SIR ಪ್ರಕ್ರಿಯೆಯ ‘ಸಾಮಾಜಿಕ ಲೆಕ್ಕಪರಿಶೋಧನೆ’ಗೆ ಪ್ರಕಾಶ್ ರಾಜ್ ಅಭಿಯಾನ

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಂಡುಬಂದಿರುವ ಎನ್ನಲಾದ ಲೋಪಗಳಿಗೆ ಸಂಬಂಧಿಸಿದಂತೆ ದಾಖಲಿತ ಪುರಾವೆಗಳನ್ನು ಆಯೋಗಕ್ಕೆ ಸಲ್ಲಿಸಲಿದ್ದಾರೆ.

Continue Reading

ಬೆಂಗಳೂರಿನ ಸರ್ಕಾರಿ ಶಾಲೆ ಸಮಯ ಬದಲಾವಣೆ ಸಾಧ್ಯತೆ

ಬದಲಾವಣೆಗೆ ಕಾರಣ ಬೆಳಗ್ಗೆ ಮತ್ತು ಸಂಜೆ ಪೀಕ್ ಅವರ್‌ಗಳಲ್ಲಿ ಶಾಲಾ ವಾಹನಗಳು ರಸ್ತೆಗಿಳಿಯುವುದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಕಚೇರಿಗಳಿಗೆ ಹೋಗುವವರ ಸಮಯ ಮತ್ತು ಶಾಲಾ ಸಮಯ ಪರಸ್ಪರ ಮುಖಾಮುಖಿಯಾಗದಂತೆ ತಡೆಯುವುದು ಇದರ ಮುಖ್ಯ ಉದ್ದೇಶವಾಗಿದೆ. ಹಾಗಾಗಿ, ಶಾಲಾ ಸಮಯವನ್ನು 30 ನಿಮಿಷಗಳಿಂದ 1 ಗಂಟೆಯವರೆಗೆ ಬದಲಾಯಿಸುವ (ಮುಂದೂಡುವ ಅಥವಾ ಮುಂಚಿತವಾಗಿ ಆರಂಭಿಸುವ) ಸಾಧ್ಯತೆಗಳಿವೆ.ಇದಕ್ಕೂ ಮುನ್ನ ಸದ್ಯ ಬೆಂಗಳೂರಿನ ಸರ್ಕಾರಿ ಶಾಲೆಗಳು ಬೆಳಗ್ಗೆ 10:30 ರಿಂದ ಸಂಜೆ 4:30 ರವರೆಗೆ ನಡೆಯುತ್ತಿವೆ. ಟ್ರಾಫಿಕ್‌ನಿಂದಾಗಿ ತಡವಾಗುತ್ತಿರುವುದರಿಂದ ಈ ಸಮಯವನ್ನು […]

Continue Reading

ಬಿಜೆಪಿಗೆ ಗುಡ್ ಬೈ ಹೇಳಿದ ನರೇಂದ್ರಬಾಬು

ಬಿಜೆಪಿ ಅಪ್ಪ-ಮಕ್ಕಳ ಪಕ್ಷವಾಗಿದೆ. ಗೋಪಾಲಯ್ಯಸೇರಿದಂತೆ 17ಮಂದಿ ಶಾಸಕರು ಬಿಜೆಪಿ ಸೇರಿದಾಗ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನೀವು ಸಹಕಾರ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಆರೆಸ್ಸೆಸ್ ಮುಖಂಡ ಬಿ.ಎಲ್.ಸಂತೋಷ್ ತಮ್ಮನ್ನು ಮನವೊಲಿಸಿದ್ದರು ಎಂದರು.

Continue Reading

‘ವಾಟ್ಸಾಪ್‌’ನಲ್ಲೇ ಇನ್ಮುಂದೆ ‘KSRTC ಬಸ್’ ಟಿಕೆಟ್ ಸೇವೆ ಲಭ್ಯ

ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ವಾಟ್ಸಾಪ್ ಮೂಲಕ KSRTC, NWKRTC ಹಾಗೂ KKRTC ಬಸ್‌ಗಳ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಒದಗಿಸಲಾಗಿದೆ. ಪ್ರಯಾಣಿಕರು 6364940880 ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸುವ ಮೂಲಕ ಬುಕ್ಕಿಂಗ್ ಆರಂಭಿಸಬಹುದು. ನಂತರ ವಾಟ್ಸಾಪ್‌ನಲ್ಲಿಯೇ ಲಭ್ಯವಾಗುವ ಸಂವಾದಾತ್ಮಕ ವ್ಯವಸ್ಥೆಯು ಟಿಕೆಟ್ ಕಾಯ್ದಿರಿಸುವಿಕೆಯ ಸಂಪೂರ್ಣ ಪ್ರಕ್ರಿಯೆಗೆ ಮಾರ್ಗದರ್ಶನ ನೀಡಲಿದೆ. ಪ್ರಯಾಣ ಆರಂಭದ ಸ್ಥಳ, ಹೋಗಬೇಕಾದ ಸ್ಥಳ ಹಾಗೂ ಪ್ರಯಾಣದ ದಿನಾಂಕ ಆಯ್ಕೆ ಮಾಡಿ ಲಭ್ಯವಿರುವ ಬಸ್ ಸೇವೆಗಳನ್ನು ಹುಡುಕಬೇಕು.ನಿಮ್ಮ ಪ್ರಯಾಣದ ಆದ್ಯತೆಗೆ ಅನುಗುಣವಾಗಿ ಸೂಕ್ತವಾದ ಬಸ್ ಆಯ್ಕೆ ಮಾಡಬೇಕು. ನಂತರ […]

Continue Reading

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂ : ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ಇದೇ ವೇಳೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿರುವ ಇಲಾಖೆ, ಒಂದು ಜೋಡಿ ಶೂ ಮತ್ತು ಎರಡು ಜೋಡಿ ಸಾಕ್ಸ್ ಪೂರೈಕೆ ಕುರಿತು ದೂರುಗಳು ಬಂದಿವೆ. ಬಳಸಿದ ತಕ್ಷಣವೇ ಅಥವಾ ಕೆಲವೇ ದಿನಗಳಲ್ಲಿ ಶೂ ಹರಿದುಹೋಗುವುದು, ಅಡಿಭಾಗ ಕಳಚಿಕೊಳ್ಳುವುದು, ಅತಿದೊಡ್ಡ ಗಾತ್ರದ ಅಥವಾ ಸರಿಯಾಗಿ ಹೊಂದಿಕೆಯಾಗದ ಶೂ ಪೂರೈಕೆ ಹಾಗೂ ಸಾಕ್ಸ್‌ಗಳಲ್ಲೂ ಇದೇ ರೀತಿಯ ದೋಷಗಳು ಕಂಡುಬಂದಿರುವ ಬಗ್ಗೆ ದೂರುಗಳು ಬಂದಿವೆ. ಪೂರೈಕೆದಾರರ ಜಿಎಸ್‌ಟಿ ನೋಂದಣಿ ಹಾಗೂ ಬಿಲ್‌ಗಳ ಬಗ್ಗೆಯೂ ವರದಿಗಳಲ್ಲಿ ಪ್ರಶ್ನೆಗಳನ್ನು ಎತ್ತಲಾಗಿದೆ.ದೂರುಗಳ ಹಿನ್ನೆಲೆಯಲ್ಲಿ ಶೂ ಮತ್ತು ಸಾಕ್ಸ್‌ಗಳನ್ನು […]

Continue Reading

ವಂದೇ ಮಾತರಂ” ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ರಾಜ್ಯ ಸರ್ಕಾರ ಆದೇಶ

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ “ವಂದೇ ಮಾತರಂ” ರಾಷ್ಟ್ರೀಯ ಗೀತೆಯ ವಾದನ/ಗಾಯನಕ್ಕೆ ಸಂಬಂಧಿಸಿದಂತೆ ಏಕರೂಪತೆ, ಗೌರವ ಮತ್ತು ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವನ್ನು ಸರ್ಕಾರವು ಪರಿಗಣಿಸಿದೆ ಎಂದು ತಿಳಿಸಿದೆ

Continue Reading

ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಎಸ್. ರವಿ ಆಯ್ಕೆ

ಬಳಿಕ ಸವದಿ ಮತ್ತು ರಾಜಣ್ಣ ನಡುವೆ ಪ್ರತ್ಯೇಕವಾಗಿ ಮಾತುಕತೆ ನಡೆದಿದ್ದು, ಅಂತಿಮವಾಗಿ ಎಸ್. ರವಿ ಅವರನ್ನು ಆಯ್ಕೆ ಮಾಡಲಾಗಿದೆ.

Continue Reading

ಬೆಂಗಳೂರು | ಕಡತಗಳ ವಿಲೇವಾರಿ ಇಲ್ಲ, ಹೊಸ ಅರ್ಜಿಗಳ ಸ್ವೀಕಾರದ ನಾಟಕ : ಡಿ.ಎಸ್. ಅರುಣ್

ಸರ್ಕಾರ ಮೊದಲು ಬಾಕಿ ಇರುವ ಲಕ್ಷಾಂತರ ಕಡತಗಳನ್ನು ವಿಲೇವಾರಿ ಮಾಡಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ‘ಜಾಹೀರಾತು’ಕ್ಕಿಂತ ಆಡಳಿತ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಡಿ.ಎಸ್. ಅರುಣ್ ಒತ್ತಾಯಿಸಿದ್ದಾರೆ.

Continue Reading