ಎಸಗಿರುತ್ತಾರೆ ಎಂಬ ಆರೋಪವಾಗಿದೆ. ಅಲ್ಲದೆ ಅಲ್ಲಿನ ಇತರೇ ಸಿಬ್ಬಂದಿಗಳಾದ ಮಂಗಳ ಮತ್ತು ವಸುಂಧರ ರವರು ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುತ್ತಾರೆ. ಈ ವಿಷಯವಾಗಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ […]

Continue Reading

ಶಿವಮೊಗ್ಗ | ಯುವಕನ ಭೀಕರ ಕೊಲೆ

ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆಯಲು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಎಸ್‌ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತನಿಖೆ ಮುಂದುವರಿದಂತೆ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಭೀಕರ ಅಪಘಾತದಲ್ಲಿ ಬೈಕ್ ಸವಾರ ದುರ್ಮರಣ

ನಗರದ ವಿದ್ಯಾನಗರ ಫ್ಲೈಓವರ್ ಬಳಿ ಸಿಗ್ನಲ್ ಲೈಟ್ ಅಳವಡಿಸಬೇಕೆಂದು ನಾಗರಿಕರು ಹಾಗೂ ಕರವೇ ಸ್ವಾಭಿಮಾನಿ ಬಣ ಬಹಳ ಹಿಂದೆಯೇ ಒತ್ತಾಯ ಮಾಡಿದ್ದರು, ಇಲ್ಲಿವರೆಗೂ ಇಲ್ಲಿಗೆ ಸಿಗ್ನಲ್ ಲೈಟ್ ಅಳವಡಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ನಿರಂತರವಾಗಿ ಇಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳು ಫ್ಲೈಓವರ್ ಕೆಳಗೆ ನಿಂತು ವಾಹನಗಳಿಗೆ ದಂಡ ವಿಧಿಸುತ್ತಿರುತ್ತಾರೆ. ಪೊಲೀಸರಿಗೆ ಹೆದರಿ ಬಹಳಷ್ಟು ವಾಹನಸವಾರರು ರಸ್ತೆಯ ವಿರುದ್ದ ದಿಕ್ಕಿನಲ್ಲಿ ಬೈಕ್ ಹಾಗೂ ಇನ್ನಿತರೆ ವಾಹನ ಸವಾರರು ಚಾಲನೆ ಮಾಡುತ್ತಾರೆ. ಇದರಿಂದ ಕೂಡ ಅಪಘಾತಗಳು ಸಂಭವಿಸುವ ಸಾಧ್ಯತೆ […]

Continue Reading

ಶಿವಮೊಗ್ಗ | ಗಿಫ್ಟ್ ಆಸೆಗೆ 2.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

ಈ ಹಂತದಲ್ಲಿ ದೂರುದಾರರಿಗೆ ಅನುಮಾನ ಬಂದಿದ್ದು, ಅಕ್ಕಪಕ್ಕದವರಲ್ಲಿ ವಿಚಾರಿಸಿದಾಗ ತಾವು ಮೋಸ ಹೋಗಿರುವುದು ಅರಿವಿಗೆ ಬಂದಿದೆ. ಈ ಹಿಂದೆ ಶಿವಮೊಗ್ಗದ ಶ್ರೀರಾಮಪುರದ ಮಹಿಳೆಯೊಬ್ಬರಿಗೂ ಇದೇ ರೀತಿ ಗಿಫ್ಟ್ ಆಸೆ ತೋರಿಸಿ 2.35 ಲಕ್ಷ ರೂ. ವಂಚಿಸಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ

Continue Reading

KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು ; ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ವಶಕ್ಕೆ ಪಡೆದ ಪೊಲೀಸರು

ಇದೇ ತಿಂಗಳ 8ನೇ ತಾರೀಕು ಬೆಂಗಳೂರಿನಿಂದ ಹೈದರಾಬಾದ್​​ಗೆ ಹೊರಟಿದ್ದ KSRTC ಎಸಿ ಸ್ಲೀಪರ್​​ ಐಷಾರಾಮಿ ಬಸ್​​ನಲ್ಲಿ ವೆಂಕಟೇಶ್ವರ್​ ರಾವ್​ ಎಂಬವರು ಪ್ರಯಾಣಿಸುತ್ತಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ಇರುವ ಹೋಟಲ್​​ವೊಂದರಲ್ಲಿ ಪ್ರಯಾಣಿಕರಿಗೆ ಊಟ ಮಾಡಲು ಚಾಲಕ ಬಸ್​​ ನಿಲ್ಲಿಸಿದ್ದ. ಈ ವೇಳೆ ವೆಂಕಟೇಶ್ವರ್​ ರಾವ್ ತಮ್ಮ ಬಳಿ ಇದ್ದ ಹಣದ ಬ್ಯಾಗ್​​ನ ಬಸ್​​ನಲ್ಲೇ ಬಿಟ್ಟು ಊಟಕ್ಕೆ ತೆರಳಿದ್ದರು. ಆದರೆ ಹಿಂದಿರುಗಿ ಬಂದು ನೋಡುವಾಗ ಸೀಟ್​​ನಲ್ಲಿದ್ದ ಬ್ಯಾಗ್​​ ನಾಪತ್ತೆಯಾಗಿತ್ತು. ಕಾರಲ್ಲಿ ಬಂದ ವ್ಯಕ್ತಿ ಸೀದಾ ಬಸ್​​ಗೆ ನುಗ್ಗಿ […]

Continue Reading

ಚಿತ್ರದುರ್ಗ | ಭೀಕರ ಅಪಘಾತ ಸುಟ್ಟು ಕರಕಲಾದ ಸೀಬರ್ಡ್ ಬಸ್ ನಲ್ಲಿದ್ದ ಪ್ರಯಾಣಿಕರು ; ಶಿವಮೊಗ್ಗದ ಇಬ್ಬರು ಸುರಕ್ಷಿತ

ತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ ಬರುವ ಗೋರ್ಲತ್ತು ಗ್ರಾಮದ ಬಳಿ ಬೆಳಗಿನ ಜಾವ 3 ಗಂಟೆಗೆ ಈ ಘಟನೆ ನಡೆದಿದೆ. ಮೃತಪಟ್ಟವರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಮೃತಪಟ್ಟವರ ನಿಖರವಾದ ಮಾಹಿತಿಯನ್ನು ಪೊಲೀಸ್ ಇಲಾಖೆ ಇನ್ನಷ್ಟೇ ನೀಡಬೇಕಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್​ ಬಸ್​​ಗೆ ಹಿರಿಯೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್​​ ಲಾರಿ ಮುಖಾಮುಖಿ ಡಿಕ್ಕಿಯಾದ ಕಾರಣ ಈ ದುರಂತ ಸಂಭವಿಸಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ […]

Continue Reading