ಶಿವಮೊಗ್ಗ | ಹೊಂಕೇರಿ ಗ್ರಾಮದಲ್ಲಿ ಹಾಡುಹಗಲೇ ಕಳ್ಳತನ ; ಗ್ರಾಮಸ್ಥರಿಂದ ಕಳ್ಳನ ಸೆರೆ

ಹೊಂಕೇರಿ ಗ್ರಾಮದ ರೈತರೊಬ್ಬರು ತಾವು ಬೆಳೆದ ಬೆಲ್ಲವನ್ನು ಮಾರಾಟ ಮಾಡಿ ಬಂದ 50,000/- ರೂಪಾಯಿ ನಗದು ಹಣವನ್ನು ಮನೆಯಲ್ಲಿ ಇರಿಸಿಕೊಂಡಿದ್ದರು. ಇದಲ್ಲದೆ, ಮನೆಯಲ್ಲಿ ಚಿನ್ನಾಭರಣಗಳು ಮತ್ತು ಇತರೆ ಬೆಲೆಬಾಳುವ ವಸ್ತುಗಳೂ ಇದ್ದವು. ಹಾಡುಹಗಲೇ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಕಳ್ಳರು ಬಳಸಿಕೊಂಡಿದ್ದಾರೆ. ಮನೆಯ ಕಿಟಕಿ ಮತ್ತು ಬಾಗಿಲುಗಳನ್ನು ಮುರಿದು ಒಳನುಗ್ಗಿದ ಕಳ್ಳರು, ಕಪಾಟನ್ನು ಒಡೆದು ನಗದು ಹಣ ಮತ್ತು ಚಿನ್ನಾಭರಣಗಳನ್ನು ದೋಚಿದ್ದಾರೆ. ಗ್ರಾಮಸ್ಥರ ಸಮಯಪ್ರಜ್ಞೆ: ಕಳ್ಳತನ ನಡೆಯುತ್ತಿದ್ದಾಗ, ಮನೆಯ ಸುತ್ತಮುತ್ತಲಿನ ಗ್ರಾಮಸ್ಥರು ಕೆಲವು ಅನುಮಾನಾಸ್ಪದ ಚಟುವಟಿಕೆಗಳನ್ನು ಗಮನಿಸಿದ್ದಾರೆ. […]

Continue Reading

ಶಿವಮೊಗ್ಗ | ಸಾಲಬಾಧೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಸಾಲ ತೀರಿಸಲಾಗದ ಚಿಂತೆಯಲ್ಲಿದ್ದ ಅವರು, ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.ಗೋಪಾಲ್ ತುಂಬಾ ಸಮಯದವರೆಗೆ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಆತಂಕಗೊಂಡು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆಯ ಹಿತ್ತಲಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕೊಲೆ ಆರೋಪ ; ಮಾಜಿ ಸಚಿವ ಬೈರತಿ ಬಸವರಾಜ್ ಬಂಧನ

ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ ಬೈರತಿ ಬಸವರಾಜ್ ಅವರು ಇಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ದೇವನಹಳ್ಳಿ ಎಸಿಪಿ ಹರ್ಷ ಅವರ ನೇತೃತ್ವದ ಪೊಲೀಸ್ ತಂಡ ಹಾಗೂ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿತ್ತು. ಶಾಸಕರು ಬರುತ್ತಿದ್ದಂತೆಯೇ ವಶಕ್ಕೆ ಪಡೆಯಲು ಟರ್ಮಿನಲ್ 1ರ ಬಳಿ ಭಾರೀ ಬಂದೋಬಸ್ತ್ ಮಾಡಲಾಗಿತ್ತು. ಕೆಎಸ್ಆರ್ಪಿ (KSRP) ತುಕಡಿಗಳನ್ನು ಕೂಡ ಮುನ್ನೆಚ್ಚರಿಕಾ ಕ್ರಮವಾಗಿ ನಿಯೋಜಿಸಲಾಗಿತ್ತು. ಅಹಮದಾಬಾದ್‌ನಿಂದ ಹೊರಟಿದ್ದ ಇಂಡಿಗೋ ವಿಮಾನ (6E683) ಸಂಜೆ […]

Continue Reading

ಶಿವಮೊಗ್ಗ | ಗಾಜನೂರು ಬಳಿ ಭೀಕರ ಕೊಲೆ

ಕೊಲೆ ಮಾಡಿ ಪರಾರಿಯಾಗಿರುವ ಸ್ನೇಹಿತರಿಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Continue Reading

ನೌಕಾಪಡೆಯ ನಿವೃತ್ತ ಕ್ಯಾಪ್ಟನ್ ತಂದೆ, ದಂತವೈದ್ಯೆ ತಾಯಿಯನ್ನು ಕೊಂದ ಟೆಕ್ಕಿ

ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ನೆರೆಮನೆಯವರು ಮತ್ತು ಖಾಸಗಿ ಆಸ್ಪತ್ರೆಯ ವೈದ್ಯೆ ಡಾ. ಮಾಧವಿ ನಾಯರ್ ನೀಡಿದ ದೂರಿನ ಆಧಾರದ ಮೇಲೆ, ರೋಹನ್ ವಿರುದ್ಧ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಶವಗಳನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ದಂಪತಿಯ ಮಗಳು ಅಮೆರಿಕದಿಂದ ಆಗಮಿಸುತ್ತಿದ್ದು, ಅವರು ಬಂದ ನಂತರ ಶವಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಲಾಡ್ಜ್​​ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ

ಈ ವೇಳೆ ಮಹಿಳಾ ಸಿಬ್ಬಂದಿ ತಡೆಯಲು ಯತ್ನಿಸಿದರೂ ಲೆಕ್ಕಿಸದೆ, ನನಗೆ ಬುದ್ಧಿವಾದ ಹೇಳಲು ನೀವ್ಯಾರು? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಮುರಿದು ಬಿದ್ದಿದ್ದ ಬಾಗಿಲಿನ ಅಲ್ಯೂಮಿನಿಯಂ ಪಟ್ಟಿಯನ್ನು ಹಿಡಿದುಕೊಡು ಇಬ್ಬರ ಮೇಲೆ ಮನಬಂದಂತೆ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಇದನ್ನು ತಡೆಯಲು ಹೋದ ಮಹಿಳಾ ಸಿಬ್ಬಂದಿಯ ಬಟ್ಟೆ ಹಿಡಿದು ಎಳೆದಾಡಿದ ಆರೋಪಿಯು, ಅವರನ್ನು ಜೋರಾಗಿ ತಳ್ಳಿ ಒಬ್ಬನ ಮೇಲೆ ಕೊಲೆಗೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Continue Reading

ಶಿವಮೊಗ್ಗ | ಡಿವೈಡರಗೆ ಆಟೋ ಡಿಕ್ಕಿ ; ಯುವತಿ ಸಾವು

ಹೋಟೆಲ್​ ಒಂದರ ಮಾಲೀಕರಾದ ಸುದರ್ಶನ್ ಮತ್ತು ಕುಟುಂಬದವರು ಉಡುಪಿಯ ಹೆಬ್ರಿ ಸಮೀಪದ ಸಂಬಂಧಿಕರ ಮನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಆಟೋದಲ್ಲಿ ಕುರುವಳ್ಳಿ ಮಾರ್ಗವಾಗಿ ವಾಪಸ್ ಆಗುತ್ತಿದ್ದಾಗ, ನಾಲೂರು ಬಳಿಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಆಟೋ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಟೋದ ಬಲ ಭಾಗದಲ್ಲಿ ಕುಳಿತಿದ್ದ ನಿಶ್ಮಿತಾ ಶೆಟ್ಟಿ (27) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೋಟೆಲ್ ಮಾಲೀಕ ಸುದರ್ಶನ್ (35) ಮತ್ತು 7 ವರ್ಷದ ಮಗು ಸಂಚಿತ್ ಅವರಿಗೆ ಗಂಭೀರ […]

Continue Reading

ಅಪರಿಚಿತನಿಂದ ಬಂತು ವಿಡಿಯೋ ಕಾಲ್​ ; ರಿಸೀವ್ ಮಾಡಿದ ಮಹಿಳೆ ಶಾಕ್..!

ಇದನ್ನು ನಂಬಿದ ಮಹಿಳೆ ಕಾಲ್ ರಿಸೀವ್ ಮಾಡಿದಾಗ, ಆ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ.ಮೊದಲ ಎರಡು ಬಾರಿ ಕರೆ ಬಂದಾಗ ಮಹಿಳೆ ತನ್ನ ಮುಖ ಕಾಣದಂತೆ ಕ್ಯಾಮೆರಾ ತಿರುಗಿಸಿ ಕಾಲ್ ರಿಸೀವ್ ಮಾಡಿದ್ದರು. ಆದರೆ ವ್ಯಕ್ತಿ ತನ್ನ ಮುಖ ತೋರಿಸಿರಲಿಲ್ಲ. ಕೂಡಲೇ ಎಚ್ಚೆತ್ತ ಮಹಿಳೆ, ರಾತ್ರಿ ಮೊಬೈಲ್‌ನಲ್ಲಿ ಸ್ಕ್ರೀನ್ ರೆಕಾರ್ಡಿಂಗ್ ಆನ್ ಮಾಡಿಕೊಂಡು ಆ ನಂಬರ್‌ಗೆ ವಿಡಿಯೋ ಕಾಲ್ ಮಾಡಿದ್ದಾರೆ. ಆಗ ಆ ವ್ಯಕ್ತಿ ತನ್ನ ಖಾಸಗಿ ಅಂಗಗಳನ್ನು ಪ್ರದರ್ಶಿಸಿದ್ದು, ಇದನ್ನು ಮಹಿಳೆ ಸಾಕ್ಷ್ಯವಾಗಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಈ […]

Continue Reading

ಶಿವಮೊಗ್ಗ | ಪೋದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಮಾತಾಂತರ ಆರೋಪ ; ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮತಾಂತರಗೊಂಡ ಪ್ರಿಯತಾ ಚರ್ಚ್ಗೆ ಹೋಗುವುದು ಬರುವುದು ಮಾಡುತ್ತಿದ್ದಳು. ಮನೆಯಲ್ಲಿ ಬೈಬಲ್ ತಂದು ಇಟ್ಟುಕೊಂಡು ಓದುತ್ತಿದ್ದಳು. ಜೊತೆಗೆ ಏಸುಕ್ರಿಸ್ತನನ್ನು ಪೂಜಿಸುತ್ತಿದ್ದಳು. ಈ ಬಗ್ಗೆ ಹಲವಾರು ಬಾರಿ ಈರೀತಿ ಮಾಡದಂತೆ ಹೇಳಿದ್ದರೂ ಸಹ ಕ್ರಿಶ್ಚಿಯನ್ ಧರ್ಮ ಪಾಲಿಸುತ್ತಿದ್ದೇನೆ. ನೀವು ಅದೇ ಧರ್ಮವನ್ನು ಪಾಲಿಸಿ ಎಂದು ಹೇಳುತ್ತಿದ್ದಳು. ನಾನು ಇದಕ್ಕೆ ಒಪುತ್ತಿರಲಿಲ್ಲ ಎಂದರು. ನನ್ನ ಹಿರಿಯ ಮಗಳಿಗೂ ಕ್ರಿಶ್ಚಿಯನ್ ಧರ್ಮವನ್ನು ಪಾಲಿಸುವಂತೆ ಒತ್ತಾಯಿಸುತ್ತಿದ್ದಳು. ಈ ಬಗ್ಗೆ ಮನೆಯಲ್ಲಿ ದಿನವೂ ಜಗಳವಾಗುತ್ತಿತ್ತು. 2019ರಲ್ಲಿ ನನ್ನ ಪತ್ನಿ ತವರಿಗೆ ಹೋಗಿದ್ದಳು. ಮಕ್ಕಳಿರುವ ಕಾರಣ ಅವರ […]

Continue Reading

ಶಿವಮೊಗ್ಗ | ನಾಡಬಂದೂಕು ಕಾರ್ಖಾನೆ ಬಯಲು ; 7 ಅಕ್ರಮ ಬಂದೂಕು ಜಪ್ತಿ, ಓರ್ವ ಪೊಲೀಸ್ ವಶಕ್ಕೆ

ನಂತರ ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಶ್ರೀ ನಿಖಿಲ್ ಬಿ. ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶ್ರೀ ಎ.ಜಿ. ಕಾರಿಯಪ್ಪ ಹಾಗೂ ಶ್ರೀ ರಮೇಶ್ ಅವರ ನಿರ್ದೇಶನದಂತೆ, ಪೊಲೀಸ್ ಉಪಾಧೀಕ್ಷಕರು ಶಿಕಾರಿಪುರ ಉಪವಿಭಾಗದ ಶ್ರೀ ಕೇಶವ ಕೆ.ಇ ಅವರ ಮೇಲ್ವಿಚಾರಣೆಯಲ್ಲಿ ಸಿಪಿಐ ಸಂತೋಷ್ ಎಂ. ಪಾಟೀಲ್ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಯಿತು.ಮಾನ್ಯ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ದಿ.04-02-2026ರಂದು ಸಂಜೆ 6 ಗಂಟೆ ಸುಮಾರಿಗೆ ಆರೋಪಿತನ ಮನೆಯ ಮೇಲೆ ದಾಳಿ ನಡೆಸಿದ […]

Continue Reading