ಮದುವೆ ದಿನವೇ ಯುವತಿ ಪರಾರಿ!

ಮುಂಜಾನೆ 1:00 ಗಂಟೆಯ ಸುಮಾರಿಗೆ ಮನೆಯಲ್ಲಿ ಮಲಗಿದ್ದ ಯುವತಿ, 4:00 ಗಂಟೆಯ ಹೊತ್ತಿಗೆ ತನ್ನ ಕೋಣೆಯಲ್ಲಿ ಕಂಡುಬಂದಿಲ್ಲ. ಪರಿವಾರದವರು ಮತ್ತು ಸಂಬಂಧಿಕರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಯುವತಿಯ ಸುಳಿವು ಸಿಗದ ಕಾರಣ ಯುವತಿಯ ಚಿಕ್ಕಪ್ಪ ಜಹೀರಾ ಖಾನ್ ಅವರು ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು ದೂರು ದಾಖಲಿಸಿದ್ದರು. ನಾಪತ್ತೆಯಾದ ಯುವತಿಯ ಚಹರೆ ನಾಪತ್ತೆಯಾದ ಕುಮಾರಿ ಸಫಾ ಅಫ್ಜಲ್ ಖಾನ್ 25 ವರ್ಷ ಪ್ರಾಯದವಳಾಗಿದ್ದು, ಸುಮಾರು 5 ಅಡಿ 2 ಇಂಚು ಎತ್ತರವಿದ್ದಾಳೆ. […]

Continue Reading

ಶಿವಮೊಗ್ಗ | ಶಿಕಾರಿಗೆ ಬಳಸುತ್ತಿದ್ದ 45 ನಾಡ ಬಾಂಬ್ ವಶಕ್ಕೆ ; ಓರ್ವ ಸೆರೆ, ಇಬ್ಬರು ಪರಾರಿ

ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ, ಭಾಸ್ಕರ್ ಹಾಗೂ ನಾಗರಾಜ್ ಪರಾರಿಯಾಗಿದ್ದು, ಡಾಕಪ್ಪನನ್ನು ಬಂಧಿಸಲಾಗಿದೆ. ಈ ವೇಳೆ 45 ನಾಡ ಬಾಂಬ್​​​ಗಳ ಜೊತೆಗೆ ಒಂದು ಬೈಕ್​​ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಾಕಪ್ಪನನ್ನು ಹೊಸನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಪರಾರಿಯಾಗಿರುವ ಇಬ್ಬರು ಆರೋಪಿಗಳಾದ ಭಾಸ್ಕರ್ ಹಾಗೂ ನಾಗರಾಜ್ ಹುಡುಕಾಟಕ್ಕೆ ಅರಣ್ಯಾಧಿಕಾರಿಗಳು ಬಲೆ ಬೀಸಿದ್ದಾರೆ. ಕಾರ್ಯಾಚರಣೆಯಲ್ಲಿ ಹೊಸನಗರ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್., ಉಪ ವಲಯ ಅರಣ್ಯಾಧಿಕಾರಿಗಳಾದ ಅನಿಲ್ ಬೆಳ್ಳೆನವರ್, ಭರತ್ ಕುಮಾರ್, ಗಸ್ತು ಅರಣ್ಯ ಪಾಲಕ ಮಂಜುನಾಥ […]

Continue Reading

ತೀರ್ಥಹಳ್ಳಿ | ಕುಡಿಯುವ ನೀರಿನ ಬಾವಿಗೆ ವಿಷ ; ದೂರು ದಾಖಲು

ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಘವೇಂದ್ರ ಅವರು ತಮ್ಮ ಜಮೀನಿಗೆ ತೆರಳಿದ ಸಂದರ್ಭದಲ್ಲಿ, ಬಾವಿಯ ಸಮೀಪ ಹೋದಾಗ ನೀರಿನಲ್ಲಿ ವಿಷದ ವಾಸನೆ ಬರುತ್ತಿರುವುದು ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Continue Reading

ಹೊಸನಗರ | ಕಾರು ಡಿಕ್ಕಿ ; ಪಾದಾಚಾರಿ ಸಾವು

ತಕ್ಷಣ ಸ್ಥಳೀಯರು ಗಾಯಾಳುವನ್ನು ರಿಪ್ಪನ್ ಪೇಟೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅಷ್ಟರಲ್ಲಾಗಲೇ ಇಬ್ರಾಹಿಂ ಮೃತಪಟ್ಟಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್ ಪೇಟೆಯ ಶವಗಾರಕ್ಕೆ ಸಾಗಿಸಲಾಗಿದೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಮಂತ್ರಾಲಯಕ್ಕೆ ತೆರಳುತ್ತಿದ್ದ ಕರ್ನಾಟಕದ 8 ಜನ ಭಕ್ತರು ಭೀಕರ ಅಪಘಾತದಲ್ಲಿ ದುರ್ಮರಣ

ಘಟನೆಯಲ್ಲಿ ಕುಮಾರ್ (50), ದೀಪಿಕಾ (42), ಸುನಿಲ್ (40), ಯಶೋಧಮ್ಮ (60), ಪುಟ್ಟಮ್ಮ (55), ಬೆಳ್ಳಿ (3), ಲೋಲಾಕ್ಷಿ ಹಾಗೂ ಮೀನಾಕ್ಷಿ ಎಂಬವರು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಮೃತರಲ್ಲಿ ಐವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಮೂರು ವರ್ಷದ ಮಗು ಸೇರಿದೆ. 7 ಮಂದಿ ತೀವ್ರ ಗಾಯಗೊಂಡಿದ್ದು, ಅವರನ್ನು ಕರ್ನೂಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ನಾಲ್ವರು ಎಮ್ಮಿಗನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಹಾಸನ ಹಾಗೂ ಚಿಕ್ಕಮಗಳೂರು ಮೂಲದ ಒಟ್ಟು 18 ಮಂದಿ ಗೂಡ್ಸ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ […]

Continue Reading

ಶಿವಮೊಗ್ಗ | ರೈಲಿನಲ್ಲಿ ಕಳ್ಳತನ ; ಆರೋಪಿ ಪೊಲೀಸ್ ವಶಕ್ಕೆ

ಬೆಂಗಳೂರಿನ ನಿವಾಸಿ ಅಂಬಿಕಾ ಎಂಬವರು 12.03.2026 ರಂದು ತಮ್ಮ ಮಕ್ಕಳೊಂದಿಗೆ ತಾಳಗುಪ್ಪ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಲ್ಲಿ (ರೈಲು ಸಂಖ್ಯೆ 20651) ಕೆಎಸ್‌ಆರ್ ಬೆಂಗಳೂರು ಸಿಟಿ ನಿಲ್ದಾಣದಿಂದ ಆನಂದಪುರಂಗೆ ಪ್ರಯಾಣಿಸುತ್ತಿದ್ದರು. ಸಂಜೆ 8:15 ರ ಸಮಯ, ತಾಳಗುಪ್ಪ ಟ್ರೈನ್​ ಕುಂಸಿ ನಿಲ್ದಾಣದಿಂದ ಮುಂದಕ್ಕೆ ಚಲಿಸಿದಾಗ, ಸುಮಾರು 35 ಗ್ರಾಂ ಚಿನ್ನಾಭರಣ ಹಾಗೂ 10,000 ರೂಪಾಯಿ ನಗದು ಇದ್ದ ಹ್ಯಾಂಡ್‌ಬ್ಯಾಗ್ ಕಳುವಾಗಿರುವುದು ಅವರ ಗಮನಕ್ಕೆ ಬಂದಿದೆ. ಈ ಕುರಿತು ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಈ ಸಂಬಂಧ ಆರ್‌ಪಿಎಫ್ […]

Continue Reading

ಶಿವಮೊಗ್ಗ | ರಸ್ತೆಯಲ್ಲಿ ಪಲ್ಟಿಯಾದ ಖಾಸಗಿ ಬಸ್, ಹಲವರಿಗೆ ಗಾಯ ; ಗಾಯಳುಗಳನ್ನ ಭೇಟಿಯಾಗಿ ಸಾಂತ್ವನ ಧೈರ್ಯ ತುಂಬಿದ ಸಂಸದ ಬಿ. ವೈ. ಆರ್

ಆದರೆ, ಅದೇ ಕ್ಷಣದಲ್ಲಿ ಬೈಕ್ ಸವಾರ ಮತ್ತೆ ಎಡಕ್ಕೆ ಬಂದ ಕಾರಣ, ಆತನನ್ನು ಉಳಿಸಲು ಚಾಲಕ ಅನಿವಾರ್ಯವಾಗಿ ಬಸ್ಸನ್ನು ಮತ್ತೆ ಬಲಕ್ಕೆ ಸರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಭರದಲ್ಲಿ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿದೆ. ಸ್ಥಳೀಯರು, ದಾರಿಯಲ್ಲಿ ಹೋಗುತ್ತಿದ್ದ ಇತರೆ ವಾಹನ ಸವಾರರು ತಕ್ಷಣ ಗಾಯಾಳುಗಳನ್ನು ರಕ್ಷಿಸಿದ್ದರೆ. ತಕ್ಷಣವೇ ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಕೆಲವರನ್ನು ಶಿವಮೊಗ್ಗದ […]

Continue Reading

ಧಾರವಾಡ | ಮನೆಗೆ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಕೊಲೆ

ಧಾರವಾಡ ಜಿಲ್ಲಾಸ್ಪತ್ರೆ ಎದುರು ದೊಡ್ಡಮಟ್ಟದಲ್ಲಿ ಜನ ಜಮಾಯಿಸಿದ್ದು, ಸ್ಥಳಕ್ಕೆ ವಿದ್ಯಾಗಿರಿ, ಉಪನಗರ ಹಾಗೂ ಶಹರ ಠಾಣೆಯ ಪೊಲೀಸರೂ ಭೇಟಿ ನೀಡಿದ್ದಾರೆ.

Continue Reading

ಝಾಂಬಿ ಡ್ರಗ್ಸ್ ; ಸುಳ್ಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು,ಆತಂಕ ಸೃಷ್ಟಿಸಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿ

ವೈದ್ಯಕೀಯ ವರದಿಯ ಪ್ರಕಾರ ಆ ವ್ಯಕ್ತಿ ಯಾವುದೇ ಮಾದಕವಸ್ತು ಸೇವಿಸಿರಲಿಲ್ಲ. ಅನಾರೋಗ್ಯವೇ ಕಾರಣ: ಆ ವ್ಯಕ್ತಿಗೆ ತೀವ್ರವಾದ ಸಂಧಿವಾತ (ಆರ್ಥೈಟಿಸ್) ಇರುವುದು ದೃಢಪಟ್ಟಿದೆ. ಮಿಶ್ರ ಪ್ರತಿಕ್ರಿಯೆ: ಸಂಧಿವಾತಕ್ಕೆ ವೈದ್ಯರು ನೀಡಿದ್ದ ನೋವು ನಿವಾರಕ ಮಾತ್ರೆಗಳ ಜೊತೆಗೆ ಆತ ಮದ್ಯ ಸೇವಿಸಿದ್ದರಿಂದ ಮೈಮೇಲೆ ಪ್ರಜ್ಞೆ ಇಲ್ಲದಂತೆ ವರ್ತಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಪೊಲೀಸ್ ಆಯುಕ್ತರ ಎಚ್ಚರಿಕೆ: ಪ್ರಕರಣದ ಕುರಿತು ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, “ಆಧಾರರಹಿತ ಮಾಹಿತಿ ಅಥವಾ ವಿಡಿಯೋಗಳನ್ನು ಸಾರ್ವಜನಿಕರು ಹಂಚಿಕೊಳ್ಳಬಾರದು. ಈ […]

Continue Reading

ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿಯ ಶವ ಪತ್ತೆ

ಬಾಲಕಿ ನಾಪತ್ತೆಯಾದ ವಿಚಾರ ಗೊತ್ತಾಗುತ್ತಿದ್ದಂತೆ ರಕ್ಷಣಾ ತಂಡಗಳು ಥರ್ಮಲ್ ಡ್ರೋನ್ ಮೂಲಕ ಬಾಲಕಿ ಪತ್ತೆಗೆ ಹುಡುಕಾಟ ನಡೆಸಿದ್ದರು. ಪೊಲೀಸ್‌ ಇಲಾಖೆ, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಹಲವು ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿತ್ತು. ಬಾಲಕಿ ಮಿಸ್ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡಿತ್ತು. ಆದರೆ ಬಾಲಕಿ ರಕ್ಷಣಾ ತಂಡಕ್ಕೆ ಜೀವಂತವಾಗಿ ಸಿಗದೇ ಇರುವುದು ಎಲ್ಲರಿಗೂ ಬೇಸರ ಮೂಡಿಸಿದೆ.

Continue Reading