ಚಿಕ್ಕಮಗಳೂರು | ಪೊಲೀಸರ ಎದುರೇ ಕತ್ತು ಕುಯ್ದುಕೊಂಡ ಯುವಕ ; ಆಸ್ಪತ್ರೆಯಲ್ಲಿ ಹೊಲಿಗೆ ಹಾಕುತ್ತಿದ್ದಂತೆ ಪರಾರಿ

ಇದೆ ವಿಚಾರ ಸಂಬಂಧ ಅತ್ತೆ ಬಳಿ ಹಣ ಕೇಳಿದ್ದಾನೆ ಎನ್ನಲಾಗಿದೆ. ಈ ವೇಳೆ ಅತ್ತೆ ಹಣ ನೀಡಲು ನಿರಾಕರಿಸಿದರು ಎಂಬ ಕಾರಣಕ್ಕೆ ಪೊಲೀಸರ ಬಳಿ ನ್ಯಾಯ ಕೇಳಲು ಬಂದ ಯುವಕ ಬ್ಲೆಡ್ ನಿಂದ ಕತ್ತು ಕುಯ್ದುಕೊಂಡಿದ್ದಾನೆ. ಈ ವೇಳೆ ತಕ್ಷಣವೇ ಯುವಕನನ್ನು ಆಸ್ಪತ್ರೆಗೆ ದಾಖಲೀಸಲಾಗಿದೆ.ಹಾಗೂ ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ನರ್ಸ್ ಗಳು ಹೊಲಿಗೆ ಹಾಕುತ್ತಿದ್ದಂತೆ ಯುವಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಬಳಿ ಈ ಒಂದು ಘಟನೆ ನಡೆದಿದೆ

Continue Reading

ಶಿವಮೊಗ್ಗ | ಅಮ್ಜದ್ ಕೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿದಂತೆ ರೌಡಿಶೀಟರ್‌ಗಳು ಬೇರೆ ಬೇರೆ ಜೈಲ್ ಗೆ ಶಿಫ್ಟ್

ಈ ಪ್ರಕರಣದ ಪ್ರಮುಖ ಆರೋಪಿಯಾದ ಫೌಝಾನ್‌ ನನ್ನು ಇಂದು ಶಿವಮೊಗ್ಗದಿಂದ ಬೆಳಗಾವಿಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಫೌಝಾನ್ ಜೊತೆಗೆ ಶಿವಮೊಗ್ಗದ ಕುಖ್ಯಾತ ರೌಡಿಶೀಟರ್ ಆಗಿರುವ ಕಡೆಕಲ್ ಅಬಿದ್‌ನನ್ನೂ ಸಹ ಸ್ಥಳಾಂತರಿಸಲಾಗಿದೆ. ಅಬಿದ್ ಮೇಲೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 20 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈತನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ. ಅಮ್ಜದ್ ಕೊಲೆ ಹೇಗೆಲ್ಲ ಆಯಿತು.. ಅಮ್ಜದ್ ಪೊಲೀಸ್ ಇಲಾಖೆಯ ನೂರಾರು ಪ್ರಕರಣಗಳಲ್ಲಿ ಸಾಕ್ಷಿದಾರನಾಗಿದ್ದ. ಶಿವಮೊಗ್ಗದ ರೌಡಿಸಂ ಜಗತ್ತಿನ […]

Continue Reading

3.5 ಕೋಟಿ ರೂ. ಮೌಲ್ಯದ ಗ್ರಾಹಕರ ಚಿನ್ನವನ್ನು ಅಡಮಾನ ಇಟ್ಟಿದ್ದ ಬ್ಯಾಂಕ್ ಅಧಿಕಾರಿ ಬಂಧನ

ತನಿಖೆಯ ಸಮಯದಲ್ಲಿ ಆರೋಪಿಗಳು ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಹಣವನ್ನು ಖರ್ಚು ಮಾಡಿದ್ದಾರೆ ಎಂಬುದು ಪತ್ತೆಯಾಗಿದೆ. ಪ್ರಕರಣ ಸಂಬಂಧ ಆರೋಪಿ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್ ಅನ್ನು ಬಂಧಿಸಲಾಗಿದೆ. ನಾವು ಚಿನ್ನವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ. ಇಲ್ಲಿಯವರೆಗೆ ಸುಮಾರು 700 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಲೋಕೇಶ್ ಬಿ ಜಗಲಾಸರ್ ಹೇಳಿದರು. ಇದೇ ವೇಳೆ, ಗ್ರಾಹಕರಿಗೆ ಬ್ಯಾಂಕ್ ಲಾಕರ್‌ಗಳಲ್ಲಿ ಇರಿಸಲಾಗಿರುವ ತಮ್ಮ ಆಭರಣಗಳ ಸುರಕ್ಷತೆ ಮತ್ತು ಸ್ಥಿತಿಯನ್ನು ಪರಿಶೀಲಿಸುವಂತೆ ಪೊಲೀಸರು ಸಲಹೆ ನೀಡಿದರು.

Continue Reading

ಶಿವಮೊಗ್ಗ | ಹೊಂಕೇರಿ ಗ್ರಾಮದಲ್ಲಿ ಹಾಡುಹಗಲೇ ಕಳ್ಳತನ ; ಗ್ರಾಮಸ್ಥರಿಂದ ಕಳ್ಳನ ಸೆರೆ

ಹೊಂಕೇರಿ ಗ್ರಾಮದ ರೈತರೊಬ್ಬರು ತಾವು ಬೆಳೆದ ಬೆಲ್ಲವನ್ನು ಮಾರಾಟ ಮಾಡಿ ಬಂದ 50,000/- ರೂಪಾಯಿ ನಗದು ಹಣವನ್ನು ಮನೆಯಲ್ಲಿ ಇರಿಸಿಕೊಂಡಿದ್ದರು. ಇದಲ್ಲದೆ, ಮನೆಯಲ್ಲಿ ಚಿನ್ನಾಭರಣಗಳು ಮತ್ತು ಇತರೆ ಬೆಲೆಬಾಳುವ ವಸ್ತುಗಳೂ ಇದ್ದವು. ಹಾಡುಹಗಲೇ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಕಳ್ಳರು ಬಳಸಿಕೊಂಡಿದ್ದಾರೆ. ಮನೆಯ ಕಿಟಕಿ ಮತ್ತು ಬಾಗಿಲುಗಳನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ಒಡೆದು ನಗದು ಹಣ ಮತ್ತು ಚಿನ್ನಾಭರಣಗಳನ್ನು ದೋಚಿದ್ದಾರೆ. ಗ್ರಾಮಸ್ಥರ ಸಮಯಪ್ರಜ್ಞೆ: ಕಳ್ಳತನ ನಡೆಯುತ್ತಿದ್ದಾಗ, ಮನೆಯ ಸುತ್ತಮುತ್ತಲಿನ ಗ್ರಾಮಸ್ಥರು ಕೆಲವು ಅನುಮಾನಾಸ್ಪದ ಚಟುವಟಿಕೆಗಳನ್ನು ಗಮನಿಸಿದ್ದಾರೆ. […]

Continue Reading

ಶಿವಮೊಗ್ಗ | ಸಾಲಬಾಧೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಸಾಲ ತೀರಿಸಲಾಗದ ಚಿಂತೆಯಲ್ಲಿದ್ದ ಅವರು, ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.ಗೋಪಾಲ್ ತುಂಬಾ ಸಮಯದವರೆಗೆ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆಯ ಹಿತ್ತಲಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕೊಲೆ ಆರೋಪ ; ಮಾಜಿ ಸಚಿವ ಬೈರತಿ ಬಸವರಾಜ್ ಬಂಧನ

ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ ಬೈರತಿ ಬಸವರಾಜ್ ಅವರು ಇಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ದೇವನಹಳ್ಳಿ ಎಸಿಪಿ ಹರ್ಷ ಅವರ ನೇತೃತ್ವದ ಪೊಲೀಸ್ ತಂಡ ಹಾಗೂ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿತ್ತು. ಶಾಸಕರು ಬರುತ್ತಿದ್ದಂತೆಯೇ ವಶಕ್ಕೆ ಪಡೆಯಲು ಟರ್ಮಿನಲ್ 1ರ ಬಳಿ ಭಾರೀ ಬಂದೋಬಸ್ತ್ ಮಾಡಲಾಗಿತ್ತು. ಕೆಎಸ್ಆರ್ಪಿ (KSRP) ತುಕಡಿಗಳನ್ನು ಕೂಡ ಮುನ್ನೆಚ್ಚರಿಕಾ ಕ್ರಮವಾಗಿ ನಿಯೋಜಿಸಲಾಗಿತ್ತು. ಅಹಮದಾಬಾದ್‌ನಿಂದ ಹೊರಟಿದ್ದ ಇಂಡಿಗೋ ವಿಮಾನ (6E683) ಸಂಜೆ […]

Continue Reading

ಶಿವಮೊಗ್ಗ | ಗಾಜನೂರು ಬಳಿ ಭೀಕರ ಕೊಲೆ

ಕೊಲೆ ಮಾಡಿ ಪರಾರಿಯಾಗಿರುವ ಸ್ನೇಹಿತರಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Continue Reading

ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ತಂದೆ, ದಂತವೈದ್ಯೆ ತಾಯಿಯನ್ನು ಕೊಂದ ಟೆಕ್ಕಿ

ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ನೆರೆಮನೆಯವರು ಮತ್ತು ಖಾಸಗಿ ಆಸ್ಪತ್ರೆಯ ವೈದ್ಯೆ ಡಾ. ಮಾಧವಿ ನಾಯರ್ ನೀಡಿದ ದೂರಿನ ಆಧಾರದ ಮೇಲೆ, ರೋಹನ್ ವಿರುದ್ಧ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಶವಗಳನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ದಂಪತಿಯ ಮಗಳು ಅಮೆರಿಕದಿಂದ ಆಗಮಿಸುತ್ತಿದ್ದು, ಅವರು ಬಂದ ನಂತರ ಶವಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಲಾಡ್ಜ್​​ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ

ಈ ವೇಳೆ ಮಹಿಳಾ ಸಿಬ್ಬಂದಿ ತಡೆಯಲು ಯತ್ನಿಸಿದರೂ ಲೆಕ್ಕಿಸದೆ, ನನಗೆ ಬುದ್ಧಿವಾದ ಹೇಳಲು ನೀವ್ಯಾರು? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮುರಿದು ಬಿದ್ದಿದ್ದ ಬಾಗಿಲಿನ ಅಲ್ಯೂಮಿನಿಯಂ ಪಟ್ಟಿಯನ್ನು ಹಿಡಿದುಕೊಡು ಇಬ್ಬರ ಮೇಲೆ ಮನಬಂದಂತೆ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಇದನ್ನು ತಡೆಯಲು ಹೋದ ಮಹಿಳಾ ಸಿಬ್ಬಂದಿಯ ಬಟ್ಟೆ ಹಿಡಿದು ಎಳೆದಾಡಿದ ಆರೋಪಿಯು, ಅವರನ್ನು ಜೋರಾಗಿ ತಳ್ಳಿ ಒಬ್ಬನ ಮೇಲೆ ಕೊಲೆಗೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Continue Reading

ಶಿವಮೊಗ್ಗ | ಡಿವೈಡರಗೆ ಆಟೋ ಡಿಕ್ಕಿ ; ಯುವತಿ ಸಾವು

ಹೋಟೆಲ್​ ಒಂದರ ಮಾಲೀಕರಾದ ಸುದರ್ಶನ್ ಮತ್ತು ಕುಟುಂಬದವರು ಉಡುಪಿಯ ಹೆಬ್ರಿ ಸಮೀಪದ ಸಂಬಂಧಿಕರ ಮನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಆಟೋದಲ್ಲಿ ಕುರುವಳ್ಳಿ ಮಾರ್ಗವಾಗಿ ವಾಪಸ್ ಆಗುತ್ತಿದ್ದಾಗ, ನಾಲೂರು ಬಳಿಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಆಟೋ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋದ ಬಲ ಭಾಗದಲ್ಲಿ ಕುಳಿತಿದ್ದ ನಿಶ್ಮಿತಾ ಶೆಟ್ಟಿ (27) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೋಟೆಲ್ ಮಾಲೀಕ ಸುದರ್ಶನ್ (35) ಮತ್ತು 7 ವರ್ಷದ ಮಗು ಸಂಚಿತ್ ಅವರಿಗೆ ಗಂಭೀರ […]

Continue Reading