ಶಿವಮೊಗ್ಗ | ಭದ್ರಾಪುರ ಸರ್ಕಾರಿ ಶಾಲೆಯಲ್ಲಿ ಪೋಷಕರ ಸಭೆ ಹಾಗೂ ವಿಜ್ಞಾನ ವಸ್ತು ಪ್ರದರ್ಶನ

ನಿಕಟಪೂರ್ವ ಗ್ರಾಮ ಪಂಚಾಯಿತಿ ಸದಸ್ಯ ಬಿ.ಕೆ. ಕುಮಾರ್ ಮಾತನಾಡಿ, ಶಾಲೆಯಲ್ಲಿ ಏರ್ಪಡಿಸಿದ ವಿಜ್ಞಾನ ವಸ್ತು ಪ್ರದರ್ಶನವನ್ನು ವೀಕ್ಷಿಸುವ ಅವಕಾಶ ದೊರೆಯಿತು. ವಿದ್ಯಾರ್ಥಿಗಳು ತಾವು ತಯಾರಿಸಿದ ವಿಜ್ಞಾನ ಮಾದರಿಗಳ ಬಗ್ಗೆ ಸ್ಪಷ್ಟವಾಗಿ ಮಾಹಿತಿ ನೀಡಿದ್ದು ಗಮನಾರ್ಹವಾಗಿದೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ವಿಜ್ಞಾನ ಚಿಂತನೆ ಹಾಗೂ ಸೃಜನಶೀಲತೆಯನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು. ಮುಖ್ಯ ಶಿಕ್ಷಕರಾದ ರಮೇಶ್ ಪಿ.ಕೆ. ಮಾತನಾಡಿ, ಈ ತಿಂಗಳ ಅಂತ್ಯದ ವೇಳೆಗೆ ಎರಡನೇ ಸಂಕಲನಾತ್ಮಕ ಪರೀಕ್ಷೆಗಳು ನಡೆಯಲಿವೆ. ಪೋಷಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಓದಲು ಅನುಕೂಲಕರವಾದ […]

Continue Reading

ಶಿವಮೊಗ್ಗ | ಭದ್ರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾರದಾ ಪೂಜೆ ಮಕ್ಕಳ ಹಕ್ಕುಗಳ ಬಗ್ಗೆ ಅರಿವು

ಸಂವಾದದಲ್ಲಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಕೇಳಿ, ಸರಿಯಾದ ಉತ್ತರ ನೀಡಿದ ಮಕ್ಕಳಿಗೆ ಪುಸ್ತಕಗಳನ್ನು ನೀಡಿ ಪ್ರೋತ್ಸಾಹಿಸಿದರು.ಇದೇ ಸಂದರ್ಭದಲ್ಲಿ ಶಾಲೆಯಿಂದ ವರ್ಗಾವಣೆ ಹೊಂದಿರುವ ಶಿಕ್ಷಕರಾದ ವಿಜಯಕುಮಾರ್ ಅವರಿಗೆ ಶಾಲಾ ವತಿಯಿಂದ ಸನ್ಮಾನ ಹಾಗೂ ಬೀಳ್ಕೊಡುಗೆ ನೀಡಲಾಯಿತು. ಹಲವು ವರ್ಷಗಳಿಂದ ಶಾಲೆಯಲ್ಲಿ ಸೇವೆ ಸಲ್ಲಿಸಿದ ಅವರು ಮಕ್ಕಳ ಸ್ನೇಹಿಯಾಗಿ, ಹಿರಿಯ ಅಣ್ಣನಂತೆ ನಡೆದು ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಲು ಶ್ರಮಿಸಿದ್ದಾರೆ ಎಂದು ಶಿಕ್ಷಕರು ಹಾಗೂ ಪೋಷಕರು ಕೊಂಡಾಡಿದರು. ಕಾರ್ಯಕ್ರಮಕ್ಕೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಎಸ್. ಹರೀಶ್ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಸದಸ್ಯರಾದ […]

Continue Reading

ಶಿವಮೊಗ್ಗ | ಭದ್ರಾಪುರ ಶಾಲೆಯಲ್ಲಿ ವಿಶೇಷ ದಾಖಲಾತಿ ಅಂದೋಲನ

ಶಾಲೆಯ ಮುಖ್ಯ ಶಿಕ್ಷಕರಾದ ರಮೇಶ್ ಪಿ.ಕೆ ಮಾತನಾಡಿ, ‘ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ತರಗತಿಗಳಾದ ಎಲ್‌ಜಿ ಹಾಗೂ ಯುಕೆಜಿ ಆರಂಭವಾಗಲಿದೆ. ಜೊತೆಗೆ ಐದನೇ ತರಗತಿಯವರೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುತ್ತಿದ್ದೇವೆ. ಶಾಲೆಗೆ ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು, ನೋಟ್‌ಪುಸ್ತಕಗಳು, ಸಮಗ್ರ ಶಿಕ್ಷಣ ಸೌಲಭ್ಯಗಳು ಹಾಗೂ ಮಧ್ಯಾಹ್ನ ಬಿಸಿಯೂಟ ನೀಡಲಾಗುತ್ತಿದೆ. ಪೋಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು,” ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಶಾಲೆಯಿಂದ ಹೊರಗುಳಿದಿದ್ದ ಒಂದು ಮಗುವನ್ನು ಪೋಷಕರ ಮನವೊಲಿಸಿ ಶಾಲೆಗೆ ಕರೆತರುವ ಮೂಲಕ ದಾಖಲಾತಿ […]

Continue Reading

ಶಿವಮೊಗ್ಗ | ಭದ್ರಾಪುರ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಅನ್ನಪೂರ್ಣ, ಸದಸ್ಯರಾದ ಸಿದ್ದಪ್ಪ, ಪ್ರಭಾಕರ್, ಜಗಧೀಶಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕುಮಾರಪ್ಪ, ಮಾಜಿ ಅಧ್ಯಕ್ಷ ಭರಮೇಶಪ್ಪ ಗ್ರಾಮದ ಮುಖಂಡ ಮೈಲಾರಪ್ಪ, ಅಂಗನವಾಡಿ ಕಾರ್ಯಕರ್ತೆ ಉಮಾವತಿ, ಅಡುಗೆ ಸಿಬ್ಬಂದಿ ನೇತ್ರಾವತಿ, ಕವಿತಾ ಹಾಗೂ ಶಿಲ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ವಿನುತಾ ಮತ್ತು ವನಿತಾ ಅವರು ದೇಶಭಕ್ತಿ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ವಿಶೇಷ ಛಾಯೆ ನೀಡಿದರು. ಕೃಷ್ಣಮೂರ್ತಿ ಸ್ವಾಗತಿಸಿ, ದೀಪಾ ವಂದಿಸಿದರು.

Continue Reading