ಶಿವಮೊಗ್ಗ | ಕಾಂಗ್ರೆಸ್ ಸಾಧನಾ ಸಮಾವೇಶ ಬಗ್ಗೆ ಸಂಸದರು ಹೇಳಿದ್ದಿಷ್ಟು..!

ಗ್ಯಾರಂಟಿ ಹೆಸರಲ್ಲಿ ಖಜಾನೆ ಖಾಲಿ – ಕುಂಠಿತ ಅಭಿವೃದ್ಧಿ:• ಶಕ್ತಿ ಯೋಜನೆ: ಮಹಿಳೆಯರಿಗೆ ಉಚಿತ ಪ್ರಯಾಣ ಎಂದರು, ಆದರೆ ಹೊಸ ಬಸ್‌ಗಳಿಲ್ಲ. ಸಾರಿಗೆ ಸಂಸ್ಥೆಗಳಿಗೆ ನೀಡಬೇಕಾದ ₹4,000 ಕೋಟಿಗೂ ಅಧಿಕ ಹಣ ಬಾಕಿ ಉಳಿಸಿಕೊಂಡು ಸಂಸ್ಥೆಗಳನ್ನು ದಿವಾಳಿಯ ಅಂಚಿಗೆ ತಳ್ಳಿದ್ದಾರೆ. ರಸ್ತೆ ರಿಪೇರಿಗೂ ಹಣವಿಲ್ಲ!• ಗೃಹಲಕ್ಷ್ಮಿ: 2024-25ರ ಸಾಲಿನಲ್ಲಿ 12 ಕಂತುಗಳ ಬದಲಿಗೆ ಕೇವಲ 10 ಕಂತುಗಳನ್ನು ಮಾತ್ರ ನೀಡಲಾಗಿದೆ. ಸುಮಾರು ₹5,000 ಕೋಟಿ ಹಣ ಎಲ್ಲಿ ಹೋಯಿತು?• ಗೃಹಜ್ಯೋತಿ: ವಿದ್ಯುತ್ ಬಿಲ್ ದುಪ್ಪಟ್ಟು ಮಾಡಿ ರಾಜ್ಯದ […]

Continue Reading

ಶಿವಮೊಗ್ಗ | ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಉತ್ತರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಇದೇ ವೇಳೆ ಇತ್ತೀಚಿನ ನೀಟ್ ಪರೀಕ್ಷೆಯ ವಿವಾದವನ್ನು ಪ್ರಸ್ತಾಪಿಸಿದ ಅವರು, ನೀಟ್ ಪರೀಕ್ಷೆ ರದ್ದಾಗಿ ಇಡೀ ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ದಿಕ್ಕುತೋಚದಂತಾಗಿದೆ. ಇಷ್ಟು ದೊಡ್ಡ ಹಗರಣ ನಡೆದಿದ್ದರೂ ಕೇಂದ್ರ ಶಿಕ್ಷಣ ಸಚಿವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಈ ನಡವಳಿಕೆಯನ್ನು ನೋಡಿದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಬ್ಬರೂ ಕೇವಲ ಡಬ್ಬಲ್ ಆಕ್ಟಿಂಗ್’ ಮಾಡುವ ನಟರಂತೆ ಕಾಣಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಒಂದೊಮ್ಮೆ ಇಂತಹ ಘಟನೆ ಅಥವಾ ಲೋಪವೇನಾದರೂ […]

Continue Reading

ಶಿವಮೊಗ್ಗ | ವಿದ್ಯಾರ್ಥಿಗಳೇ, ಶಾಲಾ ಪ್ರಾರಂಭವಾದ ದಿನದಿಂದ ಕೇಸರಿ ಶಾಲು ಹಾಕಿಕೊಂಡು ಬನ್ನಿ ; ನಿಮ್ಮೊಂದಿಗೆ ನಾವು ಇದ್ದೇವೆ ಭಜರಂಗದಳ ಕರೆ..!

ಎಲ್ಲಾ ಹಿಂದೂ ವಿದ್ಯಾರ್ಥಿಗಳು ಶಾಲಾ ಕಾಲೇಜು ಮೊದಲನೇ ದಿನದಿಂದ ಪ್ರತಿಯೊಬ್ಬರು ಕೇಸರಿ ಶಾಲನ್ನು ಹಾಕಿಕೊಂಡು ಬರಬೇಕು ನಿಮ್ಮ ಬೆಂಬಲಕ್ಕೆ ಬಜರಂಗದಳ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಹೋರಾಟವೇನೆಂದರೆ ಎಲ್ಲಾ ಹಿಂದೂ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಲ್ಲಿ ಬೇಸಿಗೆ ಶಾಲೆ ಮುಗಿಸಿ ಆರಂಭಗೊಳ್ಳುತ್ತಿರುವ ಮೊದಲನೇ ದಿನ ಕೇಸರಿ ಶಾಲನ್ನ ಹಾಕಿಕೊಂಡು ಬರುವಂತೆ ರಾಜೇಶ್ ಗೌಡ ಕರೆ ನೀಡಿದ್ದಾರೆ. ಶಾಲ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ಕಲ್ಪಿಸಿ, ಕೇಸರಿ ಶಾಲು ಪೇಟಗೆ ನಿಷೇಧಿಸಿದ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಈ ಕರೆ ಶಿಕ್ಷಣ ಇಲಾಖೆಗೆ […]

Continue Reading

ಶಿವಮೊಗ್ಗ | “ಮಾಡೋಕೆ ಕೆಲಸ ಇಲ್ಲದವ, ಬೆಕ್ಕಿನ ಬಾಲ ಬೋಳಿಸಿದನಂತೆ” ; ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ವ್ಯಂಗ್ಯ..!

ವಿದ್ಯಾರ್ಥಿಗಳ ಪರಿಶ್ರಮದ ಬಗ್ಗೆ ಮಾತನಾಡುವ ಇವರು, ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಶೈಕ್ಷಣಿಕ ಶಿಸ್ತನ್ನು ಸಂಪೂರ್ಣವಾಗಿ ಹಾಳುಮಾಡಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವೈಫಲ್ಯ ಮತ್ತು ಓಲೈಕೆ ರಾಜಕಾರಣ”ಮಾಡೋಕೆ ಕೆಲಸ ಇಲ್ಲದೆ, ಬೆಕ್ಕಿನ ಬಾಲ ಬೋಳಿಸಿದನಂತೆ” ಎಂಬ ಗಾದೆ ಮಾತು ನಮ್ಮ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಅಕ್ಷರಶಃ ಅನ್ವಯಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ, ಶಿಕ್ಷಕರ ನೇಮಕಾತಿಗೆ ಗ್ರಹಣ ಹಿಡಿದಿದೆ. ಅದೆಷ್ಟೋ ಉದ್ಯೋಗಾಕಾಂಕ್ಷಿಗಳು ಆಸೆಗಣ್ಣಿನಿಂದ ಕಾದು ಕುಳಿತಿದ್ದರೂ, […]

Continue Reading

Karnataka SIR | ಕರ್ನಾಟಕ ಸೇರಿ 19 ರಾಜ್ಯಗಳಲ್ಲಿ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ ಆರಂಭ : ಚುನಾವಣಾ ಆಯೋಗ

ಭಾರತೀಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಹಂತ-3 ಅಭಿಯಾನವು ಹಂತ ಹಂತವಾಗಿ ಸುಮಾರು 36 ಕೋಟಿ ಮತದಾರರನ್ನು ಒಳಗೊಂಡಿರಲಿದೆ. ಪ್ರಸ್ತುತ ನಡೆಯುತ್ತಿರುವ ಜನಗಣತಿಯ ಮನೆ ಪಟ್ಟಿ ಪ್ರಕ್ರಿಯೆಯೊಂದಿಗೆ ಇದನ್ನು ಸಂಯೋಜಿಸಲಾಗಿದ್ದು, ಕ್ಷೇತ್ರ ಸಿಬ್ಬಂದಿಯ ಬಳಕೆಯನ್ನು ಪರಿಣಾಮಕಾರಿಯಾಗಿ ಮಾಡುವ ಉದ್ದೇಶ ಹೊಂದಿದೆ ಎನ್ನಲಾಗಿದೆ. ಆಯೋಗದ ಪ್ರಕಾರ, ಹಿಮಾಚಲ ಪ್ರದೇಶ ಹಾಗೂ ಜಮ್ಮು ಮತ್ತು ಕಾಶ್ಮೀರ, ಕೇಂದ್ರಾಡಳಿತ ಪ್ರದೇಶ ಲಡಾಕ್ ಅನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ಈ ಹಂತದ ಪರಿಷ್ಕರಣೆ ನಡೆಯಲಿದೆ. ಹಿಮ ಪ್ರದೇಶಗಳಲ್ಲಿ […]

Continue Reading

ಶಿವಮೊಗ್ಗ | ದೇಶದ ಬೊಕ್ಕಸ ಲೂಟಿ ಮಾಡಿದ ಕಾಂಗ್ರೆಸ್ಸಿಗರಿಗೆ ಮೋದಿಯವರ ರಾಷ್ಟ್ರಭಕ್ತಿಯ ಮಿತವ್ಯಯದ ಪಾಠ ಅರ್ಥವಾಗದು : ಶಾಸಕ ಎಸ್. ಎನ್. ಚನ್ನಬಸಪ್ಪ

2012ರಲ್ಲಿ ದೇಶದ ಆರ್ಥಿಕತೆ ಹದಗೆಟ್ಟಾಗ ಅಂದಿನ ಹಣಕಾಸು ಸಚಿವ ಪಿ. ಚಿದಂಬರಂ ಅವರು ಇದೇ ರೀತಿ ದೇಶದ ಜನರಲ್ಲಿ ‘ಚಿನ್ನ ಖರೀದಿಸುವುದನ್ನು ನಿಲ್ಲಿಸಿ’ ಎಂದು ಬಹಿರಂಗವಾಗಿ ಬೇಡಿಕೊಂಡಿದ್ದರು. ಅಷ್ಟೇ ಅಲ್ಲದೆ, ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ‘ಹಣವೇನು ಮರದಲ್ಲಿ ಬೆಳೆಯುವುದಿಲ್ಲ’ ಎಂದು ಹೇಳುವ ಮೂಲಕ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡು ಜನಸಾಮಾನ್ಯರ ಸಂಕಷ್ಟವನ್ನು ಹೀಗಳೆದಿದ್ದರು. ಅಂದು ಅವರು ಮಾಡಿದ ಇಂತಹ ಆರ್ಥಿಕ ಅಶಿಸ್ತಿನ ಪರಿಣಾಮವಾಗಿ ಭಾರತವು ವಿಶ್ವದ ಅತ್ಯಂತ ದುರ್ಬಲ ಆರ್ಥಿಕತೆಗಳ (Fragile Five) ಪಟ್ಟಿಗೆ ಸೇರಿತ್ತು ಎಂಬ […]

Continue Reading

ಇಂಧನ ಬಳಕೆ ಕಡಿಮೆಗೆ ಪ್ರಧಾನಿ ಸಲಹೆ : ಡಿಸಿಎಂ ಡಿಕೆಶಿ ತಿರುಗೇಟು

ಅವರ ಕೇಂದ್ರ ಸಚಿವರಿಗೆ ತಾಕೀತು ಮಾಡಲಿ. ನಾವು ಮೊದಲು ನಡೆದುಕೊಂಡು ನಂತರ ಸಾಮಾನ್ಯ ಜನಕ್ಕೆ ಸಂದೇಶ ನೀಡಬೇಕು ಎಂದು ತಿರುಗೇಟು ನೀಡಿದರು. ಬಿಜೆಪಿ ಶಾಸಕರು, ನಾಯಕರು, ಕಾರ್ಯಕರ್ತರಿಂದ ತ್ಯಾಗ ಪ್ರಾರಂಭವಾಗಲಿಜಗತ್ತಿನ ಪರಿಸ್ಥಿತಿ ಸರಿಯಿಲ್ಲ ಕೆಲವೊಮ್ಮೆ ತ್ಯಾಗಕ್ಕೂ ಸಿದ್ಧವಾಗಿರಬೇಕು ಎಂಬ ಕಾರಣಕ್ಕೆ ಸಂದೇಶ ನೀಡಿದ್ದಾರೆ ಎಂದಾಗ, “ಮೊದಲು ತ್ಯಾಗವನ್ನು ಮಂತ್ರಿಗಳು, ಕೇಂದ್ರ ಸರ್ಕಾರದ ಸಚಿವರು, ಅಧಿಕಾರಿಗಳು, ಬಿಜೆಪಿ ಆಡಳಿತ ರಾಜ್ಯಗಳಲ್ಲಿರುವ ಅಧಿಕಾರಿಗಳಿಂದ, ಅವರ ಪಕ್ಷದ ಶಾಸಕರು, ನಾಯಕರು ಹಾಗೂ ಕಾರ್ಯಕರ್ತರಿಂದ ತ್ಯಾಗ ಆರಂಭವಾಗಲಿ. ನಂತರ ಬೇರೆಯವರಿಗೆ ತ್ಯಾಗದ ಸಲಹೆ […]

Continue Reading

ಯಶಸ್ವಿಯಾಗಿ ಸಂಪನ್ನಗೊಂಡ ಅಭೂತಪೂರ್ವ, ಐತಿಹಾಸಿಕ ‘ಬಿಎಸ್ ವೈ ಅಭಿಮಾನೋತ್ಸವ’ ; ಎಲ್ಲರ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ ಸಂಸದ ಬಿ.ವೈ.ರಾಘವೇಂದ್ರ..!

ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪನವರ ಮೇಲಿರುವ ಅಚಲವಾದ ಪ್ರೀತಿ, ಅಭಿಮಾನ ಮತ್ತು ವಿಶ್ವಾಸದಿಂದ, ದೂರವನ್ನಾಗಲಿ, ಸುಡುವ ಬಿಸಿಲನ್ನಾಗಲಿ ಲೆಕ್ಕಿಸದೆ ನಾಡಿನ ಮೂಲೆ ಮೂಲೆಗಳಿಂದ ಚಿತ್ರದುರ್ಗಕ್ಕೆ ಬಂದ ಅಭಿಮಾನಿಗಳು, ಕಾರ್ಯಕರ್ತರು, ಸ್ವಯಂಸೇವಕರು, ತಾಯಂದಿರು, ಸೋದರಿಯರು, ಶ್ರೀಸಾಮಾನ್ಯರ ಜನಸಾಗರದ ಸಂಪೂರ್ಣ ಸಹಕಾರದಿಂದ ತಮ್ಮ ನಾಯಕನ ಅಭಿಮಾನೋತ್ಸವ, ನಾಡಿನ ಜನೋತ್ಸವವಾಗಿ ಮಾರ್ಪಟ್ಟಿತು. ಪೂಜ್ಯ ತಂದೆಯವರ ಮೇಲೆ ಜನರ ಅತಿಶಯವಾದ ಪ್ರೀತಿ, ವಿಶ್ವಾಸಗಳಿಗೆ ಪ್ರತಿಯಾಗಿ ನಾವು ಏನು ಹೇಳುವುದು ಸಾಧ್ಯ, ಆಗಮಿಸಿದ ಪ್ರತಿಯೊಬ್ಬ ಅಭಿಮಾನಿಗಳಿಗೂ, ಅತ್ಯಂತ ವಿನೀತ ಭಾವದಿಂದ ಹೃದಯತುಂಬಿ ಸಾಷ್ಟಾಂಗ ನಮನಗಳನ್ನು ಸಲ್ಲಿಸುತ್ತೇನೆ ಎಂದು […]

Continue Reading

ಪ್ರಧಾನಿ ದೇಶ ನಡೆಸಲು ಅಸಮರ್ಥ ; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ..!

“12 ವರ್ಷಗಳಲ್ಲಿ ದೇಶವನ್ನು ಇಂತಹ ಸ್ಥಿತಿಗೆ ತಳ್ಳಲಾಗಿದೆ. ಈಗ ಜನರಿಗೆ ಏನು ಖರೀದಿಸಬೇಕು, ಎಲ್ಲಿ ಹೋಗಬೇಕು ಎಂಬುದನ್ನೂ ಸರ್ಕಾರ ಹೇಳುವ ಪರಿಸ್ಥಿತಿ ಬಂದಿದೆ. ತಮ್ಮ ವೈಫಲ್ಯದಿಂದ ತಪ್ಪಿಸಿಕೊಳ್ಳಲು ಸರ್ಕಾರ ಹೊಣೆಗಾರಿಕೆಯನ್ನು ಜನರ ಮೇಲೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಇವರು ರಾಜಿ ಮಾಡಿಕೊಂಡ ಪ್ರಧಾನಮಂತ್ರಿಯಾಗಿದ್ದು, ದೇಶ ನಡೆಸುವ ಸಾಮರ್ಥ್ಯವನ್ನು ಕಳೆದುಕೊಂಡಿದ್ದಾರೆಂದು ಕಿಡಿಕಾರಿದ್ದಾರೆ. ‘ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..’ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು Advertisement ಇದರ ನಡುವೆ ಕಾಂಗ್ರೆಸ್ ಪಕ್ಷವೂ ಪ್ರಧಾನಿ ವಿರುದ್ಧ ತೀವ್ರ […]

Continue Reading

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ

ಕೋಲ್ಕತ್ತಾದಲ್ಲಿ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಸುವೇಂದು ಅಧಿಕಾರಿಯನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಮಿತ್ ಶಾ ಅವರು ಅಧಿಕಾರಿ ಅವರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ‘ಸುವೇಂದು ಅವರು ಸಂಘರ್ಷದ ಹಾದಿಯಲ್ಲಿ ಬಂದವರು. ಅವರಿಗೆ ಆಡಳಿತದ ಅನುಭವವಿದೆ.ಬಂಗಾಳದ ಜನತೆಯ ಆಸೆಗಳನ್ನು ಪೂರ್ಣಗೊಳಿಸಲು ಅವರು ಸಮರ್ಥರಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಿಯೋಜಿತ ಸಿಎಂ ಸುವೇಂದು ಅಧಿಕಾರಿ ಅವರು ಈಗಾಗಲೇ ರಾಜ್ಯಪಾಲ ಆರ್.ಎನ್. […]

Continue Reading