ದಾವಣಗೆರೆ ದಕ್ಷಿಣ ಶ್ರೀನಿವಾಸ ದಾಸ ಕರಿಯಪ್ಪ, ಬಾಗಲಕೋಟೆ ವೀರಣ್ಣ ಚರಂತಿಮಠ ; ಉಪಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ

ಅಚ್ಚರಿ ತೀರ್ಮಾನ ಎಂಬಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಟಿ ಸಮುದಾಯದ ಶ್ರೀನಿವಾಸ ದಾಸ ಕರಿಯಪ್ಪ ಟಿಕೆಟ್ ನೀಡುವ ಮೂಲಕ ಬಿಜೆಪಿ ಹೈ ಕಮಾಂಡ್ ಅಚ್ಚರಿ ನಿರ್ಧಾರ ಕೈಗೊಂಡಿದೆ. ಕುರುಬ ಸಮುದಾಯದ ಜಿ.ಬಿ.ವಿನಯ್ ಕುಮಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಲವಾದ ಮಾತುಗಳು ಕೇಳಿ ಬರುತ್ತಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿಸಿ ವಿಫಲರಾದ ವಿನಯ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,907 ಮತಗಳನ್ನು ಗಳಿಸಿದ್ದರು. ಆದರೆ, ಅಚ್ಚರಿ ಎಂಬಂತೆ ಬಿಜೆಪಿ ಹೈ ಕಮಾಂಡ್ ಸ್ಥಳೀಯ […]

Continue Reading

ತೀರ್ಥಹಳ್ಳಿ | ಮಹಿಳಾ ಕಾಂಗ್ರೆಸ್ ನಿಂದ ಮಾ. 20ರಂದು ಪ್ರತಿಭಟನೆ : ಕಿಮ್ಮನೆ ರತ್ನಾಕರ್ ಹೇಳಿಕೆ

ಮೂರು ತಿಂಗಳಿಗೆ ಆಗುವಷ್ಟು ಸ್ಟಾಕ್ ನಮ್ಮ ಬಳಿ ಆಯಿಲ್ ಇದೆ ಎಂದು ಹೇಳಿದ್ದರು. ಈಗ ಅದಕ್ಕೆ ಹಣವನ್ನು ಜಾಸ್ತಿ ಮಾಡಿದ್ದಾರೆ. ಇವರು ಬಿಸಿನೆಸ್ ಮಾಡ್ತಾ ಇದ್ದಾರಾ? ಇರುವ ಸ್ಟಾಕ್ ಗೆ ಜನರ ಮೇಲೆ ಹೊರೆ ಹಾಕುತ್ತಿರುವುದು ಸರಿಯೇ? ಇನ್ನು ಎಂಟು ದಿನ ಯುದ್ಧ ನಡೆದರೆ ಹಲವರು ಮನೆ ಸೇರಬೇಕಾಗುತ್ತದೆ ಎಂದರು. ಜ್ಞಾನೇಂದ್ರ ಅಸೆಂಬ್ಲಿಯಲ್ಲಿ ಹೀರೊ, ಇಲ್ಲಿ ಮರಳು ಹೊಡೆಯುತ್ತಿದ್ದರೂ ಕೇಳುವುದಿಲ್ಲ ಆದರೆ ಅಲ್ಲಿ ಜ್ಞಾನೇಂದ್ರ ಮಾತನಾಡುವುದು ನೋಡಿದರೆ ಇವರಷ್ಟು ಪ್ರಾಮಾಣಿಕರು ಯಾರೂ ಇಲ್ಲ ಎಂದು ತಿಳಿಯಬೇಕು. ಜ್ಞಾನೇಂದ್ರ […]

Continue Reading

ಶಿವಮೊಗ್ಗ | ರಾಜ್ಯದ ಸರ್ಕಾರಿ ಕನ್ನಡ ಶಾಲೆಗಳ ಸಬಲೀಕರಣವೇ ನನ್ನ ಏಕೈಕ ಪ್ರಮುಖ ಗುರಿ : ಸಚಿವ ಮಧು ಬಂಗಾರಪ್ಪ

ಬೇಸಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಿದ್ದೇವೆ ಎಂದರು. ಅಲ್ಲದೆ, ರಾಜ್ಯದಲ್ಲಿ ಇಂಧನ ಅಥವಾ ಅನಿಲದ ಕೊರತೆಯಿದೆ ಎಂಬ ವದಂತಿಗಳಿಗೆ ಕಿವಿಗೊಡಬಾರದು, ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜಕೀಯ ವಿದ್ಯಮಾನಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಜವಾಬ್ದಾರಿ ನನ್ನ ಮೇಲಿದೆ. ಪಕ್ಷದಲ್ಲಿ ಯಾವುದೇ ಒಳಜಗಳವಿಲ್ಲದೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಜಯಭೇರಿ ಬಾರಿಸುತ್ತೇವೆ ಎಂದರು. […]

Continue Reading

ಶಿವಮೊಗ್ಗ | ಯುವ ಕಾಂಗ್ರೆಸ್ ನಿಂದ, ಪ್ರಧಾನಿಯ ಬಗ್ಗೆ ಕೀಳು ಮಟ್ಟದ ಪ್ರತಿಭಟನೆ ; ಬಿಜೆಪಿ ಯುವ ಮೋರ್ಚಾದಿಂದ ದೂರು

ಜೊತೆಗೆ ಎಸ್‌ಪಿ ಅವರ ಮುಖಾಂತರ ದೊಡ್ಡಪೇಟೆ ಪೊಲೀಸ್ ಠಾಣೆಗೆ ಅಗತ್ಯವಾದ ಸೂಚನೆ ನೀಡುವಂತೆ ವಿನಂತಿಸಲಾಯಿತು. ಇದೇ ವೇಳೆ ದೊಡ್ಡಪೇಟೆ ಸರ್ಕಲ್ ಇನ್ಸ್‌ಪೆಕ್ಟರ್ ಅವರಿಗೂ ಮನವಿ ಸಲ್ಲಿಸಿ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಲಾಯಿತು. ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಪ್ರಶಾಂತ್ ಕುಕ್ಕೆ ಅವರ ನೇತೃತ್ವದಲ್ಲಿ ಯುವ ಮೋರ್ಚಾ ತಂಡದಿಂದ ಮನವಿ ಹಾಗೂ ದೂರು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳು ಹಾಗೂ ಯುವ ಮೋರ್ಚಾ ಜಿಲ್ಲಾ ಸಹ ಪ್ರಭಾರಿಗಳಾದ ಸಂತೋಷ್ ಹೊಳಲೂರು, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ […]

Continue Reading

ಸರ್ಕಾರಿ ಜಮೀನು ಕಾಂಗ್ರೆಸ್ ಕಚೇರಿಗಳಿಗೆ? : ಡಿ.ಎಸ್. ಅರುಣ್ ಗಂಭೀರ ಆರೋಪ

ಜನರ ಆಸ್ತಿಯನ್ನು ಪಕ್ಷದ ಹಿತಾಸಕ್ತಿಗಾಗಿ ಬಳಸುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಇಂತಹ ನಿರ್ಧಾರ ಕೈಗೊಳ್ಳುವ ಮೊದಲು ಹಣಕಾಸು ಇಲಾಖೆಯ ಅಭಿಪ್ರಾಯ ಪಡೆಯದೇ ಮುಂದುವರಿದಿರುವುದು ಗಂಭೀರ ಆಡಳಿತಾತ್ಮಕ ನಿರ್ಲಕ್ಷ್ಯವಾಗಿದೆ ಎಂದು ಡಿ.ಎಸ್. ಅರುಣ್ ಅವರು ಹೇಳಿದರು. ಸರ್ಕಾರದಲ್ಲೇ ಇರುವ ವ್ಯಕ್ತಿಗಳು ಕಾಂಗ್ರೆಸ್ ಟ್ರಸ್ಟ್‌ನಲ್ಲೂ ಇದ್ದು, ಅದೇ ಸರ್ಕಾರದ ಸಚಿವ ಸಂಪುಟದಲ್ಲಿ ಜಮೀನು ಮಂಜೂರಾತಿಗೆ ಅನುಮೋದನೆ ಪಡೆಯುತ್ತಿರುವುದು ಸಚಿವ ಸಂಪುಟದ ಅಧಿಕಾರ ದುರುಪಯೋಗವಾಗುತ್ತಿದೆ ಎಂದು ಅವರು ಆಕ್ಷೇಪಿಸಿದರು. ಇದಲ್ಲದೆ, ಇಂತಹ ಮಂಜೂರಾತಿಗೆ ಮುನ್ನ ಯಾವುದೇ ಸಾರ್ವಜನಿಕ ಟೆಂಡರ್ ಅಥವಾ ಮುಕ್ತ […]

Continue Reading

ರಾಜ್ಯದ ಜನರ ಆರೋಗ್ಯದ ಜತೆಗೆ ಸರ್ಕಾರ ಚೆಲ್ಲಾಟ : ಡಾ.ಧನಂಜಯ ಸರ್ಜಿ ಆರೋಪ

ಔಷಧಗಳನ್ನು ಪೂರೈಸಬೇಕಾದ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (KSMSCL) ಸಂಪೂರ್ಣವಾಗಿ ಹಳಿ ತಪ್ಪಿದೆ. ನಾಳೆಯಿಂದ ಎಲ್ಲಾ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ ಈ ರೀತಿ ಜನರ ಆರೋಗ್ಯದ ಜತೆಗೆ ಸರ್ಕಾರ ಆಟವಾಡುತ್ತಿರುವುದು ಎಷ್ಟು ಸರಿ ಎಂದು ಕೇಳಿದರು. ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 14 ಕೋಟಿ ಓ.ಪಿ.ಡಿ ಮತ್ತು ಐ.ಪಿ.ಡಿ ರೋಗಿಗಳ ತಪಾಸಣೆ ಆಗಿದೆ, 2024-25ರಲ್ಲಿ 15 ಕೋಟಿ ರೋಗಿಗಳ ತಪಾಸಣೆ ಆಗಿದೆ , 2025-26 ರಲ್ಲಿ 15 ರಿಂದ 16 ಕೋಟಿ ಅಂದಾಜಿಸಲಾಗಿದೆ, ಹಿಂದಿನ ವರ್ಷ ಮತ್ತು […]

Continue Reading

ಮಹಿಳಾ ದಿನಕ್ಕೆ ಕೇಂದ್ರ ಸರ್ಕಾರದಿಂದ LPG ಸಿಲಿಂಡರ್ ದರ ಏರಿಕೆಯ ಉಡುಗೊರೆ : ಡಿಕೆಶಿ ವ್ಯಂಗ್ಯ

ಕೇಂದ್ರ ಸರ್ಕಾರಕ್ಕೆ ಈ ದೇಶದ ‘ಸಹೋದರಿಯರ’ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಕೂಡಲೇ ಈ ಸಿಲಿಂಡರ್ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Continue Reading

ಬ್ರದರ್ಸ್ ಬಜೆಟ್.. ಓಲೈಕೆ ರಾಜಕಾರಣವೇ ಪರಮ ಗುರಿ ; ಬಿಜೆಪಿ ಟ್ವೀಟ್

ಅಂತೆಯೇ ‘ರಾಜ್ಯದ ಅತಿಥಿ ಶಿಕ್ಷಕರಿಗೆ ಕಳೆದ 5 ತಿಂಗಳಿಂದ ಗೌರವ ಧನ ನೀಡದ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು, ಬಡ ಶಿಕ್ಷಕರಿಗೆ ನೀಡುವ ಒಂದು ಸಾವಿರ ನೀಡಲೂ ಸರ್ಕಾರದ ಬಳಿ ಹಣವಿಲ್ಲವೇ? ಕಳೆದ 5 ತಿಂಗಳಿನಿಂದ ಸಂಬಳವಿಲ್ಲದೆ ಶಿಕ್ಷಕರ ಜೀವನ ಬೀದಿಗೆ ಬಂದಿದೆ. ಹಬ್ಬ-ಹರಿದಿನಗಳು ಸಾಲದ ಸುಳಿಯಲ್ಲಿ ಕಳೆದುಹೋಗಿವೆ. ವರ್ಗಾವಣೆ, ಕಮಿಷನ್ ದಂಧೆಯಲ್ಲಿ ಮುಳುಗಿರುವ ಭ್ರಷ್ಟ ಕಾಂಗ್ರೆಸ್‌ ಸರ್ಕಾರಕ್ಕೆ ಶಿಕ್ಷಣ ವ್ಯವಸ್ಥೆ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಸಿಎಂ ಅವರೇ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಿ […]

Continue Reading

ಸಾಲದ ಸುಳಿಗೆ ಕರ್ನಾಟಕ ಅಭಿವೃದ್ಧಿಗೆ ಬೀಗ ಹಾಕಿದ ಆಯವ್ಯಯ : ಡಾ. ಧನಂಜಯ ಸರ್ಜಿ

ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾಲ ಪಡೆಯುವ ಅವಕಾಶವಿದ್ದರೂ, ಮಿತವ್ಯಯ ಮತ್ತು ಜವಾಬ್ದಾರಿಯುತ ಬಜೆಟ್ ಮಂಡಿಸುವ ಮೂಲಕ ಹಣಕಾಸು ಶಿಸ್ತು ಕಾಪಾಡಲಾಗಿತ್ತು, 2026–27ರ ಬಜೆಟ್‌ನಲ್ಲಿ ₹22,957 ಕೋಟಿ ಆದಾಯ ಕೊರತೆ ಇದೆ. ದಿನನಿತ್ಯದ ಖರ್ಚಿಗೂ ಸಾಲ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಇದು ಕಾಂಗ್ರೆಸ್ ಸರ್ಕಾರದ ಆರ್ಥಿಕ ನಿರ್ವಹಣೆಯ ವೈಫಲ್ಯವನ್ನು ತೋರಿಸುತ್ತದೆ ಎಂದರು. ಪಂಚ ಗ್ಯಾರಂಟಿ ಯೋಜನೆಗಳಿಗಾಗಿಯೇ ₹51,034 ಕೋಟಿ ಮೀಸಲಿಡಲಾಗಿದ್ದು, ರಾಜ್ಯದ ಒಟ್ಟು ಕಂದಾಯ ಸ್ವೀಕೃತಿಯ 17% ಹಣ ಕೇವಲ ಈ ಯೋಜನೆಗಳಿಗೆ […]

Continue Reading