ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಚಿಕ್ಕಮಗಳೂರಿನ ರೈತ

ಸುದ್ದಿಗಾರರೊಂದಿಗೆ ಮಾತನಾಡಿದ ವಿಶು ಕುಮಾರ್, ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ ಪರಿಹಾರವನ್ನು ಇನ್ನೂ ನೀಡಿಲ್ಲ ಎಂದು ಹೇಳಿದರು. ‘ನಾಲ್ಕು ವಾರಗಳಲ್ಲಿ ವಿಷಯವನ್ನು ಅಂತಿಮಗೊಳಿಸಿ ಪರಿಹಾರವನ್ನು ಪಾವತಿಸುವಂತೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗೆ ನ್ಯಾಯಾಲಯ ನಿರ್ದೇಶಿಸಿತ್ತು. ಆದರೆ, ಮೂರು ತಿಂಗಳು ಕಳೆದರೂ ನಮಗೆ ಯಾವುದೇ ಪರಿಹಾರ ಸಿಕ್ಕಿಲ್ಲ. ಜಮೀನಿನಲ್ಲಿ ನಾನು ಶ್ರೀಗಂಧದ ಮರಗಳನ್ನು ಬೆಳೆಸಿದ್ದೇನೆ. ಅಗತ್ಯವಿರುವ ನೋಟಿಸ್ ನೀಡದೆಯೇ ಮರಗಳನ್ನು ಕಡಿಯಲು ಅಧಿಕಾರಿಗಳು ಯೋಜಿಸಿದ್ದಾರೆ. ಈ ಪ್ರಕ್ರಿಯೆಯ ಬಗ್ಗೆ ಯಾವುದೇ ಮಾಹಿತಿಯನ್ನು ತನಗೆ ಒದಗಿಸಿಲ್ಲ’ ಎಂದು ವಿಶು ಕುಮಾರ್ ಆರೋಪಿಸಿದ್ದಾರೆ.

Continue Reading

ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಸಂಚರಿಸುವ ಪುರುಷರಿಗೂ ಸಹ ಶೀಘ್ರದಲ್ಲಿಯೇ ಸ್ಮಾರ್ಟ್ ಕಾರ್ಡ್ ಸೌಲಭ್ಯ : ಸಚಿವ ಬೈರತಿ ಸುರೇಶ್

3 ಕೋಟಿ ಸಾರ್ವಜನಿಕರಿಗೆ ಸ್ಮಾರ್ಟ್ ಕಾರ್ಡ್‌ ವಿತರಣೆಗೆ ಪ್ಲಾನ್ ಈ ನೂತನ ವ್ಯವಸ್ಥೆಯ ಮೂಲಕ ರಾಜ್ಯದ ಒಟ್ಟು 3 ಕೋಟಿ ಸಾರ್ವಜನಿಕರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ. ಮಹಿಳೆಯರಿಗೆ ನೀಡುವ ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ಕೇವಲ ಉಚಿತ ಪ್ರಯಾಣಕ್ಕಾಗಿ ಮಾತ್ರ ಬಳಸಬಹುದಾಗಿದ್ದರೆ, ಪುರುಷ ಪ್ರಯಾಣಿಕರಿಗೆ ವಿತರಿಸಲಾಗುವ ಸ್ಮಾರ್ಟ್ ಕಾರ್ಡ್‌ಗಳಿಗೆ ಹಣವನ್ನು ಭರ್ತಿ ಮಾಡಿಸಿ, ಆ ಮೂಲಕ ಬಸ್ ಟಿಕೆಟ್ ದರವನ್ನು ಪಾವತಿಸುವಂತಹ ಸುಲಭ ಹಾಗೂ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. […]

Continue Reading

ಮುಖ್ಯಮಂತ್ರಿಯವರಿಗೆ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ

ಪಕ್ಷ ಗೆಲ್ಲುವಲ್ಲಿ ತೆರೆ ಹಿಂದಿನ ತಂತ್ರಗಾರಿಕೆಯನ್ನು ಹೆಣೆದಿದ್ದರು. ಈಗ ಆಡಳಿತದಲ್ಲೂ ಸಿಎಂಗೆ ಮುಖ್ಯ ಸಲಹೆಗಾರರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ.

Continue Reading

‘ಕಾಯಕ ಸೇತು’ ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶ ; ಶಿವಮೊಗ್ಗದಲ್ಲಿ ಜೂನ್ 08, 09, 10, 11, ಮತ್ತು 12 ರಂದು ಸಂದರ್ಶನ

ಕೇವಲ 7 ತಿಂಗಳ ಅಲ್ಪಾವಧಿಯಲ್ಲೇ ಈ ಪೋರ್ಟಲ್ ಮೂಲಕ ನೂರಾರು ಯುವಕ-ಯುವತಿಯರು ಯಶಸ್ವಿಯಾಗಿ ಉದ್ಯೋಗ ಪಡೆದುಕೊಂಡಿದ್ದಾರೆ. ಇದರ ಮುಂದುವರಿದ ಭಾಗವಾಗಿ, ಇದೀಗ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಬೆಂಗಳೂರಿನಲ್ಲಿರುವ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿಯು ಮಹಿಳಾ ಅಭ್ಯರ್ಥಿಗಳನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳುತ್ತಿದ್ದು, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು. ಈ ಹುದ್ದೆಗಳು ಮಹಿಳೆಯರಿಗೆ ಸುರಕ್ಷಿತ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅತ್ಯುತ್ತಮ ವೇದಿಕೆಯಾಗಿವೆ.10ನೇ ತರಗತಿ, ಪಿಯುಸಿ (PUC), ಡಿಪ್ಲೊಮಾ, ಐಟಿಐ (ITI) ಅಥವಾ ಯಾವುದೇ ಪದವಿ (ಪಾಸ್ […]

Continue Reading

ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ. 25 ರ ಸೋಮವಾರ ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ […]

Continue Reading

ಶ್ರೀಲಂಕಾದಿಂದ ಭಾರತಕ್ಕೆ 11 ಗಂಟೆಗಳ ಕಾಲ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರಿನ ದಂಪತಿ

ಬೆಂಬಲ ದೋಣಿಗಳು, ವೈದ್ಯರು ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಮಾರ್ಗದುದ್ದಕ್ಕೂ ಈಜುಗಾರರೊಂದಿಗೆ ಇದ್ದರು.ಈ ಜೋಡಿಯ ಸಾಧನೆ ಆನ್‌ಲೈನ್‌ನಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ದಂಪತಿಗಳ ಸಹಿಷ್ಣುತೆ, ಶಿಸ್ತು ಮತ್ತು ತಂಡದ ಕೆಲಸವನ್ನು ಶ್ಲಾಘಿಸಿದ್ದಾರೆ. ಅಬ್ದಿ ಮತ್ತು ಪ್ರಸಾದೆ ಇಬ್ಬರೂ ಸಾಫ್ಟ್‌ವೇರ್ ವೃತ್ತಿಪರರಾಗಿದ್ದು, ಅವರು ನಾಲ್ಕು ವರ್ಷಗಳ ಹಿಂದೆ ಈಜು ತರಬೇತಿಯನ್ನು ಪ್ರಾರಂಭಿಸಿದ್ದರು ಎಂದು ವರದಿಯಾಗಿದೆ.

Continue Reading

ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರ ರಾವ್ ಅಮಾನತು ಆದೇಶ ಹಿಂಪಡೆದ ಸರ್ಕಾರ!

ಮಾರ್ಚ್ 18, 2026 ರಂದು ರಾಮಚಂದ್ರ ರಾವ್ ಅವರ ವಿರುದ್ಧ ಇಲಾಖಾ ತನಿಖೆಯನ್ನು ಪ್ರಾರಂಭಿಸಲಾಗಿತ್ತು. ಆದರೆ, ಈಗ ಹಠಾತ್ ಆಗಿ ಆಲ್ ಇಂಡಿಯಾ ಸರ್ವಿಸ್ (AIS) ನಿಯಮಗಳ ಅಡಿಯಲ್ಲಿ ಅವರ ಅಮಾನತು ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ರಾಜಭವನದ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ. ಎಸ್. ಅವರು ಈ ಆದೇಶಕ್ಕೆ ಸಹಿ ಹಾಕಿದ್ದಾರೆ. ಗಂಭೀರವಾದ ನೈತಿಕ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಯನ್ನು ತನಿಖೆ ಪೂರ್ಣಗೊಳ್ಳುವ ಮೊದಲೇ ಅಥವಾ […]

Continue Reading

ಫುಟ್‌ಪಾತ್‌ ಮೇಲೆ ಯಾವದೇ ಕಾರಣಕ್ಕೂ ವ್ಯಾಪಾರ ನಡೆಸುವಂತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್​ ಖಡಕ್​ ಸೂಚನೆ

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇಂತಹ ಅಪಾಯಕಾರಿ ಕಾಂಪೌಂಡ್ ಗೋಡೆಗಳನ್ನು ಗುರುತಿಸಲು ಸೂಚಿಸಲಾಗಿದ್ದು, ಫುಟ್‌ಪಾತ್‌ನಲ್ಲಿ ಇನ್ಮುಂದೆ ಯಾವುದೇ ವ್ಯಾಪಾರವನ್ನು ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ. ರಸ್ತೆ ಮೇಲೆ ಬಿದ್ದಿರುವ ಮರದ ಕೊಂಬೆ ತೆರವು ಮಾಡಲು ಪೊಲೀಸರಿಗೆ ಈಗಾಗಲೇ ನಿರ್ದೇಶನವನ್ನೂ ನೀಡಿದ್ದೇನೆ. ಈಗಾಗಲೇ ನಗರದಾದ್ಯಂತ ಇರುವ ಸಮಸ್ಯೆ ಪಟ್ಟಿ ಮಾಡಲಾಗಿದೆ. ಎಲ್ಲಾ ಮಾಹಿತಿಯನ್ನ ಈಗ ಕಂಟ್ರೋಲ್ ರೂಂನಲ್ಲಿ ಕಲೆ ಹಾಕಿದ್ದಾರೆ. ಗೋಡೆ ಕುಸಿತ ಕೇಸ್​ನಲ್ಲಿ ಅಧಿಕಾರಿ ನಿರ್ಲಕ್ಷವೂ ಇದೆ ಎನ್ನಲ್ಲ. ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ ಎಂದರು. […]

Continue Reading