ಉಪಚುನಾವಣೆ : ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರುಗೆ ಪ್ರಯಾಸದ ಗೆಲುವು : ಬಾಗಲಕೋಟೆಯಲ್ಲಿ ಉಮೇಶ್ ಮೇಟಿಗೆ ಭರ್ಜರಿ ಗೆಲುವು

ಮತದಾನ ಆರಂಭಗೊಂಡ ಮೊದಲ 6 ಸುತ್ತಿನಲ್ಲಿಯೂ ಸಮರ್ಥ್ ಶಾಮನೂರು ಹಿನ್ನಡೆ ಕಾಯ್ದುಕೊಂಡಿದ್ದು, 7ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮುನ್ನಡೆಯಲ್ಲಿದ್ದರು. ಆದರೆ 8 ಹಾಗೂ 9ನೇ ಸುತ್ತಿನಲ್ಲಿ ಅಂಕಿ-ಸಂಖ್ಯೆ ಉಲ್ಟಾ ಆಗಿದೆ. ಕೊನೆಗೆ ಈ ರಣಕಣದಲ್ಲಿ ಗೆಲುವು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್​ ಶಾಮನೂರು ಪಾಲಾಗಿದೆ. ಬಾಗಲಕೋಟೆ : ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸ್ಪಷ್ಟ ಮುನ್ನಡೆ ಕಾಯ್ದು 22,867 ಮತಗಳ ಅಂತರ ಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಬಿಜೆಪಿಯ […]

Continue Reading

ಬಾಗಲಕೋಟೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸರಿ ಶಾಲು ಹಾಕಿ NSUI ಅಪಪ್ರಚಾರ ಆರೋಪ

ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಸೋಗಿನಲ್ಲಿ ಕೇಸರಿ ಶಾಲು ಹಾಕಿಕೊಂಡು ಬಾಗಲಕೋಟೆ ನಗರದ ಕುಮಾರೇಶ್ವರ ಕ್ಯಾಂಪಸ್‌ಗೆ ಎಂಟ್ರಿಕೊಟ್ಟ NSUI ಸಂಘಟನೆ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಚರಂತಿಮಠ ವಿರುದ್ಧ ಕರಪತ್ರ ಹಂಚಿ ಅಪಪ್ರಚಾರ ನಡೆಸಿದ್ದಾರೆ. ಕರಪತ್ರದಲ್ಲಿ ಬಿಜೆಪಿ ಗೆ ವೋಟ್ ಹಾಕಿದ್ರೆ ಜೈಲು ಫಿಕ್ಸ್‌ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ಚರಂತಿಮಠ ಭಾವಚಿತ್ರಕ್ಕೆ ಎಕ್ಸ್ ಮಾರ್ಕ್ ಹಾಕಿ, ಬಿಜೆಪಿ ವಿರುದ್ಧ ವಿದ್ಯಾರ್ಥಿಗಳು ಎಚ್ಚರದಿಂದಿರಿ ಎಂದು ಉಲ್ಲೇಖಿಸಲಾಗಿದೆ. ಈ ಕರಪತ್ರ ಹಂಚುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಇದರಿಂದ ಗಲಾಟೆ ಶುರುವಾಗಿದೆ.ಕರಪತ್ರ […]

Continue Reading

ಬಾಗಲಕೋಟೆ ಬೈ ಎಲೆಕ್ಷನ್ ; ಮಿತಿ ಮೀರಿದ ರಾಜಕೀಯ ನಾಯಕರ ಮಾತು

ಗೌಡ, ಲಿಂಗಾಯತ, ಕುರುಬ, ವಾಲ್ಮೀಕಿ, ದಲಿತರು ವಿಭಜನೆಯಾಗಿದೆ. ಹಿಂದೂಗಳು ಉಳಿಯಬೇಕು ಅಂದ್ರೆ ಒಗ್ಗಟ್ಟಾಗಬೇಕು ಎಂದು ಹೇಳಿದ್ದಾರೆ. ಕವರನಲ್ಲಿ 2000 ಕೊಟ್ರೆ ಓಟ್ ಹಾಕ್ತಾರೆ ಅಂತ ತಿಳಿಕೊಂಡಿದ್ದಾರೆ ಆದ್ರೆ ಹಾಗಾಗಬಾರದು ಹಿಂದೂಗಳು ಓಟ್ ಹಾಕಿದ್ರಿಂದಲೇ ದೇಶಕ್ಕೆ ಮೋದಿಯಂತವರು ಪ್ರಧಾನಿಯಾಗಿದ್ದಾರೆ.ದೇಶ ಅಭಿವೃದ್ಧಿ ಪಥದಲ್ಲಿ ಇದೆ ಎಂದ ಪ್ರತಾಪ ಸಿಂಹ ಹೇಳಿದರು.

Continue Reading

ಬಾಗಲಕೋಟೆ ಉಪಚುನಾವಣೆ ; ಕೇಂದ್ರದ ಬೆಲೆ ಏರಿಕೆ ವಿರುದ್ದ ಸುರ್ಜೆವಾಲ ವಾಗ್ದಾಳಿ

ಇನ್ನು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸುರ್ಜೆವಾಲ ಕರ್ನಾಟಕದಲ್ಲಿ ಎರಡು ವಿಚಾರದ ಮೇಲೆ ಚುನಾವಣೆ ನಡೆಯುತ್ತಿದೆ ಎಂದರು. ಕಾಂಗ್ರೆಸ್ ಪಕ್ಷದಿಂದ ಸಮಾವೇಶಿ ವಿಕಾಸ ಹಾಗೂ ಜನ ಕಲ್ಯಾಣದ ಮೇಲೆ ಚುನಾವಣೆ ನಡೆಯುತ್ತಿದ್ದರೆ, ಬಿಜೆಪಿ ಅವರದ್ದು ವಿನಾಶ, ದ್ವೇಷ,ಒಡೆದು ಅಳುವ ನೀತಿಯ ಚುನಾವಣೆ ಎಂದು ಕಿಡಿ ಕಾರಿದರು. ನಾವು ಜನರ ಸೇವಕರು ಜನರೇ ನಮ್ಮ ಸರ್ಕಾರದ ಮಾಲೀಕರು ಎಂದರು. ಬಿಜೆಪಿ ಅಜೆಂಡಾ ಏನಿದೆ ಅಂದರೆ ಗ್ಯಾರಂಟಿಗಳನ್ನ ರದ್ದು ಮಾಡಬೇಕು, ಕಮಿಷನ್ ದಂಧೆ ಪ್ರಾರಂಭ ಮಾಡಬೇಕು, ಇಂದು ಏಪ್ರಿಲ್ ಒಂದರಂದು ನಿನ್ನೆ […]

Continue Reading

ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲ್ಲಿಸಿ ; ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

ನೀವು ಯಾರು ಆತಂಕ ಪಡಬೇಕಾಗಿಲ್ಲ,ನಿಮಗೆ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದು ಎಂದ ಸಿಎಂ ಸಿದ್ದರಾಮಯ್ಯ. ಮುಂದುವರೆದು ನಾವು ಗ್ಯಾರಂಟಿ ಯೋಜನೆ ನೀಡಿದೆವು ಆದರೆ ಬಿಜೆಪಿ ಇದನ್ನ ವಿರೋಧಿಸಿದರು. ನಮ್ಮ ಸರ್ಕಾರ ಬಡವರು, ದೀನ ದಲಿತರ ಪರವಿದೆ. ಹಾಗಾಗಿ ಈ ಬಾರಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಉಮೇಶ್ ಮೇಟಿಗೆ ಮತ ನೀಡುವ ಮೂಲಕ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಾಯಾಚನೆ ಮಾಡಿದರು.

Continue Reading

ದಾವಣಗೆರೆ ದಕ್ಷಿಣ ಶ್ರೀನಿವಾಸ ದಾಸ ಕರಿಯಪ್ಪ, ಬಾಗಲಕೋಟೆ ವೀರಣ್ಣ ಚರಂತಿಮಠ ; ಉಪಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ

ಅಚ್ಚರಿ ತೀರ್ಮಾನ ಎಂಬಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಟಿ ಸಮುದಾಯದ ಶ್ರೀನಿವಾಸ ದಾಸ ಕರಿಯಪ್ಪ ಟಿಕೆಟ್ ನೀಡುವ ಮೂಲಕ ಬಿಜೆಪಿ ಹೈ ಕಮಾಂಡ್ ಅಚ್ಚರಿ ನಿರ್ಧಾರ ಕೈಗೊಂಡಿದೆ. ಕುರುಬ ಸಮುದಾಯದ ಜಿ.ಬಿ.ವಿನಯ್ ಕುಮಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಲವಾದ ಮಾತುಗಳು ಕೇಳಿ ಬರುತ್ತಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿಸಿ ವಿಫಲರಾದ ವಿನಯ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,907 ಮತಗಳನ್ನು ಗಳಿಸಿದ್ದರು. ಆದರೆ, ಅಚ್ಚರಿ ಎಂಬಂತೆ ಬಿಜೆಪಿ ಹೈ ಕಮಾಂಡ್ ಸ್ಥಳೀಯ […]

Continue Reading

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ ; ಕಾಂಗ್ರೆಸ್‌ ಉಸ್ತುವಾರಿ ಸಮಿತಿ ರಚನೆ, ಸಚಿವ ಮಧು ಬಂಗಾರಪ್ಪ ಸೇರಿ 31 ಮಂದಿಗೆ ಜವಾಬ್ದಾರಿ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ವೈಎಸ್ ಮೇಟಿ ನಿಧನದ ಬಳಿಕ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ತೆರವಾಗಿದ್ದವು. ಮುಂದಿನ 2-3 ತಿಂಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಈ ಹಿನ್ನೆಲೆ ಉಸ್ತುವಾರಿ ಸಮಿತಿ ನೇಮಕ ಮಾಡಲಾಗಿದೆ. ಈ ಸಮಿತಿಯು ಅಭ್ಯರ್ಥಿಗಳ ಆಯ್ಕೆ, ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರ ರೂಪಿಸುವ ಬೇಕಿದೆ.ಈ ಬಗ್ಗೆ ಆದೇಶ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ” ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ, […]

Continue Reading

ಬಾಗಲಕೋಟೆ | ಬುದ್ಧಿಮಾಂದ್ಯ ಮಕ್ಕಳ ಮೇಲೆ ಕ್ರೌರ್ಯ ; ಕಣ್ಣಿಗೆ ಖಾರದಪುಡಿ ಎರಚಿ, ಬೆಲ್ಟ್, ಪೈಪ್‌ನಿಂದ ಹೊಡೆದು ಶಿಕ್ಷಕರಿಂದ ಹಿಂಸೆ

ಬಾಗಲಕೋಟೆಯ ನವನಗರ ಠಾಣೆಯಲ್ಲಿ ಶಾಲೆ ವಿರುದ್ಧ ದೂರು ದಾಖಲಾಗಿದೆ.ಬುದ್ಧಿಮಾಂದ್ಯ ಬಾಲಕರ ಮೇಲೆ ಶಿಕ್ಷಕ ದಂಪತಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಪಿ ಸಿದ್ದಾರ್ಥ ಗೋಯಲ್‌ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಅಕ್ಷಯ್ ಹಾಗೂ ಆತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ .

Continue Reading