ಮಾಲೂರು ಮರು ಮತ ಎಣಿಕೆ ; ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಮತಗಳ ಮರುಎಣಿಕೆ ಕೋರಿ ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ನಂಜೇಗೌಡ ಅವರ ಆಯ್ಕೆಯನ್ನು ರದ್ದುಗೊಳಿಸಿತ್ತು. ಮತಗಳ ಮರುಎಣಿಕೆ ನಡೆಸಿ ಹೊಸದಾಗಿ ಫಲಿತಾಂಶ ಘೋಷಿಸಲು ಆದೇಶಿಸಿತ್ತು. ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ನಂಜೇಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮೇಲ್ಮನವಿಯನ್ನು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮುಚ್ಚಿದ ಲಕೋಟೆಯಲ್ಲಿ ಮರು ಮತ ಎಣಿಕೆಯ ನಂತರ ಫಲಿತಾಂಶವನ್ನು […]

Continue Reading