ಶಿವಮೊಗ್ಗ | ಶಾಸಕ ಚನ್ನಬಸಪ್ಪರಿಂದ ಸೌಲಭ್ಯಗಳ ವಿತರಣೆ : 105 ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಹಾಗೂ ಉದ್ಯೋಗ ಸಾಲ ವಿತರಣೆ

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ನಮ್ಮ ಅವಧಿಯಲ್ಲಿ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ, ಅರ್ಹತೆ ಹೊಂದಿರುವ ನೈಜ ಫಲಾನುಭವಿಗಳಿಗೆ ನೇರವಾಗಿ ಸರ್ಕಾರದ ಸೌಲಭ್ಯಗಳು ತಲುಪುವಂತೆ ಪಾರದರ್ಶಕ ವ್ಯವಸ್ಥೆ ಕಲ್ಪಿಸಲಾಗಿದೆ. ಕರ್ತವ್ಯ ಭವನವು ಸದಾ ಸಾರ್ವಜನಿಕರ ಹಿತರಕ್ಷಣೆಗೆ ಮತ್ತು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕೆಲಸ ಕಾರ್ಯಗಳಿಗೆ ಮುಕ್ತವಾಗಿರುತ್ತದೆ” ಎಂದರು. ಇದೇ ವೇಳೆ ಸೌಲಭ್ಯಗಳನ್ನು ಸ್ವೀಕರಿಸಿದ ಫಲಾನುಭವಿಗಳು ಶಾಸಕರ ತ್ವರಿತ ಸ್ಪಂದನೆ ಹಾಗೂ ಕಾಳಜಿಗೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ […]

Continue Reading

ಶಿವಮೊಗ್ಗ | ನ್ಯೂ ಮಂಡ್ಲಿಯಲ್ಲಿ ಮನೆ ಕುಸಿದ ಸ್ಥಳಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಭೇಟಿ ; ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಆದೇಶ

​ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಜಗನ್ನಾಥ್, SC ಮೋರ್ಚಾ ನಗರ ಅಧ್ಯಕ್ಷರಾದ ವಿಜಯೇಂದ್ರ, ಕಾರ್ಯದರ್ಶಿಗಳಾದ ರಾಘವೇಂದ್ರ, ಮಹಾನಗರ ಪಾಲಿಕೆಯ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.​

Continue Reading

ಪ್ರಜಾಪ್ರಭುತ್ವದ ಕರಾಳ ದಿನ : ಅಧಿಕಾರ ದಾಹಕ್ಕಾಗಿ ಸಂವಿಧಾನವನ್ನೇ ಹತ್ತಿಕ್ಕಿದ ಕಾಂಗ್ರೆಸ್ ಇತಿಹಾಸವನ್ನು ಮರೆಯಲು ಸಾಧ್ಯವಿಲ್ಲ : ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ

ಇದೇ ಸಂದರ್ಭದಲ್ಲಿ, ತುರ್ತು ಪರಿಸ್ಥಿತಿಯ ವಿರುದ್ಧ ದೇಶಾದ್ಯಂತ ಜನಾಂದೋಲನ ರೂಪಿಸುವಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಅತ್ಯಂತ ನಿರ್ಣಾಯಕ ಪಾತ್ರ ವಹಿಸಿತ್ತು . ಆರ್‌ಎಸ್‌ಎಸ್‌ನ ಸಾವಿರಾರು ನಿಷ್ಠಾವಂತ ಕಾರ್ಯಕರ್ತರು ಭೂಗತರಾಗಿ (Underground) ಕಾರ್ಯನಿರ್ವಹಿಸುತ್ತಾ, ಕರಾಳ ಆಡಳಿತದ ಸತ್ಯ ಸಂಗತಿಗಳನ್ನು ಜನರಿಗೆ ತಲುಪಿಸಲು ಪತ್ರಿಕೆಗಳನ್ನು ಮುದ್ರಿಸಿ ಹಂಚಿದರು ಮತ್ತು ದೇಶದ ಸ್ವಾತಂತ್ರ್ಯ ಮರುಸ್ಥಾಪನೆಗಾಗಿ ಬೃಹತ್ ಸತ್ಯಾಗ್ರಹಗಳನ್ನು ಸಂಘಟಿಸಿದರು . ದೆಹಲಿಯಿಂದ ಹಿಡಿದು ಹಳ್ಳಿಹಳ್ಳಿಗಳವರೆಗೆ ಅನೇಕ ಸ್ವಯಂಸೇವಕರು ತಮ್ಮ ಮನೆ ಮಠಗಳನ್ನು ತ್ಯಜಿಸಿ, ಪ್ರಾಣದ ಹಂಗು ತೊರೆದು ಲೂಟಿಗೊಳಗಾದ ನಾಗರಿಕರ […]

Continue Reading

ಶಿವಮೊಗ್ಗದಲ್ಲಿ ಕುಸ್ತಿ ಕ್ರೀಡಾ ಶಾಲೆ ಮುಂದುವರಿಕೆ ಹಾಗೂ ಮಿಳಘಟ್ಟ ಗ್ರಾಮದ ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಶಾಸಕ ಎಸ್.ಎನ್. ಚನ್ನಬಸಪ್ಪ ಮನವಿ

ಶಿವಮೊಗ್ಗ ಜಿಲ್ಲೆಯು ಕುಸ್ತಿ ಕ್ರೀಡೆಗೆ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದ್ದು, ಇಲ್ಲಿನ ನೂರಾರು ಕ್ರೀಡಾಪಟುಗಳು ದೇಶ-ವಿದೇಶಗಳಲ್ಲಿ ಸಾಧನೆ ಮಾಡಿ ಜಿಲ್ಲೆಗೆ ಗೌರವ ತಂದಿದ್ದಾರೆ. ಈ ಕ್ರೀಡೆಯನ್ನು ಜೀವಂತವಾಗಿಡಲು ಮತ್ತು ಮುಂದಿನ ಪೀಳಿಗೆಯ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಲು ಶಿವಮೊಗ್ಗ ನಗರದಲ್ಲಿ ‘ಕುಸ್ತಿ ಕ್ರೀಡಾ ಶಾಲೆ’ಯನ್ನು ಮುಂದುವರಿಸಲು ಅಗತ್ಯ ಅನುದಾನ ಹಾಗೂ ಮೂಲಸೌಕರ್ಯ ಒದಗಿಸಬೇಕು ಎಂದು ಶಾಸಕರು ಕ್ರೀಡಾ ಇಲಾಖೆಯ ಪರವಾಗಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಮಿಳಘಟ್ಟ ನಿವಾಸಿಗಳ ಹಿತರಕ್ಷಣೆ: ಶಿವಮೊಗ್ಗ ತಾಲೂಕು ಕಸಬಾ-01 ಹೋಬಳಿಯ ಮಿಳಘಟ್ಟ ಗ್ರಾಮದ […]

Continue Reading

ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆ ತಕ್ಷಣ ದುರಸ್ತಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಶಾಸಕರ ಖಡಕ್ ಸೂಚನೆ

ಮೊದಲ ಮಹಡಿಯಲ್ಲಿರುವ ಮಹಾನಗರ ಪಾಲಿಕೆ ಸುಪರ್ದಿಯ ಶೌಚಾಲಯಗಳಲ್ಲಿ ನೀರಿನ ವ್ಯವಸ್ಥೆ ಇಲ್ಲದಿರುವುದು ಹಾಗೂ ಮಹಿಳಾ ಶೌಚಾಲಯಗಳಿಗೆ ಬಾಗಿಲುಗಳೇ ಇಲ್ಲದಿರುವುದು ಗಂಭೀರ ನಿರ್ಲಕ್ಷ್ಯವೆಂದು ಹೇಳಲಾಗಿದೆ.ಇದಲ್ಲದೆ, ನಿಲ್ದಾಣದಲ್ಲಿರುವ ಲಾಡ್ಜ್ ಸಾರ್ವಜನಿಕರ ಬಳಕೆಗೆ ಯೋಗ್ಯವಾಗದೆ ಸಂಪೂರ್ಣ ಅವ್ಯವಸ್ಥೆಯಲ್ಲಿದ್ದು, ಬಳಕೆಯಾಗದೆ ಇರುವ ಟಾಯ್ಲೆಟ್ ಬಾಕ್ಸ್‌ಗಳನ್ನು ಅಗತ್ಯವಿರುವ ಸ್ಥಳಗಳಿಗೆ ಸ್ಥಳಾಂತರಿಸಬೇಕೆಂಬ ಸಲಹೆಯೂ ವ್ಯಕ್ತವಾಯಿತು. ಸಾರ್ವಜನಿಕರಿಗಾಗಿ ನಿರ್ಮಿಸಿರುವ ಕುಡಿಯುವ ನೀರಿನ ವ್ಯವಸ್ಥೆ ಕಾರ್ಯನಿರ್ವಹಿಸದಿರುವುದು ಮತ್ತು ಹೊಸದಾಗಿ ನಿರ್ಮಿಸಿದ ಕೆಲವು ಶೌಚಾಲಯಗಳಿಗೆ ಬೀಗ ಹಾಕಿ ಸಾರ್ವಜನಿಕ ಬಳಕೆಗೆ ತೆರೆಯದಿರುವುದೂ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ.ಪ್ಲಾಟ್‌ಫಾರ್ಮ್ ಮೇಲೆಯೇ ದ್ವಿಚಕ್ರ ವಾಹನಗಳನ್ನು […]

Continue Reading

ಶಿವಮೊಗ್ಗ | ವಿವಿಧ ಬಡಾವಣೆಗಳಲ್ಲಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ

​ಇದೇ ಸಂದರ್ಭದಲ್ಲಿ ಬಡಾವಣೆಯ ನಾಗರಿಕರೊಂದಿಗೆ ಸಮಾಲೋಚನೆ ನಡೆಸಿದ ಶಾಸಕರು, ಸ್ಥಳೀಯ ಇತರ ನಾಗರಿಕ ಬೇಡಿಕೆಗಳನ್ನು ಆಲಿಸಿ ಹಂತ-ಹಂತವಾಗಿ ಈಡೇರಿಸುವ ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಬಡಾವಣೆಗಳ ಸಾರ್ವಜನಿಕ ಬಂಧುಗಳು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಸಂಸದರಿಂದ ಸುಳ್ಳು ಮಾಹಿತಿ, ಶಾಸಕರಿಂದ ಮತ್ತೆ ಗುದ್ದಲಿಪೂಜೆ : ಎಚ್. ಸಿ. ಯೋಗೇಶ್ ವಾಗ್ದಾಳಿ

ಸೇತುವೆ ಮಂಜೂರಾತಿ ಜಟಾಪಟಿ: ವಿದ್ಯಾನಗರದ ಶಿಥಿಲಗೊಂಡಿರುವ ತುಂಗಾ ಸೇತುವೆ ಕುರಿತು ೨೦೧೮ ರಿಂದಲೇ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಕಾಂಗ್ರೆಸ್ ವತಿಯಿಂದ ಮಾಡಲಾಗಿದೆ. ಅಂದಿನ ಹಾಗೂ ಹಾಲಿ ಲೋ ಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದು, ಅದರ ಪರಿಣಾಮವಾಗಿ ಸೇತುವೆ ಕಾಮಗಾರಿಗೆ ೪೦ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಸೇತುವೆ ಮಂಜೂರಾತಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ ಶ್ರಮವೂ ಇದೆ. ಆದರೆ ಅನುದಾನ ಬಿಡುಗಡೆಯಾದ ನಂತರವೂ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಶಾಸಕರು […]

Continue Reading

ಶಿವಮೊಗ್ಗ | ವಿವಿಧ ಬಡಾವಣೆಗಳಲ್ಲಿ ರಸ್ತೆ ಮತ್ತು ಯುಜಿಡಿ (UGD) ಕಾಮಗಾರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಚಾಲನೆ

ಈ ನಿಟ್ಟಿನಲ್ಲಿ ಇಂದಿನಿಂದಲೇ ಕೆಲಸಗಳು ಆರಂಭಗೊಳ್ಳಲಿವೆ. ಕಾಮಗಾರಿಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಯೋಜನೆಗಳನ್ನು ಯಾವುದೇ ವಿಳಂಬವಿಲ್ಲದೆ, ಗುಣಮಟ್ಟದೊಂದಿಗೆ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯ ಎಂಜಿನಿಯರ್‌ಗಳು ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ,” ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಪಕ್ಷದ ಪದಾಧಿಕಾರಿಗಳು ಹಾಗೂ ಬಡಾವಣೆಯ ನಾಗರಿಕ ಬಂಧುಗಳು ಉಪಸ್ಥಿತರಿದ್ದುರು.

Continue Reading