Tag: ಬಿಜೆಪಿ
ಶಿವಮೊಗ್ಗ | ರಾಜ್ಯ ಸರ್ಕಾರದ ನಡೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆ : ಸಂಸದ ಬಿ. ವೈ. ಆರ್
ರಾಜ್ಯದ ಅಭಿವೃದ್ಧಿ ಶೂನ್ಯವಾಗಿದ್ದು, ಗ್ಯಾರಂಟಿ ಯೋಜನೆಗಳ ವೈಫಲ್ಯವನ್ನು ಮುಚ್ಚಿಡಲು ಸರ್ಕಾರ ವಿಬಿ ರಾಮ್ ಜಿ ಯೋಜನೆಯ ವಿರುದ್ಧ ಅಪಪ್ರಚಾರ ಮಾಡುತ್ತಿದೆ ಎಂದು ರಾಘವೇಂದ್ರ ದೂರಿದರು. ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೇಂದ್ರ ತಂದಿರುವ ಬದಲಾವಣೆಗಳನ್ನು ಸಹಿಸಲಾಗದೆ ಕಾಂಗ್ರೆಸ್ ನಾಯಕರು ಸಾರ್ವಜನಿಕರನ್ನು ಹಾದಿ ತಪ್ಪಿಸುತ್ತಿದ್ದಾರೆ. ಈ ಕೂಡಲೇ ಅಸಭ್ಯವಾಗಿ ವರ್ತಿಸಿದ ಶಾಸಕರ ವಿರುದ್ಧ ಸ್ಪೀಕರ್ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.
Continue Readingಶಿವಮೊಗ್ಗ | ಬಡವರು ದುಡಿದು ಸಂತೋಷವಾಗಿದ್ರೆ, ಬಿಜೆಪಿಯವರಿಗೆ ಹೊಟ್ಟೆ ಉರಿ : ಸಚಿವ ಮಧು ಬಂಗಾರಪ್ಪ
ಇದು ಒಂದು ದುರಂತ, ಹೆಚ್ಚು ಕಮ್ಮಿ ಆದ್ರೆ ಜನರಿಗೆ ಕೆಲಸ ಸಿಗೋದೆ ಕಡಿಮೆ ಅಗುತ್ತದೆ. ಹೀಗಾಗಿ ನಾವು ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಬೇಕಾಗುತ್ತದೆ. ಬೇರೆ ಬೇರೆ ರಾಜ್ಯದಲ್ಲೂ ಸಹ ಇದನ್ನು ವಿರೋಧ ಮಾಡಲಾಗುತ್ತಿದೆ. ಈ ಬಗ್ಗೆ ಚರ್ಚೆ ಮಾಡುವುದು ತುಂಬ ಒಳ್ಳೇಯದು ಎಂದು ಸಚಿವರು ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಬಿಜೆಪಿಯವರು ವಿರೋಧ ಮಾಡುತ್ತಲೇ ಇದ್ದಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ, ಅಭಿವೃದ್ಧಿ ಕುರಿತು ಚರ್ಚೆ ಮಾಡದೆ ಬೇರೆ ಏನ್ ಮಾಡುತ್ತಾರೆಂದು ವಿರೋಧ ಪಕ್ಷದವರನ್ನು ಪ್ರಶ್ನಿಸಿದರು. ಗ್ಯಾರಂಟಿಗಳನ್ನು […]
Continue Readingಶಿವಮೊಗ್ಗ | ವಿಬಿಜಿ ರಾಮ್ ಜಿ ಹೆಸರು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ, ಎಂ ಎಲ್ ಸಿ ಬಲ್ಕಿಸ್ ಬಾನು, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸೂಡ್ಯಾಧ್ಯಕ್ಷ ಎಚ್ಎಸ್ ಸುಂದರೇಶ್, ಹಾಪ್ ಕಾಮ್ಸ್ ನ ವಿಜಯ ಕುಮಾರ್, ಜವಳಿ ನಿಗಮದ ಚೇತನ್ ಗೌಡ, ಮಾಜಿ ಕಾರ್ಪರೇಟರ್ ಗಳಾದ ಎಚ್ ಸಿ ಯೋಗೇಶ್, ಯಮುನಾರಂಗೇಗೌಡ, ರಂಗೇಗೌಡ, ಅರ್ಚನ ನಿರಂಜನ್, ರಮೇಶ್ ಹೆಗ್ಡೆ, ವಿಜಯಲಕ್ಷ್ಮಿ ಪಾಟೀಲ್, ಕಲೀಂ ಪಾಷ, ಎಂ ಎಸ್ ಶಿವಕುಮಾರ್ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
Continue Readingಮಹಾರಾಷ್ಟ್ರ | ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಕಮಾಲ್!
2020 ರ ವಿಧಾನಸಭಾ ಚುನಾವಣೆಯ ನಂತರ ಬಿಜೆಪಿಗೆ ಕೈಕೊಟ್ಟ ಶಿವಸೇನೆ ಕಾಂಗ್ರೆಸ್, ಎನ್ಸಿಪಿ ಜೊತೆ ಸೇರಿ ಮೈತ್ರಿ ಮಾಡಿಕೊಂಡಿತ್ತು. ನಂತರದ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ಬಣದ ಶಾಸಕರು ಶಿವಸೇನೆಯನ್ನು ತೊರೆದು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಮಹಾಯುತಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಏಕನಾಥ್ ಶಿಂದೆ ಮುಖ್ಯಮಂತ್ರಿಯಾಗಿದ್ದರು. ಈ ಮೈತ್ರಿ ನಂತರ ಲೋಕಸಭೆ, ವಿಧಾನಸಭೆ, ಸ್ಥಳೀಯ ಚುನಾವಣೆಯಲ್ಲೂ ಅಬ್ಬರಿಸುತ್ತಿದೆ. ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ “ರಾಜ್ಯದ ಉತ್ಸಾಹಭರಿತ ಜನರು ಎನ್ಡಿಎಯ ಸಾರ್ವಜನಿಕ ಕಲ್ಯಾಣ […]
Continue Readingಶಿವಮೊಗ್ಗ | ವಿಬಿ–ಜಿ ರಾಮ್ ಜಿ ಯೋಜನೆ ಕುರಿತು ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆಯೇ? ; ವಾಸ್ತವಾಂಶ ತೆರದಿಟ್ಟ ಸಂಸದ ರಾಘವೇಂದ್ರ
ನೂತನ ಕಾಯ್ದೆ ಅಡಿ ಕೃಷಿ ಋತುವಿನಲ್ಲಿ ಕಾರ್ಮಿಕರಿಗೆ 60 ದಿನಗಳ ವಿರಾಮ ಕಡ್ಡಾಯವಾಗಿದೆ. ಇದರಿಂದ ರೈತರು ತಮ್ಮ ವೈಯಕ್ತಿಕ ಕೃಷಿ ಕಾರ್ಯಗಳನ್ನು ಮಾಡಿಕೊಳ್ಳಲು ಸಹಾಯವಾಗಲಿದೆ. ಈ 60 ದಿನದ ವಿರಾಮ ಅವಧಿ ಯಾವಾಗ ಇರಬೇಕು ಎನ್ನುವುದನ್ನು ಆಯಾ ಪ್ರದೇಶದ ಬಿತ್ತನೆ ಅಥವಾ ಕೊಯ್ದು ಅವಧಿ ನೋಡಿಕೊಂಡು ಆಯಾ ರಾಜ್ಯ ಸರ್ಕಾರಗಳು ನಿರ್ಧರಿಸಲಿವೆ. ಪೂರೈಕೆ ಆಧಾರಿತ ಕೆಲಸ ಹಂಚಿಕೆ – ಕಾರ್ಮಿಕರಿಗೆ ಹೆಚ್ಚು ಶಕ್ತಿ ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಈ ಸಂದರ್ಭದಲ್ಲಿ ಸಂಸದರಾದ ಬಿ ವೈ […]
Continue Reading

