ಭಾರತೀಯ ಸಂಸ್ಕೃತಿ ಸಾರುವ ಶಿಶುಗೀತೆಗಳ ರಚನೆ : ಮೆಚ್ಚುಗೆಗಳಿಸಿದ ಬೆಳಗಾವಿಯ ಬಾಲಕಿ

ಈ ಪುಸ್ತಕವನ್ನು ಏಪ್ರಿಲ್ 18ರಂದು ಮುಂಬೈನಲ್ಲಿ ಚೇತನ್ ಭಗತ್ ಅವರು ಲೋಕಾರ್ಪಣೆಗೊಳಿಸಿ, ಲಾವಣ್ಯಳ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ಪೂರ್ವ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ‘ಟ್ವಿಂಕಲ್ ಟ್ವಿಂಕಲ್ ಲಿಟಲ್ ಸ್ಟಾರ್’ ಅಥವಾ ‘ಜಾಕ್ ಆ್ಯಂಡ್ ಜಿಲ್’ ನಂತಹ ಪಾಶ್ಚಾತ್ಯ ಮೂಲದ ಕವಿತೆಗಳನ್ನು ಕಲಿಸುವುದು ಸಾಮಾನ್ಯ. ಆದರೆ, ನಮ್ಮ ದೇಶದ ಮಕ್ಕಳಿಗೆ, ಭಾರತೀಯ ಸಂಸ್ಕೃತಿ, ಮೌಲ್ಯಗಳು ಮತ್ತು ನಾಯಕರನ್ನು ಪರಿಚಯಿಸಬೇಕು. ನಮ್ಮತನದ ಶಿಶುಗೀತೆಗಳ ಮೂಲಕ ಮಕ್ಕಳಿಗೆ ನಮ್ಮ ದೇಶದ ಇತಿಹಾಸವನ್ನು ತಿಳಿಸುವ ಉದ್ದೇಶದಿಂದ ಈ ಪುಸ್ತಕವನ್ನು ರಚಿಸಿದ್ದೇನೆ ಎಂದು ಲಾವಣ್ಯ ಹೇಳಿದರು.

Continue Reading

ಬೆಳಗಾವಿ | ಪತಿ ಪತ್ನಿ ದುರಂತ ಅಂತ್ಯ

ಇತ್ತ ಪತ್ನಿ ಆಸ್ಪತ್ರೆ ಸೇರಿದ ಸುದ್ದಿ ಕೇಳಿ ಬೆಳಗಾವಿಗೆ ತರಾತುರಿಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ಪತಿ ಕರೆಪ್ಪ ಅರವಳ್ಳಿ ಕ್ರಾಸ್ ಬಳಿ ಧಾರವಾಡದಿಂದ ವೇಗವಾಗಿ ಬರುತ್ತಿದ್ದ ಕೆಎಸ್ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕರೆಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಒಂದೇ ದಿನ ಪತಿ, ಪತ್ನಿ ಮೃತಪಟ್ಟಿರುವುದರಿಂದ ಅರವಳ್ಳಿ ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ. ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಧುರಾ ಮತ್ತು ಕರೆಪ್ಪ ದಂಪತಿ […]

Continue Reading

ಬೆಳಗಾವಿ | ಅಂಗಾಂಗ ದಾನಕ್ಕೆ ವಾಗ್ದಾನ ಮಾಡುವ ಮೂಲಕ ಮಾದರಿಯಾದ ನವಜೋಡಿ

ಅಂಗಾಂಗ ದಾನದ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿರುವುದು ಸಾವಿನ ನಂತರ ಮಣ್ಣಲ್ಲಿ ಮಣ್ಣಾಗುವ ದೇಹ, ಹಲವು ಜನರಿಗೆ ಉಪಯೋಗಕ್ಕೆ ಬರಲಿ ಎಂದು ಮದುವೆ ದಿನವೇ ಅಂಗಾಂಗ ದಾನದ ಪ್ರತಿಜ್ಞೆಗೈದು, ಅದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರದ ಆರೋಗ್ಯ ಇಲಾಖೆ ವೆಬ್​ಸೈಟಿನಲ್ಲಿ ನೋಂದಣಿ ಕಾರ್ಯ ಪೂರ್ಣ ಮಾಡಿದ್ದಾರೆ.

Continue Reading

ಮಹಿಳಾ ಅಧಿಕಾರಿಯ ಖಾಸಗಿತನ ಸೆರೆ ಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮೂವರು You tubers ಅಂದರ್

ಇವರು ಸ್ಥಳೀಯವಾಗಿ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಅಧಿಕಾರಿ ಮನೆಯಲ್ಲಿದ್ದ 11 ವಿವಿಧ ಕಡೆಗಳಲ್ಲಿ ಮೈಕ್ರೋ ಸೀಕ್ರೆಟ್ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಆರೋಪಿಗಳಿಂದ ಲೈಂಗಿಕ ದೃಶ್ಯಗಳಿರುವ ಚಿಪ್‌ಗಳು, ಲ್ಯಾಪ್‌ಟಾಪ್ ಹಾಗೂ ಕ್ಯಾಮೆರಾಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ . ಬಂಧಿತರನ್ನು ಗೋಕಾಕ್ ನ ರಷೀದ್ (51), ಸಮೀರ್ ಶೇಖ್ (32) ಮತ್ತು ಮೊಹಮ್ಮದ್‌ ದಿಲಾವರ (45) ಎಂದು ಗುರುತಿಸಲಾಗಿದೆ. ಇವರು ಸ್ಥಳೀಯವಾಗಿ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಅಧಿಕಾರಿ ಮನೆಯಲ್ಲಿದ್ದ 11 ವಿವಿಧ ಕಡೆಗಳಲ್ಲಿ ಮೈಕ್ರೋ ಸೀಕ್ರೆಟ್ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಆರೋಪಿಗಳಿಂದ ಲೈಂಗಿಕ ದೃಶ್ಯಗಳಿರುವ […]

Continue Reading

ಬೆಳಗಾವಿ | 400 ಕೋಟಿ ದರೋಡೆ ಪ್ರಕರಣ ; ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಪೊಲೀಸ್ ವಶಕ್ಕೆ

ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸಲು ಸೂಚನೆ ನೀಡಿದೆ. ಈ ಪ್ರಕರಣದಲ್ಲಿ ದೂರುದಾರರಾಗಿರುವ ಸಂದೀಪ್ ಪಾಟೀಲ್ ಅವರ ಕಿಡ್ನ್ಯಾಪ್ ಮತ್ತು 400 ಕೋಟಿ ರೂ. ದರೋಡೆ ಸಂಬಂಧಿತ ಅಂಶಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನೂ ಎಸ್‌ಐಟಿ ಪರಿಶೀಲನೆಗೆ ತೆಗೆದುಕೊಂಡಿದೆ. ಎಸ್‌ಐಟಿ ತನಿಖೆಯ ವಿರುದ್ಧವೇ ದೂರುದಾರ ಸಂದೀಪ್ ಪಾಟೀಲ್ ಇತ್ತೀಚೆಗೆ ಆರೋಪಗಳನ್ನು […]

Continue Reading

ಬೆಳಗಾವಿ | ದೇಶದ ಅತಿದೊಡ್ಡ ರಾಬರಿ ಪ್ರಕರಣ ; 400 ಕೋಟಿ ದರೋಡೆ

ಗೋವಾದಿಂದ (Goa) ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ರೂ. ನಗದು ತುಂಬಿದ್ದ ಎರಡು ಕಂಟೇನರ್‌ಗಳು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ ಹೈಜಾಕ್ ಆಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 2025ರ ಅಕ್ಟೋಬರ್ 16 ರಂದು ಈ ದರೋಡೆ ನಡೆದಿದೆ. ಘಟನೆ ನಡೆದು ಹಲವಾರು ತಿಂಗಳ ನಂತರ ಪ್ರಕರಣ ಬೆಳಕಿಗೆ ಬಂದಿರುವುದು ಮೂರು ರಾಜ್ಯಗಳ ಪೊಲೀಸರಲ್ಲಿ ತೀವ್ರ ಅಚ್ಚರಿ ಉಂಟುಮಾಡಿದೆ. ಜೊತೆಗೆ ಅನೇಕ ಅನುಮಾನಗಳಿಗೆ ಕಾರಣವಾಗಿದೆ.

Continue Reading

ಶಿವಮೊಗ್ಗ | ಜಿಲ್ಲಾಧಿಕಾರಿ ಪರ ಸಂಸದರು, ಧ್ವನಿಯಾಗುವಂತೆ ಕರವೇ ಸ್ವಾಭಿಮಾನಿ ಬಣ ಒತ್ತಾಯ

ಜಿಲ್ಲಾಧಿಕಾರಿ ರೋಷನ್ ಅವರು “ಅಕ್ರಮ ನೋಟಿಸ್” ಹೊರಡಿಸಿದ್ದು, ಅದರ ಆಧಾರದ ಮೇಲೆ ಪೊಲೀಸರು ತನ್ನನ್ನು ಕರ್ನಾಟಕ ಪ್ರವೇಶಿಸುವುದನ್ನು ತಡೆದರು ಎಂದು ಅವರು ತಿಳಿಸಿದ್ದಾರೆ. ಇದು ತಾನೊಬ್ಬ ಜನಪ್ರತಿನಿಧಿಯಾಗಿರುವ ನಿಟ್ಟಿನಲ್ಲಿ ತನ್ನ ಮೂಲಭೂತ ಹಕ್ಕುಗಳ ಉಲ್ಲಂಘನೆ ಹಾಗೂ ಗಂಭೀರ ಅನ್ಯಾಯ ಎಂದು ಅವರು ಹೇಳಿದ್ದಾರೆ.ಇದಲ್ಲದೆ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಹಾಗೂ ಬೆಳಗಾವಿಯ ಮರಾಠಿ ಭಾಷಿಕರು ನವೆಂಬರ್ ೧ನ್ನು “ಕಪ್ಪು ದಿನ”ವಾಗಿ ಆಚರಿಸುತ್ತಾರೆ ಎಂದು ಮಾನೆ ಹೇಳಿದ್ದಾರೆ. ಇದರಿಂದ ಜಿಲ್ಲಾಧಿಕಾರಿಗಳು ದಿಟ್ಟ ನಿರ್ಧಾರ ಕೈಗೊಂಡು ಕನ್ನಡದ ರಾಜ್ಯೋತ್ಸವದ ಕಾರ್ಯಕ್ರಮ […]

Continue Reading

ಬೆಳಗಾವಿ | ಸೊರಬದ ‘ಜನಧ್ವನಿ’ ; ನೇರ ಸಂವಾದ ನಡೆಸಿದ ಸಚಿವರು

ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ಹಾಗೂ ಎನ್.ಎಸ್. ಬೋಸರಾಜು ಅವರು ಸಾರ್ವಜನಿಕರೊಂದಿಗೆ ಮುಖಾಮುಖಿಯಾಗಿ ಮಾತನಾಡಿದರು. ಮೂಲಭೂತ ಸೌಕರ್ಯ, ನೀರಾವರಿ ಹಾಗೂ ಆರೋಗ್ಯ ಸೇವೆಗಳ ಕುರಿತಾದ ಮನವಿಗಳನ್ನು ಸ್ವೀಕರಿಸಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಈ ಐತಿಹಾಸಿಕ ಸಂವಾದದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣ, ಮತ್ತು ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿ ಚರ್ಚೆಯಲ್ಲಿ […]

Continue Reading

ಬೆಳಗಾವಿ | ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಪ್ರತಿಭಟನಾ ಧರಣಿ

ಒಂದೆಡೆ ಕಡಿಮೆ ಗೌರವಧನ ಇನ್ನೊಂದೆಡೆ ನಮಗೆ ಹೆಚ್ಚು ಕಾರ್ಯಭಾರವನ್ನು ನೀಡಿ ದುಸ್ತರ ಪರಿಸ್ಥಿತಿಗೆ ನಮ್ಮನ್ನು ದುಡಿದ್ದಾರೆ. ಇನ್ನೊಂದೆಡೆ, ಸೇವಾ ಭದ್ರತೆ ಎಂಬುದು ನಮ್ಮೆಲ್ಲರಿಗೂ ಮರೀಚಿಕೆಯಾಗಿದೆ. ಪ್ರತಿ ವರ್ಷವೂ ಮುಂದಿನ ವರ್ಷ ನಮಗೆ ಕೆಲಸ ಇರುತ್ತದೆ ಇಲ್ಲವೋ ಎಂಬ ಆತಂಕ ಹಾಗೂ ಭಯ ನಮ್ಮೆಲ್ಲರನ್ನು ಕಾಡುತ್ತದೆ ಎಂಬ ಭಯ ಹೊರ ಹಾಕಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆಯ ನೇಮಕಾತಿಯ ಆದೇಶದಲ್ಲಿ ಕೇವಲ ಉತ್ತಮ ಮೆರಿಟ್ ಇದ್ದವರಿಗೆ ಮಾತ್ರ ಆದ್ಯತೆ ನೀಡುವುದರಿಂದ, ಪ್ರತಿ ವರ್ಷವೂ ನಮ್ಮಲ್ಲಿ ಕೆಲವರು ಕೆಲಸ ಕಳೆದುಕೊಂಡು, ಸೇವೆಗೆ […]

Continue Reading